ಅಬುಧಾಬಿಯ ಹಿಂದೂ ಮಂದಿರ: ಅನುಪಯುಕ್ತ ವಸ್ತುಗಳಿಂದ ಆಕರ್ಷಕ ಕಲಾಕೃತಿಗಳ ಸೃಷ್ಟಿ


Team Udayavani, Mar 16, 2024, 6:15 PM IST

ಅಬುಧಾಬಿಯ ಹಿಂದೂ ಮಂದಿರ: ಅನುಪಯುಕ್ತ ವಸ್ತುಗಳಿಂದ ಆಕರ್ಷಕ ಕಲಾಕೃತಿಗಳ ಸೃಷ್ಟಿ

ಅರಬ್‌ ಸಂಯುಕ್ತ ಸಂಸ್ಥಾನದ ಅಬುಧಾಬಿಯಲ್ಲಿ, ಬೋಚಸನ್ವಾಸಿ ಅಕ್ಷರ ಪುರುಶೋತ್ತಮ್‌ ಸ್ವಾಮಿನಾರಾಯಣ್‌ ಸಂಸ್ಥಾ (ಬಿ.ಎ.ಪಿ.ಎಸ್‌.) ಹಿಂದೂ ಮಂದಿರ 2024 ಫೆಬ್ರವರಿ 14ನೇ ತಾರೀಕಿನಂದು ಭಾರತದ ಪ್ರಧಾನಿ ನರೇಂದ್ರ ಮೋದಿಯವರಿಂದ ಉದ್ಘಾಟನೆಯಾಯಾಗಿದೆ. ಬೃಹತ್‌ ಜಾಗದಲ್ಲಿ ನಿರ್ಮಿತವಾಗಿರುವ ಈ ಮಂದಿರ ತನ್ನ ಕಲಾಕೃತಿ, ಶಿಲ್ಪಕಲೆಯಿಂದಲೂ ಎಲ್ಲರ ಗಮನ ಸೆಳೆದಿದೆ. ಈ ಮಂದಿರದಲ್ಲಿ ಕಾಣಸಿಗುವ ಕೆಲವು ಆಕರ್ಷಕ ಕಲಾಕೃತಿಗಳ ಹಿಂದೆ ಕಥೆಯೇ ಇದೆ.

ನಮಗೆ ಬೇಡವಾದ ವಸ್ತುಗಳನ್ನು, ಬಳಸದೇ ಇರುವ ಸಾಮಾಗ್ರಿಗಳನ್ನು ನಾವು ಎಸೆದು ಬಿಡುತ್ತೇವೆ. ಇಂತಹ ವಸ್ತುಗಳನ್ನು ಮರುಬಳಕೆ ಮಾಡಿ, ಅದನ್ನು ಉಪಯುಕ್ತವನ್ನಾಗಿಸುವ ಹೊಸ ವಿಧಾನಗಳು ಈಗ ಬಂದಿವೆ. ಈ ಮಂದಿರದಲ್ಲೂ ಅನುಪಯುಕ್ತ ವಸ್ತುಗಳಿಂದ ತಯಾರಿಸಿದ ವಿಶಿಷ್ಟ ಕಲಾಕೃತಿಗಳು ಭೇಟಿ ನೀಡುವವರ ಗಮನ ಸೆಳೆಯುತ್ತದೆ. ಇಂತಹ ವಸ್ತುಗಳಿಂದ ಒಂದು ಫುಡ್‌ಕೋರ್ಟ್‌ ಅನ್ನೇ ನಿರ್ಮಿಸಲಾಗಿದೆ. ಈ ಕಾರ್ಯದಲ್ಲಿ ವಿದ್ಯಾರ್ಥಿಗಳು, ಮಕ್ಕಳು ಕೈಜೋಡಿಸಿದ್ದು, ಅವರ ಕೈಗಳಿಂದ ಮೂಡಿರುವ ಕಲಾತ್ಮಕ ಕಲಾಕೃತಿಗಳು ಕಾಣಸಿಗುತ್ತವೆ. ಇಲ್ಲಿ ಕೆತ್ತಲಾಗಿರುವ ಶಿಲ್ಪಕಲೆಗಳಿಗೆ ಬಳಸಲಾದ ಕಲ್ಲುಗಳನ್ನು ಭಾರತದ ಶಿಲೆಗಳಿಂದಲೇ ಕೆತ್ತಲಾಗಿದೆ. ಅಲ್ಲದೇ ಭಾರತದಲ್ಲೇ ಹಲವು ಶಿಲ್ಪಕಲಾಕೃತಿಗಳನ್ನು ಕೆತ್ತಲಾಗಿದ್ದು, ಅದನ್ನು ಅನಂತರ ಭಾರತದಿಂದ ಅಬುಧಾಬಿಗೆ ರವಾನಿಸಲಾಗಿದೆ.

