ಹಣದ ಹೊಳೆ ಹರಿಸಿ, ಅಧಿಕಾರ ದುರುಪಯೋಗ ಮಾಡಿ ಬಿಜೆಪಿ ಗೆದ್ದಿದೆ: ಸಿದ್ದರಾಮಯ್ಯ


Team Udayavani, Nov 10, 2020, 3:57 PM IST

ಹಣದ ಹೊಳೆ ಹರಿಸಿ, ಅಧಿಕಾರ ದುರುಪಯೋಗ ಮಾಡಿ ಬಿಜೆಪಿ ಗೆದ್ದಿದೆ: ಸಿದ್ದರಾಮಯ್ಯ

ಬಾಗಲಕೋಟೆ: ರಾಜ್ಯದ ಶಿರಾ ಮತ್ತು ಆರ್.ಆರ್. ನಗರ ಎರಡೂ ಕಡೆ ಬಿಜೆಪಿ ಗೆದ್ದಿದೆ. ನಾವು ಎರಡು ಕಡೆ ಸೋತಿದ್ದೇವೆ. ಪ್ರಜಾಪ್ರಭುತ್ವದಲ್ಲಿ ಸೋಲು ಗೆಲುವು ಸಾಮಾನ್ಯ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ಬಾದಾಮಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿರಾದಲ್ಲಿ ಗೆಲ್ಲುವ ನಿರೀಕ್ಷೆ ಇತ್ತು‌. ಆರ್.ಆರ್.ನಗರದಲ್ಲಿ ಒಳ್ಳೆಯ ಸ್ಪರ್ಧೆ ನೀಡುತ್ತೇವೆ ಎಂದು ಕೊಂಡಿದ್ದೆವು. ಆದರೆ ಜನರ ತೀರ್ಪನ್ನು ನಾವು ಒಪ್ಪಿಕೊಂಡಿದ್ದೇವೆ ಎಂದರು.

ಸರಕಾರದಲ್ಲಿರುವವರು ಚುನಾವಣೆಯನ್ನು ನಿಷ್ಪಕ್ಷಪಾತವಾಗಿ, ಮುಕ್ತವಾಗಿ ನಡೆಸುವುದು ಅವರ ಜವಾಬ್ದಾರಿ. ನನಗೆ ಇರುವ ಮಾಹಿತಿಯ ಪ್ರಕಾರ, ಬಿಜೆಪಿ ಅಧಿಕಾರ ದುರುಪಯೋಗ ಮಾಡಿಕೊಂಡಿದೆ‌. ಎರಡು ಕಡೆ ಹಣದ ಹೊಳೆ ಹರಿಸಿದೆ ಎಂದು ಆರೋಪಿಸಿದರು.

ಏನೆ ಇರಲಿ ಬಿಜೆಪಿಗೆ ಜನ ಮತ ಕೊಟ್ಟಿರುವುದು ತೀರ್ಪು. ಆ ತೀರ್ಪನ್ನು ನಾವು ಒಪ್ಪಿಕೊಂಡಿದ್ದೇವೆ ಎಂದ ಅವರು ಅಭ್ಯರ್ಥಿ ಆಯ್ಕೆಯಲ್ಲಿ ಯಾವುದೇ ಗೊಂದಲವಾಗಿಲ್ಲ. ಒಮ್ಮತದಿಂದ ಅಭ್ಯರ್ಥಿಗಳ ಆಯ್ಕೆ ನಡೆದಿತ್ತು ಎಂದು ಹೇಳಿದರು.

