Kolhapur: ಜೈಲಿನೊಳಗೆ ಮುಂಬೈ ಸರಣಿ ಬಾಂಬ್ ಸ್ಫೋಟದ ಆರೋಪಿ ಖಾನ್ ಹತ್ಯೆ
ಮುಂಬೈನಲ್ಲಿ ನಡೆದ ಸರಣಿ ಬಾಂಬ್ ಸ್ಫೋಟದಲ್ಲಿ 257 ಮಂದಿ ಸಾವನ್ನಪ್ಪಿದ್ದರು.
Team Udayavani, Jun 3, 2024, 12:14 PM IST
ಮುಂಬೈ: 1993ರ ಮುಂಬೈ ಸರಣಿ ಬಾಂಬ್ ಸ್ಫೋಟದ ಅಪರಾಧಿ ಮುನ್ನಾ ಅಲಿಯಾಸ್ ಮೊಹಮ್ಮದ್ ಅಲಿ ಖಾನ್ (59ವರ್ಷ) ಎಂಬಾತನನ್ನು ಜೈಲಿನಲ್ಲೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕೊಲ್ಲಾಪುರದ ಕಲಂಬಾ ಸೆಂಟ್ರಲ್ ಜೈಲ್ ನಲ್ಲಿ ನಡೆದಿದೆ.
ಇದನ್ನೂ ಓದಿ:T20 World Cup 2024: ವಿಶ್ವಕಪ್ ನ ಪಂದ್ಯಗಳನ್ನು ನಾನು ನೋಡುವುದಿಲ್ಲ..: ರಿಯಾನ್ ಪರಾಗ್
ಪೊಲೀಸರ ಮಾಹಿತಿ ಪ್ರಕಾರ, ಬಾತ್ ರೂಂನಲ್ಲಿ ಸ್ನಾನ ಮಾಡುವ ವಿಚಾರಕ್ಕೆ ವಾಗ್ವಾದ ನಡೆದಿದ್ದು, ಈ ಸಂದರ್ಭದಲ್ಲಿ ಇತರ ಕೈದಿಗಳು ಮೊಹಮ್ಮದ್ ಅಲಿಯಾಸ್ ಮನೋಜ್ ಕುಮಾರ್ ಭವಾರ್ ಲಾಲ್ ಗುಪ್ತಾನನ್ನು ಕೊಂದಿರುವುದಾಗಿ ತಿಳಿಸಿದ್ದಾರೆ.
ಸರಣಿ ಬಾಂಬ್ ಸ್ಫೋಟದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಖಾನ್ ನನ್ನು ಕೆಲವು ವಿಚಾರಣಾಧೀನ ಕೈದಿಗಳು ಡ್ರೈನೇಜ್ ನ ಕಬ್ಬಿಣದ ಪೈಪ್ ಗೆ ತಲೆಯನ್ನು ಹೊಡೆದಿದ್ದು, ಆತ ಸ್ಥಳದಲ್ಲೇ ಕುಸಿದು ಬಿದ್ದಿದ್ದ. ಕೂಡಲೇ ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ ಆತನನ್ನು ಆಸ್ಪತ್ರೆಗೆ ಕರೆತರುವ ಮುನ್ನವೇ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿರುವುದಾಗಿ ವರದಿ ವಿವರಿಸಿದೆ.
ಸಹ ಕೈದಿಗಳಾದ ಪ್ರತೀಕ್ ಅಲಿಯಾಸ್ ಪಿಲ್ಯಾ ಸುರೇಶ್ ಪಾಟೀಲ್, ದೀಪಕ್ ನೇತಾಜಿ ಖೋಟ್, ಸಂದೀಪ್ ಶಂಕರ್ ಚವಾಣ್, ರಿತುರಾಜ್ ವಿನಾಯಕ್ ಇನಾಂದಾರ್ ಮತ್ತು ಸೌರಭ್ ವಿಕಾಸ್ ಖಾನ್ ಮೇಲೆ ದಾಳಿ ನಡೆಸಿ ಹತ್ಯೆಗೈದಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಐದು ಜನರ ಮೇಲೂ ಕೊಲೆ ಪ್ರಕರಣ ದಾಖಲಿಸಿದ್ದು, ತನಿಖೆ ನಡೆಸುತ್ತಿರುವುದಾಗಿ ಕೊಲ್ಹಾಪುರ ಪೊಲೀಸರು ತಿಳಿಸಿದ್ದಾರೆ. 1993ರ ಮಾರ್ಚ್ 12ರಂದು ಮುಂಬೈನಲ್ಲಿ ನಡೆದ ಸರಣಿ ಬಾಂಬ್ ಸ್ಫೋಟದಲ್ಲಿ 257 ಮಂದಿ ಸಾವನ್ನಪ್ಪಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ
Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ
Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ
Bengaluru; ಚುನಾವಣಾ ಬಾಂಡ್ ಸೋಗಿನಲ್ಲಿ ಸುಲಿಗೆ; ನಿರ್ಮಲಾ ಸೀತಾರಾಮನ್ ವಿರುದ್ದ ಎಫ್ಐಆರ್
Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್ ಕೊಟ್ಟ ಸ್ನೇಹಮಯಿ ಕೃಷ್ಣ!
Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ
Food street ನಲ್ಲಿ ಅರೆಬಟ್ಟೆಯಲ್ಲಿ ಸುತ್ತಾಡಿದ ಯುವತಿ ವಿರುದ್ಧ ಪ್ರಕರಣ ದಾಖಲು!
BBK11: ಬಿಗ್ ಬಾಸ್ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು
Sullia: ಅಂಗಡಿ, ಹೊಟೇಲ್ನಿಂದ ನಗದು ಕಳವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.