“ಅವರು ಬದಲಾಗಿಲ್ಲ, ನಮಗೆ ಸಾವೇ ಗತಿ’ : ತಾಲಿಬಾನ್‌ ಆಡಳಿತದ ಕುರಿತು ಹೆಂಗಳೆಯರ ನೋವಿನ ಮಾತು


Team Udayavani, Aug 20, 2021, 8:40 PM IST

“ಅವರು ಬದಲಾಗಿಲ್ಲ, ನಮಗೆ ಸಾವೇ ಗತಿ’ : ತಾಲಿಬಾನ್‌ ಆಡಳಿತದ ಕುರಿತು ಹೆಂಗಳೆಯರ ನೋವಿನ ಮಾತು

ಕಾಬೂಲ್‌: “ಇಲ್ಲಿ ನಾವ್ಯಾರೂ ಸುರಕ್ಷಿತರಲ್ಲ’, “ನನ್ನ ಮನೆಗೇನಾದರೂ ತಾಲಿಬಾನಿಗರು ಪ್ರವೇಶಿಸಿದರೆ ನಾನು ಆತ್ಮಹತ್ಯೆಗೆ ಶರಣಾಗುತ್ತೇನೆ’…
ಇದು ತಾಲಿಬಾನ್‌ ಆಡಳಿತದ ಕುರಿತ ಪ್ರಶ್ನೆಗೆ ಅಫ್ಘಾನಿಸ್ತಾನದ ಮಹಿಳೆಯರು ನೀಡಿರುವ ಉತ್ತರ.

ಆಫ್ಘನ್ ತಾಲಿಬಾನ್‌ ವಶಕ್ಕೆ ಸಿಗುತ್ತಿದ್ದಂತೆಯೇ ಪತ್ರಕರ್ತೆಯರನ್ನು ಕೊಲ್ಲಲಾಗಿದೆ, ಉದ್ಯೋಗಕ್ಕೆ ತೆರಳದಂತೆ ಮಹಿಳೆಯರಿಗೆ ಬೆದರಿಕೆ ಹಾಕಲಾಗಿದೆ, ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರ ಆಗುತ್ತಿರುವವರ ಮೇಲೆ ಗುಂಡು ಹಾರಿಸಲಾಗಿದೆ. ಈ ಎಲ್ಲ ನಿದರ್ಶನಗಳೂ ಕಣ್ಣ ಮುಂದಿರುವಾಗ “ನಾವು ಶಾಂತಿ ಬಯಸುತ್ತೇವೆ’ ಎಂಬ ಉಗ್ರರ ಮಾತನ್ನು ಒಪ್ಪಿಕೊಳ್ಳುವ ಪರಿಸ್ಥಿತಿಯಲ್ಲಿ ಯಾರಾದರೂ ಇರಲು ಸಾಧ್ಯವೇ?

ಉಗ್ರಾಡಳಿತ ಕುರಿತು ಪ್ರತಿಕ್ರಿಯಿಸಿರುವ ಆಫ್ಘನ್‌ನ ಮಹಿಳೆಯರು, “ನಮಗ್ಯಾರಿಗೂ ಇಲ್ಲಿ ಸೇಫ್ ಎಂಬ ಭಾವನೆಯೇ ಬರುತ್ತಿಲ್ಲ. ತಾಲಿಬಾನ್‌ ಉಗ್ರರ ಬಾಯಲ್ಲಿ ಬರುವ ಒಂದು ಮಾತನ್ನೂ ನಾವು ನಂಬುವುದಿಲ್ಲ’ ಎಂದು ಸಿಎನ್‌ಎನ್‌ ಸುದ್ದಿವಾಹಿನಿಗೆ ತಿಳಿಸಿದ್ದಾರೆ. ಉಗ್ರರು ಬದಲಾಗಿದ್ದಾರೆ ಎಂಬುದೇ ದೊಡ್ಡ ಸುಳ್ಳು. ಅವರಿಗೆ ಪ್ರಜಾಪ್ರಭುತ್ವವೆಂದರೆ ಏನೆಂದೇ ತಿಳಿದಿಲ್ಲ. ಅಂತಾರಾಷ್ಟ್ರೀಯ ಸಮುದಾಯ ಮತ್ತು ವಿಶ್ವಸಂಸ್ಥೆಯು ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂಬ ಕಾರಣಕ್ಕೆ ತಾಲಿಬಾನಿಗರು ಸುಳ್ಳಿನ ಕಂತೆ ಸೃಷ್ಟಿಸುತ್ತಿದ್ದಾರೆ ಎಂದಿದ್ದಾರೆ 20ರ ಹರೆಯದ ಯುವತಿ.

