Jhansi: ಕೋರ್ಟ್‌ ಗೆ ಕರೆದೊಯ್ಯುತ್ತಿರುವಾಗಲೇ 3 ಆರೋಪಿಗಳು ಪೊಲೀಸ್‌ ಕಸ್ಟಡಿಯಿಂದ ಪರಾರಿ!

ಮೂವರು ಆರೋಪಿಗಳ ವಿರುದ್ಧ ರೈಲ್ವೆ ನಿಲ್ದಾಣದಲ್ಲಿ ಮೊಬೈಲ್‌ ಕಳವುಗೈದ ಪ್ರಕರಣ ದಾಖಲಾಗಿತ್ತು

Team Udayavani, Sep 21, 2023, 3:13 PM IST

Jhansi: ಕೋರ್ಟ್‌ ಗೆ ಕರೆದೊಯ್ಯುತ್ತಿರುವಾಗಲೇ 3 ಆರೋಪಿಗಳು ಪೊಲೀಸ್‌ ಕಸ್ಟಡಿಯಿಂದ ಪರಾರಿ!

ಜಾನ್ಸಿ(ಉತ್ತರಪ್ರದೇಶ): ಉತ್ತರಪ್ರದೇಶದ ಜಾನ್ಸಿ ರೈಲ್ವೆ ಕೋರ್ಟ್‌ ಗೆ ಆರೋಪಿಗಳನ್ನು ಕರೆದೊಯ್ಯುತ್ತಿದ್ದ ಸಂದರ್ಭದಲ್ಲಿ ಮೂವರು ಪೊಲೀಸ್‌ ಕಸ್ಟಡಿಯಿಂದ ತಪ್ಪಿಸಿಕೊಂಡು ಪರಾರಿಯಾಗಿರುವ ಘಟನೆ ನಡೆದಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಇದನ್ನೂ ಓದಿ:Actress: 17ಕ್ಕೆ ಹೀರೋಯಿನ್‌,19ಕ್ಕೆ ಸೂಪರ್ ಸ್ಟಾರ್‌, 24ರ ವಯಸ್ಸಿಗೆ ನಟನೆ ತೊರೆದ ನಟಿ

ವಿಡಿಯೋದಲ್ಲೇನಿದೆ?

ಕೋರ್ಟ್‌ ಹೊರಭಾಗದಲ್ಲಿ ಪೊಲೀಸ್‌ ವ್ಯಾನ್‌ ನಿಲ್ಲಿಸಲಾಗಿತ್ತು. ಆದರೆ ಯಾವುದೇ ಭದ್ರತಾ ಸಿಬಂದಿ ಇಲ್ಲದಿರುವುದನ್ನು ಗಮನಿಸಿದ ಮೂವರು ಆರೋಪಿಗಳು ವ್ಯಾನ್‌ ನ ಬಾಗಿಲು ತೆರೆದು ಪರಾರಿಯಾದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಮೂವರು ಆರೋಪಿಗಳು ವ್ಯಾನ್‌ ನ ಬಾಗಿಲು ತೆರೆದು ರಸ್ತೆಯಲ್ಲಿ ಓಡುತ್ತಿರುವ ದೃಶ್ಯದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಘಟನೆ ನಡೆದ ಸಂದರ್ಭದಲ್ಲಿ ವ್ಯಾನ್‌ ನೊಳಗೆ ಒಟ್ಟು ಏಳು ಆರೋಪಿಗಳಿದ್ದರು. ಇದರಲ್ಲಿ ಮೂವರು ಆರೋಪಿಗಳು ಪರಾರಿಯಾಗಿರುವುದಾಗಿ ವರದಿ ತಿಳಿಸಿದೆ.

