Rewind 2023: ಈ ವರ್ಷ ಹಸೆಮಣೆ ಏರಿದ ತಾರೆಯರು


Team Udayavani, Dec 27, 2023, 2:33 PM IST

Rewind 2023: ಈ ವರ್ಷ ಹಸೆಮಣೆ ಏರಿದ ತಾರೆಯರು

ಕಳೆದ ಕೆಲ ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ನಟ-ನಟಿಯರಾಗಿ ಗುರುತಿಸಿಕೊಂಡಿದ್ದ ಅನೇಕ ಸ್ಟಾರ್ 2023ರಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ವೃತ್ತಿ ಬದುಕಿನಲ್ಲಿ ಮಿಂಚುತ್ತಿರುವಾಗಲೇ ಹಸೆಮಣೆ ಏರುವ ಮೂಲಕ ಕನ್ನಡ ಚಿತ್ರರಂಗದ ಒಂದಷ್ಟು ತಾರೆಯರು ಅಭಿಮಾನಿಗಳಿಗೆ ಮತ್ತು ಚಿತ್ರರಂಗಕ್ಕೆ ಸ್ಪೆಷಲ್‌ ಸರ್‌ಪ್ರೈಸ್‌ ನೀಡಿದರು.

ಹೀಗೆ 2023ರಲ್ಲಿ ವಿವಾಹ ಬಂಧನಕ್ಕೆ ಒಳಗಾದವರ ಪೈಕಿ ಮೊದಲಿಗೆ ಸಿಗುವ ಹೆಸರು ನಟ ವಸಿಷ್ಠ ಸಿಂಹ ಹಾಗೂ ನಟಿ ಹರಿಪ್ರಿಯಾ ಅವರದ್ದು. ಕೆಲ ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ನಟಿ ಹರಿಪ್ರಿಯಾ ಹಾಗೂ ನಟ ವಸಿಷ್ಠ ಸಿಂಹ ತಮ್ಮ ವೃತ್ತಿ ಜೀವನದಲ್ಲಿ ಬಿಝಿಯಾಗಿರುವಾಗಲೇ ಹಸೆಮಣೆ ಏರಿದರು.

ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ನಡೆದ ಈ ತಾರಾ ಜೋಡಿಯ ಅದ್ಧೂರಿ ವಿವಾಹ ಸಮಾರಂಭದಲ್ಲಿ ಚಿತ್ರರಂಗ ಮತ್ತು ರಾಜಕೀಯ ರಂಗದ ಅನೇಕ ಗಣ್ಯರು ಹಾಜರಿದ್ದು ನೂತನ ವಧು-ವರನಿಗೆ ಶುಭ ಕೋರಿದರು.

“ಅಮರ್‌’ ಸಿನಿಮಾದ ಮೂಲಕ ನಾಯಕ ನಟನಾಗಿ ಸ್ಯಾಂಡಲ್‌ವುಡ್‌ಗೆ ಎಂಟ್ರಿಯಾಗಿರುವ ರೆಬೆಲ್‌ಸ್ಟಾರ್‌ ಅಂಬರೀಶ್‌ ಪುತ್ರ ಅಭಿಷೇಕ್‌ ಅವರ ಮದುವೆ ಅವಿವಾ ಬಿದಪ್ಪ ಜೊತೆ ನಡೆಯಿತು. ಅಭಿಷೇಕ್‌ – ಅವಿವಾ ವಿವಾಹಕ್ಕೆ ಸೂಪರ್‌ಸ್ಟಾರ್‌ ರಜನಿಕಾಂತ್‌ ಸೇರಿದಂತೆ ಚಿತ್ರರಂಗದ ಗಣ್ಯರು, ರಾಜಕೀಯ ಮುಖಂಡರು, ಅಪಾರ ಅಭಿಮಾನಿಗಳು ಸಾಕ್ಷಿಯಾಗಿದ್ದರು.

ಕನ್ನಡದ ಜೊತೆಗೆ ಪರಭಾಷೆಯಲ್ಲೂ ಹಲವು ಸಿನಿಮಾಗಳಲ್ಲಿ ಅಭಿನಯಿಸಿರುವ ನಟಿ ಹರ್ಷಿಕಾ ಪೂಣಚ್ಚ ಹಾಗೂ ಭುವನ್‌ ಪೊನ್ನಣ್ಣ ಜೋಡಿ ಈ ವರ್ಷ ವಿವಾಹ ಬಂಧನಕ್ಕೆ ಒಳಗಾದರು. ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಸ್ನೇಹಿತರಾಗಿದ್ದ ಈ ಜೋಡಿಯ ಮದುವೆ ಕೊಡವ ಸಂಪ್ರದಾಯದಂತೆಯೇ ನೆರವೇರಿತು.

“ಮುಂಗಾರು ಮಳೆ’ ಸಿನಿಮಾ ಖ್ಯಾತಿಯ ನಾಯಕಿ ಪೂಜಾ ಗಾಂಧಿ ಉದ್ಯಮಿ ವಿಜಯ್‌ ಘೋರ್ಪಡೆ ಅವರನ್ನು ವರಿಸಿದರು. ಕುವೆಂಪು ಅವರ ಮಂತ್ರ ಮಾಂಗಲ್ಯ ಪದ್ಧತಿಯ ಅನುಸಾರ, ಪೂಜಾ ಗಾಂಧಿ – ವಿಜಯ್‌ ಘೋರ್ಪಡೆ ಸರಳವಾಗಿ ವಿವಾಹವಾದರು. ಕನ್ನಡದಲ್ಲಿ “ಶಿಷ್ಯ’, “ಮಾಗಡಿ’, “ಬೆಳ್ಳಿ’, “ಏಕ್‌ ಲವ್‌ ಯಾ’, “ವೀರಂ’ ಮುಂತಾದ ಸಿನಿಮಾಗಳಲ್ಲಿ ಅಭಿನಯಿಸಿರುವ ನಟ ದೀಪಕ್‌ ಫ್ಯಾಶನ್‌ ಡಿಸೈನರ್‌ ಬೃಂದಾ ಅವರನ್ನು ವಿವಾಹವಾದರು.

