ಭಾಗಶಃ ನೀರಿನೊಳಗೆ ವಾಸಿಸುವ ನಗರ; ಐತಿಹಾಸಿಕ ಅದ್ಭುತದ ಸುಝೋ


Team Udayavani, Oct 7, 2023, 12:38 PM IST

ಭಾಗಶಃ ನೀರಿನೊಳಗೆ ವಾಸಿಸುವ ನಗರ; ಐತಿಹಾಸಿಕ ಅದ್ಭುತದ ಸುಝೋ

ನಾನು ಕೆಲಸ ಮಾಡುವ ಒಮಾನ್‌ ರಾಷ್ಟ್ರದ ಆಫೀಸಿನ ಕೆಲಸಕ್ಕೆ ಸಂಬಂಧಪಟ್ಟಂತೆ ಒಮ್ಮೆ ಚೀನ ಪ್ರವಾಸಕ್ಕೆ ಹೋಗಿದ್ದೆ. ಈ ಪ್ರವಾಸದಲ್ಲಿ ಪ್ರಮುಖ ನಗರಗಳಾದ ಬೀಜಿಂಗ್‌, ಶಾಂಘೈ ಮತ್ತು ಸುಝೋ ನಗರಗಳಲ್ಲಿ ಭೇಟಿ ನೀಡುವ ಅವಕಾಶ ಒದಗಿಬಂದಿತ್ತು. ಒಟ್ಟು ಒಂದು ವಾರದ ಕೆಲಸ. ಮಸ್ಕತ್‌ಗೆ ವಾಪಾಸು ಹಿಂದಿರುಗುವ ದಿನ ನಮ್ಮ ಆತಿಥೇಯ ಕಂಪೆನಿಯವರು ಪ್ರಾಚೀನ ಐತಿಹಾಸಿಕ ನಗರವಾದ ಸುಝೋ ನಗರದ ಪ್ರವಾಸವನ್ನು ಆಯೋಜಿಸಿದ್ದರು. ಸುಝೋ ನಗರ ಚೀನದ ಅತೀ ಪುರಾತನವಾದ ಸಾಂಸ್ಕೃತಿಕ ನಗರ. ಪೂರ್ವ ಚೀನದ ಜಿಯಾಂಗ್ಸು ಪ್ರಾಂತದಲ್ಲಿ ಈ ನಗರವಿದೆ. ಕ್ರಿ.ಪೂ.514ರಲ್ಲಿ ಈ ನಗರವನ್ನು ನಿರ್ಮಾಣಮಾಡಿದ್ದರು ಎಂದು ಹೇಳಲಾಗುತ್ತಿದೆ. 15ನೇ ಶತಮಾನದ ಅಂತ್ಯದಿಂದ 19ನೇ ಶತಮಾನದವರೆಗೆ, ಸುಝೋ ನಗರ ಚೀನದ ಆರ್ಥಿಕ, ಸಾಂಸ್ಕೃತಿಕ ಮತ್ತು ವಾಣಿಜ್ಯ ಕೇಂದ್ರವಾಗಿತ್ತು. ಈ ನಗರ ಇಂದಿಗೂ ಪ್ರವಾಸಿಗರ ನೆಚ್ಚಿನ ತಾಣ. ಇಲ್ಲಿನ ಐತಿಹಾಸಿಕ ಪುರಾತನ ನೀರಿನ ಕಾಲುವೆಗಳು, ಕಲ್ಲಿನ ಸೇತುವೆಗಳು, ಪಗೋಡಗಳು ಮತ್ತು ಸುಂದರ ಉದ್ಯಾನವನಗಳು ಪ್ರಮುಖ ಪ್ರವಾಸಿ ಆಕರ್ಷಣೆಗಳು.

ಈ ನಗರವನ್ನು ಸಾಮಾನ್ಯವಾಗಿ ವೆನಿಸ್‌ ಆಫ್ ದಿ ಈಸ್ಟ್‌ ಅಥವಾ ವೆನಿಸ್‌ ಆಫ್ ಚೀನ ಎಂದು ಕರೆಯಲಾಗುತ್ತದೆ. ಇದಕ್ಕೆ ಕಾರಣ, ಯುರೋಪಿನ ವೆನೀಸ್‌ ನಗರದಲ್ಲಿರುವಂತೆ ಇಲ್ಲಿಯೂ ಸಹ ಭಾಗಶಃ ನಗರ ನೀರಿನೊಳಗೆ ಇದೆ. ಇಲ್ಲಿನ ಕಾಲುವೆಗಳಲ್ಲಿ ಸಂಚರಿಸಲು ದೋಣಿಗಳ ವ್ಯವಸ್ಥೆಯಿದೆ. ಕಾಲುವೆಯ ಇಕ್ಕೆಲಗಳಲ್ಲಿ ಮನೆಗಳಿವೆ, ಅಂಗಡಿಗಳಿವೆ, ಹೊಟೇಲ್‌ ರೆಸ್ಟೋರೆಂಟ್‌ಗಳಿವೆ. ಈ ಪ್ರದೇಶದ ಸೌಂದರ್ಯವನ್ನು ಅನುಭವಿಸಲು ದೋಣಿಯಲ್ಲಿಯೇ ಪ್ರಯಾಣಿಸಬೇಕು. ನಮ್ಮ ಪ್ರವಾಸದ ಸಮಯದಲ್ಲಿ ಈ ಕಾಲುವೆಯಲ್ಲಿ ನಾವು ಪ್ರಯಾಣಿಸುವಾಗ ಇದರ ಕುರಿತು ಹಲವಾರು ಕುತೂಹಲಕಾರಿ ವಿಷಯಗಳನ್ನು ತಿಳಿದುಕೊಂಡೆವು.

