ಮಂಗಳೂರು-ಕಾರ್ಕಳ ಹೆದ್ದಾರಿ: 1,800 ಮರಗಳಿಗೆ ಕೊಡಲಿ

ರಾಷ್ಟ್ರೀಯ ಹೆದ್ದಾರಿ 169ರ ಚತುಷ್ಪಥ ಕಾಮಗಾರಿ

Team Udayavani, Feb 21, 2023, 11:10 AM IST

tree

ಮಂಗಳೂರು: ಮಂಗಳೂರಿನ ಬಿಕರ್ನ ಕಟ್ಟೆ-ಕಾರ್ಕಳದ ಸಾಣೂರು ನಡುವಿನ ಬಹುನಿರೀಕ್ಷಿತ ರಾಷ್ಟ್ರೀಯ ಹೆದ್ದಾರಿ 169ರ ಚತುಷ್ಪಥ ಕಾಮಗಾರಿಗೆ ಸಂಬಂಧಿಸಿದಂತೆ ರಸ್ತೆ ಬದಿಯ ಮರ ತೆರವುಗೊಳಿಸಲು ಅರಣ್ಯ ಇಲಾಖೆ ಹಂತ ಹಂತವಾಗಿ ಅನುಮತಿ ನೀಡುತ್ತಿದ್ದು, ಮೊದಲ ಹಂತದಲ್ಲಿ 1800 ಮರಗಳು ತೆರವುಗೊಳ್ಳಲಿದೆ. ಕುಡುಪು ಗ್ರಾಮದಲ್ಲಿ 4 ಕಿ.ಮೀ ವ್ಯಾಪ್ತಿಯಲ್ಲಿ 583 ಮರಗಳು ಮತ್ತು ಗುರುಪುರದಿಂದ ಬಡಗ ಎಡಪದವು (ಮಿಜಾರು) ವರೆಗೆ 9.5ಕಿ.ಮೀ ವ್ಯಾಪ್ತಿಯಲ್ಲಿ 1,223 ಮರಗಳು ಸೇರಿ ಒಟ್ಟು 13.5 ಕಿ.ಮೀ. ನಲ್ಲಿ 1806 ಮರಗಳು ತೆರವುಗೊಳಿಸಲು ಹೆದ್ದಾರಿ ಪ್ರಾಧಿಕಾರಕ್ಕೆ ಅರಣ್ಯ ಇಲಾಖೆ ಅನುಮತಿ ಈಗಾಗಲೇ ನೀಡಿದೆ. ಈ ಪೈಕಿ ಕುಡುಪು ಗ್ರಾಮದಲ್ಲಿ 316 ಮರ ಮತ್ತು ಎಡಪದವು ವ್ಯಾಪ್ತಿಯಲ್ಲಿ 448 ಮರಗಳನ್ನು ಅರಣ್ಯ ಇಲಾಖೆ ಸೂಚನೆಯಂತೆ ಹೆದ್ದಾರಿ ಇಲಾಖೆ ಕಡಿದು ವಿಲೇವಾರಿ ಮಾಡಿದೆ.

ಖಾಸಗಿ ಜಾಗದಲ್ಲಿರುವ ಮರಗಳನ್ನು ಜಾಗದ ಮಾಲಕರು ಜಮೀನು ಬಿಟ್ಟುಕೊಡು ವಾಗಲೇ ಹೆದ್ದಾರಿ ಅಲ್ಲಿರುವ ಇಲಾಖೆ ಮರಗಳ ಮೌಲ್ಯವನ್ನೂ ಅಂದಾಜು ಮಾಡಿ ಪರಿಹಾರ ಮೊತ್ತ ಪಾವತಿಸುತ್ತದೆ. ಹಾಗಾಗಿ ಮರ ತೆರವಿಗೆ ಸಮಸ್ಯೆಯಾಗುವುದಿಲ್ಲ. ಅದರೆ ಸರಕಾರಿ ಜಾಗದಲ್ಲಿರುವ ಮರ ಕಡಿಯಬೇಕಾದರೆ ವಿರೋಧ ವ್ಯಕ್ತವಾಗುತ್ತದೆ.