ಇದನ್ನೂ ಓದಿ :ಜನನ ಪ್ರಮಾಣ ಭಾರೀ ಇಳಿಕೆ : ಚೀನಾದಲ್ಲಿ ಇನ್ನು ಮೂರು ಮಕ್ಕಳಿಗೆ ಅವಕಾಶ

ತಾಲಿಬಾನ್‌ ಮಾತನ್ನು ನಂಬಿ ಮೊನ್ನೆ ತಾನೇ ಕುಂದೂಝ್ ಪ್ರಾಂತ್ಯದಲ್ಲಿ ಶಿಕ್ಷಕಿಯೊಬ್ಬರು ಆಟೋರಿಕ್ಷಾದಲ್ಲಿ ಶಾಲೆಗೆ ತೆರಳಿದ್ದರು. ಆಟೋ ನಿಲ್ಲಿಸಿದ ಉಗ್ರರು, ಆ ಶಿಕ್ಷಕಿಯೊಂದಿಗೆ ಆಕೆಯ ಕುಟುಂಬದ ಪುರುಷರಾರೂ ಇರಲಿಲ್ಲ ಎಂಬ ಕಾರಣಕ್ಕೆ ಆಟೋಚಾಲಕನಿಗೆ ಥಳಿಸಿದ್ದಾರೆ ಎಂದೂ ಯುವತಿ ಹೇಳಿದ್ದಾರೆ.

ಕಾಬೂಲ್‌ ವಿವಿಯ ವಿದ್ಯಾರ್ಥಿನಿಯೊಬ್ಬರು ಮಾತನಾಡಿ, “ನನ್ನ ಘನತೆ, ನನ್ನ ಹೆಮ್ಮೆ, ಒಬ್ಬ ಹೆಣ್ಣಾಗಿ ನನ್ನ ಅಸ್ತಿತ್ವ, ನನ್ನ ಬದುಕು.. ಎಲ್ಲವೂ ಅಪಾಯದಲ್ಲಿದೆ. ಅವರು ಯಾವಾಗ ನಮ್ಮ ಮನೆಗಳಿಗೆ ನುಗ್ಗಿ, ನಮ್ಮನ್ನು ಹೊತ್ತೂಯ್ಯುತ್ತಾರೋ, ಅತ್ಯಾಚಾರ ಎಸಗುತ್ತಾರೋ ಎಂಬ ಭಯ ಕನಸಲ್ಲೂ ನಮ್ಮನ್ನು ನಡುಗಿಸುತ್ತಿದೆ. ಅವರೇನಾದರೂ ನನ್ನ ಮನೆಗೆ ಬಂದರೆ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ. ನನ್ನ ಗೆಳತಿಯರೂ ಇದೇ ನಿರ್ಧಾರ ಮಾಡಿದ್ದಾರೆ. ತಾಲಿಬಾನ್‌ನ ಹಿಂಸೆಗೆ ಬಲಿಯಾಗುವುದಕ್ಕಿಂತ ಸಾಯುವುದೇ ಉತ್ತಮ’ ಎಂದಿದ್ದಾರೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Trump-musk

Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹತ್ಯೆ

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹ*ತ್ಯೆ

India cuts import duty on American Bourbon Whiskey

Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ

ರಷ್ಯಾ-ಉಕ್ರೇನ್‌ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ

ರಷ್ಯಾ-ಉಕ್ರೇನ್‌ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.