Accused of Corruption: ಎಂ.ಬಿ.ಪಾಟೀಲ್‌ ವಿರುದ್ಧವೂ ಖಾಸಗಿ ದೂರು

ಕೆಐಎಡಿಬಿ ಸಿಎ ನಿವೇಶನ ಬೇಕಾಬಿಟ್ಟಿ ಹಂಚಿಕೆ ಆರೋಪ

Team Udayavani, Aug 24, 2024, 6:20 AM IST

MBPatil

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮುಡಾ ಪ್ರಕರಣದ ಬಿಸಿ ಏರುತ್ತಿರುವುದರ ಮಧ್ಯೆಯೇ ಅವರ ಸಂಪುಟ ಸಹೋದ್ಯೋಗಿ, ಬೃಹತ್‌ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ವಿರುದ್ಧವೂ ಈಗ ಭ್ರಷ್ಟಾಚಾರದ ಆರೋಪ ಕೇಳಿ ಬಂದಿದ್ದು, ಅಭಿಯೋಜನೆಗೆ ಪೂರ್ವಾನುಮತಿ ಕೋರಿ ಆರ್‌ಟಿಐ ಹೋರಾಟಗಾರ ದಿನೇಶ್‌ ಕಲ್ಲಹಳ್ಳಿ ರಾಜ್ಯಪಾಲರಿಗೆ ದೂರು ನೀಡಿದ್ದಾರೆ.

ಕೆಐಎಡಿಬಿ ಕೈಗಾರಿಕಾ ಪ್ರದೇಶಗಳಲ್ಲಿ ನಾಗರಿಕ ಸೌಲಭ್ಯಗಳಿಗೆ (ಸಿಎ) ಮೀಸಲಿಟ್ಟ ನಿವೇಶನಗಳನ್ನು ಪಾರದರ್ಶಕವಾಗಿ ಹಂಚಿಕೆ ಮಾಡದೆ ಸಾಮಾನ್ಯ ದರದಲ್ಲಿ ಬೇಕಾಬಿಟ್ಟಿ ಹಂಚಿಕೆ ಮಾಡುವ ಮೂಲಕ ಎಂ.ಬಿ.ಪಾಟೀಲ್‌ ಸರಕಾರದ ಬೊಕ್ಕಸಕ್ಕೆ ನಷ್ಟವನ್ನುಂಟು ಮಾಡಿದ್ದಾರೆ. ಈ ಹಂಚಿಕೆಯಲ್ಲಿ ಅಧಿ ಕಾರ ದುರ್ಬಳಕೆ, ಕ್ರಿಮಿನಲ್‌ ಒಳಸಂಚಿನ ಮೂಲಕ ಭಾರೀ ಪ್ರಮಾಣದ ಭ್ರಷ್ಟಾಚಾರ ಎಸಗಲಾಗಿದೆ. ಹೀಗಾಗಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಸೆಕ್ಷನ್‌ 218, ಭ್ರಷ್ಟಾಚಾರ ನಿಯಂತ್ರಣ ಕಾಯಿದೆ ಸೆಕ್ಷನ್‌ 17(ಎ), 19ರ ಅನ್ವಯ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಿ ಅಭಿಯೋಜನೆ ನಡೆಸಲು ಮಂಜೂರಾತಿ ನೀಡುವಂತೆ ದೂರಿನಲ್ಲಿ ಆಗ್ರಹಿಸಲಾಗಿದೆ.

ಈ ಸಂಬಂಧ ದಿನೇಶ್‌ ಕಲ್ಲಹಳ್ಳಿ ರಾಜಭವನಕ್ಕೆ ತೆರಳಿ, ಆರ್‌ಟಿಐ ಮೂಲಕ ಪಡೆದ ದಾಖಲೆ ಸಮೇತ ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಇಡಿ ರಾಜ್ಯಾದ್ಯಂತ ಸುಮಾರು 95 ಎಕರೆಯಷ್ಟು ಜಾಗ ಈ ಮೂಲಕ ಕಡಿಮೆ ದರದಲ್ಲಿ ಖಾಸಗಿಯವರಿಗೆ ಸ್ವೇಚ್ಛೆಯಿಂದ ಮಾರಾಟ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.

