ಎ, ಬಿ ಹುದ್ದೆ : ಸಂದರ್ಶನವಿಲ್ಲ

ಕೆಲವು ವೃತ್ತಿಪರ ಹುದ್ದೆಗಳಿಗೆ ಮಾತ್ರ ಅನ್ವಯ: ಸಂಪುಟ

Team Udayavani, Dec 31, 2019, 6:30 AM IST

ve-41

ಬೆಂಗಳೂರು: ಕೆಪಿಎಸ್‌ಸಿಯಲ್ಲಿ ಎ ಮತ್ತು ಬಿ ದರ್ಜೆಯ ಕೆಲವು ವೃತ್ತಿಪರ ಹುದ್ದೆಗಳಿಗೆ ಸಂದರ್ಶನ ರದ್ದುಪಡಿಸಿ ಲಿಖಿತ ಪರೀಕ್ಷೆ ಮೂಲಕ ನೇಮಕ ಮಾಡಿಕೊಳ್ಳಲು ರಾಜ್ಯ ಸಚಿವ ಸಂಪುಟ ಸೋಮವಾರ ತೀರ್ಮಾನಿಸಿದೆ.

ಪ್ರಸ್ತುತ ಸಿ ಮತ್ತು ಡಿ ಗ್ರೂಪ್‌ ಹುದ್ದೆಗಳಿಗೆ ಸಂದರ್ಶನವಿಲ್ಲದೆ ನೇಮಕ ಮಾಡಿಕೊಳ್ಳುತ್ತಿರುವಂತೆ ಇನ್ನು ಮುಂದೆ ಎ ಮತ್ತು ಬಿ ಹುದ್ದೆಗಳಿಗೂ ನೇಮಕ ಮಾಡಿಕೊಳ್ಳಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿ ಸಿದರು. ಸಂಪುಟ ಸಭೆಯ ಅನಂತರ ಸುದ್ದಿಗೋಷ್ಠಿಯಲ್ಲಿ ಮಾತ ನಾಡಿ, ಯಾವ ಯಾವ ಇಲಾಖೆಗಳಿಗೆ ಇದು ಅನ್ವಯ ಎಂಬುದರ ಬಗ್ಗೆ ಇನ್ನೂ ನಿಯಮಾವಳಿ ರೂಪಿಸಿಲ್ಲ. ಮುಂದಿನ ದಿನಗಳಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.

ಕಲ್ಯಾಣ ಕರ್ನಾಟಕ ಮಂಡಳಿಗೆ ಶಾಸಕರ ನೇತೃತ್ವ
ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾಗಲು ಸಚಿವರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿತ್ತು. ಈ ನಿಯಮ ಪಾಲನೆ ಯಿಂದ ಶಾಸಕರು ಬೇಸರಗೊಂಡಿರುವುದರಿಂದ ಶಾಸಕರೂ ಮಂಡಳಿಯ ಅಧ್ಯಕ್ಷರಾಗಲು ಅವಕಾಶ ದೊರೆಯುವಂತೆ ಕಾನೂನು ತಿದ್ದುಪಡಿ ಮಾಡಲಾಗುವುದು ಎಂದು ಮಾಧುಸ್ವಾಮಿ ಹೇಳಿದರು.

ಕಲ್ಯಾಣ ಕರ್ನಾಟಕ ಮಂಡಳಿಗೆ ಆ ಭಾಗದ ಶಾಸಕರಲ್ಲದ ಡಿಸಿಎಂ ಗೋವಿಂದ ಕಾರಜೋಳ ಅವರನ್ನು ಅಧ್ಯಕ್ಷರನ್ನಾಗಿ ನೇಮಿ ಸಿದ್ದರಿಂದ ಆಕ್ಷೇಪಗಳು ಕೇಳಿ ಬಂದವು. ಹೀಗಾಗಿ ಶಾಸಕರನ್ನೂ ಅಧ್ಯಕ್ಷರನ್ನಾಗಿ ಮಾಡಿ ಸಂಪುಟ ದರ್ಜೆಯ ಸ್ಥಾನಮಾನ ನೀಡಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.