ಈ ಕಾಲುವೆಗಳೆಲ್ಲ ದೊಡ್ಡದಾದ ಗ್ರ್ಯಾಂಡ್‌ ಕೆನಾಲ್‌ ಅನ್ನು ಸಂಪರ್ಕಿಸುತ್ತವೆ. ಸುಝೋ ನಗರದ ಕೆಲವು ಭಾಗ ಈ ಬೃಹತ್‌ ನೀರಿನ ಕಾಲುವೆ ಆಕ್ರಮಿಸಿದೆ. ಈ ಕಾಲುವೆಗೆ ಸುಧೀರ್ಘ‌ವಾದ ಇತಿಹಾಸವಿದೆ. ಶತಶತಮಾನಗಳ ಹಿಂದೆ ಸುಲಭವಾಗಿ ಸರಕು ಸರಂಜಾಮುಗಳನ್ನು ಸರಬರಾಜು ಮಾಡಲು ಈ ಕಾಲುವೆಯನ್ನು ಕಟ್ಟಲಾಗಿದೆ ಎಂದು ಹೇಳುತ್ತಾರೆ. ಆದರೆ ಕೆಲವರ ಪ್ರಕಾರ ಅಂದಿನ ರಾಜಪರಿವಾರದವರಿಗೆ ನೂರಾರು ಕಿ.ಮೀ. ದೂರದ ಊರುಗಳಿಗೆ ರಸ್ತೆ ಮೂಲಕ ಪ್ರಯಾಣದಲ್ಲಿ ಕುದುರೆ, ಎತ್ತಿನಗಾಡಿ ಮುಂತಾದವುಗಳಲ್ಲಿ ಪ್ರಯಾಣಿಸಿದರೆ ವಿಪರೀತವಾದ ಮೈ ನೋವು ಬರುತಿತ್ತು, ಸುಸ್ತಾಗುತಿತ್ತು. ಇಂತಹ ಧೀರ್ಘ‌ವಾದ ಪ್ರಯಾಣವನ್ನು ರಾಜಪರಿವಾರದ ಅದರಲ್ಲೂ ರಾಜ, ರಾಣಿ, ರಾಜಕುಮಾರಿ ಮತ್ತಿತರು ಕಾಲುವೆ ಮುಖಾಂತರ ಸುಲಭವಾಗಿ ಪ್ರಯಾಣ ಮಾಡಲು ನಿರ್ಮಿಸಲಾಯಿತು ಎಂದು ಹೇಳುತ್ತಾರೆ. ಅದೇನೆ ಇರಲಿ, ಈ ಕಾಲುವೆಯಿಂದ ಚೀನದ ಆರ್ಥಿಕ ಪರಿಸ್ಥಿತಿ ಹಲವಾರು ಕಾಲಘಟ್ಟದಲ್ಲಿ ತುಂಬಾ ಬಲಗೊಂಡಿತ್ತು ಎಂದು ದಾಖಲಾಗಿದೆ.

