ಪ್ರಜಾಪ್ರಭುತ್ವದಲ್ಲಿ ಮಹಿಳೆಯರದ್ದೇ ಪ್ರಭುತ್ವ


Team Udayavani, Apr 13, 2019, 6:00 AM IST

MAhila

ಮಣಿಪಾಲ: ಭಾರತದ ಪ್ರಜಾಪ್ರಭುತ್ವದಲ್ಲಿ ಮಹಿಳೆಯರ ಭಾಗವಹಿಸುವಿಕೆ ಹೆಚ್ಚಾಗುತ್ತಿದೆ. 1952ರ ಬಳಿಕ ಚುನಾವಣೆಯಲ್ಲಿ ಮಹಿಳೆಯರ ಪಾಲುದಾರಿಕೆ ಒಟ್ಟು ಜನಸಂಖ್ಯೆಗೆ ಹೋಲಿಸಿ ದರೆ ಕಡಿಮೆಯಾಗಿತ್ತು. ಆದರೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕೆಲವು ರಾಜ್ಯ ಗಳಲ್ಲಿ ಮಹಿಳಾ ಮತದಾರರು ಪುರುಷರಿಗಿಂತ ಹೆಚ್ಚಾಗಿದ್ದಾರೆ.

ಈ ವರ್ಷ ಹೆಚ್ಚು
ಹಲವು ವರ್ಷಗಳ ಬಳಿಕ ಮಹಿಳಾ ಮತ ದಾರರು ಪ್ರಜಾಪ್ರಭುತ್ವದಲ್ಲಿ ಹೆಚ್ಚು ತೊಡಗಿಸಿ ಕೊಳ್ಳುತ್ತಿದ್ದಾರೆ. 1960ರ ಸುಮಾರಿಗೆ ಶೇ. 16. 7ರಷ್ಟು ಇದ್ದ ಪುರುಷ ಹಾಗೂ ಮಹಿಳಾ ಮತ ದಾರರ ನಡುವೆ ವ್ಯತ್ಯಾಸ ಶೇ. 1.79ಕ್ಕೆ ಇಳಿದಿದೆ.

ಹಿಂದೆ ಏನಾಗಿತ್ತು?
ರಾಜಕಾರಣ ಏನಿದ್ದರೂ ಪುರುಷರಿಗೆ ಎಂಬ ಮಾತ್ರ ಎಂಬ ಭಾವನೆ ಇತ್ತು. ಮಹಿಳೆಯರಿಗೆ ಕೆಲವು ಕ್ಷೇತ್ರಗಳಲ್ಲಿ ನಿಬಂಧನೆಗಳನ್ನು ಹೇರ ಲಾಗಿತ್ತು. ಇಂದು ಚಿತ್ರಣ ಬದಲಾಗಿದ್ದು, ಮಹಿಳೆಯರು ಅಬಲೆ ಅಲ್ಲ ಎಂಬ ದೃಢ ನಿರ್ಧಾರ ತಲೆದಿದ್ದಾರೆ. ಆಧುನಿಕ ಜೀವನ ಮಹಿಳೆಯರನ್ನು ಪ್ರಜಾಪ್ರಭುತ್ವದತ್ತ ಕರೆ ತಂದಿದೆ.

ಇದು ಇಂದು-ನಿನ್ನೆಯ ಬೆಳವಣಿಗೆ ಅಲ್ಲ. ಸ್ವಾತಂತ್ರ್ಯ ಲಭಿಸಿದ ಬಳಿಕ ಭಾರತದಲ್ಲಿ ಉಂಟಾದ ಅಭಿವೃದ್ಧಿ ಮತ್ತು ಮಹಿಳಾ ಸಬಲೀಕರಣದ ಪ್ರತೀಕ.

ಪಿಂಕ್‌ ಮತಗಟ್ಟೆ ಸ್ಫೂರ್ತಿ!
ಮಹಿಳಾ ಮತದಾರರನ್ನು ಉತ್ತೇಜಿಸುವ ಸಲುವಾಗಿ ಚುನಾವಣ ಆಯೋಗ ಮಹಿಳಾ ಮತಗಟ್ಟೆಯನ್ನು (ಪಿಂಕ್‌ಮತಗಟ್ಟೆ) ಸ್ಥಾಪಿಸಲು ನಿರ್ಧರಿಸಿತ್ತು. ಇದರಿಂದ ಮಹಿಳೆಯರಿಗೆ ಉತ್ತೇಜನ ಲಭಿಸಿದ ಪರಿಣಾಮ ಇಂದು ಮತಗಟ್ಟೆಯತ್ತ ಬರುವ ಮಹಿಳಾ ಮತದಾರರ ಸಂಖ್ಯೆ ಹೆಚ್ಚಾಗಿದೆ.

