![Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ](https://www.udayavani.com/wp-content/uploads/2024/12/aa-7-415x246.jpg)
ಬಿಹಾರ ಚುನಾವಣೆ2020: ಎನ್ ಡಿಎ ಮೈತ್ರಿಕೂಟ ಮೇಲುಗೈ, ಸಮೀಕ್ಷೆ ಲೆಕ್ಕಾಚಾರ ತಲೆಕೆಳಗಾಗಲಿದೆಯೇ?
ಪ್ರಸ್ತುತ ಜೆಡಿಯು 53 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಬಿಜೆಪಿಯು 71 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.
Team Udayavani, Nov 10, 2020, 11:08 AM IST
![ಬಿಹಾರ ಚುನಾವಣೆ2020: ಎನ್ ಡಿಎ ಮೈತ್ರಿಕೂಟ ಮೇಲುಗೈ, ಸಮೀಕ್ಷೆ ಲೆಕ್ಕಾಚಾರ ತಲೆಕೆಳಗಾಗಲಿದೆಯೇ](https://www.udayavani.com/wp-content/uploads/2020/11/Bihar-New-620x349.jpg)
ಪಾಟ್ನಾ/ಮಣಿಪಾಲ: ತೀವ್ರ ಕುತೂಹಲಕ್ಕೆ ಎಡೆಮಾಡಿಕೊಟ್ಟಿರುವ ಬಿಹಾರ ವಿಧಾನಸಭಾ ಚುನಾವಣಾ ಫಲಿತಾಂಶದಲ್ಲಿ ಈವರೆಗೆ ಮುನ್ನಡೆ ಕಾಯ್ದುಕೊಂಡು ಬಂದಿದ್ದ ಆರ್ ಜೆಡಿ ನೇತೃತ್ವದ ಮಹಾಘಟಬಂಧನ ಕೂಟಕ್ಕೆ ಹಿನ್ನಡೆಯಾಗಿದ್ದು, ಎನ್ ಡಿಎ ಮೈತ್ರಿಕೂಟ ಭಾರೀ ಮುನ್ನಡೆ ಸಾಧಿಸಿದೆ.
ಭಾರತೀಯ ಜನತಾ ಪಕ್ಷದ ಎನ್ ಡಿಎ ಮೈತ್ರಿಕೂಟ 124 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಆರ್ ಜೆಡಿ ಮಹಾಮೈತ್ರಿಕೂಟ 109 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.
ಬಿಹಾರ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಸೀ ವೋಟರ್ ಸೇರಿದಂತೆ ಹಲವು ಸಮೀಕ್ಷೆಗಳು ಆರ್ ಜೆಡಿ ನೇತೃತ್ವದ ಮಹಾಮೈತ್ರಿಕೂಟ ಈ ಬಾರಿ ಬಹುಮತ ಪಡೆಯಲಿದೆ ಎಂದು ತಿಳಿಸಿತ್ತು. ಆದರೆ ಇದೀಗ ಎನ್ ಡಿಎ ಮೈತ್ರಿಕೂಟ ಬಹುಮತದದತ್ತ ದಾಪುಗಾಲಿಟ್ಟಿದೆ.
ಆರ್ ಜೆಡಿ ಮಹಾಮೈತ್ರಿಕೂಟ ಹಾಗೂ ಎನ್ ಡಿಎ ಮೈತ್ರಿಕೂಟದ ನಡುವೆ ಜಿದ್ದಾಜಿದ್ದಿನ ಸ್ಪರ್ಧೆ ನಡೆದಿದ್ದು, ಬಿಹಾರದ ಅಧಿಕಾರದ ಗದ್ದುಗೆ ಯಾರಿಗೆ ಎಂಬುದು ಇನ್ನಷ್ಟು ಕುತೂಹಲ ಮೂಡಿಸಿದ್ದು, ಮಧ್ಯಾಹ್ನದೊಳಗೆ ಬಹುತೇಕ ಚಿತ್ರಣ ದೊರೆಯುವ ಸಾಧ್ಯತೆ ಇದೆ ಎಂದು ವಿಶ್ಲೇಷಿಸಲಾಗುತ್ತಿದೆ.
ಇದನ್ನೂ ಓದಿ:Live Update: ಬಿಹಾರ ಚುನಾವಣೆಯ ಮಹಾತೀರ್ಪು-ಮುಖ್ಯಮಂತ್ರಿ ಗದ್ದುಗೆ ಯಾರ ಪಾಲಿಗೆ?
ಈ ಬಾರಿಯ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸ್ಟಾರ್ ಪ್ರಚಾರಕರಾಗಿದ್ದು, ಜೆಡಿಯುನಿಂದ ಬಿಜೆಪಿ ಅಂತರಕಾಯ್ದುಕೊಂಡಿತ್ತು. ನಿತೀಶ್ ಕುಮಾರ್ ಅವರ ಸಭೆಗಳಲ್ಲಿ ಬಿಜೆಪಿಯ ಯಾವ ಸಚಿವರು, ಸ್ಟಾರ್ ಪ್ರಚಾರಕರೂ ಭಾಗವಹಿಸಿರಲಿಲ್ಲವಾಗಿತ್ತು. ಪ್ರಸ್ತುತ ಜೆಡಿಯು 53 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಬಿಜೆಪಿಯು 71 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.