ಆರ್ ಆರ್ ನಗರ ಅಭ್ಯರ್ಥಿ ಆಯ್ಕೆ ವಿಳಂಭವಾಯ್ತು. ವಿದ್ಯಾವಂತ ಹೆಣ್ಣುಮಗಳಿಗೆ ಕಣಕ್ಕಿಳಿಸಿದ್ದೆವು‌‌. ಅಧಿಕಾರ, ಹಣದ ಬೆಂಬಲ, ಸರಕಾರ ಇರುವುದರಿಂದ ಅವರಿಗೆ ಅನುಕೂಲವಾಗಿವೆ. ಉಪಚುನಾವಣೆ ಆಗಿರೋದರಿಂದ ಅವರಿಗೇನು ದೊಡ್ಡ ಶಕ್ತಿ ಬರೋದಿಲ್ಲ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಲೀಡ್ ಬಂದಿತ್ತು. ಜೊತೆಗೆ ಹಣದ ಪ್ರಭಾವದಿಂದ ನಮ್ಮ ಪಕ್ಷದ ಅಭ್ಯರ್ಥಿಗಳು ಸೋತಿದ್ದಾರೆ ಎಂದರು.

ಇದನ್ನೂ ಓದಿ:ಕಾಂಗ್ರೆಸ್ ಪಕ್ಷ ಅವನತಿಯತ್ತ ಸಾಗುತ್ತಿದೆ ಎನ್ನಲು ಇಂದಿನ ಫಲಿತಾಂಶ ನಿದರ್ಶನ: ಬಿ.ಸಿ.ಪಾಟೀಲ್

ಆರ್ ಆರ್ ನಗರದಲ್ಲಿ ಜೆಡಿಎಸ್ ಬಿಜೆಪಿ ಹೊಂದಾಣಿಕೆ ಮಾಡಿಕೊಂಡ ರೀತಿ ಕಾಣಿಸುತ್ತದೆ.‌‌ ಜೆಡಿಎಸ್ ನವರು ದುರ್ಬಲ ಅಭ್ಯರ್ಥಿಯನ್ನು ಬೇಕೆಂದೆ ಹಾಕಿದ್ದಾರೆ ಎಂದರು.

ಯಡಿಯೂರಪ್ಪ ಬದಲಾವಣೆ: ಉಪಚುನಾವಣೆ ಬಳಿಕ ಬಿಎಸ್ ವೈ ಮುಖ್ಯಮಂತ್ರಿ  ಸ್ಥಾನ ಕಳೆದುಕೊಳ್ತುತ್ತಾರೆ ಎಂದು ಮತ್ತೊಮ್ಮೆ ಪ್ರತಿಪಾದಿಸಿದ ಅವರು, ನಾನು ಈಗಲೂ ಹಾಗೆ ಹೇಳ್ತಿನೆ. ನನಗೆ ಈಗಲೂ‌ ಮಾಹಿತಿ ಇದೆ. ಚುನಾವಣೆ ಬಳಿಕ ಯಡಿಯೂರಪ್ಪನವರನ್ನು ಬದಲಾವಣೆ ಮಾಡುತ್ತಾರೆ ಎಂದರು.

ಸಂಸದ ಪ್ರತಾಪ ಸಿಂಹ ಹೇಳಿಕೆಗೆ ತಿರುಗೇಟು ನೀಡಿದ ಸಿದ್ದರಾಮಯ್ಯ, ನಾನು ಪ್ರತಾಪ ಸಿಂಹನಿಗೆ ಪ್ರತಿಕ್ರಿಯೆ ನೀಡಲ್ಲ. ಪ್ರತಾಪ ಸಿಂಹಗೆ ಇನ್ನು ರಾಜಕೀಯ ಪ್ರೌಢಿಮೆ ಇಲ್ಲ ಎಂದು ಟೀಕಿಸಿದರು.

ಇದನ್ನೂ ಓದಿ: ಆರ್.ಆರ್.ನಗರ ಕುರುಕ್ಷೇತ್ರದಲ್ಲಿ ಮುನಿರತ್ನನೇ ಕಿಂಗ್: ಎದುರಾಳಿ ಕುಸುಮಾ ಎದುರು ಭರ್ಜರಿ ಜಯ

ಉಪ ಚುನಾವಣೆಯ ಸೋಲಿನ ಹೊಣೆ ಡಿಕೆಶಿವಕುಮಾರ್ ಯಾಕೆ ಹೊರಬೇಕು. ಯಾರು ಅಧ್ಯಕ್ಷರಾದರೂ ಅಷ್ಟೆ. ಇದು ಬೈ ಎಲೆಕ್ಷನ್. 2023 ರ ಸಾರ್ವತ್ರಿಕ ಚುನಾವಣೆಯಲ್ಲಿ ಗೆಲ್ಲತ್ತೇವೆ ಎಂದು ಹೇಳಿದರು.

