ಅಳಿಯನೇ ಪಕ್ಷದ ಅಭ್ಯರ್ಥಿಯಾಗಿರುವಾಗ ಭಿನ್ನಮತದ ಮಾತೆಲ್ಲಿ: ಕಾಗೋಡು ಪ್ರಶ್ನೆ


Team Udayavani, Mar 29, 2023, 4:19 PM IST

KAGODU

ಸಾಗರ: ಅಳಿಯ ಗೋಪಾಲಕೃಷ್ಣ ಬೇಳೂರು ಪರವಾಗಿ ಕ್ಷೇತ್ರದಾದ್ಯಂತ ಪ್ರಚಾರ ನಡೆಸಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸುವುದೇ ನನ್ನ ಮುಂದಿರುವ ಗುರಿ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ತಿಳಿಸಿದರು.

ಇಲ್ಲಿನ ಜೋಸೆಫ್ ನಗರದಲ್ಲಿ ಬುಧವಾರ ಕಾಂಗ್ರೆಸ್ ಅಭ್ಯರ್ಥಿ ಬೇಳೂರು ತಮ್ಮ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಆಶೀರ್ವಾದ ಮಾಡಿದ ನಂತರ ಪತ್ರಕರ್ತರ ಜೊತೆ ಮಾತನಾಡಿದ ಅವರು, ಪಕ್ಷದ ವಿರುದ್ಧ ಬಂಡಾಯ ಎದ್ದಿರುವವರ ಕಾಲು ಹಿಡಿದು ಪಕ್ಷದ ಪರವಾಗಿ ಕೆಲಸ ಮಾಡುವಂತೆ ಮನವಿ ಮಾಡಲಾಗುತ್ತದೆ ಎಂದು ಹೇಳಿದರು.
ಕ್ಷೇತ್ರವ್ಯಾಪ್ತಿಯಲ್ಲಿ ಅಭಿವೃದ್ಧಿ ನಿಂತ ನೀರಾಗಿದೆ. ಗಣಪತಿ ಕೆರೆ ಒಂದು ದಂಡೆ ಮಾತ್ರ ಅಭಿವೃದ್ಧಿಯಾಗಿದ್ದು ಅದನ್ನೇ ಪರಿಪೂರ್ಣ ಅಭಿವೃದ್ಧಿ ಎಂದು ಶಾಸಕ ಹಾಲಪ್ಪ ಬಿಂಬಿಸುವ ಪ್ರಯತ್ನ ಮಾಡುತ್ತಿದ್ದಾರೆ. ಬೇಳೂರು ಪಕ್ಷದಿಂದ ಟಿಕೇಟ್ ಪಡೆದು ಬಂದಿದ್ದು ಸಂತೋಷ ತಂದಿದೆ. ಜನರಲ್ಲಿ, ಕಾರ್ಯಕರ್ತರಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಬೇಕು ಎನ್ನುವ ಉತ್ಸಾಹ ಇದೆ. ಕಾಂಗ್ರೇಸ್ ಪಕ್ಷ ನನ್ನ ಮಾತೃಪಕ್ಷ ಜೊತೆಗೆ ನನ್ನ ಅಳಿಯನೇ ಅಭ್ಯರ್ಥಿ ಆಗಿರುವುದರಿಂದ ಶತಾಯಗತಾಯ ಗೆಲ್ಲಿಸಲು ಪ್ರಯತ್ನಿಸುತ್ತೇನೆ ಎಂದು ಹೇಳಿದರು.

ಅಭ್ಯರ್ಥಿ ಗೋಪಾಲಕೃಷ್ಣ ಬೇಳೂರು ಮಾತನಾಡಿ, ಕಾಂಗ್ರೆಸ್ ಭೀಷ್ಮ ಇಲ್ಲಿರುವಾಗ ಗೆಲುವು ಸುಲಭ. ಪಕ್ಷದಲ್ಲಿ ಟಿಕೆಟ್‌ಗೆ ಸಂಬಂಧಪಟ್ಟ ಸಣ್ಣಪುಟ್ಟ ಗೊಂದಲ ಇದ್ದು ಅದನ್ನು ಕುಳಿತು ಮಾತನಾಡಿ ಬಗೆಹರಿಸಿಕೊಳ್ಳುತ್ತೇವೆ. ಕ್ಷೇತ್ರವ್ಯಾಪ್ತಿಯಲ್ಲಿ ಕಾಗೋಡು ಮತ್ತು ನಾನು ತಂದ ಕಾಮಗಾರಿಗಳನ್ನು ತಾವೇ ತಂದಿದ್ದು ಎಂದು ಶಾಸಕರು ಬಿಂಬಿಸಿಕೊಳ್ಳುವ ಪ್ರಯತ್ನ ನಡೆಸುತ್ತಿದ್ದಾರೆ. ಕುಡಿಯುವ ನೀರು, ಮಿನಿ ವಿಧಾನಸೌಧ ಕಾಗೋಡು ಮತ್ತು ನನ್ನ ಅವಧಿಯಲ್ಲಿ ತಂದದ್ದು, 70ಕೋಟಿ ರೂ. ಶರಾವತಿ ನೀರು ಸಾಗರಕ್ಕೆ ತರುವ ಯೋಜನೆ ಜಾರಿಗೆ ತರಲಾಗಿತ್ತು. ಈತನಕ ಗ್ರಾಮೀಣ ಭಾಗಕ್ಕೆ ನೀರು ಕೊಡಲು ಇವರ ಕೈನಲ್ಲಿ ಸಾಧ್ಯವಾಗಿಲ್ಲ ಎಂದು ದೂರಿದರು.

