Bypoll: ಏಳು ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ, ನೀರಸ ಮತದಾನ
Team Udayavani, Jul 10, 2024, 12:36 PM IST
ನವದೆಹಲಿ: ಬಿಹಾರ, ಪಶ್ಚಿಮಬಂಗಾಳ, ತಮಿಳುನಾಡು, ಮಧ್ಯಪ್ರದೇಶ, ಉತ್ತರಾಖಂಡ್, ಪಂಜಾಬ್, ಹಿಮಾಚಲ್ ಪ್ರದೇಶ ಸೇರಿದಂತೆ ಏಳು ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತದಾನ ಬುಧವಾರ (ಜುಲೈ 10) ಬೆಳಗ್ಗೆ ಆರಂಭಗೊಂಡಿದ್ದು, ನಿಧಾನಗತಿಯಲ್ಲಿ ಮತದಾನ ನಡೆಯುತ್ತಿದೆ.
ಇದನ್ನೂ ಓದಿ:Davanagere: ಅಡುಗೆ ಅನಿಲ ಸಿಲಿಂಡರ್ ಸ್ಫೋಟ ಪ್ರಕರಣ; ದಂಪತಿ ಸಾವು
ದೇಶದಲ್ಲಿ ಲೋಕಸಭೆ ಚುನಾವಣೆ ನಡೆದ ನಂತರ ನಡೆಯುತ್ತಿರುವ ವಿಧಾನಸಭೆಯ ಮೊದಲ ಉಪಚುನಾವಣೆ ಇದಾಗಿದೆ. ಪಶ್ಚಿಮಬಂಗಾಳದ ರಾಜ್ ಗಂಜ್, ರಾಣಾಘಾಟ್ ದಕ್ಷಿಣ್, ಬಾಗ್ಡಾ ಮತ್ತು ಮಾಣಿಕ್ ತಾಲಾ, ಹಿಮಾಚಲ್ ಪ್ರದೇಶದ ಡೆಹ್ರಾ, ಹಮೀರ್ ಪುರ್ ಮತ್ತು ನಾಲಾಗಢ್, ಉತ್ತರಾಖಂಡ್ ನ ಬದರಿನಾಥ್, ಮಂಗ್ಲೌರ್, ಪಂಜಾಬ್ ನ ಜಲಂಧರ್, ಬಿಹಾರದ ರೂಪಾಲಿ, ತಮಿಳುನಾಡಿನ ವಿಕ್ರವಂಡಿ, ಮಧ್ಯಪ್ರದೇಶದ ಅಮರಾವರಾದಲ್ಲಿ ಉಪ ಚುನಾವಣೆ ನಡೆಯುತ್ತಿದೆ.
ಏಳು ರಾಜ್ಯಗಳಲ್ಲಿ ನಾಲ್ಕರಲ್ಲಿ ಇಂಡಿಯಾ ಮೈತ್ರಿಕೂಟ ಆಡಳಿತ ನಡೆಸುತ್ತಿದ್ದು, ಇನ್ನುಳಿದ ರಾಜ್ಯಗಳಲ್ಲಿ ಎನ್ ಡಿಎ (ಬಿಜೆಪಿ) ಅಧಿಕಾರದಲ್ಲಿದೆ. ಹಿಮಾಚಲ್ ಪ್ರದೇಶದ ಮುಖ್ಯಮಂತ್ರಿ ಸುಖ್ ವಿಂದರ್ ಸಿಂಗ್ ಸುಖು ಪತ್ನಿ ಕಮಲೇಶ್ ಠಾಕೂರ್ ಸೇರಿದಂತೆ ಹಲವು ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ.
ಹಿಮಾಚಲ್ ಪ್ರದೇಶದಲ್ಲಿ ರಾಜ್ಯಸಭೆ ಚುನಾವಣೆ ಸಂದರ್ಭದಲ್ಲಿ ಆರು ಕಾಂಗ್ರೆಸ್ ಶಾಸಕರು ಹಾಗೂ ಮೂವರು ಪಕ್ಷೇತರರು ಬಿಜೆಪಿ ಬೆಂಬಲಿತ ಅಭ್ಯರ್ಥಿಗೆ ಅಡ್ಡಮತದಾನ ಮೂಲಕ ಮತ ಚಲಾಯಿಸಿದ್ದರು.
ಕಾಂಗ್ರೆಸ್ ಹೈಕಮಾಂಡ್ ಆರು ಮಂದಿ ಕಾಂಗ್ರೆಸ್ ಶಾಸಕರನ್ನು ಅನರ್ಹಗೊಳಿಸಿದ್ದು, ಈ ಕ್ಷೇತ್ರಗಳಲ್ಲಿ ಈಗಾಗಲೇ ಉಪ ಚುನಾವಣೆ ನಡೆದಿತ್ತು. ಮೂವರು ಪಕ್ಷೇತರರು ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದು, ಅವರಿಂದ ತೆರವಾದ ಮೂರು ಕ್ಷೇತ್ರಗಳಿಗೆ ಇಂದು ಉಪ ಚುನಾವಣೆ ನಡೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Recommendation: ನ್ಯಾ. ಸಂಜೀವ್ ಖನ್ನಾ ಸುಪ್ರೀಂಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿ
MUST WATCH
ಹೊಸ ಸೇರ್ಪಡೆ
Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ
Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.