Mood Of the Nation Survey: ನರೇಂದ್ರ ಮೋದಿ ನಂತರ ಪ್ರಧಾನಿ ಹುದ್ದೆಗೆ ಯಾರು ಸೂಕ್ತ ಆಯ್ಕೆ?

ಮೋದಿ ಅವರಿಗೆ ಪರ್ಯಾಯವಾಗಿ ಯಾರು ಪ್ರಧಾನಿಯಾದರೆ ಉತ್ತಮ ಎಂಬುದನ್ನು ಬಹಿರಂಗಪಡಿಸಿದೆ.

ನಾಗೇಂದ್ರ ತ್ರಾಸಿ, Aug 23, 2024, 12:39 PM IST

Mood Of the Nation Survey: ನರೇಂದ್ರ ಮೋದಿ ನಂತರ ಪ್ರಧಾನಿ ಹುದ್ದೆಗೆ ಯಾರು ಸೂಕ್ತ ಆಯ್ಕೆ?

ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಪ್ರಧಾನಿಯಾಗಿದ್ದಾರೆ. ಹತ್ತು ವರ್ಷಕ್ಕೂ ಅಧಿಕ ಕಾಲ ದೇಶವನ್ನು ಮುನ್ನಡೆಸುತ್ತಿರುವ ಅವರು 3ನೇ ಬಾರಿಯ ಪ್ರಧಾನಿ ಹುದ್ದೆಯ ಅವಧಿ ಮುಕ್ತಾಯಗೊಳ್ಳುವ ಮೊದಲೇ 75ನೇ ವರ್ಷಕ್ಕೆ ಕಾಲಿಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಟ್ವೀಟ್‌ ಮಾಡಿರುವ ಸುಬ್ರಮಣಿಯನ್‌ ಸ್ವಾಮಿ ಆರ್‌ ಎಸ್‌ ಎಸ್‌ ಪ್ರಚಾರಕರ ಸಂಸ್ಕಾರಕ್ಕೆ ಬದ್ಧರಾಗಿ ಮೋದಿ ತಮ್ಮ 75ನೇ ಹುಟ್ಟು ಹಬ್ಬದ ಅನಂತರ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಬೇಕು. ಇಲ್ಲದಿದ್ದರೆ ಬೇರೆಯದ್ದೇ ಮಾರ್ಗದಲ್ಲಿ ಅವರು ಪ್ರಧಾನಿ ಹುದ್ದೆ ಕಳೆದುಕೊಳ್ಳಬೇಕಾಗುತ್ತದೆ ಎಂದು ಟ್ವೀಟ್‌ ಮಾಡಿದ್ದರು. ಅಷ್ಟೇ ಅಲ್ಲದೇ ಈಗಾಗಲೇ ಬಿಜೆಪಿಯಲ್ಲಿ 75 ವರ್ಷದ ನಂತರ ಅಧಿಕಾರದಲ್ಲಿ ಮುಂದುವರಿಯಬಾರದು ಎಂಬ ನಿಟ್ಟಿನಲ್ಲಿ ಅಧಿಕಾರದಿಂದ ಕೆಳಗಿಳಿಸಿದ ಉದಾಹರಣೆಯೂ ಕಣ್ಮುಂದಿದೆ. ಇವೆಲ್ಲದರ ನಡುವೆ ಜನಸಾಮಾನ್ಯರು ಕೂಡ 75 ವರ್ಷದ ಬಳಿಕ ಪ್ರಧಾನಿ ಮೋದಿ ಅಧಿಕಾರದಲ್ಲಿ ಮುಂದುವರಿಯುತ್ತಾರಾ ಅಥವಾ ಹುದ್ದೆಯಿಂದ ನಿರ್ಗಮಿಸುತ್ತಾರಾ ಎಂಬ ಕುತೂಹಲ ಮೂಡಿಸಿದೆ.

ಈ ಎಲ್ಲಾ ಅಂಶಗಳ ಜತೆ ಇಂಡಿಯಾ ಟುಡೇಯ Mood Of the Nation ಸಮೀಕ್ಷೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪರ್ಯಾಯವಾಗಿ ಯಾರು ಪ್ರಧಾನಿಯಾದರೆ ಉತ್ತಮ ಎಂಬುದನ್ನು ಬಹಿರಂಗಪಡಿಸಿದೆ.

