![1-sidda](https://www.udayavani.com/wp-content/uploads/2025/02/1-sidda-415x281.jpg)
![1-sidda](https://www.udayavani.com/wp-content/uploads/2025/02/1-sidda-415x281.jpg)
Team Udayavani, Mar 16, 2019, 1:15 AM IST
ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ಸೀಟು ಹಂಚಿಕೆ ಬೆನ್ನಲ್ಲೇ ಮುಖ್ಯಮಂತ್ರಿ ಎಚ್ .ಡಿ.ಕುಮಾರಸ್ವಾಮಿ ಶುಕ್ರವಾರ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಜತೆ ಮಹತ್ವದ ಮಾತುಕತೆ ನಡೆಸಿದರು.
ಮಾತುಕತೆ ವೇಳೆ ಪಕ್ಷದ ನಾಯಕರ ವರ್ತನೆಯಿಂದ ಮುನಿಸಿಕೊಂಡಿದ್ದ ಶಿವಮೊಗ್ಗ ಕ್ಷೇತ್ರದ ಅಭ್ಯರ್ಥಿ ಮಧು ಬಂಗಾರಪ್ಪ ಸಹ ಉಪಸ್ಥಿತರಿದ್ದರು. ಈ ಬಾರಿ ಶಿವಮೊಗ್ಗ ಕ್ಷೇತ್ರ ಗೆಲ್ಲಲೇಬೇಕಾಗಿದೆ. ಹೀಗಾಗಿ, ಕಾಂಗ್ರೆಸ್-ಜೆಡಿಎಸ್ ಸಾಧ್ಯವಿರುವ ಎಲ್ಲ ರೀತಿಯ ಪ್ರಯತ್ನ ಹಾಕಲಾಗುವುದು ಎಂದು ಇದೇ ಸಂದರ್ಭದಲ್ಲಿ ಮಧು ಬಂಗಾರಪ್ಪ ಅವರಿಗೆ ಇಬ್ಬರೂ ನಾಯಕರು ಭರವಸೆ ನೀಡಿದರು. ಶಿವಮೊಗ್ಗ ಕ್ಷೇತ್ರದ ಹೊಣೆಗಾರಿಕೆ ಸಂಪೂರ್ಣವಾಗಿ ಡಿ.ಕೆ.ಶಿವಕುಮಾರ್ ಅವರಿಗೆ ವಹಿಸುವ ಬಗ್ಗೆ ತೀರ್ಮಾನಿಸಲಾಯಿತು.
ಭಾನುವಾರ ಶಿವಮೊಗ್ಗದಲ್ಲಿ ಪ್ರಚಾರ ಸಭೆ ಆಯೋಜಿಸಲಾಗಿದ್ದು, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಭಾಗವಹಿಸಲಿದ್ದು, ನಾಮಪತ್ರ ಸಲ್ಲಿಕೆಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಡಿ.ಕೆ.ಶಿವಕುಮಾರ್ ಭಾಗವಹಿಸಲಿದ್ದಾರೆ.
ನಂತರ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಜಂಟಿ ಪ್ರಚಾರ ನಡೆಸಲಿದ್ದಾರೆ. ಶಿವಮೊಗ್ಗ ಉಪ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಧು ಬಂಗಾರಪ್ಪ 50 ಸಾವಿರ ಮತಗಳ ಅಂತರದಿಂದ ಸೋಲು ಅನುಭವಿಸಿದ್ದರು.
You seem to have an Ad Blocker on.
To continue reading, please turn it off or whitelist Udayavani.