ಬಿಹಾರದಲ್ಲಿ ಈ ಬಾರಿಯೂ ಎನ್ ಡಿಎ ಮೈತ್ರಿಕೂಟ ಮತ್ತೆ ಅಧಿಕಾರದ ಗದ್ದುಗೆ ಏರಲಿದೆಯೇ ಅಥವಾ ಬದಲಾವಣೆಯ ಗಾಳಿ ಬೀಸಲಿದೆಯೇ ಎಂಬುದನ್ನು ಕಾದುನೋಡಬೇಕಾಗಿದೆ.
ಟಾಪ್ ನ್ಯೂಸ್
![Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ](https://www.udayavani.com/wp-content/uploads/2024/12/aa-7-415x246.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![“ಚೋಟಾ ಮೋದಿ”:ಡಿಸಿಎಂ ಹುದ್ದೆಗೆ ರಾಜೀನಾಮೆ, ರಾಜ್ಯಸಭೆಗೆ ಬಿಜೆಪಿಯಿಂದ ಸುಶೀಲ್ ಮೋದಿ ಆಯ್ಕೆ](https://www.udayavani.com/wp-content/uploads/2020/11/Sushil-modi-150x100.jpg)
“ಚೋಟಾ ಮೋದಿ”:ಡಿಸಿಎಂ ಹುದ್ದೆಗೆ ರಾಜೀನಾಮೆ, ರಾಜ್ಯಸಭೆಗೆ ಬಿಜೆಪಿಯಿಂದ ಸುಶೀಲ್ ಮೋದಿ ಆಯ್ಕೆ
![ಇದೇ ಕೊನೆಯ ಚುನಾವಣೆ ಎಂದು ಹೇಳಿಯೇ ಇಲ್ಲ: ನಿತೀಶ್ ಕುಮಾರ್](https://www.udayavani.com/wp-content/uploads/2020/11/niish-150x91.jpg)
ಇದೇ ಕೊನೆಯ ಚುನಾವಣೆ ಎಂದು ಹೇಳಿಯೇ ಇಲ್ಲ: ನಿತೀಶ್ ಕುಮಾರ್
![ತೇಜಸ್ವಿ ಒಳ್ಳೆಯ ಹುಡುಗ, ಆದರೆ RJD ಅಧಿಕಾರದ ಗದ್ದುಗೆ ಏರಿದ್ದರೆ…ಉಮಾಭಾರತಿ ಹೇಳಿದ್ದೇನು](https://www.udayavani.com/wp-content/uploads/2020/11/uma-bharati-150x86.jpg)
ತೇಜಸ್ವಿ ಒಳ್ಳೆಯ ಹುಡುಗ, ಆದರೆ RJD ಅಧಿಕಾರದ ಗದ್ದುಗೆ ಏರಿದ್ದರೆ…ಉಮಾಭಾರತಿ ಹೇಳಿದ್ದೇನು?
![ನಿತೀಶ್ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್: ಬಿಜೆಪಿ-ಜೆಡಿಯು ನಡುವೆ ಸಂಪುಟ ಕಸರತ್ತು ಆರಂಭ](https://www.udayavani.com/wp-content/uploads/2020/11/nithis-150x85.jpg)
ನಿತೀಶ್ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್: ಬಿಜೆಪಿ-ಜೆಡಿಯು ನಡುವೆ ಸಂಪುಟ ಕಸರತ್ತು ಆರಂಭ
![ನಿತೀಶ್ ಕುಮಾರ್ ಬಿಹಾರದ ಮುಖ್ಯಮಂತ್ರಿ, ಇದು ನಮ್ಮ ಬದ್ಧತೆ: ಭಾರತೀಯ ಜನತಾ ಪಕ್ಷ](https://www.udayavani.com/wp-content/uploads/2020/11/Nitish-kumar-2-150x90.jpg)
ನಿತೀಶ್ ಕುಮಾರ್ ಬಿಹಾರದ ಮುಖ್ಯಮಂತ್ರಿ, ಇದು ನಮ್ಮ ಬದ್ಧತೆ: ಭಾರತೀಯ ಜನತಾ ಪಕ್ಷ
MUST WATCH
![udayavani youtube](https://i.ytimg.com/vi/NdljxpTr0n8/mqdefault.jpg)
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
![udayavani youtube](https://i.ytimg.com/vi/Ge2mbEcT0j0/mqdefault.jpg)
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
![udayavani youtube](https://i.ytimg.com/vi/qW7fcwKh15I/mqdefault.jpg)
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
![udayavani youtube](https://i.ytimg.com/vi/rXflDn9gBE4/mqdefault.jpg)
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
![udayavani youtube](https://i.ytimg.com/vi/OPoFL9bnOqc/mqdefault.jpg)
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.