ಭಾರತೀಯ ಜನತಾ ಪಕ್ಷದ ಪ್ರಧಾನಮಂತ್ರಿ ಅಭ್ಯರ್ಥಿಗಳಲ್ಲಿ ನರೇಂದ್ರ ಮೋದಿ ಅವರ ನಂತರ ಅಮಿತ್‌ ಶಾ ಅವರ ಹೆಸರು ಪ್ರಥಮ ಆಯ್ಕೆಯಲ್ಲಿದ್ದು, ಶೇ.25ರಷ್ಟು ಜನರು ಸಹಮತ ವ್ಯಕ್ತಪಡಿಸಿದ್ದಾರೆ. ಎರಡನೇ ಸ್ಥಾನದಲ್ಲಿ ಯೋಗಿ ಆದಿತ್ಯನಾಥ್‌ ಹಾಗೂ ನಿತೀನ್‌ ಗಡ್ಕರಿ ಸ್ಥಾನ ಪಡೆದಿರುವುದು ಸಮೀಕ್ಷೆ ತಿಳಿಸಿದೆ.

ನರೇಂದ್ರ ಮೋದಿ ಅವರ ನಂತರ ಯಾರು ಪ್ರಧಾನಿಯಾದರೆ ಉತ್ತಮ ಎಂಬ ಪ್ರಶ್ನೆಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಶೇ.19ರಷ್ಟು ಸಹಮತದೊಂದಿಗೆ 2ನೇ ಸ್ಥಾನ ಪಡೆದಿದ್ದಾರೆ. ಅದೇ ರೀತಿ ರಸ್ತೆ ಸಾರಿಗೆ ಸಚಿವ ನಿತೀನ್‌ ಗಡ್ಕರಿ ಅವರು ಶೇ.13ರಷ್ಟು ಸಹಮತದೊಂದಿಗೆ 3ನೇ ಸ್ಥಾನ ಪಡೆದಿರುವುದಾಗಿ ಇಂಡಿಯಾ ಟುಡೇ Mood Of the Nation  ಸಮೀಕ್ಷೆ ವಿವರಿಸಿದೆ.

ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌, ಕೃಷಿ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್‌ ಅಂದಾಜು ಶೇ.5ರಷ್ಟು ಮತ ಪಡೆದಿದ್ದಾರೆ. ಮತ್ತೊಂದೆಡೆ ನರೇಂದ್ರ ಮೋದಿ ನಂತರ ಅವರ ಉತ್ತರಾಧಿಕಾರಿಯಾಗಲು ಅಮಿತ್‌ ಶಾ ಸೂಕ್ತ ಎಂಬ ಶೇ.25ರಷ್ಟು ಮತ ಪಡೆದಿದ್ದರು ಕೂಡಾ ಇದು ಕಳೆದ ವರ್ಷಕ್ಕಿಂತ ಕಡಿಮೆ ಮತಪಡೆಯುವ ಮೂಲಕ ಜನಪ್ರಿಯತೆ ಕುಸಿದಿರುವುದಕ್ಕೆ ಸಾಕ್ಷಿಯಾಗಿರುವುದಾಗಿ ಸಮೀಕ್ಷೆ ಹೇಳಿದೆ.

2023ರ ಆಗಸ್ಟ್‌ ನಲ್ಲಿ ನಡೆಸಿದ್ದ ಸಮೀಕ್ಷೆಯಲ್ಲಿ  ನರೇಂದ್ರ ಮೋದಿ ನಂತರ ಪ್ರಧಾನಿ ಸ್ಥಾನಕ್ಕೆ ಅಮಿತ್‌ ಶಾ ಅತ್ಯುತ್ತಮ ಆಯ್ಕೆ ಎಂದು ದಕ್ಷಿಣ ಭಾರತದ ಶೇ.31ರಷ್ಟು ಜನರು ಆಶಯ ವ್ಯಕ್ತಪಡಿಸಿದ್ದರು. ಆದರೆ ಈ ಬಾರಿ ಶಾ ಶೇ.25ರಷ್ಟು ಮತ ಪಡೆದಿದ್ದಾರೆ.