ಸಿಎಂಗೂ ದೂರು ನೀಡಿದ್ದೆ
ದೂರಿನ ಸಂಬಂಧ ಉದಯವಾಣಿ ಜತೆ ಮಾತನಾಡಿದ ದಿನೇಶ್‌ ಕಲ್ಲಹಳ್ಳಿ, ಇದೊಂದು ಬೃಹತ್‌ ಹಗರಣವಾಗಿದ್ದು ಎಲ್ಲ ದಾಖಲೆ ಪತ್ರಗಳನ್ನು ಆರ್‌ಟಿಐ ಮೂಲಕ ಪಡೆದಿದ್ದೇನೆ. ಈ ಬಗ್ಗೆ ಎರಡು ತಿಂಗಳ ಹಿಂದೆ ಸಿದ್ದರಾಮಯ್ಯ ಅವರಿಗೆ ದೂರು ನೀಡಲಾಗಿತ್ತು. ರಾಹುಲ್‌ ಗಾಂಧಿಯವರಿಗೂ ಮಾಹಿತಿ ಕಳುಹಿಸಲಾಗಿತ್ತು. ಆದರೆ ಯಾರೂ ಸೂಕ್ತ ತನಿಖೆ ನಡೆಸಿಲ್ಲ. ಹೀಗಾಗಿ ಸಕ್ಷಮ ಪ್ರಾಧಿಕಾರವಾದ ರಾಜ್ಯಪಾಲರಿಗೆ ದೂರು ನೀಡಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.

ಪಾರದರ್ಶನವಾಗಿಯೇ ನಿವೇಶನ ಹಂಚಿಕೆ: ಸಚಿವ ಎಂ.ಬಿ. ಪಾಟೀಲ್‌
ದಿನೇಶ್‌ ಕಲ್ಲಹಳ್ಳಿ ರಾಜ್ಯಪಾಲರಿಗೆ ನೀಡಿದ ದೂರಿನ ಹಿನ್ನೆಲೆಯಲ್ಲಿ ಬೃಹತ್‌ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್‌ ಸುದೀರ್ಘ‌ ಸ್ಪಷ್ಟನೆ ನೀಡಿದ್ದು ಸಿಎ ನಿವೇಶನಗಳನ್ನು ಅತ್ಯಂತ ಪಾರದರ್ಶಕ ವ್ಯವಸ್ಥೆ ಮೂಲಕ ನಿಯಮಾನುಸಾರ ಹಂಚಿಕೆ ಮಾಡಲಾಗುತ್ತಿದೆ. ನಾಗರಿಕ ಸೌಲಭ್ಯದ (ಸಿಎ) ನಿವೇಶನಗಳನ್ನು ಅರ್ಹ ಸಂಸ್ಥೆಗಳಿಗೆ ಹಂಚಿಕೆ ಮಾಡಲಾಗಿದೆ. ಇದರಲ್ಲಿ ಯಾವ ಅಕ್ರಮವೂ ಆಗಿಲ್ಲ ಎಂದು ಪ್ರತಿಪಾದಿಸಿದ್ದಾರೆ.

ಸಿ.ಎ. ನಿವೇಶನಗಳನ್ನು ಹರಾಜು ಹಾಕುವ ಪದ್ಧತಿಯಿಲ್ಲ. ವಾಣಿಜ್ಯ ಉದ್ದೇಶದ ನಿವೇಶನಗಳನ್ನು ಮಾತ್ರ ಹರಾಜು ಹಾಕಲಾಗುತ್ತದೆ. ಸಿ.ಎ. ನಿವೇಶನಗಳ ಹಂಚಿಕೆಗಾಗಿ ಪತ್ರಿಕೆಗಳಲ್ಲಿ ವ್ಯಾಪಕ ಪ್ರಚಾರ ಕೊಡುವುದರ ಜತೆಗೆ ಇಲಾಖಾ ವೆಬ್‌ಸೈಟ್‌ನಲ್ಲೂ ಪ್ರಕಟಿಸಲಾಗಿದೆ. ವೆಬ್‌ಸೈಟ್‌ನಲ್ಲಿ ಹಾಕುವ ವ್ಯವಸ್ಥೆ ಮೊದಲು ಇರಲಿಲ್ಲ.

