![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Aug 9, 2020, 4:55 PM IST
ಜೋಧ್ಪುರ: ಪಾಕಿಸ್ತಾನದ ಹಿಂದೂ ವಲಸಿಗರ ಕುಟುಂಬದ 11 ಮಂದಿ ಸದಸ್ಯರು ನಿಗೂಢವಾಗಿ ಸಾವನ್ನಪ್ಪಿದ ಘಟನೆ ರಾಜಸ್ಥಾನದ ಜೋದ್ ಪುರ ಜಿಲ್ಲೆಯ ಲೊಡ್ತಾ ಗ್ರಾಮದಲ್ಲಿ ರವಿವಾರ ಬೆಳಗ್ಗೆ ಬೆಳಕಿಗೆ ಬಂದಿದೆ.
ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಬರ್ಹತ್ ಭೇಟಿ ನೀಡಿದ್ದಾರೆ, ಈ ಕುರಿತು ಮಾಹಿತಿ ನೀಡಿದ ಅವರು ಘಟನೆ ಶನಿವಾರ ರಾತ್ರಿ ನಡೆದಿರಬಹುದು, ಘಟನಾ ಸ್ಥಳದಲ್ಲಿ ಮೃತ ಪಟ್ಟ ಕುಟುಂಬದ ಓರ್ವ ಸದಸ್ಯ ಮಾತ್ರ ಬದುಕುಳಿದಿದ್ದು ಈತ ತನಗೆ ಈ ಘಟನೆ ಕುರಿತು ಏನು ತಿಳಿದಿಲ್ಲಾ ಎಂದಿದ್ದಾನೆ ಎಂದು ಹೇಳಿದ್ದಾರೆ.
ಕುಟುಂಬವು ಪಾಕಿಸ್ತಾನದ ಭಿಲ್ ಸಮುದಾಯಕ್ಕೆ ಸೇರಿದ್ದ ಕುಟುಂಬವಾಗಿದ್ದು ಅವರು ರಾಜಸ್ಥಾನದ ಲೊಡ್ತಾ ಗ್ರಾಮದ ಜಮೀನಿನಲ್ಲಿ ಕೃಷಿ ಕಾರ್ಯಗಳನ್ನು ಮಾಡಿಕೊಂಡಿದ್ದು ಅಲ್ಲಿಯೇ ಗುಡಿಸಲಿನಲ್ಲಿ ವಾಸವಾಗಿದ್ದಾರೆ, ಆದರೆ ಇಂದು ಬೆಳಗ್ಗೆ ಹನ್ನೊಂದು ಮಂದಿಯ ಮೃತ ದೇಹಗಳು ಪಕ್ಕದ ಜಮೀನಿನಲ್ಲಿ ಪತ್ತೆಯಾಗಿವೆ ಎನ್ನಲಾಗಿದೆ.
ಪೊಲೀಸ್ ಅಧಿಕಾರಿಗಳ ಹೇಳಿಕೆಯಂತೆ ಘಟನಾ ಸ್ಥಳದಲ್ಲಿ ರಾಸಾಯನಿಕ ವಸ್ತುವಿನ ವಾಸನೆ ಬಂದಿದ್ದು ಕುಟುಂಬದ ಸದಸ್ಯರು ರಾಸಾಯನಿಕ ಸೇವಿಸಿ ಸಾವನ್ನಪ್ಪಿರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದಾರೆ, ಶವಗಳನ್ನು ಮರಣೋತ್ತರ ಪರೀಕ್ಷೆಯಾಗಿ ಆಸ್ಪತ್ರೆಗೆ ಸಾಗಿಸಲಾಗಿದ್ದು ತನಿಖೆ ನಡೆಸಲಾಗುವುದು ಎಂದಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.