ಮಂಗಳೂರು ನಗರ ವ್ಯಾಪ್ತಿಯ ಕುಲಶೇಖರ ಭಾಗದಲ್ಲಿ ಮರ ತೆರವು ಸಂಬಂಧಿಸಿದಂತೆ ಅಹವಾಲು ಸ್ವೀಕಾರ ಸಭೆಯಲ್ಲಿ ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಇಲ್ಲಿ ಮರಗಳನ್ನು ತೆರವುಗೊಳಿಸಲು ಅರಣ್ಯ ಇಲಾಖೆ ಇನ್ನಷ್ಟೇ ಅನುಮತಿ ನೀಡಬೇಕಾಗಿದೆ. ಮಾತ್ರವಲ್ಲದೆ ಈ ಭಾಗದಲ್ಲಿ ಭೂಸ್ವಾಧೀನಕ್ಕೆ ಸಂಬಂಧಿಸಿ ಪ್ರಕೃಯೆಯೂ ಇನ್ನಷ್ಟೇ ಆಗಬೇಕಿದೆ. ಪರಿಸರ ಇಲಾಖೆಯ ನಿಯಮಾವಳಿ ಪ್ರಕಾರ ಒಂದು ಪ್ರದೇಶದಲ್ಲಿ 50 ಮರಕ್ಕಿಂತ ಹೆಚ್ಚು ಮರಗಳಿದ್ದಲ್ಲಿ ಅದನ್ನು ತೆರವುಗೊಳಿಸಲು ಸಾರ್ವಜನಿಕ ಅಹವಾಲು ಸ್ವೀಕರಿಸುವುದು ಕಡ್ಡಾಯ.

ಆದರೂ ಅಭಿವೃದ್ಧಿ ಕಾಮಗಾರಿಗೆ ಮರ ತೆರವುಗೊಳಿಸುವುದು ಅನಿವಾರ್ಯ. ಅರಣ್ಯ ಇಲಾಖೆ 25 ಸೆಂ.ಮೀ.ಗಿಂತ ಹೆಚ್ಚು ವಿಸ್ತೀರ್ಣ ಹೊಂದಿರುವ ಸಣ್ಣ ಗಿಡವನ್ನೂ ಮರ ಎಂದು ಪರಿಗಣಿಸುತ್ತದೆ. ಸೂಕ್ತ ಸ್ಥಳ ಮತ್ತು ನಿರ್ವಹಣೆಗೆ ಅವಕಾಶವಿದ್ದಲ್ಲಿ ಸ್ಥಳಾಂತರಿಸಲುಸಾಧ್ಯವಿರುವ ಮರಗಳನ್ನು ಬೇರೆ ಕಡೆಯಲ್ಲಿ ನೆಡುವುದು ಕೂಡಾ ಇದೇ ವೇಳೆ ನಡೆಯುತ್ತದೆ ಎನ್ನುತ್ತಾರೆ ಅರಣ್ಯ ಇಲಾಖೆ ಅಧಿಕಾರಿಗಳು.

ರಾಷ್ಟ್ರೀಯ ಹೆದ್ದಾರಿ 169ರ ಚತುಷ್ಪಥ ಕಾಮಗಾರಿಗೆ ಸಂಬಂಧಿಸಿದಂತೆ 1,800ರಷ್ಟು ಮರಗಳನ್ನು ತೆರವುಗೊಳಿಸಲು ಅರಣ್ಯ ಇಲಾಖೆಯಿಂದ ಅನುಮತಿ ನೀಡಲಾಗಿದೆ. ಮರ ತೆರವುಗೊಳಿಲು ಅರಣ್ಯ ಇಲಾಖೆಗೆ ನಿಗದಿತ ಮೊತ್ತವನ್ನು ರಾಷ್ಟ್ರೀಯ ಹೆದ್ದಾರಿ ಇಲಾಖೆಯವರು ಪಾವತಿಸಿದ್ದು, ಪರ್ಯಾಯವಾಗಿ ಗಿಡಗಳನ್ನು ನೆಡುವ ಕುರಿತಂತೆಯೂ ಸೂಚನೆ ನೀಡಲಾಗಿದೆ.
-ಡಾ| ದಿನೇಶ್‌ ಕುಮಾರ್‌ ವೈ.ಕೆ, ಉಪ ಅರಣ್ಯ ಸಂರಕ್ಷಣಾಧಿಕಾರಿ ಮಂಗಳೂರು