ಇದು ಮೊದಲು. ಸಿ.ಎ. ನಿವೇಶನಗಳ ಹಂಚಿಕೆಯನ್ನು ಹಿಂದೆಲ್ಲ ಸರಕಾರದಿಂದ ಅನುಮೋದನೆ ಪಡೆದು ನೇರವಾಗಿ ಮಾಡಲಾಗುತ್ತಿತ್ತು. ಆದರೆ ಈ ಬಾರಿ ಹಂಚಿಕೆ ಹೆಚ್ಚು ಪಾರದರ್ಶಕವಾಗಿ ನಡೆಯಲಿ ಎನ್ನುವ ಕಾರಣಕ್ಕೆ ಮೊದಲು ಸಿ.ಇ.ಒ.ಅಧ್ಯಕ್ಷತೆಯಲ್ಲಿನ ಉಪಸಮಿತಿ ಅರ್ಹತೆಯನ್ನು ಪರಿಶೀಲಿಸಿ ಇಲಾಖಾ ಸಚಿವರ ಅಧ್ಯಕ್ಷತೆಯ ರಾಜ್ಯ ಮಟ್ಟದ ಏಕ ಗವಾಕ್ಷಿ ಸಮಿತಿಗೆ ಶಿಫಾರಸು ಮಾಡಿದ ಅನಂತರ ಈ ರಾಜ್ಯ ಮಟ್ಟದ ಸಮಿತಿ ತೀರ್ಮಾನದ ಮೂಲಕ ಅರ್ಹರಿಗೇ ಹಂಚಿಕೆ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಟಾಪ್ ನ್ಯೂಸ್

sens-2

BSE ಸೆನ್ಸೆಕ್ಸ್‌ 83,000 ಮತ್ತೊಂದು ಮೈಲುಗಲ್ಲು

ಗ್ರಾಮೀಣ ಬಡಜನರ ಬೇಡಿಕೆಗೆ ಸ್ಪಂದಿಸಿದ ಕೇಂದ್ರ ಸರಕಾರ

ಗ್ರಾಮೀಣ ಬಡಜನರ ಬೇಡಿಕೆಗೆ ಸ್ಪಂದಿಸಿದ ಕೇಂದ್ರ ಸರಕಾರ

Subhra-Swamy

Mangaluru Visit: ಇಂದು ಡಾ. ಸುಬ್ರಮಣಿಯನ್‌ ಸ್ವಾಮಿ ಮಂಗಳೂರಿಗೆ

aane

Sulya: ಆಲೆಟ್ಟಿ: ಕಾಡಾನೆ ದಾಳಿ ಪ್ರದೇಶಕ್ಕೆ ಅರಣ್ಯಾಧಿಕಾರಿ ಭೇಟಿ

Mangaluru-BjP

Nagamangala Riots: ಕದ್ರಿ: ಗಣೇಶೋತ್ಸವ ಸಮಿತಿಗಳ ಒಕ್ಕೂಟದಿಂದ ಪ್ರತಿಭಟನೆ

udUdupi ಗೀತಾರ್ಥ ಚಿಂತನೆ-34: ಸ್ವಕರ್ಮ, ಸ್ವಧರ್ಮ: ಉತ್ಪಾದನೆಯ ಮರ್ಮ

Udupi ಗೀತಾರ್ಥ ಚಿಂತನೆ-34: ಸ್ವಕರ್ಮ, ಸ್ವಧರ್ಮ: ಉತ್ಪಾದನೆಯ ಮರ್ಮ

PROTEST

Udupi: ನಾಗಮಂಗಲ ಘಟನೆ ಖಂಡಿಸಿ ವಿವಿಧೆಡೆ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಉಪಾಹಾರ ಕೂಟ ನಿಗದಿ ಮಾಡಿ ರದ್ದುಗೊಳಿಸಿದ ಸಿಎಂ ಸಿದ್ದರಾಮಯ್ಯ

