ವನ್ಯ ಜೀವಿಗಳಿಗೂ ಬೇಕು ಇದೇ ಮದಗ

ಕಾರಿಮಕ್ಕಿ ಮದಗ ಹೂಳು ತುಂಬಿ ಹಾಳು

Team Udayavani, Feb 12, 2020, 4:38 AM IST

sds-24

ಕುಂದಾಪುರ: ಕಾಡಂಚಿನ ಮದಗಗಳಲ್ಲಿ ಹೂಳು ತುಂಬಿ ಕಾಡುಪ್ರಾಣಿಗಳಿಗೆ ಕುಡಿಯಲು ನೀರಿಲ್ಲದ ಸ್ಥಿತಿ ಒದಗಿದೆ. ಬೇಸಗೆ ಆರಂಭವಾಗುವ ಮುನ್ನವೇ ನೀರು ಆರುವ ಕಾರಣ ಸನಿಹದ ಮನೆಗಳ ಬಾವಿಗಳಿಗೂ ಅಂತರ್ಜಲದ ನಿರೀಕ್ಷೆ ಸುಳ್ಳಾಗಿದೆ. ಪಂಚಾಯತ್‌ ವತಿಯಿಂದ ಎರಡು ಬಾರಿ ಹೂಳೆತ್ತಿದರೂ ಮತ್ತೆ ಮಣ್ಣು ತುಂಬಿ ಉಪಯೋಗಶೂನ್ಯವಾಗಿದೆ. ಇದನ್ನು ದುರಸ್ತಿಗೊಳಿಸಿದರೆ ಪ್ರಾಣಿಗಳಿಗೆ ಕುಡಿಯಲು ನೀರು ದೊರೆಯುತ್ತದೆ. ರೈತರಿಗೆ ಕೃಷಿಗೆ ಅನುಕೂಲವಾಗುತ್ತದೆ. ಮನೆಗಳ ಕುಡಿಯುವ ನೀರಿಗೆ ಅಂತರ್ಜಲ ಮಟ್ಟ ವೃದ್ಧಿಯಾಗುತ್ತದೆ.

ಎಲ್ಲಿದೆ?
ಸಿದ್ದಾಪುರ ಗ್ರಾಮವು ಐತಿಹಾಸಿಕ ಮಹತ್ವವುಳ್ಳ ಸ್ಥಳವಾಗಿದ್ದು ರಾಜರ ಆಳ್ವಿಕೆಯಲ್ಲಿ ಉತ್ತುಂಗ ಸ್ಥಿತಿಯನ್ನು ತಲುಪಿತ್ತು ಎನ್ನುವುದು ಇಲ್ಲಿನ ಇತಿಹಾಸ. ಸಿದ್ದಾಪುರ ಕೆಳಪೇಟೆಯಲ್ಲಿ ಅರಮನೆಯ ಕುರುಹುಗಳಿದ್ದು ಇದೇ ಪರಿಸರದಲ್ಲಿ ತಾಂತ್ರಿಕವಾಗಿ ವೈಶಿಷ್ಟéಪೂರ್ಣವಾದ 7 ಕೆರೆಗಳಿವೆ. ಸಿದ್ದಾಪುರ ಗ್ರಾಮದ ಪಿರಮಿಡ್‌ ಆಕಾರದ 231 ಹೆಕ್ಟೇರ್‌ ವಿಸ್ತೀರ್ಣದ ಭವ್ಯ ಮೀಸಲು ಅರಣ್ಯ ಸೂರಾಲು ಕಾಡು. ಈ ಕಾಡಿನ ನೆತ್ತಿಯ ತಲೆಯಲ್ಲಿ 5 ಎಕರೆ ವಿಸ್ತೀರ್ಣದ ನೈಸರ್ಗಿಕ ಸೂರಾಲು ಕೆರೆಯಿದ್ದು ವನ್ಯಜೀವಿಗಳಿಗೂ ರೈತರಿಗೂ ಜಲಾಶ್ರಯ ತಾಣವಾಗಿದೆ.

