ದರ್ಶನ್‌ ವಾಹನದ ಮೇಲೆ ಕಲ್ಲು ತೂರಾಟ


Team Udayavani, Apr 5, 2019, 6:10 AM IST

190403kpn27d

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರದ ಕಾವು ರಂಗೇರಿದ್ದು, ಸುಮಲತಾ ಪರ ಗುರುವಾರವೂ ಯಶ್‌ ಹಾಗೂ ದರ್ಶನ್‌ ಪ್ರಚಾರ ನಡೆಸಿದರು. ಇನ್ನೊಂದೆಡೆ, ನಿಖೀಲ್‌ ಸಹ ಮತದಾರರ ಮನಗೆಲ್ಲುವ ಯತ್ನ ಮುಂದುವರಿಸಿದರು. ದೇವೇಗೌಡರು ಪ್ರಚಾರ ನಡೆಸಿದರು.

ಭಾರತಿನಗರ ಹಾಗೂ ಮೇಲುಕೋಟೆ ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ನಿಖೀಲ್‌ ಗುರುವಾರ ಬಿರುಸಿನ ಪ್ರಚಾರ ನಡೆಸಿ, “ರಾಜಕೀಯವಾಗಿ ಮಾಜಿ ಪ್ರಧಾನಿ ದೇವೇಗೌಡ ಹಾಗೂ ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ಶಕ್ತಿ ತುಂಬಿರುವ ಮಂಡ್ಯ ಜಿಲ್ಲೆಯಲ್ಲೇ ನನ್ನ ರಾಜಕೀಯ ಜೀವನಕ್ಕೂ ಮುನ್ನುಡಿ ಬರೆಯಲು ಒಂದು ಅವಕಾಶ ಕಲ್ಪಿಸಬೇಕು’ ಎಂದು ಮನವಿ ಮಾಡಿದರು. ಸಚಿವ ಪುಟ್ಟರಾಜು ಅವರಿಗೆ ಸಾಥ್‌ ನೀಡಿದರು.

ದರ್ಶನ್‌ ವಾಹನದ ಮೇಲೆ ಕಲ್ಲು ತೂರಾಟ: ಇನ್ನೊಂದೆಡೆ, ದರ್ಶನ್‌ ಹಾಗೂ ಯಶ್‌ ಅವರು ಸುಮಲತಾ ಪರ ಮತಯಾಚನೆ ಮುಂದುವರಿಸಿದರು.

ಕೆಆರ್‌ ಪೇಟೆ ತಾಲೂಕಿನ ವಿವಿಧೆಡೆ ರೋಡ್‌ ಶೋ ನಡೆಸಿದ ದರ್ಶನ್‌, ಮಂಡ್ಯದ ಮಣ್ಣಿನ ಸೊಸೆ, ಅಂಬರೀಶ್‌ ಪತ್ನಿ ಸುಮಲತಾರನ್ನು ಗೆಲ್ಲಿಸುವ ಮೂಲಕ ತಮ್ಮ ಸ್ವಾಭಿಮಾನವನ್ನು ಎತ್ತಿ ಹಿಡಿಯಬೇಕು ಎಂದು ಮನವಿ ಮಾಡಿದರು. ದರ್ಶನ್‌ರನ್ನು ನೋಡಲು ಮಹಿಳೆಯರು ತಮ್ಮ ಮಕ್ಕಳೊಂದಿಗೆ ಸುಡು ಬಿಸಿಲಿನಲ್ಲಿ ಸುಮಾರು 7 ಗಂಟೆ ಕಾಲ ಕಾದು ಕುಳಿತಿದ್ದರು. ಈ ಮಧ್ಯೆ, ಬೆಳ್ಳೂರಿನಲ್ಲಿ ಪ್ರಚಾರ ಮುಗಿಸಿ ನಾಗಮಂಗಲಕ್ಕೆ ಬರುವ ಮಾರ್ಗ ಮಧ್ಯೆ ಅಂಚೆಚಿಟ್ಟನಹಳ್ಳಿ ಗ್ರಾಮದ ರಸ್ತೆ ಬದಿಯಲ್ಲಿ ನಿಂತಿದ್ದ ಕೆಲವರು ದರ್ಶನ್‌ ಪ್ರಚಾರ ವಾಹನದ ಮೇಲೆ ಕಲ್ಲು ತೂರಾಟ ನಡೆಸಿ, ಕುಮಾರಸ್ವಾಮಿ ಪರ ಜಯಕಾರ ಕೂಗಿ ಪರಾರಿಯಾದರು. ಈ ವೇಳೆ, ಪೊಲೀಸ್‌ ವಾಹನಗಳ ಮೇಲೂ ಕಲ್ಲು ಬಿದ್ದಿದೆ. ಇನ್ನೊಂದೆಡೆ,ನಾಗಮಂಗಲದಲ್ಲಿ ದರ್ಶನ್‌ಗೆ ಭಾರಿ ಗಾತ್ರದ ಸೇಬಿನ ಹಾರ ಹಾಕಲು ಮುಂದಾದ ಅಭಿಮಾನಿಗಳು ಆಯತಪ್ಪಿ ಬಿದ್ದು, ದರ್ಶನ್‌ರ ವಾಹನದ ಗಾಜು ಪುಡಿಪುಡಿಯಾಯಿತು.

ಯಶ್‌ ಪ್ರಚಾರಕ್ಕೆ
ರೈತಸಂಘ ಸಾಥ್‌
ಇದೇ ವೇಳೆ, ಪಾಂಡವಪುರ ತಾಲೂಕಿನ ವಿವಿಧೆಡೆ ಸುಮಲತಾ ಪರ ರಾಕಿಂಗ್‌ ಸ್ಟಾರ್‌ ಯಶ್‌ ಗುರುವಾರವೂ ರೋಡ್‌ ಶೋ ಮೂಲಕ ಮತಯಾಚಿಸಿದರು. ರೈತಸಂಘ,
ಕಾಂಗ್ರೆಸ್‌ ಹಾಗೂ ಬಿಜೆಪಿ ಮುಖಂಡರು ಅವರಿಗೆ ಅದ್ದೂರಿ ಸ್ವಾಗತ ಕೋರಿದರು.
ಸುಮಲತಾಗೆ ಈ ಬಾರಿ ಅವಕಾಶ ನೀಡಿ, ಮಂಡ್ಯ ಸ್ವಾಭಿಮಾನ ಕಾಪಾಡಿ ಎಂದು ಮನವಿ ಮಾಡಿದರು. ಜಿಲ್ಲೆಯ ಸೊಸೆ ಸುಮಲತಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಿರೋದೆ ತಪ್ಪಾ ಎಂದು ಪ್ರಶ್ನಿಸಿದರು. ರೈತ ನಾಯಕಿ ಸುನೀತಾ ಪುಟ್ಟಣ್ಣಯ್ಯ ಸಾಥ್‌ ನೀಡಿದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.