ಬಿಜೆಪಿ ಸೇರುತ್ತೇನೆ ಎನ್ನುವುದು ಊಹಾಪೋಹ :ಸುಮಲತಾ


Team Udayavani, Apr 6, 2019, 6:00 AM IST

Sumalatha-Ambareesh-545-D

ಮಂಡ್ಯ: “ನಾನು ಬಿಜೆಪಿಗೆ ಸೇರೋದಿಲ್ಲ. ನಾನು ಬಿಜೆಪಿ ಸೇರುತ್ತೇನೆ ಎನ್ನುವುದು ಕೇವಲ ಊಹಾಪೋಹ’ ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್‌ ಸ್ಪಷ್ಟಪಡಿಸಿದ್ದಾರೆ.

ನಗರದ ಗುತ್ತಲು ಬಡಾವಣೆಯ ಕಾಂಗ್ರೆಸ್‌ ಮುಖಂಡ ಮುನಾವರ್‌ ಖಾನ್‌ ನಿವಾಸದಲ್ಲಿ ನಡೆದ ಮುಸಲ್ಮಾನರ ಸಭೆಯಲ್ಲಿ ಮಾತನಾಡಿ,”ನನ್ನ ಮೊದಲ ಆದ್ಯತೆ ಕಾಂಗ್ರೆಸ್‌ ಆಗಿತ್ತು.ಕಾಂಗ್ರೆಸ್‌ ಟಿಕೆಟ್‌ ಕೊಡಲಿಲ್ಲ.ಅದಕ್ಕೆ ಪಕ್ಷೇತರನಾಗಿ ಸ್ಪರ್ಧಿಸುವುದು ಅನಿವಾರ್ಯವಾಯಿತು.ನನಗೆ ಅಧಿಕಾರದ ಆಸೆ ಇಲ್ಲ. ಆ ಆಸೆ ಇದ್ದಿದ್ದರೆ ಕೊಟ್ಟ ಆಫ‌ರ್‌ಗಳನ್ನೇ ಒಪ್ಪಿಕೊಳ್ಳುತ್ತಿದ್ದೆ’ ಎಂದರು.

“ಮಂಡ್ಯ ಕ್ಷೇತ್ರದಲ್ಲಿ ಈ ಬಾರಿ ಬದಲಾವಣೆಯ ಹೊಸ ಗಾಳಿ ಬೀಸುತ್ತಿದೆ. ಅದು ಮತಗಳಾಗಿ ನನಗೆ ಒಲಿದು ಬರಲಿದೆ. ಯುಗಾದಿ ಹಬ್ಬದ ಹಿನ್ನಲೆಯಲ್ಲಿ ನಟರಾದ ದರ್ಶನ್‌ ಮತ್ತು ಯಶ್‌ ಮೂರು ದಿನ ಪ್ರಚಾರ ಕ್ಕೆ ಬರಲ್ಲ. ಮಧ್ಯದಲ್ಲೊಂದು ಬ್ರೇಕ್‌ ಅಷ್ಟೆ.

ಏ.8ರಿಂದ ಮಂಡ್ಯಕ್ಕೆ ಆಗಮಿಸಿ ನನ್ನ ಪರ ಪ್ರಚಾರ ನಡೆಸಲಿದ್ದಾರೆ.ಕೊನೆಯವರೆಗೂ ಅವರು ನನ್ನೊಟ್ಟಿಗೆ ಕ್ಷೇತ್ರದಲ್ಲಿರುತ್ತಾರೆ’ಎಂದು ಹೇಳಿದರು.ನಮ್ಮ ಟೂರಿಂಗ್‌ ಟಾಕೀಸ್‌ ಖಾಲಿ ಆಗುತ್ತಾ ಅಥವಾ ಜೆಡಿಎಸ್‌ನ ಡ್ರಾಮಾ ಕಂಪನಿ ಖಾಲಿ ಆಗುತ್ತಾ ಎಂದು ಚುನಾವಣಾ ಫ‌ಲಿತಾಂಶದ ನಂತರ ನೋಡೋಣ ಎಂದು ಸಂಸದ ಶಿವರಾಮೇ ಗೌಡರಿಗೆ ಟಾಂಗ್‌ ನೀಡಿದರು.

