ABVP Meeting: ದೇಶದ ಕೆಲವು ವಿಶ್ವವಿದ್ಯಾಲಯಗಳಲ್ಲಿ ಸಂಸ್ಕೃತಿ ಹಾನಿಗೆ ಷಡ್ಯಂತ್ರ
ಎಬಿವಿಪಿ ಕರ್ನಾಟಕ ದಕ್ಷಿಣ ಪ್ರಾಂತ ಕಾರ್ಯಕಾರಿಣಿಯಲ್ಲಿ ಬಾಲಕೃಷ್ಣ
Team Udayavani, Sep 22, 2024, 2:16 AM IST
ಮಂಗಳೂರು: ದೇಶದ ಕೆಲವು ವಿಶ್ವವಿದ್ಯಾಲಯಗಳಲ್ಲಿ ಭಾರತೀಯ ಕೌಟುಂಬಿಕ ವ್ಯವಸ್ಥೆ ಹಾಗೂ ಭಾರತೀಯ ಸಂಸ್ಕೃತಿಯನ್ನು ಹಾಳುಗೆಡಹುವ ಷಡ್ಯಂತ್ರ ನಡೆಯುತ್ತಿದೆ. ಈ ಬಗ್ಗೆ ವಿದ್ಯಾರ್ಥಿಗಳು ಎಚ್ಚರ ವಹಿಸಬೇಕು ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ರಾಷ್ಟ್ರೀಯ ಸಹ ಸಂಘಟನ ಕಾರ್ಯದರ್ಶಿ ಎಸ್. ಬಾಲಕೃಷ್ಣ ಹೇಳಿದ್ದಾರೆ.
ಅಳಕೆ ಉಮಾಧಾಮ್ ಸಭಾಂಗಣದಲ್ಲಿ ಶನಿವಾರ ಎಬಿವಿಪಿ ಕರ್ನಾಟಕ ದಕ್ಷಿಣಪ್ರಾಂತ ಕಾರ್ಯಕಾರಿಣಿಯ ಉದ್ಘಾಟನ ಸಮಾರಂಭದಲ್ಲಿ ಮಾತನಾಡಿದ ಅವರು, ಕಮ್ಯೂನಿಸ್ಟ್ ಸಿದ್ಧಾಂತ ಪ್ರೇರಿತವಾದ ಈ ಅಂತಾರಾಷ್ಟ್ರೀಯ ಷಡ್ಯಂತ್ರದ ಬಗ್ಗೆ ವಿದ್ಯಾ ರ್ಥಿಗಳು ಜಾಗ್ರತೆಯಿಂದ ಇರಬೇಕು ಎಂದರು. ಮಹಿಳೆಯರ ಬಗೆಗಿನ ನಿರೂಪಣೆ ಯನ್ನು ಬದಲಿಸುವ, ಸ್ವಾತಂತ್ರ್ಯದ ಹೆಸರಿನಲ್ಲಿ ಸ್ವೇಚ್ಛಾಚಾರಕ್ಕೆ ಆದ್ಯತೆ ನೀಡುವ, ದಲಿತ, ಬುಡಕಟ್ಟು ಜನಾಂಗದ ವಿದ್ಯಾರ್ಥಿ ಗಳನ್ನು ಇತರ ವಿದ್ಯಾರ್ಥಿಗಳ ವಿರುದ್ಧ ಎತ್ತಿ ಕಟ್ಟುವುದೂ ಸೇರಿದಂತೆ ವಿವಿಧ ಷಡ್ಯಂತ್ರ, ಪಿತೂರಿಯ ಒಳಮರ್ಮವನ್ನು ಅರಿತು ವಿದ್ಯಾರ್ಥಿ ಸಮುದಾಯ ಜಾಗೃತ ಗೊಳ್ಳಬೇಕು ಎಂದು ಅವರು ಹೇಳಿದರು.
ಮೊಘಲರು ಭಾರತಕ್ಕೆ ಖಡ್ಗ ಹಿಡಿದು ಬಂದರೆ, ಬ್ರಿಟಿಷರು ಬಂದೂಕು ಹಿಡಿದು ಆಡಳಿತ ನಡೆಸಿದರು. ಈಗ ಕಮ್ಯೂ ನಿಸ್ಟರು, ಕೆಲ ಇಸ್ಲಾಮಿಕ್ ಮೂಲಭೂತ ವಾದಿಗಳಿಂದ ಯುವಜನಾಂಗದ ಮನಸ್ಸಿನ ದಿಕ್ಕು ಬದಲಿಸುವ ಬೆಳವಣಿಗೆಗಳು ನಡೆಯುತ್ತಿವೆ. ಈ ಬಗ್ಗೆ ಯುವ ಸಮೂಹ ಎಚ್ಚರದಿಂದಿರಬೇಕು ಎಂದರು.