ಕೆರೆಗಳ ತಾಣ
ಈ ಸೂರಾಲು ಕಾಡಿನ ಬುಡದಲ್ಲಿ ಸುತ್ತಲೂ 2 ಗ್ರಾಮ ಗಳಾದ ಸಿದ್ದಾಪುರ ಹಾಗೂ ಉಳ್ಳೂರು- 74 ಗ್ರಾಮಗಳನ್ನು ಒಳಗೊಂಡಂತೆ ಕಾಸಿಕಲ್‌ ಕೆರೆ, ಬ್ರಹ್ಮನ ಕೆರೆ, ನಾಗನ ಕೆರೆ, ರಥ ಬೀದಿ ಕೆರೆ, ಐರಬೈಲ್‌ ಕೆರೆ, ಗುಡಿಕೇರಿ ಕೆರೆಗಳೆಂಬ ನೂರಾರು ಕೆರೆಗಳನ್ನು ಸೂರಾಲು ಕಾಡು ಹೊಂದಿದೆ. ಇದರಲ್ಲಿ ಅತಿ ಪ್ರಮುಖವಾದ ಕೆರೆ ಸಿದ್ದಾಪುರ ಗ್ರಾಮದ ಸ. ನಂಬರ್‌ 225ರಲ್ಲಿರುವ ಕಾರಿಮಕ್ಕಿ ಕೆರೆ(ಮದಗ).

ಒತ್ತುವರಿ
ಕಾರಿಮಕ್ಕಿ ಮದಗ ಅರ್ಧ ಎಕರೆಗೂ ಹೆಚ್ಚು ವಿಸ್ತೀರ್ಣ ಹೊಂದಿದೆ. ಆದರೆ ಈ ಕಾರಿಮಕ್ಕಿ ಮದಗ ಇತ್ತೀಚೆಗೆ ಸಾಕಷ್ಟು ಹೂಳು ತುಂಬಿ ಎಪ್ರಿಲ್‌ – ಮೇ ತಿಂಗಳವರೆಗೆ ಬರುವ ನೀರು ಒಣಗಿ ಈ ಕಾರಿಮಕ್ಕಿ ಕೆರೆ ಬಣಗುಡುತ್ತಿದೆ. ವಿಶಾಲವಾಗಿದ್ದ ಕೆರೆ ಒತ್ತುವರಿಯಿಂದಾಗಿ ಈಗ ವಿಸ್ತಾರ ಕಳೆದುಕೊಂಡು ಸಣ್ಣದಾಗುತ್ತಿದೆ. ಆದ್ದರಿಂದ ಇದನ್ನು ಅಳತೆ ಮಾಡಿ ಗಡಿ ಗುರುತು ಹಾಕುವ ಕೆಲಸ ಮೊದಲು ನಡೆಯಬೇಕೆಂದು ಸ್ಥಳೀಯರು ಒತ್ತಾಯಿಸುತ್ತಾರೆ.

ಅಂತರ್ಜಲ
ಕಾರಿಮಕ್ಕಿ ಮದಗದ ಸಮೀಪವಿರುವ 7 -8 ಮನೆಗಳ ಹಾಗೂ ಮದಗದ ಕೆಳ ಭಾಗದಲ್ಲಿ ಇರುವ ಮೇಲ್‌ ಬಾಲೆಬೇರು ಎಂಬಲ್ಲಿನ 8-10 ಮನೆಗಳ ಬಾವಿಗೆ ದೊರೆಯುವ ಅಂತರ್ಜಲ ಮಟ್ಟ ಕುಸಿದಿದೆ. ಮದಗದ ಹೂಳು ತೆಗೆದರೆ ಈ ಭಾಗದ ಅನೇಕ ಬಾವಿಗಳ ಅಂತರ್ಜಲ ಮಟ್ಟ ಹೆಚ್ಚಾಗುವುದರಲ್ಲಿ ಸಂಶಯ ಇಲ್ಲ.

