40 Years Of Service: ಭೂಸೇನಾ ನೂತನ ಮುಖ್ಯಸ್ಥರಾಗಿ ಲೆ.ಜ. ಉಪೇಂದ್ರ ದ್ವಿವೇದಿ ನೇಮಕ
ದ್ವಿವೇದಿ ಅವರು ಹಲವಾರು ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದರು.
Team Udayavani, Jun 12, 2024, 10:39 AM IST
ನವದೆಹಲಿ: ಜಗತ್ತಿನ ಅತೀ ದೊಡ್ಡ ಮಿಲಿಟರಿ ಪಡೆಗಳಲ್ಲಿ ಒಂದಾದ ಭಾರತದ ಭೂಸೇನೆಯ ನೂತನ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿ ನೇಮಕಗೊಂಡಿದ್ದಾರೆ. ಸದ್ಯ ಭೂಸೇನೆ ಉಪ ಮುಖ್ಯಸ್ಥರಾಗಿರುವ ಅವರು ಜೂ.30ರಂದು ಅಧಿಕಾರ ಸ್ವೀಕರಿಸಲಿದ್ದಾರೆ.
ಇದನ್ನೂ ಓದಿ:Bantwala: ಮನೆಗೆ ನುಗ್ಗಿ ಒಂಟಿ ಮಹಿಳೆಗೆ ಲೈಂಗಿಕ ಕಿರುಕುಳ; ಆರೋಪಿ ಬಂಧನ
ಜನರಲ್ ಮನೋಜ್ ಸಿ.ಪಾಂಡೆ ಅವರು ಜೂನ್ 30ರಂದು ಸೇವೆಯಿಂದ ನಿವೃತ್ತರಾಗಲಿದ್ದು, ಅಂದು ಲೆ.ಜ. ಉಪೇಂದ್ರ ದ್ವಿವೇದಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ವರದಿ ವಿವರಿಸಿದೆ.
ಲೆ.ಜ.ಉಪೇಂದ್ರ ದ್ವಿವೇದಿ ಹಿನ್ನೆಲೆ:
1964ರ ಜುಲೈ 1ರಂದು ಉಪೇಂದ್ರ ದ್ವಿವೇದಿ ಜನಿಸಿದ್ದು, ಸೈನಿಕ್ ಶಾಲೆ ರೇವಾ, ನ್ಯಾಷನಲ್ ಡಿಫೆನ್ಸ್ ಕಾಲೇಜು ಮತ್ತು ಅಮೆರಿಕದ ಆರ್ಮಿ ವಾರ್ ಕಾಲೇಜ್ ನಲ್ಲಿ ಶಿಕ್ಷಣ ಪಡೆದಿದ್ದರು. ಡಿಫೆನ್ಸ್ & ಮ್ಯಾನೇಜ್ ಮೆಂಟ್ ಸ್ಟಡೀಸ್ ನಲ್ಲಿ ಎಂ.ಫಿಲ್ ಪಡೆದಿದ್ದು, ಜೊತೆಗೆ ಎರಡು ಮಾಸ್ಟರ್ ಪದವಿ ಗಳಿಸಿದ್ದಾರೆ.
1984ರ ಡಿಸೆಂಬರ್ 15ರಂದು ದ್ವಿವೇದಿ ಅವರು ಭಾರತೀಯ ಸೇನೆಯ ಜಮ್ಮು-ಕಾಶ್ಮೀರ ರೈಫಲ್ಸ್ ಪದಾತಿಗಳಕ್ಕೆ ನೇಮಕಗೊಂಡಿದ್ದರು. ಸುದೀರ್ಘ 40ವರ್ಷಗಳ ಸೇವೆಯಲ್ಲಿ ದ್ವಿವೇದಿ ಅವರು ಹಲವಾರು ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದರು.
ಜಮ್ಮು-ಕಾಶ್ಮೀರ್ ರೈಫಲ್ಸ್ ನ ಕಮಾಂಡ್ ಆಫ್ ರೆಜಿಮೆಂಟ್ಸ್, ಬ್ರಿಗೇಡ್ (26 ಸೆಕ್ಟರ್ ಅಸ್ಸಾಂ ರೈಫಲ್ಸ್), ಇನ್ಸ್ ಪೆಕ್ಟರ್ ಜನರಲ್ ಸೇರಿದಂತೆ ವಿವಿಧ ಹುದ್ದೆಗಳನ್ನು ದ್ವಿವೇದಿ ಅಲಂಕರಿಸಿದ್ದರು.
ಲೆಫ್ಟಿನೆಂಟ್ ಜನರಲ್ ದ್ವಿವೇದಿ ಅವರು 2022-2024ರ ಅವಧಿವರೆಗೆ ಡೈರೆಕ್ಟರ್ ಜನರಲ್ ಇನ್ ಫ್ಯಾಂಟ್ರಿ & ಜನರಲ್ ಆಫೀಸರ್ ಕಮಾಂಡಿಂಗ್ ಇನ್ ಚೀಫ್ ಆಗಿ ಸೇವೆ ಸಲ್ಲಿಸಿದ್ದರು.
ಉಪೇಂದ್ರ ದ್ವಿವೇದಿ ಅವರ ಸೇವೆಯನ್ನು ಪರಿಗಣಿಸಿ ಪರಂ ವಿಶಿಷ್ಠ ಸೇವಾ ಪದಕ, ಅತಿ ವಿಶಿಷ್ಟ ಸೇವಾ ಪದಕಕ್ಕೆ ಭಾಜನರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ
Mumbai: ಭಯೋತ್ಪಾದಕ ದಾಳಿ ಸಾಧ್ಯತೆ-ಗುಪ್ತಚರ ಇಲಾಖೆ: ಮುಂಬೈನಲ್ಲಿ ಬಿಗಿ ಪೊಲೀಸ್ ಭದ್ರತೆ
Telangana: ಉಪಮುಖ್ಯಮಂತ್ರಿ ಮನೆಯಲ್ಲಿ ಭಾರಿ ಕಳ್ಳತನ.. ಚಿನ್ನದ ಬಿಸ್ಕತ್ ಸೇರಿ ನಗನಗದು ಕಳವು
Tragedy: ಬೆಳ್ಳಂಬೆಳಗ್ಗೆ ಬಾಡಿಗೆ ಮನೆಯಲ್ಲಿ ನಾಲ್ವರು ಹೆಣ್ಣುಮಕ್ಕಳ ಜೊತೆ ತಂದೆಯ ಶವ ಪತ್ತೆ
Porsche Crash: ಆ ಒಂದು ಘಟನೆಯಿಂದ ಬಾಲಕನಿಗೆ ಯಾವುದೇ ಕಾಲೇಜಿನಲ್ಲಿ ಸೀಟು ಸಿಕ್ತಿಲ್ಲ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Mangaluru: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ… ಅಪಾಯದಿಂದ ಪಾರಾದ ಪ್ರಯಾಣಿಕರು
SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ
ಭಾರತದಲ್ಲಿ ಪಾಕ್ ಸಿನಿಮಾ ದ ಲೆಜೆಂಡ್ ಆಫ್ ಮೌಲಾ ಜಟ್ ಪ್ರದರ್ಶನಕ್ಕೆ ಅವಕಾಶವಿಲ್ಲ: ಕೇಂದ್ರ
Shimoga; ನಿಮಗೊಂದು ಕಾನೂನು ನಮಗೊಂದು ಕಾನೂನು ಇದೆಯೇ..: ಸಿದ್ದರಾಮಯ್ಯ ವಿರುದ್ದ ಈಶ್ವರಪ್ಪ
Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.