ಕೈಕಂಬ, ಗಂಜಿಮಠದಲ್ಲಿ ಕಾಮಗಾರಿ ಚುರುಕು

ರಾ.ಹೆದ್ದಾರಿ ಪ್ರಾಧಿಕಾರ ಭೂ ಸ್ವಾಧೀನ ಪಡಿಸಿಕೊಂಡ ಭಾಗದಲ್ಲಿ ಕಾಮಗಾರಿ ಚುರುಕುಗೊಂಡಿದ್ದು, ಮರಗಳನ್ನು ತೆರವು ಗೊಳಿಸಿ ನೆಲ ಸಮತಟ್ಟುಗೊಳಿಸಿ ಒಂದು ಹಂತದ ಡಾಮರೀಕರಣ ನಡೆಸಲಾಗಿದೆ. ಸುಮಾರು 2-3 ಕಿ.ಮೀ. ನಷ್ಟು ಡಾಮರು ಕಾಮಗಾರಿ ಈ ಭಾಗದಲ್ಲಿ ನಡೆದಿದೆ. ಕೆಲಸ ನಡೆಯುತ್ತಿರುವ ಹಿನ್ನೆಲೆ ಯಲ್ಲಿ ಸ್ಥಳದಲ್ಲಿ ವಿಪರೀತ ಧೂಳಿನಿಂದ ಅಂಗಡಿ- ಮನೆಯವರು ಸಂಕಷ್ಟ ಅನುಭವಿಸುವಂತಾಗಿದೆ.

‌~ಭರತ್‌ ಶೆಟ್ಟಿಗಾರ್

ಟಾಪ್ ನ್ಯೂಸ್

R. Ashok: “ಮುಸ್ಲಿಂ ಭಯೋತ್ಪಾದಕರಿಗೆ ಸರಕಾರದಿಂದಲೇ ಕುಮ್ಮಕ್ಕು’

R. Ashok: “ಮುಸ್ಲಿಂ ಭಯೋತ್ಪಾದಕರಿಗೆ ಸರಕಾರದಿಂದಲೇ ಕುಮ್ಮಕ್ಕು’

1-pale

Chikkodi; ಈದ್ ಮಿಲಾದ್ ಮೆರವಣಿಗೆಯಲ್ಲಿ ಹಾರಾಡಿದ ಪ್ಯಾಲೇಸ್ತೀನ್ ಧ್ವಜ

BSF (2)

Budgam; ಬಸ್ ಪ್ರಪಾತಕ್ಕೆ ಬಿದ್ದು 3 ಯೋಧರು ಮೃ*ತ್ಯು, 9 ಮಂದಿಗೆ ಗಂಭೀರ ಗಾಯ

1-asaaasa

Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Vinay Kulakarni

BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ‌: ಶಾಸಕ ವಿನಯ ಕುಲಕರ್ಣಿ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaccc

Mangaluru; ಕುಂಟಿಕಾನದಲ್ಲಿ ಅಪಘಾತ: ಕಾಲೇಜು ವಿದ್ಯಾರ್ಥಿ ಸಾ*ವು

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

1-gttt

Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್‌ ಗಾಂಧಿ

Hampankatta: ಪಾರ್ಕಿಂಗ್‌ ಸಮಸ್ಯೆಗೆ ‘ಮಲ್ಟಿ ಲೆವೆಲ್‌’ ಉತ್ತರ!

Hampankatta: ಪಾರ್ಕಿಂಗ್‌ ಸಮಸ್ಯೆಗೆ ‘ಮಲ್ಟಿ ಲೆವೆಲ್‌’ ಉತ್ತರ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

R. Ashok: “ಮುಸ್ಲಿಂ ಭಯೋತ್ಪಾದಕರಿಗೆ ಸರಕಾರದಿಂದಲೇ ಕುಮ್ಮಕ್ಕು’

R. Ashok: “ಮುಸ್ಲಿಂ ಭಯೋತ್ಪಾದಕರಿಗೆ ಸರಕಾರದಿಂದಲೇ ಕುಮ್ಮಕ್ಕು’

1-pale

Chikkodi; ಈದ್ ಮಿಲಾದ್ ಮೆರವಣಿಗೆಯಲ್ಲಿ ಹಾರಾಡಿದ ಪ್ಯಾಲೇಸ್ತೀನ್ ಧ್ವಜ

Untitled-1

Kasaragod ಅಪರಾಧ ಸುದ್ದಿಗಳು

BSF (2)

Budgam; ಬಸ್ ಪ್ರಪಾತಕ್ಕೆ ಬಿದ್ದು 3 ಯೋಧರು ಮೃ*ತ್ಯು, 9 ಮಂದಿಗೆ ಗಂಭೀರ ಗಾಯ

Suspend

MLA ಇ. ಚಂದ್ರಶೇಖರನ್‌ ವಿರುದ್ಧ ಫೇಸ್‌ಬುಕ್‌ ಪೋಸ್ಟ್‌; ಡೆಪ್ಯೂಟಿ ತಹಶೀಲ್ದಾರ್‌ ಅಮಾನತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.