ಹೂಳು ತೆಗೆದು ಹಾಳು
ಹೂಳು ತೆಗೆಯದೇ ನೀರು ಒಣಗಿ ಕೆರೆಯೇ ಹಾಳಾಗುವುದು ಒಂದೆಡೆ ಯಾದರೆ ಹೂಳು ತೆಗೆದೂ ಹಾಳಾದದ್ದೂ ಇದೆ. ಹೂಳು ತೆಗೆದಾಗ ಕೆರೆಯ ವಿನ್ಯಾಸ ಬದಲಾಗಿದೆ. ಆದ್ದರಿಂದ ಪ್ರಾಣಿಗಳಿಗೆ ನೀರು ಕುಡಿಯಲು ಇದರ ಬಳಿ ಬರಲೂ ಸಾಧ್ಯವಾಗುತ್ತಿಲ್ಲ. ಸೂರಾಲಿನಲ್ಲಿ ಕಾಡುಕೋಣ, ಜಿಂಕೆ ಸೇರಿದಂತೆ ಅನೇಕ ವನ್ಯಜೀವಿಗಳಿಗೆ ಈ ಕೆರೆಯ ನೀರು ಬಸವಳಿದು ಬಾಯಾರಿದಾಗ ಜಲಸೆಲೆಯಾಗಿ ಆಶ್ರಯವಾಗಿತ್ತು. ಆದರೆ ಯಾವಾಗ ಹೂಳು ತೆಗೆದು ಕೆರೆಯ ರಾಚನಿಕ ವಿನ್ಯಾಸ ಬದಲಾಯಿತೋ ಪ್ರಾಣಿಗಳು ಕೆರೆಗೇ ಇಳಿಯದಂತಾಯಿತು. ಪ್ರಾಣಿಗಳ ಉಪಯೋಗಕ್ಕೆ ಇರುವ ಕಾಡಿನ ಬದಿಯ ಕೆರೆ ನೀರು ಉಪಯೋಗಿಸಲು ಪ್ರಾಣಿಗಳಿಗೇ ದಿಗ್ಬಂಧನ ಮಾಡಿದಂತಾಯಿತು. ಹಾಗಾಗಿ ಮುಂದಿನ ಬಾರಿ ಹೂಳೆತ್ತುವಾಗ ಪ್ರಾಣಿಗಳು ಕೆರೆಗೆ ಇಳಿಯುವ ವಿನ್ಯಾಸ ರ್‍ಯಾಂಪ್‌ ಮಾದರಿಯಲ್ಲಿ ರಚಿಸಬೇಕಿದೆ. ಈ ಭಾಗದ ಹಕ್ಕಿಗಳು ಕುಡಿಯಲು ನೀರು ಸಿಗದೇ ಆ ಭಾಗದ ಮನೆಯ ಬಾವಿಗಳ ಬಳಿ ಹೋಗಿ ಕೂಗು ಹಾಕುವ ಕರುಣಾಜನಕ ದೃಶ್ಯ ಇರುತ್ತದೆ ಎನ್ನುತ್ತಾರೆ ಇಲ್ಲಿನ ಜನ.

ಗಡಿಗುರುತು ಹಾಕಲಿ
ಕೆರೆಯ ವಿಸ್ತೀರ್ಣ ದೊಡ್ಡದಿತ್ತು. ಆದ್ದರಿಂದ ಅಳತೆ ಮಾಡಿ ಗಡಿಗುರುತು ಹಾಕಲಿ. ಹೂಳೆತ್ತುವ ಮೂಲಕ ಕಾಡುಪ್ರಾಣಿಗಳಿಗೂ ನೀರು ದೊರೆಯುವಂತಾಗಲಿ.
– ನಾಗಪ್ಪ ಶೆಟ್ಟಿ , ನಿವೃತ್ತ ಅರಣ್ಯಾಧಿಕಾರಿ

ರೈತರಿಗೂ ನೆರವಾಗಲಿ
ಅಳಿವಿನಂಚಿನಲ್ಲಿರುವ ನೈಸರ್ಗಿಕ ಸೂರಾಲು ಕೆರೆಗೆ ಪೂರಕವಾಗಿ ರಕ್ಷಿತಾರಣ್ಯದ ಸುತ್ತಲೂ ನೂರಾರು ಮದಗಗಳಿವೆ. ಸೂರಾಲು ಅರಣ್ಯದಲ್ಲಿ ವಾಸಿಸುವ ವನ್ಯಜೀವಿಗಳಿಗೆ ಕಾಡಿನಿಂದ ಹೊರ ಬಂದಾಗ ನೀರು ಕುಡಿಯಲು ಈ ಮದಗಗಳೇ ಆಶ್ರಯ. ಅದರಲ್ಲಿ ಪ್ರಮುಖವಾದ ಕಾರಿಮಕ್ಕಿ ಕೆರೆಯ ಹೂಳು ತೆಗೆದು ಸರಕಾರ ವನ್ಯಜೀವಿಗಳಿಗೆ ಹಾಗೂ ರೈತರಿಗೂ ಅನುಕೂಲ ಮಾಡಿಕೊಡಬೇಕು.
-ಚಿಟ್ಟೆ ರಾಜಗೋಪಾಲ ಹೆಗ್ಡೆ, ಗ್ರಾಮ ಅರಣ್ಯ ಸಮಿತಿ  ಉಳ್ಳೂರು – 74.

