ರಾಯಚೂರಲ್ಲಿ ನಡೆದಿದೆ “ನಾಯಕ’ ಕಾದಾಟ

ರಣಾಂಗಣ: ರಾಯಚೂರು.

Team Udayavani, Apr 15, 2019, 3:00 AM IST

rayachuru

ರಾಯಚೂರು: ಇಷ್ಟು ವರ್ಷ ಜಾತಿ, ಕುಟುಂಬ ರಾಜಕಾರಣ, ಸ್ಥಳೀಯ ಸಮಸ್ಯೆಗಳ ಆಧಾರದ ಮೇಲೆ ನಡೆಯುತ್ತಿದ್ದ ಲೋಕಸಭಾ ಚುನಾವಣೆ ಈ ಬಾರಿ ದೇಶದ ಅಭಿವೃದ್ಧಿ ಆಧಾರಿತವಾಗಿ ನಡೆಯುತ್ತಿರುವುದು ರಾಯಚೂರು ಲೋಕಸಭಾ ಕ್ಷೇತ್ರದ ವಿಶೇಷತೆ.

ಕಣ ಚಿತ್ರಣ: ಕಾಂಗ್ರೆಸ್‌ನ ಭದ್ರಕೋಟೆಯಾಗಿರುವ ಈ ಕ್ಷೇತ್ರಕ್ಕೆ ನಡೆದ 16 ಚುನಾವಣೆಗಳಲ್ಲಿ ಬಿಜೆಪಿ ಸೇರಿ ಇತರರು ಗೆದ್ದಿರುವುದು ಕೇವಲ ಮೂರು ಬಾರಿ. ಆದರೆ, ಮೋದಿ ಪ್ರಬಲ ಅಲೆಯನ್ನೇ ನೆಚ್ಚಿಕೊಂಡಿರುವ ಬಿಜೆಪಿ ಈ ಬಾರಿ ದೇಶಾಭಿವೃದ್ಧಿ ಅಸ್ತ್ರ ಪ್ರಯೋಗಿಸುವ ಮೂಲಕ ಕಾಂಗ್ರೆಸ್‌ ಮಣಿಸುವ ತಂತ್ರಗಾರಿಕೆ ಹೆಣೆದಿದೆ.

ಕಾಂಗ್ರೆಸ್‌ನ ಹಾಲಿ ಸಂಸದ ಬಿ.ವಿ.ನಾಯಕ ಮತ್ತೂಮ್ಮೆ ಅದೃಷ್ಟ ಪರೀಕ್ಷೆಗೆ ಇಳಿದರೆ, ಬಿಜೆಪಿ, ಕಾಂಗ್ರೆಸ್‌ ವಲಸಿಗ, ಮಾಜಿ ಸಚಿವ ರಾಜಾ ಅಮರೇಶ್ವರ ನಾಯಕರನ್ನು ಅಖಾಡಕ್ಕಿಳಿಸಿದೆ. ಹಿಂದೆ ಈ ಕ್ಷೇತ್ರದಿಂದ ವೆಂಕಟೇಶ ನಾಯಕ ನಾಲ್ಕು ಬಾರಿ ಆಯ್ಕೆಯಾಗಿದ್ದರೆ, ಈಗ ಅವರ ಪುತ್ರ ಬಿ.ವಿ.ನಾಯಕ ಒಂದು ಅವ ಧಿ ಪೂರ್ಣಗೊಳಿಸಿದ್ದಾರೆ.

ಐದು ಅವಧಿಗೆ ತಂದೆ-ಮಕ್ಕಳು ಅಧಿ ಕಾರ ನಡೆಸಿದರೂ ಕ್ಷೇತ್ರ ಮಾತ್ರ ಅಭಿವೃದ್ಧಿ ಹೊಂದಿಲ್ಲ ಎಂಬ ಅಸ್ತ್ರವನ್ನೇ ಬಿಜೆಪಿ ನಾಯಕರು ಪ್ರಚಾರದಲ್ಲಿ ಪ್ರಯೋಗಿಸುತ್ತಿದ್ದಾರೆ. ಈಗಾಗಲೇ ಕ್ಷೇತ್ರದಲ್ಲಿ ಹಾಲಿ ಸಂಸದರ ವಿರೋಧಿ ಅಲೆ, ಮೋದಿ ಅಲೆ ಇದ್ದು, ಬಿಜೆಪಿ ಅದನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಯತ್ನದಲ್ಲಿದೆ.

