ಆಲಂಕಾರು: ಸಾರ್ವಜನಿಕ ಶೌಚಾಲಯ ಕಾಮಗಾರಿ ಸ್ಥಗಿತ


Team Udayavani, Feb 17, 2022, 5:15 AM IST

ಆಲಂಕಾರು: ಸಾರ್ವಜನಿಕ ಶೌಚಾಲಯ ಕಾಮಗಾರಿ ಸ್ಥಗಿತ

ಆಲಂಕಾರು: ಮರು ನಿರ್ಮಾಣದ ಉದ್ದೇಶದಿಂದ ತೆರವು ಗೊಳಿಸಿದ್ದ ಸಾರ್ವಜನಿಕ ಶೌಚಾಲಯದ ಕಾಮಗಾರಿ ಸ್ಥಗಿತಗೊಂಡಿರುವ ಬಗ್ಗೆ ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.

ಆಲಂಕಾರು ಪೇಟೆಯ ಬಸ್‌ ತಂಗು ದಾಣದ ಬಳಿಯಿದ್ದ ತನ್ನ ಅಧೀನದ ಶೌಚಾಲಯವನ್ನು ಗ್ರಾಮ ಪಂಚಾ ಯತ್‌ ಒಂದು ತಿಂಗಳ ಮೊದಲು ತೆರವುಗೊಳಿಸಿತ್ತು. ಇದೀಗ ಶೌಚಾಲಯ ನಿರ್ಮಾಣದ ವಿಚಾರದಲ್ಲಿ ಮೀನಮೇಷ ಎಣಿಸುತ್ತಿದ್ದು, ಸಾರ್ವಜನಿಕರಿಗೆ ತೊಂದರೆ ಯಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.

ಆರಂಭದಲ್ಲೇ ಕಳಪೆ
ಕಾಮಗಾರಿ
ಸುಮಾರು ಹತ್ತು ವರ್ಷಗಳ ಹಿಂದೆ ಈ ಶೌಚಾಲಯವನ್ನು ನಿರ್ಮಿಸಲಾಗಿತ್ತು. ನಿರ್ಮಾಣದ ಕಾಮಗಾರಿಯು ಕಳಪೆ ಯಾಗಿದೆ ಎಂದು ಆರೋಪಿಸಿ ಆರಂಭ ದಲ್ಲೇ ಸಾರ್ವಜನಿಕರು ನಿರ್ಮಾಣಕ್ಕೆ ತಡೆಹಿಡಿದ್ದರು. ಬಳಿಕ ಗುತ್ತಿದಾರರು ಪಂಚಾಂಗವನ್ನು ಮರುನಿರ್ಮಿಸಿ ಕಾಮಗಾರಿಯ ಗುಣಮಟ್ಟ ಕಾಯ್ದು ಕೊಳ್ಳುವ ಬಗ್ಗೆ ಭರವಸೆ ನೀಡಿದ ಬಳಿಕ ಮುಂದುವರಿಸಲಾಗಿತ್ತು. ಆದರೆ ಶೌಚಾಲಯದ ಗುಂಡಿ ಆಳವಾಗಿರದ ಪರಿಣಾಮ ಒಂದು ವರ್ಷದಲ್ಲಿಯೇ ಶೌಚಾಲಯ ತುಂಬಿ ತುಳುಕಿತ್ತು. ಮಳೆಗಾಲದಲ್ಲಿ ಈ ಶೌಚಾಲಯ ನೀರು ತುಂಬಿ ಬರುವ ಕಾರಣ ಸಾರ್ವಜನಿಕರು ಬಳಸದಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಆದ್ದರಿಂದ ದುರಸ್ತಿಗೊಳಿಸುವಂತೆ ಸಾರ್ವಜನಿಕರು ಸ್ಥಳಿಯಾಡಳಿತಕ್ಕೆ ಒತ್ತಡ ಹೇರಿದ್ದರು. ಒಂದು ತಿಂಗಳ ಹಿಂದೆ ಹಳೆಯ ಕಟ್ಟಡವನ್ನು ಕೆಡವಿ ಹಾಕಲಾಗಿತ್ತು. ಬೃಹತ್‌ ಶೌಚಾಲಯದ ಗುಂಡಿಯನ್ನು ಬಸ್‌ ತಂಗುದಾಣದ ಪಕ್ಕದಲ್ಲೇ ನಿರ್ಮಾಣ ಮಾಡಲಾಗಿದೆ. ಇದರಿಂದ ಯಾವ ಕ್ಷಣದಲ್ಲಿಯೂ ಅಪಾಯ ಸಂಭವಿಸಬಹುದಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ. ಆಲಂಕಾರು ಪೇಟೆಗೆ ಬಂದ ಜನರು ಶೌಚಾಲಯಕ್ಕಾಗಿ ಪರದಾಡಬೇಕಾದ ಪರಿಸ್ಥಿತಿ ನಿರ್ಮಾಣ ವಾಗಿದೆ. ಯಾವುದಾದರು ಕಚೇರಿ ಅಥವಾ ಅಂಗಡಿಗಳ ಶೌಚಾಲಯಕ್ಕೆ ಮೊರೆ ಹೋಗಬೇಕಾದ ಅನಿವಾರ್ಯತೆ ಇದೆ.

