Bangladesh: ನಿಲ್ಲದ ಪ್ರತಿಭಟನಾಕಾರರ ಅಟ್ಟಹಾಸ-ಹಸೀನಾ ಪಕ್ಷದ 29 ಮುಖಂಡರ ಶವ ಪತ್ತೆ!
ಅಂಗಡಿ, ಮುಂಗಟ್ಟುಗಳನ್ನು ಧ್ವಂಸಗೊಳಿಸಿ ಲೂಟಿ ಮಾಡಲಾಗಿದೆ
Team Udayavani, Aug 7, 2024, 11:55 AM IST
ಢಾಕಾ: ಸ್ವಾತಂತ್ರ್ಯ ಯೋಧರ ಕುಟುಂಬಸ್ಥರಿಗೆ ನೀಡಲಾಗಿರುವ ಶೇ.30ರ ಮೀಸಲಾತಿ ವಿವಾದದ ಕಿಚ್ಚಿನಿಂದಾಗಿ ಬಾಂಗ್ಲಾದೇಶ ಹೊತ್ತಿ ಉರಿದ ಕೆಲವು ವಾರಗಳ ನಂತರ ಪ್ರಧಾನಿ ಹುದ್ದೆಗೆ ಶೇಖ್ ಹಸೀನಾ ರಾಜೀನಾಮೆ ಕೊಟ್ಟು ಭಾರತಕ್ಕೆ ಪರಾರಿಯಾದ ಬೆನ್ನಲ್ಲೇ ಅವಾಮಿ ಲೀಗ್ ಪಕ್ಷದ ಸುಮಾರು 29 ಮುಖಂಡರ ಶವಗಳು ಪತ್ತೆಯಾಗಿರುವುದಾಗಿ ವರದಿ ತಿಳಿಸಿದೆ.
ಹಸೀನಾ ರಾಜೀನಾಮೆ ನಂತರವೂ ಮುಂದುವರಿದ ಹಿಂಸಾಚಾರದಲ್ಲಿ ಸತ್ ಖಿರಾದಲ್ಲಿ ಕನಿಷ್ಠ 10 ಮಂದಿಯನ್ನು ದಾರುಣವಾಗಿ ಹತ್ಯೆಗೈಯಲಾಗಿದೆ. ಅವಾಮಿ ಲೀಗ್ ಮುಖಂಡರ ಮನೆ, ಅಂಗಡಿ, ಮುಂಗಟ್ಟುಗಳನ್ನು ಧ್ವಂಸಗೊಳಿಸಿ ಲೂಟಿ ಮಾಡಲಾಗಿದೆ ಎಂದು ದ ಢಾಕಾ ಟ್ರಿಬ್ಯೂನ್ ವರದಿ ಮಾಡಿದೆ.
ಕ್ಯೂಮಿಲ್ಲಾ ಪ್ರದೇಶದಲ್ಲಿ ಪ್ರತಿಭಟನಾಕಾರರ ದಾಳಿಯಲ್ಲಿ 11 ಮಂದಿ ಸಾವನ್ನಪ್ಪಿದ್ದಾರೆ. ಅದೇ ರೀತಿ ಅವಾಮಿ ಲೀಗ್ ನ ಮಾಜಿ ಕೌನ್ಸಿಲರ್ ಮೊಹಮ್ಮದ್ ಶಾ ಅಲಾಂ ಅವರ ಮೂರು ಮಹಡಿ ಅಂತಸ್ತಿನ ಮನೆಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದು, ಈ ಘಟನೆಯಲ್ಲಿ ಆರು ಮಂದಿ ಸಾವನ್ನಪ್ಪಿರುವುದಾಗಿ ವರದಿ ವಿವರಿಸಿದೆ.
ಸೋಮವಾರ ರಾತ್ರಿ ಮತ್ತು ಮಂಗಳವಾರ ಬೆಳಗ್ಗೆ ಮನೆಯೊಂದರಲ್ಲಿ 5 ಮಕ್ಕಳು ಸೇರಿದಂತೆ 11 ಶವವನ್ನು ಪತ್ತೆ ಹಚ್ಚಲಾಗಿದೆ ಎಂದು ವರದಿ ತಿಳಿಸಿದೆ. ಸಂಸದ ಶಫಿಖುಲ್ ಇಸ್ಲಾಮ್ ಶಿಮುಲ್ ಮನೆಗೆ ನುಗ್ಗಿದ ಗುಂಪೊಂದು ಬೆಂಕಿ ಹಚ್ಚಿದ್ದು, ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu and Kashmir:ಕಲಂ 370 ಪುನರ್ ಜಾರಿ-ಕಾಂಗ್ರೆಸ್, ಎನ್ ಸಿ ನಿಲುವಿಗೆ ಪಾಕ್ ಬೆಂಬಲ!
Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್!
Explode in Lebanon: ಪೇಜರ್ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು
Israel: ಹೆಜ್ಬುಲ್ಲಾ ಬಳಸಿದ್ದ ಪೇಜರ್ಸ್ ಒಳಗೆ ಸ್ಫೋಟಕ ಅಳವಡಿಸಿದ್ದ ಇಸ್ರೇಲ್ ನ ಮೊಸ್ಸಾದ್!
Diddy ;ಸೆ*ಕ್ಸ್ ದಂಧೆ ಆರೋಪ: ಅಮೆರಿಕದ ಖ್ಯಾತ ಹಿಪ್-ಹಾಪ್ ಸ್ಟಾರ್ ಬಂಧನ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
INDvsBAN: ಕುಸಿದ ಭಾರತಕ್ಕೆ ಆಸರೆಯಾದ ಅಶ್ವಿನ್, ಜಡೇಜಾ; ಶತಕ ಬಾರಿಸಿದ ಲೋಕಲ್ ಬಾಯ್
Contractors Association ಅಧ್ಯಕ್ಷ ಕೆಂಪಣ್ಣ ವಿಧಿವಶ; ಗಣ್ಯರ ಸಂತಾಪ
Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Sep.20: ಮುನಿಯಾಲ್ ಇನ್ಸ್ಟಿಟ್ಯೂಟ್ ಆಫ್ ಆಯುರ್ವೇದ ಮೆಡಿಕಲ್ ಕಾಲೇಜು ಘಟಿಕೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.