ಜತೆಗೆ, ದೇಶಾಭಿಮಾನ, ಅಭಿವೃದ್ಧಿ ವಿಚಾರಗಳು ಬಿಜೆಪಿಗೆ ವರವಾಗುತ್ತಿವೆ. ಆದರೆ, ಕಳೆದ ಬಾರಿ ಮೋದಿ ಅಲೆ ಮೆಟ್ಟಿ ನಿಂತ ಕಾಂಗ್ರೆಸ್‌ ಅಭ್ಯರ್ಥಿ ಈ ಬಾರಿಯೂ ಅದೇ ಆತ್ಮವಿಶ್ವಾಸದಲ್ಲಿದ್ದಾರೆ. 371 ಕಲಂನಡಿ ವಿಶೇಷ ಸ್ಥಾನಮಾನದ ಕೊಡುಗೆ, ಕಾಂಗ್ರೆಸ್‌ನ ತಳಮಟ್ಟದ ಸಂಘಟನೆ ಅವರ ಬಲ ಎಂದರೆ ತಪ್ಪಿಲ್ಲ. ಜೆಡಿಎಸ್‌ ಬೆಂಬಲ ಅವರ ಆತ್ಮವಿಶ್ವಾಸಕ್ಕೆ ಮತ್ತಷ್ಟು ಪುಷ್ಟಿ ನೀಡಿದೆ.

ಆಂತರಿಕ ಭಿನ್ನಮತವೇ ಸವಾಲು:ಆದರೆ, ಕಾಂಗ್ರೆಸ್‌ಗೆ ಮೈತ್ರಿ ಪಕ್ಷ ಜೆಡಿಎಸ್‌ನ ಆಂತರಿಕ ಭಿನ್ನಮತ ಸವಾಲಾಗಿ ಪರಿಣಮಿಸಿದೆ. ಜೆಡಿಎಸ್‌ ಮತಗಳು ಸಿಗುವುದೋ, ಇಲ್ಲವೋ ಎನ್ನುವ ಗೊಂದಲ ಶುರುವಾಗಿದೆ. ಸ್ಥಳೀಯ ಮಟ್ಟದ ರಾಜಕಾರಣ, ಕಾರ್ಯಕರ್ತರಲ್ಲಿನ ಅಸಮಾಧಾನಗಳು ಇದಕ್ಕೆ ಕಾರಣ.

ಇನ್ನು, ಕಾಂಗ್ರೆಸ್‌ ವಲಸಿಗ ನಾಯಕರೇ ಬಿಜೆಪಿ ಅಭ್ಯರ್ಥಿಯಾಗಿರುವುದು ಮತ ವಿಭಜನೆಗೆ ಅನುವು ಮಾಡಿದೆ. ಅಂತಿಮ ಕಣದಲ್ಲಿ ಐವರು ಅಭ್ಯರ್ಥಿಗಳಿದ್ದು, ಕಾಂಗ್ರೆಸ್‌-ಬಿಜೆಪಿ ಮಧ್ಯೆ ನೇರ ಹಣಾಹಣಿ ಏರ್ಪಟ್ಟಿದೆ. ಉಳಿದಂತೆ ಬಿಎಸ್‌ಪಿ, ಎಸ್‌ಯುಸಿಐ ಹಾಗೂ ಪ್ರಜಾಕೀಯ ಪಕ್ಷದ ಅಭ್ಯರ್ಥಿಗಳಿದ್ದು, ಅವರಿಂದ ನಿರೀಕ್ಷಿತ ಮಟ್ಟದ ಪೈಪೋಟಿ ಕಂಡು ಬರುತ್ತಿಲ್ಲ.

ಕಾಂಗ್ರೆಸ್‌-ಜೆಡಿಎಸ್‌ ಪ್ರಾಥಮಿಕ ಹಂತದಿಂದಲೂ ಒಂದಾಗಿದ್ದೇ ಆದಲ್ಲಿ ಬಿಜೆಪಿ ಗೆಲುವು ಕಷ್ಟವಾಗಲಿದೆ. ಇನ್ನು, ಕಾಂಗ್ರೆಸ್‌-ಜೆಡಿಎಸ್‌ ಕಾರ್ಯಕರ್ತರ ನಡುವಿನ ಭಿನ್ನಾಭಿಪ್ರಾಯದ ಜತೆಗೆ ಮೋದಿ ಅಲೆ ಯುವ ಮತದಾರರನ್ನು ಸೆಳೆದಿದ್ದೇ ಆದಲ್ಲಿ ಕಾಂಗ್ರೆಸ್‌ಗೆ ಸಂಕಷ್ಟ ತಪ್ಪಿದ್ದಲ್ಲ.