ಯುವ ಸಂಪತ್ತಿನ ದೇಶ
ದೇಶದ ಶೇ.65ರಷ್ಟು ಜನರ ಸರಾಸರಿ ವಯಸ್ಸು 28 ವರ್ಷ ಆಗಿದೆ. ಭಾರತ ಈಗ ಯುವ ಸಮೂಹವಿರುವ ಮಾನವ ಸಂಪನ್ಮೂಲ ಒಳಗೊಂಡ ದೇಶ. ದೇಶದ ಅಮೃತ ಕಾಲದಲ್ಲಿ ಭಾರತ ಪ್ರಪಂಚದ ಮೂರನೇ ಆರ್ಥಿಕ ಶಕ್ತಿಯಾಗುವತ್ತ ಮುನ್ನುಗ್ಗುತ್ತಿದೆ ಎಂದು ಹೇಳಿದರು. ಎಬಿವಿಪಿ ಬಹು ಆಯಾ ಮದ ಚಟುವಟಿಕೆಗಳಿಗೆ ಒತ್ತು ನೀಡಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕೆಲಸ ಮಾಡುತ್ತಿದೆ ಎಂದ ಅವರು, ಸಮಾಜ ಪರಿವರ್ತನೆ ಮೂಲಕ ದೇಶವನ್ನು ವಿಶ್ವ ಗುರುವನ್ನಾಗಿಸುವುದು ಇದರ ಗುರಿ ಎಂದರು.
ಎಬಿವಿಪಿ ರಾಜ್ಯ ಉಪಾಧ್ಯಕ್ಷ ಅಜಯ ಕುಮಾರ್, ರಾಜ್ಯ ಕಾರ್ಯದರ್ಶಿ ಪ್ರವೀಣ್ಕುಮಾರ್, ಪ್ರಾಂತ ಸಂಘಟನ ಕಾರ್ಯದರ್ಶಿ ಬಸವೇಶ್ ಕೋರಿ ಉಪಸ್ಥಿತ ರಿದ್ದರು. ವಿವಿಧ ವಿಷಯಗಳ ಬಗ್ಗೆ ಚರ್ಚೆ, ಉಪನ್ಯಾಸ ನಡೆಯಿತು. ಸೆ.22ರಂದು ಕಾರ್ಯಕಾರಿಣಿ ಸಮಾರೋಪಗೊಳ್ಳಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Accident: ಸೌದಿಯಲ್ಲಿ ಅಪಘಾತ: ಉಳ್ಳಾಲದ ತಾಯಿ, ಮಗು ಸಾವು
Legislative Council: ಅಭ್ಯರ್ಥಿ ಆಯ್ಕೆ ಬಗ್ಗೆ ರಾಜ್ಯ ನಾಯಕರಿಂದ ಅಭಿಪ್ರಾಯ ಸಂಗ್ರಹ: ಕುಂಪಲ
Felicitation ceremony: ಡಾ| ನಾ. ಮೊಗಸಾಲೆ ಪ್ರತಿಭೆ, ಪರಿಶ್ರಮ ಅನನ್ಯ: ಡಾ| ಹೆಗ್ಗಡೆ
Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ಪದಾರ್ಥಗಳ ಬಳಕೆ: ಸುಬ್ರಹ್ಮಣ್ಯ ಸ್ವಾಮೀಜಿ ಕಳವಳ
Mangaluru: ಪ್ಯಾನಿಕ್ ಬಟನ್, ಜಿಪಿಎಸ್ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್ ಪ್ರಕರಣ: ಲೋಕಾಯುಕ್ತದಿಂದ ಬಿಎಸ್ವೈ ವಿಚಾರಣೆ
Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ
Congress Government: ದ್ವೇಷದ ರಾಜಕಾರಣಕ್ಕಷ್ಟೇ ಕಾಂಗ್ರೆಸ್ ಸೀಮಿತ: ಆರ್. ಅಶೋಕ್
Udupi: ಜಿಲ್ಲೆಯಲ್ಲಿ ಕಾಲರಾ 8 ಪ್ರಕರಣ ಸಕ್ರಿಯ
Road Accident: ಸೌದಿಯಲ್ಲಿ ಅಪಘಾತ: ಉಳ್ಳಾಲದ ತಾಯಿ, ಮಗು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.