ಈ ಕಾಲುವೆಯು ಸುಮಾರು 1,776 ಕಿ.ಮೀ ನಷ್ಟು (ಬೀಜಿಂಗ್‌ನಿಂದ ಝೆಜಿಯಾಂಗ್‌ ಪ್ರಾಂತದವರೆಗೆ), ಉದ್ದವಿದೆ. ಇದು ವಿಶ್ವದ ಅತೀ ಉದ್ದದ ದೊಡ್ಡ ಕಾಲುವೆಯಾಗಿದ್ದು, ಮಾನವ ನಿರ್ಮಿತ ಕೃತಕ ನದಿಯಾಗಿದೆ. ಬೀಜಿಂಗ್‌ನಿಂದ ಆರಂಭಿಸಿ, ಟಿಯಾಂಜಿನ್‌ ಮತ್ತು ಹೆಬೈ, ಶಾಂಡೊಂಗ್‌, ಜಿಯಾಂಗ್ಸು ಮತ್ತು ಝೆಜಿಯಾಂಗ್‌ ಪ್ರಾಂತಗಳ ಮೂಲಕ ಹಾಂಗೌl ನಗರದವರೆಗೆ ಸಂಪರ್ಕ ಕಲ್ಪಿಸುತ್ತದೆ. ಕ್ರಿ.ಪೂ. 5 ನೇ ಶತಮಾನದಲ್ಲಿ ಇದನ್ನು ಮೊದಲು ಕಟ್ಟಲು ಪ್ರಾರಂಭಿಸಿದರು, ಅನಂತರ ಕ್ರಿ.ಶ. 581-618ರಲ್ಲಿ ಮತ್ತು ಕ್ರಿ.ಶ. 1271-1633, ಹೀಗೆ ವಿವಿಧ ಕಾಲಘಟ್ಟದಲ್ಲಿ ಇಲ್ಲಿನ ರಾಜಮನೆತನಗಳು ಇದನ್ನು ವಿಸ್ತರಿಸುತ್ತ ಬಂದಿದ್ದಾರೆ. ಈ ಕಾಲುವೆ ಯುನೆಸ್ಕೋ (UNESCO) ವಿಶ್ವ ಪರಂಪರೆಯ ತಾಣಗಳಲ್ಲಿ ಒಂದಾಗಿದೆ. ಈ ಕಾಲುವೆಯಲ್ಲಿ ಪ್ರಮುಖವಾಗಿ ಆಹಾರ ಧಾನ್ಯಗಳನ್ನು ಸಾಗಿಸಲಾಗುತಿತ್ತು. ಸೇನಾ ತುಕಡಿಗಳನ್ನು ಒಂದು ಕಡೆಯಿಂದ ಇನ್ನೊಂದು ಕಡೆಗೆ ಸಾಗಿಸಲು ಸಹ ಇದನ್ನು ಬಳಸುತ್ತಿದ್ದರು. ಈ ಕಾಲುವೆಯಲ್ಲಿ ಸಂಚರಿಸಲು, ಅಂದಿನ ಕಾಲದಲ್ಲಿಯೇ ತಂತ್ರಜ್ಞಾನವನ್ನು ಉಪಯೋಗಿಸಿ ಪ್ರಯಾಣಕ್ಕೆ ಸೂಕ್ತವಾದ ದೋಣಿಗಳನ್ನು ನಿರ್ಮಿಸುತ್ತಿದ್ದರು.

ಸಾಗಾಣೆದಾರರು ಅಂದಿನ ಆಡಳಿತಗಾರರಿಗೆ ಸುಂಕವನ್ನ ನೀಡಬೇಕಿತ್ತು. ಇದೊಂದು ಉತ್ತಮವಾದ ಆದಾಯವಾಗಿತ್ತು. ಈ ಸಾಗಾಟದ ಸಮಯದಲ್ಲಿ ದರೋಡೆಕೋರರು, ಲೂಟಿಕೋರರು ದಾಳಿಯಿಡುತ್ತಿದ್ದರಂತೆ, ಅವರಿಂದ ರಕ್ಷಿಸಲು ಅಲ್ಲಲ್ಲಿ ಸೈನಿಕರ ತುಕಡಿಗಳನ್ನ ನಿಯೋಜಿಸುತಿದ್ದರು. ಆದರೂ ಸಂದರ್ಭ ನೋಡಿ, ಈ ದಾಳಿಕೋರರು ಆಹಾರಧಾನ್ಯಗಳು ಸೇರಿದಂತೆ ಮತ್ತಿತರ ವಸ್ತುಗಳನ್ನು ದರೋಡೆ ಮಾಡುತ್ತಿದ್ದರು.