ಈ ಮಧ್ಯೆ,ಕೆಂಗೇರಿಯಿಂದ ಆಗಮಿಸಿದ್ದ ಅರ್ಚಕನೊಬ್ಬ ಪೇಟೆ ಬೀದಿಯಲ್ಲಿ ಚುನಾವಣಾ ಪ್ರಚಾರದಲ್ಲಿ ನಿರತರಾಗಿದ್ದ ಸುಮಲತಾ ಅವರನ್ನು ಭೇಟಿ ಯಾಗಿ ತ್ರಿಶೂಲ ನೀಡಿದ.
“ಕೆಂಗೇರಿ ಯ ದುರ್ಗಾ ಪರಮೇಶ್ವರಿ ನನಗೆ ಹೇಳಿದ್ದಾಳೆ.ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಗೆಲುವು ಶತಸ್ಸಿದಟಛಿ’ಎಂದು ಹೇಳಿ ಆಶೀರ್ವದಿಸಿದ. ಬಳಿಕ, 5 ರೂ.ಡಾಕ್ಟರ್‌ಎಂದೇ ಪ್ರಸಿದಟಛಿರಾಗಿರುವ ಡಾ.ಶಂಕರೇಗೌಡರ ನಿವಾಸಕ್ಕೆ ಭೇಟಿ ನೀಡಿ, ಬೆಂಬಲ ಕೋರಿದರು. ಈ ಮಧ್ಯೆ,ತಾಲೂಕಿನ ಸಂತೆಕಸಲಗೆರೆ ಗ್ರಾಮಕ್ಕೆ ಸುಮಲತಾ ಬಂದಾಗ ಕಾಂಗ್ರೆಸ್‌, ಜೆಡಿಎಸ್‌, ಬಿಜೆಪಿ ಬಾವುಟಗಳು ರಾರಾಜಿಸಿದವು.

ಸುಮಲತಾ ಅವರಂತೆ ಡ್ರಸ್‌ ಮತ್ತು ಕನ್ನಡಕ
ಶ್ರೀರಂಗಪಟ್ಟಣ: ಮಂಡ್ಯ ಲೋಕಸಭಾ ಚುನಾವಣೆಯ ಪಕ್ಷೇತರ ಅಭ್ಯರ್ಥಿಗಳ ಎವಿಎಂನ ಕ್ರಮ ಸಂಖ್ಯೆ 19ರ ಸುಮಲತಾ ಅವರನ್ನು ತಕ್ಷಣ ನೋಡಿದರೆ ಮತದಾರರು ಗೊಂದಲಕ್ಕೀಡಾಗುವ ಸಾಧ್ಯತೆ ಇದೆ.ಸುಮಲತಾ ಅಂಬರೀಶ್‌ ಅವರಂತೆ ಪುಲ್‌ ಬ್ಲೌಸ್‌,ಸೀರೆ ಹಾಗೂ ಕನ್ನಡಕ ಹಾಕಿಸಿ ಪೋಟೊ ಕ್ಲಿಕ್ಕಿಸಿದ್ದಾರೆ.ಆ ಪೋಟೋವನ್ನೇ ಇವಿಎಂನಲ್ಲಿಯೂ ಹಾಕಿದಂತೆ ಕಾಣುತ್ತಿದೆ ಎಂದು ಕ್ರಮಸಂಖ್ಯೆ 19ರ ಸುಮಲತಾ ಹಾಗೂ ಕ್ರಮಸಂಖ್ಯೆ 20ರ ಸುಮಲತಾ ಅಂಬರೀಶ್‌ ಅವರ ಪೋಟೋಗಳು ಜಂಟಿಯಾಗಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.