![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Mar 21, 2022, 8:56 PM IST
ವಿಜಯಪುರ : ನಗರದ ಅರ್ಜಿದಾರರೊಬ್ಬರಿಂದ ಖಾತೆಯಲ್ಲಿ ತಮ್ಮ ಹೆಸರು ಸೇರ್ಪಡೆಗೆ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಭೂದಾಖಲೆಗಳ ಇಲಾಖೆಯ ನಗರ ಸರ್ವೇಯರ್ ರವಿ ರಾಮಸಿಂಗ್ ನಾಯ್ಕ ಲಂಚದ ಹಣದ ಸಮೇತ ಎಸಿಬಿ ಬಲೆಗೆ ಬಿದ್ದಾರೆ.
ಉಮರ ಫಾರೂಕ್ ಬಾಂಗಿ ಎಂಬವರು ತಮ್ಮ ತಂದೆ ಇಮಾಮ್ ಖಾಸಿಂ ಬಾಂಗಿ ಅವರು ಮೃತರದ ಕಾರಣ ತಂದೆಯ ಹೆಸರಿನಲ್ಲಿದ್ದ ಮನೆಯನ್ನು ತಮ್ಮ ಹೆರಿಗೆ ದಾಖಲಿಸಲು ನಗರ ಭೂದಾಖಲೆಗಳ ಕಛೇರಿಗೆ ಮಾ.14 ರಂದು ಅರ್ಜಿ ಸಲ್ಲಿಸಿದ್ದರು. ಆದರೆ ಸದರಿ ಅರ್ಜಿಯಂತೆ ವಾರ್ಡ್ ನಂ.6 ರಲ್ಲಿರುವ ಮನೆಯನ್ನು ನಿಮ್ಮ ಹೆಸರಿಗೆ ಮಾಡಲು ಕಛೇರಿ ಖರ್ಚಿನ ವೆಚ್ಚವಾಗಿ 4 ಸಾವಿರ ರೂ, ನೀಡುವಂತೆ ರವಿ ನಾಯ್ಕ ಮಾ.21 ರಂದು ಉಮರ ಅವರಿಗೆ ಕರೆ ಮಾಡಿ ಲಂಚಕ್ಕೆ ಬೇಡಿಕೆ ಇರಿಸಿದ್ದರು.
ಲಂಚ ಕೊಡಲು ಒಪ್ಪದ ಉಮರ್ ಅವರು, ಎಸಿಬಿ ಅಧಿಕಾರಿಗಳಿಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡು ಸೋಮವಾರ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು ಲಂಚದ ಹಣ ಸ್ವೀಕರಿಸುವಾಗಲೇ ಸಿಟಿ ಸರ್ವೇಯರ್ ರವಿ ನಾಯಕ ಎಂಬ ಆರೋಪಿಯನ್ನು ಲಂಚದ ಹಣದ ಸಮೇತ ಬಂಧಿಸಿದ್ದಾರೆ.
ಡಿಎಸ್ಪಿ ಮಂಜುನಾಥ ಗಂಗಲ್ ನೇತೃತ್ವದಲ್ಲಿ ಸಿಪಿಐಗಳಾದ ಚಂದ್ರಕಲಾ, ಪರಮೇಶ್ವರ ಕವಟಗಿ, ಸಿಬ್ಬಂದಿಗಳಾದ ಎ.ಐ.ಶೇಖ್, ಆಶೋಕ ಸಿಂಧೂರ, ಚನ್ನನಗೌಡ ಯಾಳವಾರ, ಸದಾಶಿವ ಕೋಟ್ಯಾಳ, ಮಾಳಪ್ಪ ಸಲಗೊಂಡ, ಮದಸನಿಂಗ್, ಎಸ್.ಎಸ್.ಮುಂಜೆ ಇತರರು ದಾಳಿಯಲ್ಲಿ ಪಾಲ್ಗೊಂಡಿದ್ದರು.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.