ಬೆಳ್ತಂಗಡಿ: ಸರಳ ಗೌರಿ ಗಣೇಶ ಹಬ್ಬ ಆಚರಣೆ ಸಂಭ್ರಮ


Team Udayavani, Aug 21, 2020, 10:40 PM IST

ಬೆಳ್ತಂಗಡಿ: ಸರಳ ಗೌರಿ ಗಣೇಶ ಹಬ್ಬ ಆಚರಣೆ ಸಂಭ್ರಮ

ಬೆಳ್ತ‌ಂಗಡಿಯಲ್ಲಿ ಹೂ ಮಾರಾಟ ಮಾಡುತ್ತಿರುವ ಗೊರೂರಿನ ಹೂ ಮಾರಾಟಗಾರು.

ಬೆಳ್ತಂಗಡಿ: ತಾಲೂಕಿನೆಲ್ಲೆಡೆ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಆ. 21ರಂದು ಮಹಿಳೆ ಯರು ಗೌರಿ ದೇವಿಯನ್ನು ಪೂಜಿಸಿ ಸುಖ ಸಮೃದ್ಧಿಗಾಗಿ ಪ್ರಾರ್ಥಿಸಿದರು. ಮುತ್ತೈದೆಯರಿಗೆ ಬಾಗಿನ ಅರ್ಪಣೆ ಸಹಿತ ಸಿಹಿತಿಂಡಿ, ಅರಸಿನ- ಕುಂಕುಮ, ಬಳೆ ಕೊಡುವ ಮೂಲಕ ಸಂಪ್ರದಾಯ ಪಾಲಿಸಿದರು. ಹೆಚ್ಚಿನ ಮಂದಿ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಿದರು. ಹೂವಿನ ಮಾರುಕಟ್ಟೆ ಸಹಿತ ಹಣ್ಣು ಹಂಪಲು ಮಾರಾಟಗಾರರು ಬೆಳಗ್ಗೆಯಿಂದಲೇ ಮಾರಾಟದಲ್ಲಿ ನಿರತರಾಗಿದ್ದರು. ಹಾಸನ, ಅರಕಲಗೂಡು ಸಹಿತ ವಿವಿಧೆಡೆಗಳಿಂದ ಕಬ್ಬು, ವಿವಿಧ ಬಗೆಯ ಹೂ ಮಾರಾಟಕ್ಕಾಗಿ ಮಾರಾಟಗಾರರು ತಾಲೂಕಿಗೆ ಆಗಮಿಸಿದ್ದಾರೆ. ಕೊರೊನಾ ಹಿನ್ನೆಲೆ ಸರಳ ಆಚರಣೆಗೆ ಮುಂದಾಗಿದ್ದರಿಂದ ಹೂ ಖರೀದಿ ಹಿಂದಿನಂತಿಲ್ಲ. ಮಳೆಯಿಂದಾಗಿ ಹೂವನ್ನು ಸಂರಕ್ಷಿಸುವುದು ಸವಾಲಾಗಿದೆ ಎಂದು ಮಾರಾಟಗಾರರು ಅಭಿಪ್ರಾಯಪಟ್ಟಿದ್ದಾರೆ.

