Bangladesh: ಭಾರತದಲ್ಲಿರುವ ಬಾಂಗ್ಲಾದೇಶದ ಇಬ್ಬರು ರಾಜತಾಂತ್ರಿಕರು ಕರ್ತವ್ಯದಿಂದ ವಜಾ
Team Udayavani, Aug 26, 2024, 1:15 PM IST
ಢಾಕಾ/ನವದೆಹಲಿ: ಭಾರತದಲ್ಲಿ ಕರ್ತವ್ಯ ನಿರತರಾಗಿದ್ದ ಬಾಂಗ್ಲಾದೇಶದ ಇಬ್ಬರು ರಾಜತಾಂತ್ರಿಕರನ್ನು ಕರ್ತವ್ಯದಿಂದ ವಜಾಗೊಳಿಸಿ ಬಾಂಗ್ಲಾದೇಶದ ಮಧ್ಯಾಂತರ ಸರ್ಕಾರ ಆದೇಶ ಹೊರಡಿಸಿರುವುದಾಗಿ ವರದಿ ತಿಳಿಸಿದೆ.
ನವದೆಹಲಿಯಲ್ಲಿರುವ ಬಾಂಗ್ಲಾದೇಶ ಹೈ ಕಮಿಷನ್ ನಲ್ಲಿ ಮಾಧ್ಯಮ (Press) ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಷಾಬಾನ್ ಮಹ್ಮುದ್ ಹಾಗೂ ಕೋಲ್ಕತಾದಲ್ಲಿರುವ ಬಾಂಗ್ಲಾದೇಶ ಕಾನ್ಸುಲೇಟ್ ನಲ್ಲಿ ಮಾಧ್ಯಮ ಕಾರ್ಯದರ್ಶಿಯಾಗಿದ್ದ ರಂಜನ್ ಸೇನ್ ಅವರನ್ನು ಕರ್ತವ್ಯದಿಂದ ವಜಾಗೊಳಿಸಿರುವುದಾಗಿ ಬಾಂಗ್ಲಾದೇಶ ಮಧ್ಯಾಂತರ ಸರ್ಕಾರ ಆದೇಶ ಹೊರಡಿಸಿದೆ.
ದೇಶದಲ್ಲಿ ನಡೆದ ಭಾರೀ ಪ್ರತಿಭಟನೆ ನಂತರ ಪ್ರಧಾನಮಂತ್ರಿ ಶೇಕ್ ಹಸೀನಾ ಪದಚ್ಯುತಗೊಂಡ ಬಳಿಕ ಹಿಂಸಾಚಾರ ನಡೆದಿತ್ತು. ರಾಜಕೀಯದ ಬೆಳವಣಿಗೆಯಲ್ಲಿ ನೋಬೆಲ್ ಪ್ರಶಸ್ತಿ ಪುರಸ್ಕೃತ ಮುಹಮ್ಮದ್ ಯೂನೂಸ್ ನೇತೃತ್ವದಲ್ಲಿ ಮಧ್ಯಾಂತರ ಸರ್ಕಾರ ರಚನೆಯಾಗಿತ್ತು.
ಷಾಬಾನ್ ಮಹ್ಮುದ್
ರಾಜಧಾನಿ ಢಾಕಾದಲ್ಲಿ ಲಕ್ಷಾಂತರ ಜನರು ಬೀದಿಗಿಳಿದು ಹಿಂಸಾಚಾರದಲ್ಲಿ ತೊಡಗಿದ ಪರಿಣಾಮ ಆಗಸ್ಟ್ 5ರಂದು ಶೇಖ್ ಹಸೀನಾ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ, ಹೆಲಿಕಾಪ್ಟರ್ ಮೂಲಕ ಭಾರತಕ್ಕೆ ಪರಾರಿಯಾಗಿದ್ದರು. ಮಾನವ ಹಕ್ಕು ಉಲ್ಲಂಘನೆಯ ಆರೋಪ ಎದುರಿಸುತ್ತಿರುವ ಶೇಖ್ ಹಸೀನಾ ಅವರ 15 ವರ್ಷದ ಆಡಳಿತ ಕೊನೆಗೊಂಡಂತಾಗಿದೆ.
ರಂಜನ್ ಸೇನ್
ಬಾಂಗ್ಲಾದೇಶದಲ್ಲಿ ನಡೆದ ಹಿಂಸಾಚಾರದಲ್ಲಿ 450ಕ್ಕೂ ಅಧಿಕ ಮಂದಿ ಸಾವಿಗೀಡಾಗಿದ್ದು, ಸಾವಿರಾರು ಜನರು ಗಾಯಗೊಂಡಿದ್ದರು. ನಾವು ಎಲ್ಲಾ ನೆರೆಯ ದೇಶಗಳೊಂದಿಗೆ ಸೌಹಾರ್ದ ಸಂಬಂಧ ಮುಂದುವರಿಸುವುದಾಗಿ ಯೂನುಸ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu and Kashmir:ಕಲಂ 370 ಪುನರ್ ಜಾರಿ-ಕಾಂಗ್ರೆಸ್, ಎನ್ ಸಿ ನಿಲುವಿಗೆ ಪಾಕ್ ಬೆಂಬಲ!
Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್!
Explode in Lebanon: ಪೇಜರ್ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು
Israel: ಹೆಜ್ಬುಲ್ಲಾ ಬಳಸಿದ್ದ ಪೇಜರ್ಸ್ ಒಳಗೆ ಸ್ಫೋಟಕ ಅಳವಡಿಸಿದ್ದ ಇಸ್ರೇಲ್ ನ ಮೊಸ್ಸಾದ್!
Diddy ;ಸೆ*ಕ್ಸ್ ದಂಧೆ ಆರೋಪ: ಅಮೆರಿಕದ ಖ್ಯಾತ ಹಿಪ್-ಹಾಪ್ ಸ್ಟಾರ್ ಬಂಧನ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Kannada Cinema: ರವಿ ಶ್ರೀವತ್ಸ ಅವರ ಗ್ಯಾಂಗ್ಸ್ ಆಫ್ ಯುಕೆ
Udupi: ಯುಜಿಡಿ ಚೇಂಬರ್ ಅವ್ಯವಸ್ಥೆಗಿಲ್ಲ ಪರಿಹಾರ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
Channapatnam by-election: ಡಿಕೆಸು ಕೈ ಅಭ್ಯರ್ಥಿ ಮಾಡಲು ಕಾರ್ಯಕರ್ತರ ಒತ್ತಡ
Thekkatte: ಶಾಲಾ ವಾಹನ ಹೈಮಾಸ್ಟ್ ಕಂಬಕ್ಕೆ ಢಿಕ್ಕಿ; ಚಾಲಕನಿಗೆ ಗಂಭೀರ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.