ಒಂದು ಕಾಲದಲ್ಲಿ ಪ್ರತೀ ವರ್ಷ 8,000 ಕ್ಕೂ ಹೆಚ್ಚಿನ ದೋಣಿಗಳು ಸಂಚರಿಸುತಿದ್ದ ಈ ಉದ್ದದ ಐತಿಹಾಸಿಕ ಕಾಲುವೆ ಕಾಲದ ಹೊಡೆತಕ್ಕೆ ಸಿಲುಕಿ ಇಂದು ಹಾಳಾಗಿದೆ. ಕೆಲವೆಡೆ ಇದರ ಗುರುತುಗಳೇ ನಾಶವಾಗಿವೆ. ಇನ್ನೂ ಕೆಲವೆಡೆ ಕಾಲುವೆ ಮುಚ್ಚಿ ಹೋಗಿದೆ. ಇಂದಿನ ಆಧುನಿಕ ಯುಗದಲ್ಲಿ ರಸ್ತೆ ರೈಲು ಮಾರ್ಗವನ್ನು ಯಥೇಚ್ಛವಾಗಿ ಉಪಯೋಗಿಸುತ್ತಿರುವುದರಿಂದ, ಎಲ್ಲೆಲ್ಲಿ ಅತೀ ಹೆಚ್ಚು ನೀರು ಇದೆಯೋ ಮತ್ತು ಸಂಪರ್ಕ ಯೋಗ್ಯವಿದೆಯೋ ಆ ಕಾಲುವೆ/ನದಿ ಮಾತ್ರ ಬಳಕೆಯಲ್ಲಿದೆ, ಮಿಕ್ಕಿದ್ದು ಹೂಳು ತುಂಬಿ ಮುಚ್ಚಿ ಹೋಗಿದೆ. ಕೆಲವೆಡೆ ಗುರುತೇ ಸಿಗದಷ್ಟು ಹಾಳಾಗಿದೆ. 12ನೇ ಶತಮಾನದ ಪ್ರಸಿದ್ಧ ಪ್ರವಾಸಿಗ ಮಾರ್ಕೋಪೋಲೋ ಸೇರಿದಂತೆ ವಿವಿಧ ವಿದೇಶಿ ಪ್ರವಾಸಿಗರು ಈ ಐತಿಹಾಸಿಕ ಕಾಲುವೆ ಕುರಿತು ದಾಖಲಿಸಿದ್ದಾರೆ.

ಸುಝೋದಲ್ಲಿ ಈ ಕಾಲುವೆ ಪ್ರಯಾಣದ ಅನಂತರ ವಿವಿಧ ಪ್ರವಾಸಿ ತಾಣಗಳಿಗೆ ನಮ್ಮನ್ನು ಕರೆದುಕೊಂಡು ಹೋದರು. ಪ್ರತೀ ಸ್ಥಳಗಳು ಒಂದಕ್ಕಿಂತ ಒಂದು ಅದ್ಭುತ. ಈ ಎಲ್ಲ ಸ್ಥಳಗಳು ನೂರಾರು ವರ್ಷಗಳ ಹಿಂದೆ ಕಟ್ಟಿದಂತಹವು. ಅವುಗಳನ್ನು ಇಂದಿಗೂ ಮೂಲ ಸ್ವರೂಪದಲ್ಲಿಯೇ ಉಳಿಸಿಕೊಂಡಿರುವುದು ಇಲ್ಲಿನ ವೈಶಿಷ್ಟ್ಯ. ಸುಝೋ ನಗರದ ಈ ಸ್ಥಳಗಳನ್ನು ನೋಡಿದೊಡನೆ ಪುರಾತನ ಚೀನದ ನಗರವೊಂದನ್ನು ನೋಡಿದಂತಹ ಅನುಭವವಾಗುತ್ತದೆ.

ಪ್ಯಾನ್ಮೆನ್‌ (ಪ್ಯಾನ್‌ಗೇಟ್‌). ಪ್ಯಾನ್ಮೆನ್‌ ಎನ್ನುವ ಈ ರಮಣೀಯ ಪ್ರದೇಶವನ್ನು ಶಾಸ್ತ್ರೀಯ ಉದ್ಯಾನಗಳ ವಾಸ್ತುಶಿಲ್ಪದ ರಚನೆಯನ್ನು ಬಳಸಿಕೊಂಡು ಕೆಲವು ಐತಿಹಾಸಿಕ ತಾಣಗಳ ಆಧಾರದ ಮೇಲೆ ನಿರ್ಮಿಸಲಾಗಿದೆ. ಇಲ್ಲಿ ಮೂರು ಸುಂದರ ದೃಶ್ಯಾವಳಿಗಳನ್ನು ನೋಡಬಹುದು. ಪ್ಯಾನ್ಮೆನ್‌ ಗೇಟ್‌, ವೂ ಮೆನ್‌ ಸೇತುವೆ ಮತ್ತು ರುಯಿಗುವಾಂಗ್‌ ಪಗೋಡಾ. ಪ್ಯಾನ್ಮೆನ್‌ ಗೇಟ್‌ ಸುಝೌನಲ್ಲಿ 2500 ವರ್ಷಗಳ ಇತಿಹಾಸವನ್ನು ಹೊಂದಿರುವ ಪ್ರಸಿದ್ಧ ಐತಿಹಾಸಿಕ ಹೆಗ್ಗುರುತು. ಇಂದಿಗೂ ಪ್ರಾಚೀನ ಕೋಟೆಗಳಲ್ಲಿ ಒಂದಾಗಿ ಇದು ಉಳಿದಿದೆ.