ಅರಬ್‌ ಸಂಯುಕ್ತ ಸಂಸ್ಥಾನದಲ್ಲಿ 27 ಎಕ್ರೆ ಭೂಮಿಯನ್ನು ಶೇಖ್‌ ಮನೆತನದ ದೊರೆಗಳು ಅಬುಧಾಬಿ ಅಂದಿನ ಕ್ರೌನ್‌ ಪ್ರಿನ್ಸ್‌ ಪ್ರಸ್ತುತ ಯು.ಎ.ಇ ಅಧ್ಯಕ್ಷರಾಗಿರುವ ಗೌರವಾನ್ವಿತ ಶೇಖ್‌ ಮಹ್ಮದ್‌ ಬಿನ್‌ ಝಾಯಿದ್‌ ಅಲ್‌ ನಯ್ನಾನ್‌ ಉಡುಗೊರೆಯಾಗಿ ನೀಡಿದ್ದರು. ಇದೀಗ ಸಂಪೂರ್ಣವಾಗಿ ನಿರ್ಮಾಣಗೊಂಡಿರುವ ಮಂದಿರ ನಿರ್ಮಾಣದಲ್ಲಿ ಬಳಸಾಗಿರುವ ಶಿಲ್ಪಗಳನ್ನು, ರಾಜಸ್ಥಾನದ ಪಿಂಕ್‌ ಮಾರ್ಬಲ್‌ ಸ್ಯಾಂಡ್‌ ಸ್ಟೋನ್‌, ಇಟಲಿಯ ವೈಟ್‌ ಮಾರ್ಬಲ್‌ ಶಿಲ್ಪಾಕೃತಿಗಳನ್ನು ಶಿಲ್ಪಿಗಳು ಮರದ ಹಲಗೆಯ ಪೆಟ್ಟಿಗೆಗಳನ್ನು ಮತ್ತು ಪ್ಯಾಲೆಟ್‌ಗಳನ್ನು ಬಳಸಿ ರಾಜಸ್ಥಾನದಿಂದ ಹಡಗಿನ ಮೂಲಕ ಅಬುಧಾಬಿಗೆ ಕಳುಹಿಸಿ ಕೊಟ್ಟಿದ್ದರು.

ಶಿಲ್ಪಗಳನ್ನು ಮಂದಿರ ನಿರ್ಮಾಣದಲ್ಲಿ ಬಳಸಿದ ಅನಂತರ ನಿರುಪಯುಕ್ತವಾಗಿದ್ದ ಮರದ ಪೆಟ್ಟಿಗೆ, ಹಲಗೆ, ಪ್ಯಾಲೆಟ್‌ಗಳನ್ನು ಮರು ಬಳಕೆ ಮಾಡಿ ಮಂದಿರದ ಆವರಣದಲ್ಲಿ ಅತ್ಯಂತ ಸುಂದರವಾದ ಸಾತ್ವಿಕ್‌ ಫುಡ್‌ಕೋರ್ಟ್‌ ನಿರ್ಮಿಸಲಾಗಿದೆ. ಒಳಾಂಗಣದಲ್ಲಿ ಆಕರ್ಷಕ ಪೀಠೊಪಕರಣಗಳು ಗಮನ ಸೆಳೆಯುತ್ತಿದೆ.