ನಿರ್ಣಾಯಕ ಅಂಶ: ಕಾಂಗ್ರೆಸ್‌ ಅಭ್ಯರ್ಥಿಗೆ ಕ್ಷೇತ್ರದಲ್ಲಿ ವಿರೋ ಧಿ ಅಲೆ ಹೆಚ್ಚಾಗಿದ್ದು, ಬಿಜೆಪಿಗೆ ವರವಾಗಿ ಪರಿಣಮಿಸಿದೆ. ಹೀಗಾಗಿ, ಮೋದಿ ಹೆಸರಲ್ಲಿ ಪ್ರಚಾರ ಮಾಡುತ್ತಿರುವ ಬಿಜೆಪಿ ನಾಯಕರು ಅಭಿವೃದ್ಧಿ ನೆಪ ಹೇಳುತ್ತಿದ್ದಾರೆ. ಪರಿಶಿಷ್ಟ ಪಂಗಡ ಮೀಸಲು ಕ್ಷೇತ್ರವಾಗಿರುವ ಕಾರಣ ಎಸ್ಟಿ ಮತಗಳು ವಿಭಜನೆ ಆಗಲಿದ್ದು, ಪ್ರಭಾವಿ ಲಿಂಗಾಯತ ನಾಯಕರ ಬೆಂಬಲ ಹಾಗೂ ಲಿಂಗಾಯತ ಮತಗಳು ನಿರ್ಣಾಯಕವಾಗಲಿವೆ. ಲಿಂಗಾಯತರ ಒಲವು ಯಾರಿಗೆ ಸಿಗುವುದೋ ಅವರಿಗೆ ಗೆಲುವು ಸುಲಭ.

ಕ್ಷೇತ್ರವ್ಯಾಪ್ತಿ: ರಾಯಚೂರು ಲೋಕಸಭಾ ಕ್ಷೇತ್ರವ್ಯಾಪ್ತಿಯಲ್ಲಿ ಎಂಟು ವಿಧಾನಸಭಾ ಕ್ಷೇತ್ರಗಳು ಬರಲಿವೆ. ನಾಲ್ಕರಲ್ಲಿ ಬಿಜೆಪಿ, ಮೂರರಲ್ಲಿ ಕಾಂಗ್ರೆಸ್‌ ಹಾಗೂ ಒಂದು ಕ್ಷೇತ್ರದಲ್ಲಿ ಜೆಡಿಎಸ್‌ ಶಾಸಕರಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಎಂಟು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಶೇ.35.38 ಮತ ಪಡೆದರೆ, ಬಿಜೆಪಿ ಶೇ.39.76 ಮತ ಗಳಿಸಿದೆ. ಜೆಡಿಎಸ್‌ ಶೇ.16.24 ಮತ ಪಡೆದಿತ್ತು.

ಮತದಾರರು
ಒಟ್ಟು – 18,93,576.
ಪುರುಷರು – 9,39,752
ಮಹಿಳೆಯರು – 9,53,457
ಇತರರು – 367

ಜಾತಿ ಲೆಕ್ಕಾಚಾರ
ಪರಿಶಿಷ್ಟ ಪಂಗಡ – 3, 60,000.
ಪರಿಶಿಷ್ಟ ಜಾತಿ -3, 40,000.
ಲಿಂಗಾಯತ -2, 95, 000.
ಮುಸ್ಲಿಂ -2, 50,000.
ಕುರುಬರು -2, 40,000.
ಗಂಗಾಮತಸ್ಥ -1, 94,000.
ಇತರರು – 2, 01,000.

* ಸಿದ್ದಯ್ಯಸ್ವಾಮಿ ಕುಕನೂರು

ಟಾಪ್ ನ್ಯೂಸ್

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada-Sahitya-Sammelana-2024

Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

Karnataka Govt.,: ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada-Sahitya-Sammelana-2024

Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

Fake-Gold

Mangaluru: ನಕಲಿ ಚಿನ್ನ ಅಡವಿಟ್ಟು ವಂಚನೆ; 7ನೇ ಸಲ ಬಂದಾಗ ಸಿಕ್ಕಿಬಿದ್ದ ಮಹಿಳೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.