2014ಕ್ಕಿಂತ ಮತದಾನ ತುಸು ಹೆಚ್ಚು: ಸಂಜೀವ್‌ಕುಮಾರ್‌


Team Udayavani, Apr 24, 2019, 3:35 AM IST

2014kkinta

ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದಲ್ಲಿ 14 ಲೋಕಸಭಾ ಕ್ಷೇತ್ರಗಳಲ್ಲಿ ನಡೆದ ಮತದಾನದಲ್ಲೂ ಮತದಾರನಿಂದ ತಕ್ಕ ಮಟ್ಟಿಗೆ ಉತ್ತರ ಸಿಕ್ಕಿಲ್ಲ. 14 ಕ್ಷೇತ್ರದಲ್ಲಿ ಒಟ್ಟಾರೆ ಅಂದಾಜು ಶೇ.67.21ರಷ್ಟು ಮತದಾನವಾಗಿದ್ದು, ಕಳೆದ ಬಾರಿಗಿಂತ ಅಲ್ಪ ಪ್ರಮಾಣದ ಏರಿಕೆ ಕಂಡಿದೆ.

ರಾತ್ರಿ 8 ಗಂಟೆವರೆಗಿನ ಮಾಹಿತಿ ಪ್ರಕಾರ ಒಟ್ಟು 14 ಕ್ಷೇತ್ರಗಳಲ್ಲಿ ಸರಾಸರಿ ಶೇ.67.21ರಷ್ಟು ಮತದಾನ ಆಗಿದೆ. ಜಿಲ್ಲಾ ಚುನಾವಣಾಧಿಕಾರಿಗಳಿಂದ ಮಾಹಿತಿ ಸಂಗ್ರಹಿಸುವ ಪ್ರಕ್ರಿಯೆ ಇನ್ನೂ ಪ್ರಗತಿಯಲ್ಲಿದ್ದು, ಒಟ್ಟಾರೆ ಸರಾಸರಿ ಶೇ.ಪ್ರಮಾಣ ಬುಧವಾರವಷ್ಟೇ ಲಭ್ಯವಾಗಲಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್‌ಕುಮಾರ್‌ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

2014ರ ಲೋಕಸಭಾ ಚುನಾವಣೆಯಲ್ಲಿ ಈ 14 ಕ್ಷೇತ್ರಗಳಲ್ಲಿ ಸರಾಸರಿ ಶೇ.66.82ರಷ್ಟು ಮತದಾನ ಆಗಿತ್ತು. ಈ ಬಾರಿ ಈವರೆಗಿನ ಮಾಹಿತಿಯಂತೆ ಶೇ.67.21ರಷ್ಟು ಮತದಾನ ಆಗಿದೆ. ಮೊದಲ ಹಂತದಲ್ಲಿ ಮತದಾನ ನಡೆದ 14 ಕ್ಷೇತ್ರಗಳಲ್ಲಿ ಶೇ.68.81ರಷ್ಟು ಮತದಾನ ನಡೆದಿದೆ.

ಒಟ್ಟಾರೆ ಎರಡೂ ಹಂತಗಳಲ್ಲಿ ಸರಾಸರಿ ಶೇ.68ರಷ್ಟು ಮತದಾನ ನಡೆದಿದ್ದು, 2014ರಲ್ಲಿ 67.20 ರಷ್ಟು ಮತದಾನವಾಗಿತ್ತು. ಎರಡನೇ ಹಂತದಲ್ಲಿ ಇಡೀ ದೇಶದ ಗಮನ ಸೆಳೆದಿದ್ದ ಕಲಬುರಗಿ ಮೀಸಲು ಲೋಕಸಭಾ ಕ್ಷೇತ್ರದಲ್ಲಿ ನೀರಸ ಮತದಾನ ನಡೆದಿದ್ದು, ಅತ್ಯಂತ ಕಡಿಮೆ ಶೇ.57.58ರಷ್ಟು ಮತದಾನ ಆಗಿದೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ಈ ಕ್ಷೇತ್ರದಲ್ಲಿ ಶೇ.57.96ರಷ್ಟು ಮತದಾನವಾಗಿತ್ತು. ಜತೆಗೆ, ರಾಯಚೂರು ಲೋಕಸಭಾ ಕ್ಷೇತ್ರದಲ್ಲಿ ಶೇ.57.85ರಷ್ಟು ಕಡಿಮೆ ಮತದಾನ ಆಗಿದೆ. ಕಳೆದ ಬಾರಿ ಇಲ್ಲಿ ಶೆ.58.32ರಷ್ಟು ಮತದಾನ ಆಗಿತ್ತು ಎಂದು ತಿಳಿಸಿದರು.