ಏಳು ಜನ ಆರೋಪಿಗಳು, 11 ಪೊಲೀಸ್‌ ಅಧಿಕಾರಿಗಳು:

ಈ ಘಟನೆ ಮಂಗಳವಾರ (ಸೆ.19) ಮಧ್ಯಾಹ್ನ ನಡೆದಿತ್ತು. 11 ಜನ ಪೊಲೀಸ್‌ ಅಧಿಕಾರಿಗಳು ಒಟ್ಟು ಏಳು ಆರೋಪಿಗಳನ್ನು ಜಾನ್ಸಿ ರೈಲ್ವೆ ಕೋರ್ಟ್‌ ಗೆ ಹಾಜರುಪಡಿಸಲು ಪೊಲೀಸ್‌ ವ್ಯಾನ್‌ ನಲ್ಲಿ ಕರೆದೊಯ್ಯುತ್ತಿದ್ದರು. ಪರಾರಿಯಾಗಿರುವ ಮೂವರು ಆರೋಪಿಗಳ ವಿರುದ್ಧ ರೈಲ್ವೆ ನಿಲ್ದಾಣದಲ್ಲಿ ಮೊಬೈಲ್‌ ಕಳವುಗೈದ ಪ್ರಕರಣ ದಾಖಲಾಗಿತ್ತು. ಆರೋಪಿಗಳನ್ನು ಬ್ರಿಜೇಂದ್ರ (27ವರ್ಷ), ಶೈಲೇಂದ್ರ (20ವರ್ಷ) ಹಾಗೂ ಜ್ಞಾನಪ್ರಸಾದ್‌ (23 ವರ್ಷ) ಎಂದು ಗುರುತಿಸಲಾಗಿದೆ.

ಪರಾರಿಯಾಗಿರುವ ಮೂವರು ಆರೋಪಿಗಳು ನಾಪತ್ತೆಯಾಗಿದ್ದು, ಶೀಘ್ರವೇ ಆರೋಪಿಗಳನ್ನು ಬಂಧಿಸುವುದಾಗಿ ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದ್ದು, ಮೂವರು ಸಬ್‌ ಇನ್ಸ್‌ ಪೆಕ್ಟರ್‌ ಸೇರಿದಂತೆ 11 ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ ಎಂದು ವರದಿ ತಿಳಿಸಿದೆ.

ಪ್ರಕರಣದ ಬಗ್ಗೆ ತನಿಖೆ ನಡೆಸಲು ಸಮಿತಿಯನ್ನು ರಚಿಸಲಾಗಿದೆ. ಪರಾರಿಯಾಗಿರುವ ಆರೋಪಿಗಳ ಪತ್ತೆಗೆ ಎರಡು ಪೊಲೀಸ್‌ ತಂಡವನ್ನು ರಚಿಸಲಾಗಿದೆ. ರೈಲ್ವೆ ಕೋರ್ಟ್‌ ಸುತ್ತಮುತ್ತಲಿನ ಸಿಸಿಟಿವಿ ಫೂಟೇಜ್‌ ಪರಿಶೀಲಿಸಲಾಗುತ್ತಿದೆ. ಆರೋಪಿಗಳನ್ನು ಕೂಡಲೇ ಪತ್ತೆ ಹಚ್ಚಲಾಗುವುದು ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-aaee

Baba Siddiqui ಪ್ರಕರಣ: ಮತ್ತೆ 5 ಆರೋಪಿಗಳನ್ನು ಬಂಧಿಸಿದ ಮುಂಬಯಿ ಪೊಲೀಸರು

1-JMM

Jharkhand; ಸೀಟು ಹಂಚಿಕೆ ಪ್ರಕಟಿಸಿದ ಎನ್ ಡಿಎ: ಬಿಜೆಪಿಗೆ 68 ಸ್ಥಾನ

CM-Panchamsali

Reservation: ಪಂಚಮಸಾಲಿ ಮೀಸಲು ವಿಚಾರ ತಜ್ಞರು, ಸಂಪುಟದಲ್ಲಿ ಚರ್ಚಿಸಿ ಕ್ರಮ: ಸಿಎಂ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

ISREL-3

Israel ಗಾಜಾದಲ್ಲಿ ಕಾರ್ಯಾಚರಣೆ ನಿಲ್ಲಿಸದೆ ಒತ್ತೆಯಾಳುಗಳ ಬಿಡುಗಡೆ ಇಲ್ಲ: ಹಮಾಸ್!

