Calcutta ಆಸ್ಪತ್ರೆಗೆ ನುಗ್ಗಿ ದಾಂಧಲೆ ನಡೆಸಿದ ಪ್ರಕರಣ-ಕೋಲ್ಕತಾ ಹೈಕೋರ್ಟ್ ಕೆಂಡಾಮಂಡಲ…
ರಾಜ್ಯ ಸರ್ಕಾರದ ಆಡಳಿತ ವೈಫಲ್ಯಕ್ಕೆ ಸಾಕ್ಷಿಯಾಗಿದೆ ಎಂದು ಛೀಮಾರಿ
Team Udayavani, Aug 16, 2024, 6:13 PM IST
ಕೋಲ್ಕತಾ: ಪಶ್ಚಿಮಬಂಗಾಳದ ಆರ್ ಜಿ ಕರ್ ಮೆಡಿಕಲ್ ಆಸ್ಪತ್ರೆಗೆ ಸಾವಿರಾರು ಮಂದಿ ನುಗ್ಗಿ ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ ಕೋಲ್ಕತಾ ಹೈಕೋರ್ಟ್ ಶುಕ್ರವಾರ (ಆಗಸ್ಟ್ 16) ರಾಜ್ಯ ಸರ್ಕಾರದ ಆಡಳಿತ ವೈಖರಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
ಆಗಸ್ಟ್ 9ರಂದು 31 ವರ್ಷದ ಟ್ರೈನಿ ವೈದ್ಯೆಯ ಮೇಲೆ ಅತ್ಯಾಚಾರ ಎಸಗಿ, ಹತ್ಯೆಗೈದ ಘಟನೆ ಖಂಡಿಸಿ ಪ್ರತಿಭಟನೆ ನಡೆಯುತ್ತಿದ್ದ ಸಂದರ್ಭದಲ್ಲಿ ಆಸ್ಪತ್ರೆ ಆವರಣದೊಳಕ್ಕೆ ಗುಂಪೊಂದು ನುಗ್ಗಿ ದಾಂಧಲೆ ನಡೆಸಿದ ಪ್ರಕರಣದ ಬಗ್ಗೆ ಹೈಕೋರ್ಟ್ ಚೀಫ್ ಜಸ್ಟೀಸ್ ಟಿಎಸ್ ಶಿವಜ್ಞಾನಂ ಮತ್ತು ಜಸ್ಟೀಸ್ ಎಚ್.ಭಟ್ಟಾಚಾರ್ಯ ಅವರನ್ನೊಳಗೊಂಡ ಪೀಠ ವಿಚಾರಣೆ ನಡೆಸಿತ್ತು.
ಪಶ್ಚಿಮಬಂಗಾಳ ಸರ್ಕಾರದ ಪರ ವಕೀಲರು, ಧ್ವಂಸಗೊಳಿಸಿದ ಘಟನೆ ವೇಳೆ ಕನಿಷ್ಠ 7 ಸಾವಿರ ಜನರು ಅಲ್ಲಿರುವುದಾಗಿ ಪೀಠಕ್ಕೆ ಮಾಹಿತಿ ನೀಡಿದ್ದರು. ಆಗ ಕೋರ್ಟ್, ಒಂದು ವೇಳೆ ಏಳು ಸಾವಿರ ಜನ ಬಂದಿದ್ದರೆ, ಅವರು ನಡೆದುಕೊಂಡು ಬಂದಿಲ್ಲವೇ ಎಂದು ಕಟುವಾಗಿ ಪ್ರಶ್ನಿಸಿ, ಇದೊಂದು ರಾಜ್ಯ ಸರ್ಕಾರದ ಆಡಳಿತ ವೈಫಲ್ಯಕ್ಕೆ ಸಾಕ್ಷಿಯಾಗಿದೆ ಎಂದು ಛೀಮಾರಿ ಹಾಕಿತ್ತು.
ದೊಡ್ಡ ಪ್ರಮಾಣದಲ್ಲಿ ಜನರು ಸೇರುತ್ತಾರೆ ಎಂದಾದಲ್ಲಿ ಆ ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಅಲ್ಲಿರಬೇಕು. ಒಂದು ವೇಳೆ 7,000 ಜನರು ನುಗ್ಗುತ್ತಾರೆಂದರೆ, ಇದನ್ನು ನಂಬಲು ಕಷ್ಟವಾಗುತ್ತಿದೆ. ಇದು ರಾಜ್ಯ ಸರ್ಕಾರದ ಪ್ರಮಾದವಲ್ಲವೇ ಎಂದು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
West Bengal: ಪ್ರವಾಹ ಪರಿಸ್ಥಿತಿ ಅವಲೋಕಿಸಲು ಹೋದ ಸಂಸದರು, ಶಾಸಕರಿದ್ದ ದೋಣಿ ಪಲ್ಟಿ
ಪ್ರತೀ ಪೇಜರ್ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್ನ ಮೊಸಾದ್?
Mohana Singh: ತೇಜಸ್ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್ ಆಗಿ ಮೋಹನಾ ಸಿಂಗ್ ನೇಮಕ
Laddoo: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು… YSR ಕಾಂಗ್ರೆಸ್ ವಿರುದ್ಧ ನಾಯ್ಡು ಆರೋಪ
Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್
Kundapura: ಗಾಂಧಿ ಮೈದಾನದಲ್ಲಿ ಸಮಸ್ಯೆಗಳದ್ದೇ ಆಟ!
ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು
Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ
Bajpe ಬಸ್ ನಿಲ್ದಾಣ ಕಟ್ಟಡ ಪೂರ್ಣ; 90 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.