ಆಕರ್ಷಕವಾದವು ಮೆನ್‌ ಸೇತುವೆಯು ಸುಝೌ ದಲ್ಲಿ ಅತೀ ಎತ್ತರವಾದ ಪುರಾತನ ಸೇತುವೆಯಾಗಿದೆ. ಇದು ಸಾಂಗ್‌ ರಾಜವಂಶದ (ಕ್ರಿ.ಶ. 960-1279) ಸಮಯದಲ್ಲಿ ನಿರ್ಮಾಣ ಮಾಡಲಾಗಿದೆ. ಏಳು ಅಂತಸ್ತಿನ ಪಗೋಡವನ್ನು ಮರದ ವೇದಿಕೆಗಳೊಂದಿಗೆ ಇಟ್ಟಿಗೆಯಿಂದ ನಿರ್ಮಿಸಲಾಗಿದ್ದು, ಇಲ್ಲಿನ ಕಿರಿದಾದ ಮೆಟ್ಟಿಲುಗಳ ಮೇಲೆ ಹತ್ತಿದ ಬಳಿಕ, ಸುಝೊà ನಗರದ ಹೃದಯಭಾಗವನ್ನು ನೋಡಬಹುದು. ಹಚ್ಚ ಹಸುರಿನ ಸುಂದರವಾದ ಉದ್ಯಾನವನಗಳು, ನೀರಿನ ಕಾಲುವೆಗಳು ಇತ್ಯಾದಿಗಳನ್ನ ಕಣ್ತುಂಬಿಕೊಳ್ಳಬಹುದು.

ಟೈಗರ್‌ ಹಿಲ್‌: ಆಕರ್ಷಕವಾದ ಟೈಗರ್‌ ಹಿಲ್‌ಗೆ 2,500 ವರ್ಷಗಳ ಇತಿಹಾಸವಿದೆ. ಇಲ್ಲಿಯೂ ಸಾಕಷ್ಟು ಪುರಾತನ ವಾಸ್ತು ಶಿಲ್ಪಗಳನ್ನು ನೋಡಬಹುದು. 2500 ವರ್ಷಗಳ ಹಿಂದೆ ಇಲ್ಲಿನ ಒಂದು ಯುದ್ಧದಲ್ಲಿ ಈ ಪ್ರಾಂತದ ರಾಜನೊಬ್ಬ ಮರಣಹೊಂದುತ್ತಾನೆ. ಅವನ ಮಗ ಫೂ ಚಾಯ್‌ , ಅವನನ್ನು ಸರ್ಜಿಂಗ್‌ ಸೀ ಹಿಲ್‌ ಎನ್ನುವ ಈ ಪ್ರದೇಶದಲ್ಲಿ ಸಮಾಧಿ ಮಾಡುತ್ತಾನೆ. ಮೂರು ದಿನಗಳ ಅನಂತರ ಇಲ್ಲಿಗೆ ಬಿಳಿ ಹುಲಿಯೊಂದು ಬಂದಿತು ಎಂಬ ಐತಿಹ್ಯವಿದೆ. ಆದ್ದರಿಂದ ಜನರು ಅಂದಿನಿಂದ ಅದನ್ನು ಟೈಗರ್‌ ಹಿಲ್‌ ಎಂದು ಮರುನಾಮಕರಣ ಮಾಡಿದ್ದಾರೆ.

ಹನ್ಶನ್‌ ದೇವಾಲಯ: ಹನ್ಶನ್‌ ದೇವಾಲಯ, ಸುಝೌನಲ್ಲಿರುವ ಬೌದ್ಧ ದೇವಾಲಯವಾಗಿದೆ. ಲಿಯಾಂಗ್‌ ರಾಜವಂಶದಲ್ಲಿ (A.D. 502-557) ಮೊದಲು ನಿರ್ಮಿಸಲಾದ ದೇವಾಲಯಕ್ಕೆ ಟ್ಯಾಂಗ್‌ ರಾಜವಂಶದ ಕವಿ-ಸನ್ಯಾಸಿಯ ಹೆಸರನ್ನು ಇಡಲಾಗಿದೆ. ಇಲ್ಲಿ ಹಿಂದೂ ಧರ್ಮದ ಪದ್ಧತಿಯಂತೆ ಮೂರ್ತಿ ಪೂಜೆಯನ್ನು ಕಾಣಬಹುದು. ಬುದ್ಧನಿಗೆ ದೂಪ, ಫ‌ಲ ಪುಷ್ಪ ಇತ್ಯಾದಿಗಳನ್ನು ಅರ್ಪಿಸುತ್ತಾರೆ. ದೇವಾಲಯದ ಪ್ರಾಂಗಣ, ಗಂಟೆ, ಗರ್ಭಗುಡಿ, ಎಲ್ಲವೂ ಭಾರತದಲ್ಲಿನ ದೇವಾಲಯದಂತೆ ಚೈನೀಸ್‌ ಶೈಲಿಯಲ್ಲಿ ಕಟ್ಟಿರುವುದು ವಿಶೇಷ. ಚೀನದಲ್ಲಿ ಕಮ್ಯುನಿಸ್ಟ್‌ ಸರಕಾರ ಆಡಳಿತಕ್ಕೆ ಬಂದಾಗ, ಈ ಪುರಾತನ ದೇವಾಲಯ ಸೇರಿದಂತೆ ದೇಶದ ಎಲ್ಲ ದೇವಾಲಯ, ಚರ್ಚ್‌ ಮತ್ತು ಮಸೀದಿಗಳನ್ನ 1950 ರಿಂದ 1979ರವರೆಗೆ ಕಾಲ ಮುಚ್ಚಿದ್ದರು.

