Alanda: ಕಲುಷಿತ ನೀರು ಸೇವಿಸಿ ನಿಂಬರ್ಗಾ ಗ್ರಾಮದ 80ಕ್ಕೂ ಹೆಚ್ಚು ಮಂದಿ ಅಸ್ವಸ್ಥ
ಸ್ಥಳಕ್ಕೆ ಆರೋಗ್ಯ ಇಲಾಖೆ ಹೆಚ್ಚುವರಿ ಸಿಬ್ಬಂದಿ, ತಾಲೂಕು ಪಂಚಾಯಿತಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ
Team Udayavani, Sep 30, 2024, 10:27 PM IST
ಆಳಂದ: ತಾಲೂಕಿನ ನಿಂಬರ್ಗಾ ಗ್ರಾಮದ ಭೂಮಿ ಸಮಾಜದ ಬಡಾವಣೆಯಲ್ಲಿ ಕಲುಷಿತ ನೀರು ಸೇವಿಸಿ 80ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ವರದಿಯಾಗಿದೆ.
ಗ್ರಾಮದಲ್ಲಿ ಭಾನುವಾರ ಬೆಳಗ್ಗೆ ಸರಬರಾಜು ಆದ ನೀರು ಸೇವಿಸಿದ ಅನಂತರ ಜನರಲ್ಲಿ ವಾಂತಿ, ಭೇದಿ ಲಕ್ಷಣಗಳು ಕಾಣಿಸಿಕೊಂಡಿವೆ. ಇದರಿಂದ ಅಸ್ವಸ್ಥರಾದ ಜನರನ್ನು ನಿಂಬರ್ಗಾ ಆರೋಗ್ಯ ಕೇಂದ್ರದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಡಾವಣೆಗೆ ನೀರು ಪೂರೈಸುವ ಟ್ಯಾಂಕ್ ಸ್ವಚ್ಛತೆಯ ಕೊರತೆಯಿಂದ ನೀರಿನಲ್ಲಿ ಕಲಬೆರಕೆಯಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಟ್ಯಾಂಕ್ ಸ್ವಚ್ಛಗೊಳಿಸಿ ಸಮರ್ಪಕ ನೀರು ಪೂರೈಸುವಂತೆ ಹಲವು ಬಾರಿ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಮನವಿ ಮಾಡಿದ್ದರೂ ಯಾವುದಕ್ಕೂ ಸ್ಪಂದಿಸಿಲ್ಲವೆಂದು ಬಡಾವಣೆ ನಿವಾಸಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕಲುಷಿತ ನೀರು ಸೇವಿಸಿ ಜನರು ಅಸ್ವಸ್ಥಗೊಂಡ ನಂತರವೂ ಸಂಬಂಧಿತ ಅಧಿಕಾರಿಗಳು ಸಮಸ್ಯೆಗೆ ಸ್ಪಂದಿಸದ ಹಿನ್ನೆಲೆ ಭೋವಿ ಸಮಾಜದ ಮುಖಂಡ ರಾಮಗೋಡಿಕೆ ಅಧಿಕಾರಿಗಳ ವಿರುದ್ಧ ಕಟುವಾಗಿ ಮಾತನಾಡಿದ್ದಾರೆ. ಸೋಮವಾರ ಸ್ಥಳಕ್ಕೆ ಆರೋಗ್ಯ ಇಲಾಖೆಯ ಹೆಚ್ಚುವರಿ ಸಿಬ್ಬಂದಿ ಮತ್ತು ತಾಲೂಕು ಪಂಚಾಯಿತಿಯ ಅಧಿಕಾರಿಗಳು ಭೇಟಿ ನೀಡಿ ಪರಿಸ್ಥಿತಿಯ ಪರಿಶೀಲನೆ ನಡೆಸಿ ಶುದ್ಧ ನೀರು ಸರಬರಾಜು ಹಾಗೂ ಪರಿಸರದ ಸ್ವಚ್ಛತೆ ಕಾಪಾಡುವಂತೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.