ಎರಡನೇ ಹಂತದಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಅತಿ ಹೆಚ್ಚು ಶೇ.76.28ರಷ್ಟು ಮತದಾನ ಆಗಿದ್ದು, ಕಳೆದ ಚುನಾವಣೆಯಲ್ಲಿ ಇಲ್ಲಿ ಶೇ.72.36ರಷ್ಟು ಮತದಾನ ಆಗಿತ್ತು. ಕಳೆದ ಬಾರಿಗಿಂತಲೂ ಈ ಬಾರಿ ಹೆಚ್ಚು ಮತದಾನ ಅಗಿದೆ.

2014ರ ಲೋಕಸಭಾ ಚುನಾವಣೆಯಲ್ಲಿ ಚಿಕ್ಕೋಡಿಯಲ್ಲಿ ಅತಿ ಹೆಚ್ಚು ಶೇ.74.29ರಷ್ಟು ಮತದಾನ ಆಗಿತ್ತು ಎಂದರು. ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿ ಕೆ.ಆರ್‌. ರಮೇಶ್‌ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಹೈ-ಕ ಹಿಂದೆ: ಎರಡನೇ ಹಂತದಲ್ಲಿ ಹೈ-ಕ ಭಾಗದ ಕಲಬುರಗಿ, ಬೀದರ್‌, ರಾಯಚೂರು, ಕೊಪ್ಪಳ ಹಾಗೂ ಬಳ್ಳಾರಿ ಕ್ಷೇತ್ರಗಳಲ್ಲಿ ಕಡಿಮೆ ಮತದಾನ ಅಗಿದೆ. ಕಲಬುರಗಿಯಲ್ಲಿ ಶೇ.57.58, ಬೀದರ್‌ನಲ್ಲಿ ಶೇ.61.40, ರಾಯಚೂರು ಶೇ.57.85, ಕೊಪ್ಪಳ ಶೇ.68.38, ಬಳ್ಳಾರಿಯಲ್ಲಿ ಶೇ.66.06ರಷ್ಟು ಮತದಾನ ಆಗಿದೆ.

ಗಂಟೆವಾರು ಮತ ಪ್ರಮಾಣ
ಬೆಳಿಗ್ಗೆ 9- ಶೇ.7.38
ಬೆಳಿಗ್ಗೆ 11- ಶೇ.20.65
ಮಧ್ಯಾಹ್ನ 1- ಶೇ.36.61
ಮಧ್ಯಾಹ್ನ 3- ಶೇ.49.96
ಸಂಜೆ 5- ಶೇ.60.48
ಸಂಜೆ 6- ಶೇ.67.21

ಹಣ ಜಪ್ತಿ
ಎರಡೂ ಹಂತಗಳಲ್ಲಿ ಜಪ್ತಿ ಮಾಡಿದ್ದು
* 39.4 ಕೋಟಿ ನಗದು.
* 37.8 ಕೋಟಿ ಮೌಲ್ಯದ ಮದ್ಯ (9.6 ಲಕ್ಷ ಲೀ).
* 12.1 ಲಕ್ಷ ಮೌಲ್ಯದ ಮಾದಕ ದ್ರವ್ಯ.
* 9.5 ಕೋಟಿ ರೂ.ಬೆಲೆಬಾಳುವ ಆಭರಣ.
* 1.35 ಕೋಟಿ ರೂ.ಇತರ ರ್ಗೃಹೋಪಯೋಗಿ ವಸ್ತುಗಳು.
ಒಟ್ಟು – 88.26 ಕೋಟಿ ರೂ.

ಎರಡನೇ ಹಂತದ ಚುನಾವಣೆಯಲ್ಲಿ ಮೂಲಸೌಕರ್ಯ ಕೊರತೆ, ಅಕ್ರಮ ಮದ್ಯ ಮಾರಾಟ ಸೇರಿದಂತೆ ಮತ್ತಿತರ ವಿಷಯಗಳಿಗೆ ಬೇಸರಗೊಂಡು 12 ಜಿಲ್ಲೆಗಳ ವಿವಿಧ ಗ್ರಾಮಗಳ ಜನ ಮತದಾನ ಬಹಿಷ್ಕರಿಸಲು ಮುಂದಾಗಿದ್ದರು. ಈ ವೇಳೆ, ಸ್ಥಳೀಯ ಚುನಾವಣಾಧಿಕಾರಿಗಳು ಸ್ಥಳೀಯ ಮುಖಂಡರೊಂದಿಗೆ ಮಾತನಾಡಿ, ಬಹಿಷ್ಕಾರ ಕರೆಯನ್ನು ವಾಪಸ್ಸು ಪಡೆದು ಮತದಾನ ಮಾಡುವಂತೆ ಮನವೊಲಿಸಿ ಮತಗಟ್ಟೆಗೆ ಕರೆ ತಂದರು.
-ಸಂಜೀವ್‌ಕುಮಾರ್‌, ರಾಜ್ಯ ಮುಖ್ಯ ಚುನಾವಣಾಧಿಕಾರಿ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.