ಉದ್ಯಾನಗಳ ನಗರ
ಸುಝೌವನ್ನು ಉದ್ಯಾನಗಳ ನಗರ ಎಂದು ಸಹ ಕರೆಯಲಾಗುತ್ತದೆ. 16ನೇ ಶತಮಾನದಲ್ಲಿ 170 ಉದ್ಯಾನಗಳು ಈ ನಗರದಲ್ಲಿದ್ದವಂತೆ. ಈಗ ಅಂದಾಜು 50 ಖಾಸಗಿ ಮತ್ತು ಸರಕಾರಿ ಉದ್ಯಾನವನಗಳಿವೆ. ಈ ಎಲ್ಲ ಉದ್ಯಾನವನಗಳನ್ನು ತೋಟಗಾರಿಕೆಯ ವಿಶ್ವ ಇತಿಹಾಸದಲ್ಲಿ ಶ್ರೇಷ್ಠ ಮೇರುಕೃತಿಗಳು ಎಂದು ಗುರುತಿಸಲಾಗಿದೆ. ಅವುಗಳಲ್ಲಿ ಒಂಬತ್ತು ಉದ್ಯಾನವನಗಳನ್ನು ವಿಶ್ವ ಸಾಂಸ್ಕೃತಿಕ ಪರಂಪರೆಗಳಲ್ಲಿ ಪಟ್ಟಿ ಮಾಡಲಾಗಿದೆ. ಚೀನೀ ಉದ್ಯಾನ ಸಂಸ್ಕೃತಿಯ ಹೆಮ್ಮೆಯೆಂದು ಗುರುತಿಸಲ್ಪಡುವ ಹಂಬಲ್‌ ಅಡ್ಮಿನಿಸ್ಟ್ರೇಟರ್ಸ್‌ ಗಾರ್ಡನ್‌ ಮತ್ತು ಲಿಂಗರಿಂಗ್‌ ಗಾರ್ಡನ್‌ ಇಂದಿಗೂ ಪ್ರವಾಸಿಗರ ಮೆಚ್ಚಿನ ತಾಣಗಳಾಗಿವೆ.

ಹಂಬಲ್‌ ಅಡ್ಮಿನಿಸ್ಟ್ರೇಟರ್ಸ್‌ ಗಾರ್ಡನ್‌ ಅನ್ನು ಕ್ರಿ.ಶ 1509 ರಲ್ಲಿ ನಿರ್ಮಿಸಲಾಯಿತು. ಇದು ಸುಝೊàದಲ್ಲಿನ ಅತೀದೊಡ್ಡ ಶಾಸ್ತ್ರೀಯ ಸಾಂಪ್ರದಾಯಿಕ ಉದ್ಯಾನವನವಾಗಿದೆ. ಇಡೀ ಉದ್ಯಾನವನವು ನೀರಿನ ಕೊಳ, ಕಾಲುವೆಗಳಿಂದೆ, ಆಕರ್ಷಕ ಕಲ್ಲು ಬಂಡೆಗಳು, ಮಂಟಪಗಳು, ವಿವಿಧ ರೀತಿಯ ಸುಂದರವಾದ ಹೂವಿನ ಗಿಡಗಳು, ಆಕರ್ಷಕ ಮರಗಿಡಗಳಿಂದ ಕೂಡಿದ ಇಲ್ಲಿನ ದೃಶ್ಯಾವಳಿ ಮನಸ್ಸಿಗೆ ಮುದ ನೀಡುತ್ತವೆ. ಅಂಕುಡೊಂಕಾದ ಹಾದಿಯಲ್ಲಿ ನಡೆಯುತ್ತಾ ಮುಂದೆ ಹೋದಂತೆ ಪ್ರತಿಯೊಂದು ಹೆಜ್ಜೆಗೂ ವಿಭಿನ್ನ ದೃಶ್ಯಾವಳಿಗಳು ಗೋಚರಿಸುತ್ತವೆ. ರಮಣೀಯ ಮತ್ತು ಶಾಂತಿಯುತ, ಉದ್ಯಾನದಲ್ಲಿ ಪ್ರತಿಯೊಂದು ವಸ್ತುವೂ ಹಿಂದಿನ ಕಥೆಯನ್ನು ಹೇಳುತ್ತದೆ.