ಇಚ್ಛಾ ಶಕ್ತಿಯ ಕೊರತೆ
ಶೌಚಾಲಯದ ಕಾಮಗಾರಿಯನ್ನು ಸಮರ್ಪಕವಾಗಿ ನಿರ್ವಹಿಸಬಲ್ಲ ಗುತ್ತಿಗೆದಾರರಿಗೆ ನೀಡದಿರುವುದು ವಿಳಂಬಕ್ಕೆ ಕಾರಣ. ಸ್ಥಳಿಯಾಡಳಿತ ವಿವಿಧ ಅನುದಾನಗಳನ್ನು ಬಳಸಿ ಕೊಂಡು ಇನ್ನಿತರ ಅಭಿವೃದ್ದಿ ಕಾರ್ಯ ಗಳನ್ನು ಮುತುವರ್ಜಿಯಿಂದ ಮುಂದುವರಿಸುತ್ತಿದೆ. ಆದರೆ ಸಾರ್ವ ಜನಿಕವಾಗಿ ಉಪಯೋಗಕ್ಕೆ ಬರುವಂತಹ ಶೌಚಾಲಯದ ಕಾಮಗಾರಿಗೆ ವಿಳಂಬ ನೀತಿಯನ್ನು ಅನುಸರಿಸುತ್ತಿದೆ. ಪರಿಣಾಮ ಸಾರ್ವಜನಿಕರು ಕಂಡ ಕಂಡಲ್ಲಿ ಮೂತ್ರ ವಿಸರ್ಜನೆ ಮಾಡುವುದರ ಮೂಲಕ ಪೇಟೆಯ ಸ್ವತ್ಛತೆ ಕಡಿಮೆಯಾಗಿ ಗಬ್ಬು ವಾಸನೆ ಬರುತ್ತಿದೆ ಎಂದು ಆಟೋ ರಿಕ್ಷಾ ಚಾಲಕ-ಮಾಲಕರ ಸಂಘದ ಅಧ್ಯಕ್ಷ ಪುರಂದರ ಗೌಡ ಆರೋಪಿಸಿದರು.

ಗುತ್ತಿಗೆದಾರರಿಗೆ ಸೂಚನೆ
ತಾ.ಪಂ. , ಗ್ರಾ.ಪಂ.ನ ಜಂಟಿ ಅನುದಾನಗಳನ್ನು ಬಳಸಿ ಕೊಂಡು ಸುಸಜ್ಜಿತ ಶೌಚಾಲಯ ನಿರ್ಮಿಸಲಾಗುವುದು. 1.82 ಲಕ್ಷ ರೂ. ಅನುದಾನದಲ್ಲಿ ಈ ಕಾಮಗಾರಿ ನಡೆಯಲಿದ್ದು, ಗುತ್ತಿಗೆದಾರರು ವಿಳಂಬ ನೀತಿ ಅನುಸರಿಸದೆ ಶೀಘ್ರ ಕಾಮಗಾರಿ ಪೂರ್ಣಗೊಳಿಸಬೇಕೆಂದು ಸೂಚಿಸಲಾಗಿದೆ.
-ಸದಾನಂದ ಆಚಾರ್ಯ,
ಗ್ರಾ.ಪಂ. ಅಧ್ಯಕ್ಷರು, ಅಲಂಕಾರು

ಟಾಪ್ ನ್ಯೂಸ್

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.