ಯಾವೆಲ್ಲ ರಾಜ್ಯದಲ್ಲಿ ಹೆಚ್ಚಳ?
ಪುದುಚೇರಿ, ಕೇರಳ, ಗೋವಾ, ಮಣಿಪುರ, ದಮನ್‌ ಮತ್ತು ದೀಯು, ಮೇಘಾಲಯ, ಲಕ್ಷದೀಪ, ತಮಿಳುನಾಡು ಈ ರಾಜ್ಯದಲ್ಲಿ ಮಹಿಳಾ ಮತದಾರರ ಸಂಖ್ಯೆ ಒಟ್ಟು ಮತದಾರರ ಪೈಕಿ ಶೇ. 50ಕ್ಕಿಂತ ಹೆಚ್ಚಿದೆ. ಈ 8 ರಾಜ್ಯಗಳಲ್ಲಿ 68 ಲೋಕಸಭಾ ಸೀಟುಗಳಿವೆ ಅಂದರೆ ಶೇ. 12.5 ಕ್ಷೇತ್ರಗಳಲ್ಲಿ ಮಹಿಳಾ ಮತದಾರರೇ ನಿರ್ಣಾಯಕರಾಗಿದ್ದಾರೆ. ಇವು ಗಳಲ್ಲಿ ಕೇರಳ 20 ಮತ್ತು ತಮಿಳುನಾಡು 30 ಲೋಕಸಭಾ ಕ್ಷೇತ್ರಗಳನ್ನು ಹೊಂದಿವೆ.

ಇನ್ನು ಮಹಿಳಾ ವೋಟ್‌ ಬ್ಯಾಂಕ್‌?
ಈ ತನಕ ದೇಶದಲ್ಲಿ ಧರ್ಮ ಆಧಾರಿತ, ಜಾತಿಯಾಧಾರಿತ ವೋಟ್‌ಗಳಿಗೆ ರಾಜಕೀಯ ಪಕ್ಷಗಳು ಹೆಚ್ಚು ತಲೆಕೆಡಿಸಿಕೊಂಡಿದ್ದವು. ಇವುಗಳನ್ನು ಚಾಚಿಕೊಳ್ಳುವುದಕ್ಕೆ ಜಾತಿ ಆಧಾರಿತ, ಧರ್ಮಾಧಾರಿತ ಯೋಜನೆಗಳನ್ನು ಪಕ್ಷಗಳು ಜಾರಿಗೆ ತರುತ್ತಿದ್ದವು. ಇದೀಗ ಮಹಿಳಾ ಪರ ಯೋಜನೆಗಳನ್ನೂ ರಾಜಕೀಯ ಪಕ್ಷಗಳು ಜಾರಿಗೆ ತರಬೇಕಾದ ಅನಿವಾರ್ಯಕ್ಕೆ ಸಿಲುಕಿದಂತಾಗಿದೆ. 16ನೇ ಸಂಸತ್ತಿನಲ್ಲಿ (ಲೋಕಸಭೆ ಮತ್ತು ರಾಜ್ಯಸಭೆ) 89 ಮಹಿಳಾ ಸಂಸದೆಯರಿದ್ದರು.

ಭಾರತ ಮತ್ತು ಪಾಕಿಸ್ಥಾನ
ಸರ್ವೇಯೊಂದರ ಪ್ರಕಾರ ಪಾಕಿಸ್ಥಾನದಲ್ಲಿ ಮಹಿಳೆಯರು ಮತದಾನದಲ್ಲಿ ಪಾಲ್ಗೊಳ್ಳುವ ಸಂಖ್ಯೆ ಅತೀ ಕಡಿಮೆಯಾಗಿದೆ. ಭಾರತಕ್ಕೆ ಹೋಲಿಸಿದರೆ ಪಾಕಿಸ್ಥಾನದ ಸಾಧನೆ ಅತೀ ಕಳಪೆ. ಭಾರತದಲ್ಲಿ ಒಟ್ಟು ಸಂಸದರಲ್ಲಿ ಶೇ.11.2ರಷ್ಟು ಮಹಿಳೆ ಯಾಗಿದ್ದರೆ, ಪಾಕಿಸ್ಥಾನದಲ್ಲಿ ಶೇ.20 ಮಹಿಳಾ ಸಂಸದೆಯರಿದ್ದಾರೆ. ವಿಶ್ವದಲ್ಲಿ ಈ ಸಂಖ್ಯೆ ಶೇ.24.3ರಷ್ಟಿದೆ.

ಮಹಿಳಾ ಅಭ್ಯರ್ಥಿಗಳ ಸಂಖ್ಯೆ ಹೆಚ್ಚಳ
1999ರಿಂದ 2009ರ ವರೆಗೆ ಮಹಿಳಾ ಅಭ್ಯರ್ಥಿಗಳ ಸಂಖ್ಯೆ ಯಲ್ಲಿ ಗಮನಾರ್ಹ ಚೇತರಿಕೆ ಕಂಡಿದೆ. 1999ರಲ್ಲಿ 284 ಇದ್ದ ಅಭ್ಯರ್ಥಿಗಳು 2009ರಲ್ಲಿ 556ಕ್ಕೆ ಏರಿದ್ದಾರೆ. ಕೇಂದ್ರ ಸಂಪುಟದಲ್ಲಿ 5 ಮಹಿಳೆಯರಿದ್ದಾರೆ. 5 ಪ್ರಮುಖ ನಾಯಕಿಯರು ವಿವಿಧ ರಾಜಕೀಯ ಪಕ್ಷಗಳ ಮುಖ್ಯಸ್ಥರಾಗಿದ್ದಾರೆ‌ ಎಂಬುದು ವಿಶೇಷ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.