ಸಂಪುಟದ ಪ್ರಮುಖ ನಿರ್ಣಯಗಳು
– 2020ರ ನ. 3ರಿಂದ 5ರ ವರೆಗೆ ಬೆಂಗಳೂರಿನಲ್ಲಿ ವಿಶ್ವ ಬಂಡವಾಳ ಹೂಡಿಕೆದಾರರ ಸಮಾವೇಶ

– ಕೌಶಲಾಭಿವೃದ್ಧಿ ಇಲಾಖೆಯಲ್ಲಿ ಮಂಗಳೂರು, ಬೆಳಗಾವಿ, ಹುಬ್ಬಳ್ಳಿ, ಶಿವಮೊಗ್ಗ, ಹಾಸನ, ತುಮಕೂರು ಮತ್ತು ಹರಿಹರ ಗಳಲ್ಲಿ ಖಾಸಗಿ ಸಂಸ್ಥೆಗಳ ನೆರವಿನಿಂದ ಜಿಟಿಟಿಸಿ ತರಬೇತಿ ಕೇಂದ್ರಗಳನ್ನು ತೆರೆಯಲು ನಿರ್ಧಾರ, ಶೇ.90 ಖಾಸಗಿ ಸಂಸ್ಥೆಗಳು ಬಂಡವಾಳ ಹಾಕಲಿವೆ. 353 ಕೋಟಿ ರೂ. ಯೋಜನೆಗೆ ರಾಜ್ಯ ಸರಕಾರ 36 ಕೋಟಿ ರೂ. ನೀಡಲಿದೆ.

– ನಗರ ಮತ್ತು ಗ್ರಾಮಾಂತರ ಯೋಜನೆ ಇಲಾಖೆಯಲ್ಲಿ ನೇಮಕಾತಿಯಲ್ಲಿ ನಿಯಮಗಳ ತಿದ್ದುಪಡಿಗೆ ಒಪ್ಪಿಗೆ

– ಯುವಜನ ಮತ್ತು ಕ್ರೀಡಾ ಇಲಾಖೆಯಿಂದ ಯಾದಗಿರಿ, ಬಳ್ಳಾರಿ, ಚಿಕ್ಕಬಳ್ಳಾಪುರ, ಬೀದರ್‌, ಮಡಿಕೇರಿಯಲ್ಲಿ 12.5 ಕೋ.ರೂ. ವೆಚ್ಚದಲ್ಲಿ ಕ್ರೀಡಾ ಸಮುಚ್ಚಯ ಅಭಿವೃದ್ಧಿಗೆ ಒಪ್ಪಿಗೆ

– ಮಂಗಳೂರಿನ ವೆನಾಕ್‌ ಆಸ್ಪತ್ರೆ, ವಿಕ್ಟೋರಿಯಾ ಆಸ್ಪತ್ರೆ, ಹುಬ್ಬಳ್ಳಿಯ ಕಿಮ್ಸ್‌ ಹಾಗೂ ಬಳ್ಳಾರಿಯ ವಿಮ್ಸ್‌ ಆಸ್ಪತ್ರೆಯ ರಕ್ತ ನಿಧಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ತೀರ್ಮಾನ.

– ಸಮಾಜ ಕಲ್ಯಾಣ ಇಲಾಖೆ ವತಿಯಿಂದ 20 ಸಂಚಾರಿ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸಿ ಗುಡ್ಡಗಾಡು ಪ್ರದೇಶಗಳಲ್ಲಿ ಬಳಕೆಗೆ ತೀರ್ಮಾನ.

ಟಾಪ್ ನ್ಯೂಸ್

1-a-rain-sss

Bengaluru Rains;ಇಂದು ಶಾಲೆಗಳಿಗೆ ರಜೆ ಘೋಷಿಸಿದ ಡಿಸಿ: ಖಾಸಗಿ ಶಾಲೆಗಳ ಒಕ್ಕೂಟ ವಿರೋಧ

1-a-bg

Bengaluru ;6 ಅಂತಸ್ತಿನ ಕಟ್ಟಡ ಕುಸಿತ ಪ್ರಕರಣ: ಸಾ*ವಿನ ಸಂಖ್ಯೆ 5 ಕ್ಕೇರಿಕೆ

Ashok-Rai

Bengaluru Kambala: ಕಂಬಳದ ಅನುಮತಿಗಾಗಿ ಕಾನೂನು ಹೋರಾಟ: ಶಾಸಕ ಅಶೋಕ್‌ ಕುಮಾರ್‌ ರೈ

MDMA

Narcotics: ನಿಷೇಧಿತ ಎಂಡಿಎಂಎ ಈಗ ದೇಶದಲ್ಲೇ ಉತ್ಪಾದನೆ!