1-a-cm-bai

ED ತನಿಖೆಗೆ ಮುಡಾ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ ಹೇಳಿಕೆ

3

La Tomatina: ಏನಿದು ಲಾ ಟೊಮಾಟಿನಾ ಹಬ್ಬ…ಈ ಹಬ್ಬದ ವಿಶೇಷತೆ ಏನು ಗೊತ್ತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

ಕಚ್ಚಿದ ಕನ್ನಡಿ ಹಾವನ್ನೇ ಕೈಯಲ್ಲಿ ಹಿಡಿದು ಆಸ್ಪತ್ರೆಗೆ ಬಂದ ವ್ಯಕ್ತಿ… ಕಂಗಾಲಾದ ವೈದ್ಯರು

ಕಚ್ಚಿದ ಕನ್ನಡಿ ಹಾವನ್ನೇ ಕೈಯಲ್ಲಿ ಹಿಡಿದು ಆಸ್ಪತ್ರೆಗೆ ಬಂದ ವ್ಯಕ್ತಿ… ಕಂಗಾಲಾದ ವೈದ್ಯರು

Miraculous Escape: ವಾಟರ್ ಟ್ಯಾಂಕ್ ಮೈಮೇಲೆ ಬಿದ್ದರೂ ಬಚಾವಾದ ಮಹಿಳೆ

Miraculous Escape: ಮೈಮೇಲೆ ವಾಟರ್ ಟ್ಯಾಂಕ್ ಬಿದ್ದರೂ ಮಹಿಳೆ ಪಾರಾಗಿದ್ದೇ ಪವಾಡ…

1-deee

Viral Video; ಬೆಂಕಿ ಹೊತ್ತಿಕೊಂಡ ಬಳಿಕ ಚಾಲಕನಿಲ್ಲದೆ ಚಲಿಸಿದ ಕಾರು!!

Ghaziabad: ಪೊದೆಯಲ್ಲಿ ಸಿಕ್ಕ ನವಜಾತ ಹೆಣ್ಣು ಶಿಶುವನ್ನು ದತ್ತು ಪಡೆದ ಇನ್ಸ್‌ಪೆಕ್ಟರ್‌!

Ghaziabad: ಪೊದೆಯಲ್ಲಿ ಸಿಕ್ಕ ನವಜಾತ ಹೆಣ್ಣು ಶಿಶುವನ್ನು ದತ್ತು ಪಡೆದ ಇನ್ಸ್‌ಪೆಕ್ಟರ್‌!

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

police

Bangla ಅಕ್ರಮ ವಲಸೆ : ಸಂತೆಕಟ್ಟೆಯಲ್ಲಿ ಮತ್ತೋರ್ವನ ಬಂಧನ

ACT

Kinnigoli: ವಿದ್ಯಾರ್ಥಿನಿಗೆ ಕಿರುಕುಳ; ಆರೋಪಿ ವಶಕ್ಕೆ

accident

Shirva: ಬೈಕ್‌ ಢಿಕ್ಕಿ; ಮಹಿಳೆಗೆ ಗಂಭೀರ ಗಾಯ

1-aaee

Baba Siddiqui ಪ್ರಕರಣ: ಮತ್ತೆ 5 ಆರೋಪಿಗಳನ್ನು ಬಂಧಿಸಿದ ಮುಂಬಯಿ ಪೊಲೀಸರು

byndoor

Kundapura: ಕಾರು ಢಿಕ್ಕಿಯಾಗಿ ದನ ಸಾವು; ಕಾರು ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.