ಲಿಂಗರಿಂಗ್‌ ಗಾರ್ಡನ್‌ (ಲಿಯುವಾನ್‌ ಗಾರ್ಡನ್‌) ಚೀನದಲ್ಲಿ ಅತೀ ದೊಡ್ಡ ಪ್ರಮಾಣದ ಕ್ಲಾಸಿಕಲ್‌ ಖಾಸಗಿ ಉದ್ಯಾನವಾಗಿದ್ದು, 23,300 ಚದರ ಮೀಟರ್‌ ವಿಸ್ತೀರ್ಣವನ್ನು ಹೊಂದಿದೆ. ಇದು ಕ್ವಿಂಗ್‌ ರಾಜವಂಶದ ಶೈಲಿಯ ವಿನ್ಯಾಸವನ್ನು ಪ್ರತಿನಿಧಿಸುತ್ತದೆ. ಸೊಗಸಾದ ವಾಸ್ತುಶಿಲ್ಪ ಕಲೆ, ಭವ್ಯವಾದ ಸಭಾಂಗಣಗಳು ಮತ್ತು ಸುಂದರವಾದ ಗಾರ್ಡನ್‌ ಅಂಗಳಗಳಿಗೆ ಹೆಸರುವಾಸಿಯಾಗಿದೆ. ಈ ಗಾರ್ಡನ್‌ ಅನ್ನು ನಾಲ್ಕು ಭಾಗಗಳಾಗಿ ವಿಂಗಡಿಸಲಾಗಿದೆ. ಪೂರ್ವದಲ್ಲಿ ಮುಖ್ಯವಾಗಿ ವಾಸ್ತುಶಿಲ್ಪ, ಮಧ್ಯದಲ್ಲಿ ವಿಶಾಲವಾದ ಉದ್ಯಾನವನ, ಪಶ್ಚಿಮವು ಕಲ್ಲು ಬಂಡೆಗಳಿಂದ ಕೂಡಿದ ಮತ್ತು ಉತ್ತರಕ್ಕೆ ಗ್ರಾಮೀಣ ದೃಶ್ಯಾವಳಿಗಳು ಕಾಣುವಂತೆ ವಿನ್ಯಾಸಗೊಳಿಸಲಾಗಿದೆ.

ರೇಷ್ಮೆ ನಗರಿ
ಸಾವಿರಾರು ವರ್ಷಗಳಿಂದ ಸುಝೋ ನಗರದ ಜನರು ಅದ್ಭುತವಾದ ರೇಷ್ಮೆ ಬಟ್ಟೆಗಳನ್ನು ತಯಾರಿಸುವ ಕೌಶಲಗಳನ್ನು ಕರಗತ ಮಾಡಿಕೊಂಡಿದ್ದರು ಎಂದು ಹೇಳಲಾಗುತ್ತಿದೆ. 4,700 ವರ್ಷಗಳ ಹಿಂದೆ ಇಲ್ಲಿ ರೇಷ್ಮೆ ಉಪಯೋಗದಲ್ಲಿತ್ತು ಎಂದು ಉತ್ಖನನದ ವೇಳೇ ದೊರೆತ ಅವಶೇಷಗಳಿಂದ ಸಾಬೀತು ಪಡಿಸಲಾಗಿದೆ. ಹೀಗಾಗಿ ಸುಝೋ ನಗರವನ್ನು ಸಿಲ್ಕ್ ಸಿಟಿ ಎಂದು ಕರೆಯುವುದಲ್ಲದೆ ಇಲ್ಲಿ ಸಿಲ್ಕ್ ರೋಡ್‌ ಇತ್ತು ಎಂದು ಹೇಳಲಾಗುತ್ತಿದೆ. 1991ರಲ್ಲಿ ನಿರ್ಮಿಸಲಾದ ಸುಝೋ ಸಿಲ್ಕ್ ಮ್ಯೂಸಿಯಂ ಚೀನದಲ್ಲಿ ರೇಷ್ಮೆಯ ಕುರಿತಾದ ಮೊದಲ ವಸ್ತು ಸಂಗ್ರಹಾಲಯವಾಗಿದೆ. ಇಲ್ಲಿ ಚೀನದ 7000 ವರ್ಷಗಳ ರೇಷ್ಮೆ ಇತಿಹಾಸವನ್ನು ತಿಳಿದುಕೊಳ್ಳಬಹುದು, ರೇಷ್ಮೆ ಹುಳುಗಳ ಜೀವನ, ಸಾಂಪ್ರದಾಯಿಕ ರೇಷ್ಮೆ ನೇಯ್ಗೆ ಕೌಶಲವನ್ನು ವೀಕ್ಷಿಸಬಹುದು.