ಅಮಿತ್‌ ಶಾ ರೀತಿ ಯೋಗಿ ಆದಿತ್ಯನಾಥ್‌ ಅವರ ಜನಪ್ರಿಯತೆ ಕೂಡಾ ಕುಸಿದಿದೆ. 2023ರ ಆಗಸ್ಟ್‌ ನಲ್ಲಿ ಯೋಗಿ ಶೇ.25ರಷ್ಟು ಮತ ಪಡೆದಿದ್ದರೆ, 2024ರ ಆಗಸ್ಟ್‌ ನಲ್ಲಿ ಶೇ.23 ಪಡೆದಿದ್ದು, ಈಗ ಶೇ.19ರಷ್ಟು ಮತ ಪಡೆದಿರುವುದಾಗಿ ಸಮೀಕ್ಷೆ ತಿಳಿಸಿದೆ.

ಶೇ.13ರಷ್ಟು ಮತ ಪಡೆದಿರುವ ನಿತೀನ್‌ ಗಡ್ಕರಿ 3ನೇ ಸ್ಥಾನ ಪಡೆದಿದ್ದಾರೆ. ಆದರೆ ಅಮಿತ್‌ ಶಾ ಮತ್ತು ಯೋಗಿ ಆದಿತ್ಯನಾಥ್‌ ಅವರ ಸ್ಥಾನದ ಜನಪ್ರಿಯತೆ ಕುಸಿದಿದೆ. ಹಾಗಾದರೆ ಶೇಕಡವಾರು ಲೆಕ್ಕಚಾರದಲ್ಲಿ ಯಾರು ಹೆಚ್ಚು ಮತ ಗಳಿಸಿದ್ದಾರೆ ಎಂಬುದು ಪ್ರಶ್ನೆ ಸಹಜ. ಇಂಡಿಯಾ ಟುಡೇ Mood of the nation ಸಮೀಕ್ಷೆಯ ಪ್ರಕಾರ, ರಾಜನಾಥ್‌ ಸಿಂಗ್‌ ಮತ್ತು ಶಿವರಾಜ್‌ ಸಿಂಗ್‌ ಚೌಹಾಣ್‌ ಜನಪ್ರಿಯತೆಯಲ್ಲಿ ಶೇಕಡವಾರು ಹೆಚ್ಚಳವಾಗಿದೆ. ರಾಜನಾಥ್‌ ಸಿಂಗ್‌ ಅವರು ಶೇ.1.2ರಷ್ಟು ಹಾಗೂ ಶಿವರಾಜ್‌ ಸಿಂಗ್‌ ಅವರು ಶೇ.2.9ರಷ್ಟು ಹೆಚ್ಚು ಮತ ಪಡೆದಿರುವುದಾಗಿ ಸಮೀಕ್ಷೆ ತಿಳಿಸಿದೆ.

ಟಾಪ್ ನ್ಯೂಸ್

Subhra-Swamy

Mangaluru Visit: ಇಂದು ಡಾ. ಸುಬ್ರಮಣಿಯನ್‌ ಸ್ವಾಮಿ ಮಂಗಳೂರಿಗೆ

aane

Sulya: ಆಲೆಟ್ಟಿ: ಕಾಡಾನೆ ದಾಳಿ ಪ್ರದೇಶಕ್ಕೆ ಅರಣ್ಯಾಧಿಕಾರಿ ಭೇಟಿ

Mangaluru-BjP

Nagamangala Riots: ಕದ್ರಿ: ಗಣೇಶೋತ್ಸವ ಸಮಿತಿಗಳ ಒಕ್ಕೂಟದಿಂದ ಪ್ರತಿಭಟನೆ

udUdupi ಗೀತಾರ್ಥ ಚಿಂತನೆ-34: ಸ್ವಕರ್ಮ, ಸ್ವಧರ್ಮ: ಉತ್ಪಾದನೆಯ ಮರ್ಮ

Udupi ಗೀತಾರ್ಥ ಚಿಂತನೆ-34: ಸ್ವಕರ್ಮ, ಸ್ವಧರ್ಮ: ಉತ್ಪಾದನೆಯ ಮರ್ಮ

PROTEST

Udupi: ನಾಗಮಂಗಲ ಘಟನೆ ಖಂಡಿಸಿ ವಿವಿಧೆಡೆ ಪ್ರತಿಭಟನೆ

Tulunadu-utsava

Mangaluru: ತುಳುನಾಡ ಉತ್ಸವ ಪಿಲಿಕುಳ ಕಂಬಳ: ಬೆಂಗಳೂರಿನಲ್ಲಿ ಸಭೆ

police

Udupi: ನಾಪತ್ತೆಯಾಗಿದ್ದ ಬಾಲಕನ ರಕ್ಷಣೆ, ಮಕ್ಕಳ ರಕ್ಷಣ ಘಟಕಕ್ಕೆ ಹಸ್ತಾಂತರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Paris ಪ್ಯಾರಾಲಿಂಪಿಕ್ಸ್‌ ನಲ್ಲಿ ಭಾರತಕ್ಕೆ ಹೆಚ್ಚು ಯಶಸ್ಸು ಸಿಕ್ಕಿದ್ಹೇಗೆ? ಇಲ್ಲಿದೆ ವಿವರ