“ಹರಿಕಥೆ ಅಲ್ಲ ಗಿರಿಕಥೆ’ ಸಿನಿಮಾ ಖ್ಯಾತಿಯ ತಪಸ್ವಿನಿ ಪೂಣಚ್ಚ ಅವರ ವಿವಾಹ ರಕ್ಷತ್‌ ಮುತ್ತಣ್ಣ ಅವರೊಂದಿಗೆ ನಡೆಯಿತು. ಸರಳವಾಗಿ ಕೊಡವ ಸಂಪ್ರಾಯದಾಯದಂತೆ ನಡೆದ ಇವರ ವಿವಾಹ ಸಮಾರಂಭದಲ್ಲಿ ಚಿತ್ರರಂಗದ ಕೆಲವರು, ಕುಟುಂಬದ ಆಪ್ತರಷ್ಟೇ ಹಾಜರಾಗಿದ್ದರು. ನಟ ನಿಹಾಲ್‌ ಮತ್ತು ನಿರ್ದೇಶಕಿ ರಿಷಿಕಾ ಶರ್ಮಾ 2023ರಲ್ಲಿ ಹಸೆಮಣೆ ಏರಿದರು.

ಸುಮಾರು ಏಳೆಂಟು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಈ ಜೋಡಿಯ ಲವ್‌ ಸ್ಟೋರಿಗೆ ಈ ವರ್ಷ ಅಧಿಕೃತ ಮುದ್ರೆ ಬಿತ್ತು.”ವಜ್ರಕಾಯ’ ಸಿನಿಮಾ ಖ್ಯಾತಿಯ ನಟಿ ಶುಭ್ರ ಅಯ್ಯಪ್ಪ ಹಾಗೂ ಉದ್ಯಮಿ ವಿಶಾಲ್‌ ಶಿವಪ್ಪ ಅವರ ಮದುವೆ ಇದೇ ವರ್ಷ ಜರುಗಿತು. ಹಲವು ವರ್ಷಗಳಿಂದ ವಿಶಾಲ್‌ ಹಾಗೂ ಶುಭ್ರ ಅಯ್ಯಪ್ಪ ಪರಸ್ಪರ ಪ್ರೀತಿಸುತ್ತಿದ್ದರು. ಕನ್ನಡ ಚಿತ್ರರಂಗದ ಯುವ ಸಂಗೀತ ನಿರ್ದೇಶಕ ಮತ್ತು ಗಾಯಕ ವಾಸುಕಿ ವೈಭವ್‌ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ತಮ್ಮ ದೀರ್ಘ‌ಕಾಲದ ಗೆಳತಿ ಬೃಂದಾ ವಿಕ್ರಮ್‌ ಅವರೊಂದಿಗೆ ವಾಸುಕಿ ವೈಭವ್‌ ದಾಂಪತ್ಯ ಗೀತೆ ಹಾಡಿದರು.

ಕಿರುತೆರೆ ಮತ್ತು ಹಿರಿತೆರೆ ನಟ ಸಿದ್ದು ಮೂಲಿಮನಿ ಅವರ ವಿವಾಹ ನಟಿ ಪ್ರಿಯಾ ಆಚಾರ್‌ ಜೊತೆ ನಡೆಯಿತು. ಕೆಲ ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಈ ಜೋಡಿ ಈ ವರ್ಷ ಹೊಸ ಜೀವನ ಆರಂಭಿಸಿತು. ಕಿರುತೆರೆಯ “ಕಾಮಿಡಿ ಕಿಲಾಡಿಗಳು’ ಶೋ ಮತ್ತು ಹಿರಿತೆರೆಯ ಕೆಲ ಸಿನಿಮಾಗಳಲ್ಲಿ ಕಾಮಿಡಿ ನಟನಾಗಿ ಮಿಂಚಿದ ಹಿತೇಶ್‌ ಕುಮಾರ್‌ ತಮ್ಮ ಬಹುಕಾಲದ ಗೆಳತಿ ಸ್ವಾತಿ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿರಿಸಿದರು.

ಕಿರು ತೆರೆಯ “ಕಾಮಿಡಿ ಕಿಲಾಡಿಗಳು’ ಶೋ ಮತ್ತು ಕೆಲವು ಸಿನಿಮಾಗಳಲ್ಲಿ ಕಾಮಿಡಿ ಕಚಗುಳಿ ನೀಡಿರುವ ನಟ ಸಂಜು ಬಸಯ್ಯ ತಮ್ಮ ಬಹು ಕಾಲದ ಗೆಳತಿ ಪಲ್ಲವಿ ಅವ ರೊಂದಿಗೆ ಹಸೆಮಣೆ ಏರಿದರು. ಇವರಲ್ಲದೆ ಒಂದಷ್ಟು ಸಿನಿಮಾಗಳಲ್ಲಿ ಅಭಿನಯಿಸಿರುವ ಅಕ್ಷತಾ ಕುಕಿ, ನಟ ಕಂ ನಿರ್ದೇಶಕ ಪ್ರಥಮ್‌ ಹೀಗೆ ಚಿತ್ರರಂಗದ ಅನೇಕರು ಈ ವರ್ಷ ವಿವಾಹವಾದರು.

 

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

mallu jamkhandi vidya ganesh movie

Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.