ಹೀಗೆ ಚೀನದ ಪ್ರವಾಸದ ವೇಳೆ ಹಲವಾರು ವಿಷಯಗಳನ್ನು ತಿಳಿದುಕೊಳ್ಳುವ ಅವಕಾಶ ನಮಗೆ ಒದಗಿಬಂತು. ಚೀನದ ಹಳೆಯ ಚಲನಚಿತ್ರಗಳಲ್ಲಿ ಚೀನದ ಸಾಂಪ್ರದಾಯಿಕ ಊರುಗಳು, ಕಟ್ಟಡಗಳನ್ನು ನೋಡಿದ್ದ ನಮಗೆ ಪ್ರತ್ಯಕ್ಷವಾಗಿ ಸುಝೋದಲ್ಲಿ ಅಂತಹ ಸ್ಥಳಗಳನ್ನು ಕಾಣುವಂತಾಯಿತು. ಒಂದೆಡೆ ಗಗನಚುಂಬಿ ಆಧುನಿಕ ಕಟ್ಟಡಗಳು, ಮೆಟ್ರೋ ರೈಲು, ಮೋನೋ ರೈಲ್‌ , ಎಕ್ಸ್‌ಪ್ರೆಸ್‌ ಹೆದ್ದಾರಿ, ದೊಡ್ಡದಾದ ಫ್ಲೈ ಓವರ್‌ಗಳು ಮತ್ತೂಂದೆಡೆ ಸಾಂಪ್ರದಾಯಿಕ ಶೈಲಿಯ ಪುರಾತನ ನಗರ ಜೀವನವನ್ನು ಕಣ್ತುಂಬಿಕೊಳ್ಳುವ ಅನುಭವಾಯಿತು.

*ಪಿ.ಎಸ್‌.ರಂಗನಾಥ, ಮಸ್ಕತ್‌

 

ಟಾಪ್ ನ್ಯೂಸ್

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

NANGI-KADALKORETA

Nangi: ತೀವ್ರಗೊಂಡ ಕಡಲ್ಕೊರೆತ… ಬೀಚ್‌ ವ್ಯೂ ರೆಸಾರ್ಟ್‌ ಸಮುದ್ರ ಪಾಲಾಗುವ ಸಾಧ್ಯತೆ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara:ತವರು ಮನೆ ಮಿಲನದ ಸಂಭ್ರಮ: ಕುಟುಂಬ, ಸಂಬಂಧದ ಮೌಲ್ಯವನ್ನು ತಿಳಿಸಿದ ಭೇಟಿ

Desi Swara:ತವರು ಮನೆ ಮಿಲನದ ಸಂಭ್ರಮ: ಕುಟುಂಬ, ಸಂಬಂಧದ ಮೌಲ್ಯವನ್ನು ತಿಳಿಸಿದ ಭೇಟಿ

Desi Swara: “ಆದ್ಯ ಪೂಜ್ಯ’ ಗಣೇಶನ ಅಷ್ಟ ಅವತಾರಗಳ ವಿಭಿನ್ನ, ಮನಮೋಹಕ ಪ್ರಸ್ತುತಿ

Desi Swara: “ಆದ್ಯ ಪೂಜ್ಯ’ ಗಣೇಶನ ಅಷ್ಟ ಅವತಾರಗಳ ವಿಭಿನ್ನ, ಮನಮೋಹಕ ಪ್ರಸ್ತುತಿ

Desi Swara: ಕ್ಷಮೆ ಕೇಳುವುದು ಹಿರಿದೋ? ಕ್ಷಮಿಸುವುದು ಹಿರಿದೋ?

Desi Swara: ಕ್ಷಮೆ ಕೇಳುವುದು ಹಿರಿದೋ? ಕ್ಷಮಿಸುವುದು ಹಿರಿದೋ?

Desi Swara: ವೈಯಕ್ತಿಕ ಸಂತೋಷ ಸದಾ ಜೀವಂತವಾಗಿರಲಿ

Desi Swara: ವೈಯಕ್ತಿಕ ಸಂತೋಷ ಸದಾ ಜೀವಂತವಾಗಿರಲಿ

Desi Swara: ಸುಮಧುರ ಸಂಗೀತ ಸಂಜೆ: ಮಲ್ಹಾರ್‌ 2.0 ಕಾರ್ಯಕ್ರಮ

Desi Swara: ಸುಮಧುರ ಸಂಗೀತ ಸಂಜೆ: ಮಲ್ಹಾರ್‌ 2.0 ಕಾರ್ಯಕ್ರಮ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.