Olympics Vs Para; ಪ್ಯಾರಾಲಿಂಪಿಕ್ಸ್‌ ನಲ್ಲಿ ಭಾರತಕ್ಕೆ ಹೆಚ್ಚು ಯಶಸ್ಸು ಸಿಕ್ಕಿದ್ಹೇಗೆ?

1-ssss

US Presidential debate; ಟ್ರಂಪ್-ಕಮಲಾ ಮುಖಾಮುಖಿ: ಬಾಣಕ್ಕೆ ಪ್ರತಿಬಾಣ

Abu Dhabi:ವಿದೇಶ ಪ್ರವಾಸ ಕಥನ-ಅಬುಧಾಬಿ ಹಿಂದು ಮಂದಿರ ಸರ್ವ ಧರ್ಮದ ಸೌಹಾರ್ದತೆಯ ಸಂಕೇತ

Abu Dhabi:ವಿದೇಶ ಪ್ರವಾಸ ಕಥನ-ಅಬುಧಾಬಿ ಹಿಂದು ಮಂದಿರ ಸರ್ವ ಧರ್ಮದ ಸೌಹಾರ್ದತೆಯ ಸಂಕೇತ

ಈ ಗ್ರಾಮದಲ್ಲಿರುವ ಮನುಷ್ಯರಷ್ಟೇ ಅಲ್ಲ ಸಾಕು ಪ್ರಾಣಿಗಳೂ ಮಾಂಸಾಹಾರ ಮುಟ್ಟಲ್ವಂತೆ

Non Veg:ಈ ಗ್ರಾಮದಲ್ಲಿರುವ ಮನುಷ್ಯರಷ್ಟೇ ಅಲ್ಲ ಸಾಕು ಪ್ರಾಣಿಗಳೂ ಮಾಂಸಾಹಾರ ಮುಟ್ಟಲ್ವಂತೆ

30 ಟಿವಿ ಚಾನೆಲ್‌, 2 ಕ್ರಿಕೆಟ್‌ ಟೀಮ್.. ಇವರೇ ನೋಡಿ ಭಾರತದ ಶ್ರೀಮಂತ ಸಿನಿಮಾ ನಿರ್ಮಾಪಕ

30 ಟಿವಿ ಚಾನೆಲ್‌, 2 ಕ್ರಿಕೆಟ್‌ ಟೀಮ್.. ಇವರೇ ನೋಡಿ ಭಾರತದ ಶ್ರೀಮಂತ ಸಿನಿಮಾ ನಿರ್ಮಾಪಕ

MUST WATCH

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

ಹೊಸ ಸೇರ್ಪಡೆ

Subhra-Swamy

Mangaluru Visit: ಇಂದು ಡಾ. ಸುಬ್ರಮಣಿಯನ್‌ ಸ್ವಾಮಿ ಮಂಗಳೂರಿಗೆ

aane

Sulya: ಆಲೆಟ್ಟಿ: ಕಾಡಾನೆ ದಾಳಿ ಪ್ರದೇಶಕ್ಕೆ ಅರಣ್ಯಾಧಿಕಾರಿ ಭೇಟಿ

congress

Haryana ಚುನಾವಣೆ: 89 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಕಣಕ್ಕೆ, ಸಿಪಿಎಂಗೆ 1 ಸ್ಥಾನ

suicide (2)

Kanpur:ಮಹಿಳೆಯ ಬೆತ್ತಲೆ, ರುಂಡವಿಲ್ಲದ ಮೃತದೇಹ ಪತ್ತೆ

1bbb

Baahubali; ನೆರೆ ನೀರಲ್ಲಿ ತಲೆ ಮೇಲೆ ಬೈಕ್‌ ಹೊತ್ತು ನಡೆದ ‘ಬಾಹುಬಲಿ’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.