ಬಿಹಾರ ಫಲಿತಾಂಶದ ಕುರಿತು ಪ್ರತಿಕ್ರಿಯಿಸಿದ ಅವರು, ಬೆಳಗ್ಗೆ ಮಹಾಘಟಬಂಧನ ಮುನ್ನಡೆಯಲ್ಲಿತ್ತು. ಕ್ರಮೇಣ ಬಿಜೆಪಿ ಮುನ್ನಡೆ ಸಾಧಿಸಿದೆ. ಇನ್ನೂ ಮತ ಏಣಿಕೆ ನಡೆಯುತ್ತಿದೆ. ಅಂತಿಮವಾಗಿ ಏನಾಗುತ್ತದೆಯೋ ನೋಡಬೇಕು ಎಂದರು.

ಎಲ್ಲಾ ಸಮೀಕ್ಷೆಗಳು ಮಹಾಘಟಬಂಧನ ಗೆಲ್ಲುತ್ತೆ ಎಂದಿತ್ತು. ಇದರ ಬಗ್ಗೆ ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. 40 ಸ್ಥಾನ ಲೀಡ್ ಇದ್ದಿದ್ದು, ಇದ್ದಕ್ಕಿದ್ದಂತೆ ಎನ್ ಡಿಎ ಲೀಡ್ ಬಂದಿದೆ. ಹೀಗಾಗಿ ಅನುಮಾನ ಬರಲ್ವಾ? ಇವಿಎಂ ಮಶೀನ್ ಬಗ್ಗೆ ಏನು ಗೊತ್ತಿಲ್ಲ.‌ ಕಾಂಗ್ರೆಸ್, ಉಳಿದ ಪಕ್ಷಗಳ ನಾಯಕರು ಆ ಬಗ್ಗೆ ಮಾತನಾಡುತ್ತಾರೆ ಎಂದು ಹೇಳಿದರು.

ಟಾಪ್ ನ್ಯೂಸ್

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಸವಕಲ್ಯಾಣ, ಮಸ್ಕಿಯತ್ತ ಬಿಜೆಪಿಯ ಯಶಸ್ವಿ “ಉಸ್ತುವಾರಿಗಳು”

ಬಸವಕಲ್ಯಾಣ, ಮಸ್ಕಿಯತ್ತ ಬಿಜೆಪಿಯ ಯಶಸ್ವಿ “ಉಸ್ತುವಾರಿಗಳು”

ಸೋಲಿನಿಂದ ಹೆದರಿ ಹಿಂದೆ ತಿರುಗಿ ನೋಡುವ ಪ್ರಶೆಯೇ ಇಲ್ಲ: ಕುಸುಮಾ

ಸೋಲಿನಿಂದ ಹೆದರಿ ಹಿಂದೆ ತಿರುಗಿ ನೋಡುವ ಪ್ರಶ್ನೆಯೇ ಇಲ್ಲ: ಕುಸುಮಾ

bng-tdy-1

ಮುನಿರತ್ನ ಮಾತು : ಸದಾ ಕ್ಷೇತ್ರದ ಜನರೊಂದಿಗೆ ಇರುವೆ

bng-tdy-5

ಜಾತಿ, ಅನುಕಂಪ ಮೀರಿ ಅಭಿವೃದ್ಧಿಗೆ ಜನ ಮತ

ಬೇರು ಭದ್ರಪಡಿಸುವ ಸವಾಲು

ಬೇರು ಭದ್ರಪಡಿಸುವ ಸವಾಲು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.