ಜನರಿಗೆ ಒಂದು ನಿವೇಶನವನ್ನು ಹಾಲಿ ಶಾಸಕರು ಕೊಟ್ಟಿಲ್ಲ. ರಸ್ತೆ ಮಾಡಿದ್ದೇವೆ ಎಂದು ಪ್ರಚಾರ ಪಡೆಯುತ್ತಿದ್ದು ಕೇವಲ 100 ರಿಂದ 300ಮೀ. ರಸ್ತೆ ಮಾಡಿದ್ದೇ ಸಾಧನೆಯಲ್ಲ. ಸಾಗರವನ್ನು ಗೋವಾ ಮಾಡುವ ಕೆಲಸದಲ್ಲಿ ಶಾಸಕರು ನಿರತರಾಗಿದ್ದು, ಗಣಪತಿ ಕೆರೆಯನ್ನು ಈಜುಕೊಳ ಮಾಡಿ ಅದಕ್ಕೊಂದು ಕ್ರೂಸ್ನರ್ ಬಿಟ್ಟರೆ ಪ್ರವಾಸಿಗರು ಗೋವಾಕ್ಕೆ ಹೋಗುವುದೇ ಬೇಡ ಎಂದು ವ್ಯಂಗ್ಯವಾಗಿ ನುಡಿದ ಬೇಳೂರು ಹಾಲಪ್ಪ ಅವಧಿಯಲ್ಲಿ ಯಾವ ಪ್ರವಾಸಿ ಕ್ಷೇತ್ರವೂ ಅಭಿವೃದ್ಧಿಯಾಗಿಲ್ಲ ಎಂದು ಹೇಳಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪ್ರಮುಖರಾದ ಬಿ.ಎ.ಇಂದೂಧರ ಗೌಡ, ತಾರಾಮೂರ್ತಿ, ಡಿ.ದಿನೇಶ್, ಅಶೋಕ ಬೇಳೂರು, ಮಹಾರಾಜ ಕೆಳದಿ, ಗಣಪತಿ ಮಂಡಗಳಲೆ, ಮೈಕೆಲ್ ಡಿಸೋಜ ಇನ್ನಿತರರು ಹಾಜರಿದ್ದರು.

ಟಾಪ್ ನ್ಯೂಸ್

Delay in compensation, seizure of items in the Minor Irrigation Department

Dharwad: ಪರಿಹಾರ ವಿಳಂಬ, ಸಣ್ಣ ನೀರಾವರಿ ಇಲಾಖೆಯಲ್ಲಿನ ವಸ್ತುಗಳು ಜಪ್ತಿ

Basanagowda-Yatnal

BJP: ಕೇಂದ್ರ ಶಿಸ್ತು ಸಮಿತಿ ನೋಟಿಸ್​​ಗೆ ಉತ್ತರ ಕೊಟ್ಟ ಶಾಸಕ ಬಸನಗೌಡ ಯತ್ನಾಳ್‌

Yadagiri: ವಿದ್ಯಾರ್ಥಿಗಳಿಂದ ಚರಂಡಿ ಸ್ವಚ್ಛತೆ: ಆಕ್ರೋಶ

Yadagiri: ವಿದ್ಯಾರ್ಥಿಗಳಿಂದ ಚರಂಡಿ ಸ್ವಚ್ಛತೆ: ಆಕ್ರೋಶ

14-uv-fusion

Bhagavad Gita: ಪ್ರಜಾಪ್ರಭುತ್ವ ಸಂಪೂರ್ಣ ಸಾಕಾರಗೊಳ್ಳಲು ಪ್ರತಿಯೊಬ್ಬನಿಗೂ ಭಗವದ್ಗೀತೆ

13-uv-fusion

UV Fusion: ತೆರೆಯಲು ಬಯಸದ ಮನದ ಪುಟ!