ಮಂದಿರ ನಿರ್ಮಾಣದಲ್ಲಿ ಬಳಸಲಾಗಿರುವ ಪಿಂಕ್‌ ಮಾರ್ಬಲ್‌ ಮತ್ತು ವೈಟ್‌ ಮಾರ್ಬಲ್‌ನ ಉಳಿದಿದ್ದ ಅನುಪಯುಕ್ತ ಲೋಡ್‌ ಗಟ್ಟಲೆ ಶಿಲಾ ಚೂರುಗಳನ್ನು ಬಳಸಿ ಅದಕ್ಕೆ ಕಲಾತ್ಮಕ ಸ್ಪರ್ಶ ನೀಡಿರುವವರು ಇಂಡಿಯನ್‌ ಸ್ಕೂಲ್‌ನ ನೂರಾರು ವಿದ್ಯಾರ್ಥಿಗಳು. ರಜಾ ದಿನದ ಪ್ರತೀ ರವಿವಾರದಂದು ಮಂದಿರದ ಅವರಣದಲ್ಲಿ ರಾಶಿ ಬಿದ್ದಿರುವ ಶಿಲಾ ಚೂರುಗಳನ್ನು ಸಂಗ್ರಹಿಸಿ ಅದಕ್ಕೆ ಪಾಲಿಶ್‌ ಮಾಡಿ ನಯಗೊಳಿಸಿ ಅದಕ್ಕೆ ಮೇಲೆ ಪ್ರೈಮರ್‌ ಲೇಪನ ಮಾಡಿ ಅದರ ಮೇಲೆ ಸುಂದರ ಚಿತ್ರಗಳು, ನಾಣ್ಣುಡಿಯನ್ನು ಮೂಡಿಸಿದ್ದಾರೆ. ಫ್ಯಾಬ್ರಿಕ್‌ ಕಲರ್‌ ಮತ್ತು ಪರ್ಮನೆಂಟ್‌ ಮಾರ್ಕರ್‌ ಬಳಸಿ ವೇದ ವಾಕ್ಯಗಳನ್ನು, ಶಾಂತಿ ಸೌಹಾರ್ದತೆಯ ಸಂದೇಶಗಳನ್ನು ಮಕ್ಕಳು ಮೂರು ತಿಂಗಳಿನಲ್ಲಿ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಕಲಾಕೃತಿಗಳನ್ನು ಮೂಡಿಸಿದ್ದಾರೆ.

2024 ಫೆಬ್ರವರಿ 14ರಂದು ಬಿ.ಎ.ಪಿ.ಎಸ್‌. ಹಿಂದೂ ಮಂದಿರ ಉದ್ಘಾಟನೆಯ ಅನಂತರ ಪ್ರಧಾನಿ ನರೇಂದ್ರ ಮೋದಿಯವರು ಮಕ್ಕಳು ತಮ್ಮ ಹಸ್ತ ಕೌಶಲದಿಂದ ಮೂಡಿಸಿದ್ದ ಶಿಲಾಫ‌ಲಕ ವೀಕ್ಷಿಸಿ ತಮ್ಮ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ಸ್ವತಃ ತಾವೂ ಸಹ ಒಂದು ಅಮೃತ ಶಿಲೆಯ ಮೇಲೆ ಜೈ ಜಗತ್‌ ಎಂದು ಸಂದೇಶವನ್ನು ಬರೆದರು. ಬಿ.ಎ.ಪಿ.ಎಸ್‌. ಹಿಂದೂ ಮಂದಿರದ ಸವಿ ನೆನಪಿಗಾಗಿ ಶಿಲಾ ಸಂದೇಶದ ಸ್ಮರಣಿಕೆಯನ್ನು ಮಾನ್ಯ ಪ್ರಧಾನಿಯವರಿಗೆ ನೀಡಲಾಯಿತು. ಅರಬ್‌ ಸಂಯುಕ್ತ ಸಂಸ್ಥಾನದ ಆಡಳಿತ ಸರಕಾರ ಈ ವರ್ಷವನ್ನು ಯು.ಎ.ಇ. ಇಯರ್‌ ಆಫ್ ಸಸ್ಟೈನಾಬಿಲಿಟಿ (ಸಂರಕ್ಷಣೆ) – 2024 ಎಂದು ಘೋಷಣೆ ಮಾಡಿದೆ. ಇದಕ್ಕೆ ಅನುಗುಣವಾಗಿ ಈ ಸಂದರ್ಭದಲ್ಲಿ ಬಿ.ಎ.ಪಿ.ಎಸ್‌. ಹಿಂದೂ ಮಂದಿರ ಅಬುಧಾಬಿ ಆಡಳಿತ ಸರಕಾರಕ್ಕೆ ತಮ್ಮ ಬೆಂಬಲವನ್ನು ಸಾಕ್ಷೀಕರಿಸಿದೆ.

*ಬಿ. ಕೆ. ಗಣೇಶ್‌ ರೈ, ದುಬೈ

ಟಾಪ್ ನ್ಯೂಸ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.