ಹೂಳೆತ್ತಲು ಕ್ರಮ
ಈ ಬಾರಿಯ ಕ್ರಿಯಾಯೋಜನೆ ಮಾಡಿಯಾಗಿದ್ದು ಮುಂದಿನ ಬಾರಿ ನರೇಗಾ ಯೋಜನೆಯಲ್ಲಿ ಹೂಳೆತ್ತುವ ಕ್ರಿಯಾಯೋಜನೆ ತಯಾರಿಸಿ ಹೂಳೆತ್ತಲಾಗುವುದು.
-ರವೀಂದ್ರ ರಾವ್‌, ಪಂಚಾಯತ್‌ ಅಭಿವೃದ್ಧಿ ಅಧಿಕಾರಿ, ಸಿದ್ದಾಪುರ

ಲಕ್ಷ್ಮೀ ಮಚ್ಚಿನ

ಟಾಪ್ ನ್ಯೂಸ್

1-ddsadsa

Amit Shah; ತಡೆಯದಿದ್ದರೆ ಅಕ್ರಮ ವಲಸಿಗರೇ ಬಹುಸಂಖ್ಯಾಕರಾಗುತ್ತಾರೆ!

Pushkar sing dhami

Uttarakhand: ಪ್ರತಿಭಟನಕಾರರಿಂದ ಹಾನಿ ನಷ್ಟ ಭರಿಸುವ ಕಾನೂನು ಜಾರಿ

ದಸರೆಗೆ ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ: ಹರಿದ್ವಾರಕ್ಕೆ ಚಲುವರಾಯಸ್ವಾಮಿ ನಿಯೋಗ ಭೇಟಿ

Dasara: ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ; ಹರಿದ್ವಾರಕ್ಕೆ ಚಲುವರಾಯಸ್ವಾಮಿ ನಿಯೋಗ ಭೇಟಿ

BJP ಶಾಸಕ ಮುನಿರತ್ನಗೆ ಎಸ್‌ಐಟಿ ಕುಣಿಕೆ? ರಾಜ್ಯಪಾಲರಿಗೂ ಶೀಘ್ರ ದೂರು

BJP ಶಾಸಕ ಮುನಿರತ್ನಗೆ ಎಸ್‌ಐಟಿ ಕುಣಿಕೆ? ರಾಜ್ಯಪಾಲರಿಗೂ ಶೀಘ್ರ ದೂರು

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

1-lorry

West Bengal;ಝಾರ್ಖಂಡ್‌ನಿಂದ ಬರುವ ವಾಹನಕ್ಕೆ ನಿಷೇಧ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

POlice

Kundapura: ನಿಂದನೆ, ಜೀವ ಬೆದರಿಕೆ: ಕೇಸು ದಾಖಲು

Belve ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 108 ಆ್ಯಂಬುಲೆನ್ಸ್‌ ಬೇಕು

Belve ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 108 ಆ್ಯಂಬುಲೆನ್ಸ್‌ ಬೇಕು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

1

Amparu: ರೆಸ್ಟೋರೆಂಟ್‌ನಲ್ಲಿ ಹೊಡೆದಾಟ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-ddsadsa

Amit Shah; ತಡೆಯದಿದ್ದರೆ ಅಕ್ರಮ ವಲಸಿಗರೇ ಬಹುಸಂಖ್ಯಾಕರಾಗುತ್ತಾರೆ!

Pushkar sing dhami

Uttarakhand: ಪ್ರತಿಭಟನಕಾರರಿಂದ ಹಾನಿ ನಷ್ಟ ಭರಿಸುವ ಕಾನೂನು ಜಾರಿ

ದಸರೆಗೆ ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ: ಹರಿದ್ವಾರಕ್ಕೆ ಚಲುವರಾಯಸ್ವಾಮಿ ನಿಯೋಗ ಭೇಟಿ

Dasara: ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ; ಹರಿದ್ವಾರಕ್ಕೆ ಚಲುವರಾಯಸ್ವಾಮಿ ನಿಯೋಗ ಭೇಟಿ

BJP ಶಾಸಕ ಮುನಿರತ್ನಗೆ ಎಸ್‌ಐಟಿ ಕುಣಿಕೆ? ರಾಜ್ಯಪಾಲರಿಗೂ ಶೀಘ್ರ ದೂರು

BJP ಶಾಸಕ ಮುನಿರತ್ನಗೆ ಎಸ್‌ಐಟಿ ಕುಣಿಕೆ? ರಾಜ್ಯಪಾಲರಿಗೂ ಶೀಘ್ರ ದೂರು

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.