Mangaluru: ಮಗುವಿನ ಗಂಟಲಲ್ಲಿ ಸಿಲುಕಿದ್ದ ಕ್ಯಾಂಡಿ ಹೊರತೆಗೆದ ವೈದ್ಯರು

Mangaluru: ಮಗುವಿನ ಗಂಟಲಲ್ಲಿ ಸಿಲುಕಿದ್ದ ಕ್ಯಾಂಡಿ ಹೊರತೆಗೆದ ವೈದ್ಯರು

Precautionary measures to prevent load shedding this time: Minister K.J. George

Electricity: ಈ ಬಾರಿ ಲೋಡ್‌ ಶೆಡ್ಡಿಂಗ್‌ ಆಗದಂತೆ ಮುಂಜಾಗೃತಾ ಕ್ರಮ: ಸಚಿವ ಕೆ.ಜೆ. ಜಾರ್ಜ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭೀಕರ ಅಪಘಾತ: ಎರಡು ಕಾರುಗಳು ನುಜ್ಜುಗುಜ್ಜು, ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ಭೀಕರ ಅಪಘಾತ: ಎರಡು ಕಾರುಗಳು ನುಜ್ಜುಗುಜ್ಜು, ಪವಾಡ ಸದೃಶ್ಯ ರೀತಿಯಲ್ಲಿ ಪಾರಾದ ಪ್ರಯಾಣಿಕರು

Madhu-Bangarappa1

ನಾವು ಕಾನ್ವೆಂಟ್‌ನಲ್ಲಿ ಓದಿದವರು ಕನ್ನಡದ ಬಗ್ಗೆ ತಿಳಿವಳಿಕೆ ಇಲ್ಲ: ಶಿಕ್ಷಣ ಸಚಿವ ಮಧು

10(1

Anandapura:ಮನೆಗೆ ಆಕಸ್ಮಿಕ ಬೆಂಕಿ; ಅಪಾರ ನಷ್ಟ; ಶಾಸಕ ಗೋಪಾಲಕೃಷ್ಣ ಬೇಳೂರು ಸ್ಥಳಕ್ಕೆ ಭೇಟಿ

8

Hosanagara: ಶ್ರೀಗಂಧ ಮರದ ತುಂಡುಗಳ ಸಾಗಾಟ; ಇಬ್ಬರ ಬಂಧನ

Shivamogga: ಹೊಟೇಲ್‌ನಲ್ಲಿ ಯುವಕ, ಯುವತಿಯ ವಿಡಿಯೋ ತೆಗೆದು ಕಿಡ್ನಾಪ್… ಹಣಕ್ಕೆ ಬೇಡಿಕೆ

Shivamogga: ಹೊಟೇಲ್‌ನಲ್ಲಿ ಯುವಕ, ಯುವತಿಯ ವಿಡಿಯೋ ತೆಗೆದು ಕಿಡ್ನಾಪ್… ಹಣಕ್ಕೆ ಡಿಮಾಂಡ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Delay in compensation, seizure of items in the Minor Irrigation Department

Dharwad: ಪರಿಹಾರ ವಿಳಂಬ, ಸಣ್ಣ ನೀರಾವರಿ ಇಲಾಖೆಯಲ್ಲಿನ ವಸ್ತುಗಳು ಜಪ್ತಿ

Basanagowda-Yatnal

BJP: ಕೇಂದ್ರ ಶಿಸ್ತು ಸಮಿತಿ ನೋಟಿಸ್​​ಗೆ ಉತ್ತರ ಕೊಟ್ಟ ಶಾಸಕ ಬಸನಗೌಡ ಯತ್ನಾಳ್‌

15-yellapur

Yellapur: ಕಂದಕಕ್ಕೆ ಬಿದ್ದ ಸರಕು ತುಂಬಿದ ಲಾರಿ; ಚಾಲಕ ಹಾಗೂ ನಿರ್ವಾಹಕ ಪಾರು

Manipal: ಫೆ.21, 22ರಂದು 6 ನೇ ರಾಷ್ಟ್ರೀಯ ಸಮ್ಮೇಳನ

Manipal: ಮಾಹೆ; ಆಧುನಿಕ ಗ್ರಂಥಾಲಯಗಳ ನಿರ್ವಹಣೆ: ಫೆ. 21, 22: 6ನೇ ರಾಷ್ಟ್ರೀಯ ಸಮ್ಮೇಳನ

Yadagiri: ವಿದ್ಯಾರ್ಥಿಗಳಿಂದ ಚರಂಡಿ ಸ್ವಚ್ಛತೆ: ಆಕ್ರೋಶ

Yadagiri: ವಿದ್ಯಾರ್ಥಿಗಳಿಂದ ಚರಂಡಿ ಸ್ವಚ್ಛತೆ: ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.