Congress ಉಪಾಹಾರ ಕೂಟ ನಿಗದಿ ಮಾಡಿ ರದ್ದುಗೊಳಿಸಿದ ಸಿಎಂ ಸಿದ್ದರಾಮಯ್ಯ

Krishna Byre Gowda “ದಕ್ಷಿಣ ರಾಜ್ಯಗಳು ಜಿಎಸ್‌ಟಿ ಪಾಲಿಗೆ ಧ್ವನಿ ಎತ್ತಬೇಕಿದೆ’

Krishna Byre Gowda “ದಕ್ಷಿಣ ರಾಜ್ಯಗಳು ಜಿಎಸ್‌ಟಿ ಪಾಲಿಗೆ ಧ್ವನಿ ಎತ್ತಬೇಕಿದೆ’

Renukaswamy Case ನಟ ದರ್ಶನ್‌ ಗ್ಯಾಂಗ್‌ ನ್ಯಾಯಾಂಗ ಬಂಧನ ವಿಸ್ತರಣೆ

Renukaswamy Case ನಟ ದರ್ಶನ್‌ ಗ್ಯಾಂಗ್‌ ನ್ಯಾಯಾಂಗ ಬಂಧನ ವಿಸ್ತರಣೆ

gNagamangala ನಡೆದಿದ್ದು ಸಣ್ಣ ಗಲಾಟೆ: ಗೃಹ ಸಚಿವ ಪರಮೇಶ್ವರ್‌

Mandya; ನಾಗಮಂಗಲದಲ್ಲಿ ನಡೆದಿದ್ದು ಸಣ್ಣ ಗಲಾಟೆ: ಗೃಹ ಸಚಿವ ಪರಮೇಶ್ವರ್‌

Second PUC ಮಾದರಿ ಪ್ರಶ್ನೆಪತ್ರಿಕೆ ಪ್ರಕಟ

Second PUC ಮಾದರಿ ಪ್ರಶ್ನೆಪತ್ರಿಕೆ ಪ್ರಕಟ

MUST WATCH

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

ಹೊಸ ಸೇರ್ಪಡೆ

Jaishankar

Border ಶಾಂತಿ ನೆಲೆಸಿದರೆ ಮಾತ್ರ ಚೀನ ಜತೆ ಸಹಜ ಸಂಬಂಧ: ಜೈಶಂಕರ್‌

sens-2

BSE ಸೆನ್ಸೆಕ್ಸ್‌ 83,000 ಮತ್ತೊಂದು ಮೈಲುಗಲ್ಲು

ಗ್ರಾಮೀಣ ಬಡಜನರ ಬೇಡಿಕೆಗೆ ಸ್ಪಂದಿಸಿದ ಕೇಂದ್ರ ಸರಕಾರ

ಗ್ರಾಮೀಣ ಬಡಜನರ ಬೇಡಿಕೆಗೆ ಸ್ಪಂದಿಸಿದ ಕೇಂದ್ರ ಸರಕಾರ

Subhra-Swamy

Mangaluru Visit: ಇಂದು ಡಾ. ಸುಬ್ರಮಣಿಯನ್‌ ಸ್ವಾಮಿ ಮಂಗಳೂರಿಗೆ

aane

Sulya: ಆಲೆಟ್ಟಿ: ಕಾಡಾನೆ ದಾಳಿ ಪ್ರದೇಶಕ್ಕೆ ಅರಣ್ಯಾಧಿಕಾರಿ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.