Efforts to restore trust with China: Army chief Dwivedi

Army chief: ಚೀನ ಜತೆ ವಿಶ್ವಾಸ ಪುನಸ್ಥಾಪನೆಗೆ ಪ್ರಯತ್ನ: ಸೇನಾ ಮುಖ್ಯಸ್ಥ ದ್ವಿವೇದಿ

Dina Bhavishya

Daily Horoscope; ಹೆಚ್ಚಿನವರಿಗೆ ಮಿಶ್ರಫ‌ಲ ಕೊಡುವ ದಿನ

Bengaluru: ಕಂಬಳ ಪ್ರಶ್ನಿಸಿ ಅರ್ಜಿ ಇಂದು ಹೈಕೋರ್ಟ್‌ನಲ್ಲಿ ವಿಚಾರಣೆ

Bengaluru: ಕಂಬಳ ಪ್ರಶ್ನಿಸಿ ಅರ್ಜಿ ಇಂದು ಹೈಕೋರ್ಟ್‌ನಲ್ಲಿ ವಿಚಾರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-a-rain-sss

Bengaluru Rains;ಇಂದು ಶಾಲೆಗಳಿಗೆ ರಜೆ ಘೋಷಿಸಿದ ಡಿಸಿ: ಖಾಸಗಿ ಶಾಲೆಗಳ ಒಕ್ಕೂಟ ವಿರೋಧ

1-a-bg

Bengaluru ;6 ಅಂತಸ್ತಿನ ಕಟ್ಟಡ ಕುಸಿತ ಪ್ರಕರಣ: ಸಾ*ವಿನ ಸಂಖ್ಯೆ 5 ಕ್ಕೇರಿಕೆ

Bengaluru: ಕಂಬಳ ಪ್ರಶ್ನಿಸಿ ಅರ್ಜಿ ಇಂದು ಹೈಕೋರ್ಟ್‌ನಲ್ಲಿ ವಿಚಾರಣೆ

Bengaluru: ಕಂಬಳ ಪ್ರಶ್ನಿಸಿ ಅರ್ಜಿ ಇಂದು ಹೈಕೋರ್ಟ್‌ನಲ್ಲಿ ವಿಚಾರಣೆ

Channapatna By-Election: ಯೋಗೇಶ್ವರ್‌ ಎನ್‌ಡಿಎ ಅಭ್ಯರ್ಥಿ?

Channapatna By-Election: ಯೋಗೇಶ್ವರ್‌ ಎನ್‌ಡಿಎ ಅಭ್ಯರ್ಥಿ?

BY Election: ಜೆಡಿಎಸ್‌ ಸಭೆಯಲ್ಲೂ ಗುಟ್ಟಾಗಿಯೇ ಉಳಿದ ಎನ್‌ಡಿಎ ಅಭ್ಯರ್ಥಿ!

BY Election: ಜೆಡಿಎಸ್‌ ಸಭೆಯಲ್ಲೂ ಗುಟ್ಟಾಗಿಯೇ ಉಳಿದ ಎನ್‌ಡಿಎ ಅಭ್ಯರ್ಥಿ!

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

1-a-rain-sss

Bengaluru Rains;ಇಂದು ಶಾಲೆಗಳಿಗೆ ರಜೆ ಘೋಷಿಸಿದ ಡಿಸಿ: ಖಾಸಗಿ ಶಾಲೆಗಳ ಒಕ್ಕೂಟ ವಿರೋಧ

1-a-bg

Bengaluru ;6 ಅಂತಸ್ತಿನ ಕಟ್ಟಡ ಕುಸಿತ ಪ್ರಕರಣ: ಸಾ*ವಿನ ಸಂಖ್ಯೆ 5 ಕ್ಕೇರಿಕೆ

Ashok-Rai

Bengaluru Kambala: ಕಂಬಳದ ಅನುಮತಿಗಾಗಿ ಕಾನೂನು ಹೋರಾಟ: ಶಾಸಕ ಅಶೋಕ್‌ ಕುಮಾರ್‌ ರೈ

MDMA

Narcotics: ನಿಷೇಧಿತ ಎಂಡಿಎಂಎ ಈಗ ದೇಶದಲ್ಲೇ ಉತ್ಪಾದನೆ!

Efforts to restore trust with China: Army chief Dwivedi

Army chief: ಚೀನ ಜತೆ ವಿಶ್ವಾಸ ಪುನಸ್ಥಾಪನೆಗೆ ಪ್ರಯತ್ನ: ಸೇನಾ ಮುಖ್ಯಸ್ಥ ದ್ವಿವೇದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.