ಗೌರಿಹಬ್ಬ ಆಚರಣೆ
ಮುಂಡಾಜೆ: ಬೆಳ್ತಂಗಡಿ ತಾ| ನ ಮುಂಡಾಜೆ ಹಾಗೂ ಆಸುಪಾಸಿನ ಪ್ರದೇಶಗಳ ದೇವಸ್ಥಾನ ಮತ್ತು ಮನೆಗಳಲ್ಲಿ ಶುಕ್ರವಾರ ಗೌರಿ ಹಬ್ಬವನ್ನು ಸರಳವಾಗಿ ಆಚರಿಸಲಾಯಿತು. ಈ ಹಿಂದಿನ ವರ್ಷಗಳಲ್ಲಿ ಹೆಚ್ಚಿನ ಕಡೆಗಳಲ್ಲಿ ಕುಟುಂಬಿಕರು ಹಾಗೂ ಅಕ್ಕಪಕ್ಕದ ಮನೆಯವರು ಒಂದೆಡೆ ಸೇರಿ ಗೌರಿ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸುತ್ತಿದ್ದರು. ಈ ಬಾರಿ ಕೊರೊನಾ ಮುನ್ನೆಚ್ಚರಿಕೆ ಕಾರಣ ಹೆಚ್ಚಿನವರು ಅವರವರ ಮನೆಗಳಲ್ಲಿ ಹಬ್ಬವನ್ನು ಪೂಜೆಗೆ ಸೀಮಿತಗೊಳಿಸಿ ಆಚರಿಸಿದರು. ಕೆಲವು ಕಡೆ ಗೌರಿಯ ವಿಗ್ರಹವನ್ನಿಟ್ಟು ಹಾಗೂ ಇನ್ನು ಕೆಲವು ಕಡೆ ಕಲಶಗಳನ್ನು ಪ್ರತಿಷ್ಠಾಪಿಸಿ ಪೂಜೆಯನ್ನು ನೆರವೇರಿಸಲಾಯಿತು.

ಬೇಡಿಕೆ ಇಲ್ಲ
ಈ ವರ್ಷ ಗೌರಿ ಗಣೇಶ  ಆಚರಣೆಗೆ ಹೂವಿಗೆ ನಿರೀಕ್ಷಿತ  ಬೇಡಿಕೆ ಇಲ್ಲ. 6 ಮಂದಿ ಸೇರಿ 20 ಬುಟ್ಟಿ ಹೂ ತಂದಿದ್ದೇವೆ.
-ಚಂದ್ರೇಗೌಡ ಗೊರೂರು, ಹೂವಿನ ವ್ಯಾಪಾರಿ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-14

ಹಬ್ಬದ ಮೂಡ್‌ನ‌ಲ್ಲಿ ಸ್ಯಾಂಡಲ್‌ವುಡ್‌ ತಾರೆಯರು

ಕುಷ್ಟಗಿ: ಹಿಂದೂ- ಮುಸ್ಲಿಂ ಗೆಳೆಯರ ಬಳಗದ ಗಣೇಶೋತ್ಸವಕ್ಕೆ ನಾಲ್ಕು ದಶಕಗಳ ಸಂಭ್ರಮ

ಕುಷ್ಟಗಿ: ಹಿಂದೂ- ಮುಸ್ಲಿಂ ಗೆಳೆಯರ ಬಳಗದ ಗಣೇಶೋತ್ಸವಕ್ಕೆ ನಾಲ್ಕು ದಶಕಗಳ ಸಂಭ್ರಮ

ಗ್ರಾಮೀಣ ಭಾಗದಲ್ಲಿ ಅರ್ಥಪೂರ್ಣ ಗಣೇಶ ಚತುರ್ಥಿ ಆಚರಣೆ

ಗ್ರಾಮೀಣ ಭಾಗದಲ್ಲಿ ಅರ್ಥಪೂರ್ಣ ಗಣೇಶ ಚತುರ್ಥಿ ಆಚರಣೆ

tdy-7

ಗಂಗಾವತಿಯಲ್ಲಿ ಪೊಲೀಸ್ ಬಂದೋಬಸ್ತಿನಲ್ಲಿ ಸಡಗರದ ಗಣೇಶ ಚತುರ್ಥಿ ಆಚರಣೆ

ಅಂಜೂರ ಮರದಿಂದ 32 ಅಡಿ ಗಣೇಶನ ಮೂರ್ತಿ ತಯಾರು

ಅಂಜೂರ ಮರದಿಂದ 32 ಅಡಿ ಗಣೇಶನ ಮೂರ್ತಿ ತಯಾರು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.