Alert Virus: ಝೀಕಾಗೆ ಶಿವಮೊಗ್ಗದ ವೃದ್ಧ ಸಾವು, ರಾಜ್ಯದ 9 ಮಂದಿಯಲ್ಲಿ ಸೋಂಕು
ಜಿಗಣಿಯಲ್ಲೇ 6 ಮಂದಿ, ಶಿವಮೊಗ್ಗದ 3 ಮಂದಿಗೆ ವೈರಸ್, ವಿದೇಶದಿಂದ ಬಂದವರಿಗೆ ಮಂಕಿ ಫಾಕ್ಸ್ ತಪಾಸಣೆ: ಸಚಿವ ದಿನೇಶ್
Team Udayavani, Aug 19, 2024, 10:56 PM IST
ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಝೀಕಾ ವೈರಸ್ ಹಾವಳಿ ಹೆಚ್ಚುತ್ತಿದ್ದು, ಹೆಮ್ಮಾರಿ ವೈರಸ್ ಗೆ ಶಿವಮೊಗ್ಗದಲ್ಲಿ 73 ವರ್ಷದ ವೃದ್ಧರೊಬ್ಬರು ಮೃತಪಟ್ಟಿದ್ದು, ಇದರಿಂದ ಝೀಕಾ ದಾಳಿಗೆ ರಾಜ್ಯದಲ್ಲಿ ಮೊದಲ ವ್ಯಕ್ತಿ ಬಲಿಯಾಗಿದ್ಧಾರೆ.
ಈ ಆಗಸ್ಟ್ನಲ್ಲಿ ರಾಜ್ಯದಲ್ಲಿ ಒಟ್ಟು 9 ಝೀಕಾ ವೈರಸ್ ಸೋಂಕು ಪ್ರಕರಣಗಳು ದೃಢಪಟ್ಟಿವೆ. ಈ ಪ್ರಕರಣಗಳಲ್ಲಿ 6 ಮಂದಿ ರಾಜಧಾನಿಯ ಜಿಗಣಿಯವರೇ ಇದ್ದು, ಮೂವರು ಶಿವಮೊಗ್ಗದವರಾಗಿದ್ದಾರೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಕೂಡ ಸ್ಪಷ್ಟನೆ ಪಡಿಸಿದ್ದಾರೆ.
ಸೋಮವಾರ ವಿಕಾಸಸೌಧದಲ್ಲಿ ಆರೋಗ್ಯಾಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಝೀಕಾ ಪ್ರಕರಣಗಳು ವರದಿಯಾಗುತ್ತಿವೆ. ಒಟ್ಟು 9 ಪ್ರಕರಣಗಳಲ್ಲಿ ಐವರು ಮಹಿಳೆಯರು, ಮೂವರು ಪುರುಷರು ಇದ್ದಾರೆ. ಶಿವಮೊಗ್ಗ ಝೀಕಾ ಸೋಂಕಿತ ವ್ಯಕ್ತಿಯು ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಕಾರಣ ಮೃತಪಟ್ಟಿದ್ದಾರೆ. ಸೋಂಕು ಪತ್ತೆಯಾದ ಪ್ರದೇಶದಲ್ಲಿ ಮುನ್ನೆಚ್ಚರಿಕೆ ಕ್ರಮ ವಹಿಸಲಾಗಿದೆ ಎಂದರು.
ಗರ್ಭಿಣಿಗೆ ಸೋಂಕು
ಝೀಕಾ ಸೋಂಕು ದೃಢಪಟ್ಟವರಲ್ಲಿ ಜಿಗಣಿಯ ಗರ್ಭಿಣಿಯೂ ಇದ್ದಾರೆ. ಈಗಾಗಲೇ ಅವರ ಆರೋಗ್ಯ ತಪಾಸಣೆ ನಡೆಸಲಾಗಿದ್ದು, ಆರೋಗ್ಯವಾಗಿದ್ದಾರೆ ಎಂದರು.
ವಿದೇಶದಿಂದ ಬಂದವರಿಗೆ ಮಂಕಿ ಫಾಕ್ಸ್ ತಪಾಸಣೆ
ಆರೋಗ್ಯ ಇಲಾಖೆಯ ಸರ್ವೇಕ್ಷಣಾ ಘಟಕ ಶೀಘ್ರ ಸಜ್ಜು
ವಿದೇಶಗಳಿಂದ ವಿಮಾನ ನಿಲ್ದಾಣ ಹಾಗೂ ಸಮುದ್ರದ ಬಂದರುಗಳ ಮೂಲಕ ರಾಜ್ಯಕ್ಕೆ ಪ್ರವೇಶ ಪಡೆಯುವವರಲ್ಲಿ ಮಂಕಿ ಪಾಕ್ಸ್ ಲಕ್ಷಣಗಳಿದ್ದರೆ ತತ್ಕ್ಷಣವೇ ತಪಾಸಣೆಗೆ ಒಳಪಡಿಸುವಂತೆ ಅಧಿಕಾರಿಗಳಿಗೆ ಕೇಂದ್ರ ಆರೋಗ್ಯ ಇಲಾಖೆ ಮೌಖಿಕ ಆದೇಶ ನೀಡಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ವಿಕಾಸಸೌಧದಲ್ಲಿ ಮಂಕಿ ಪಾಕ್ಸ್ ಸಂಬಂಧ ಅಧಿಕಾರಿಗಳ ನೇತೃತ್ವದಲ್ಲಿ ಸಭೆ ನಡೆಸಿ ಮಾತನಾಡಿ, ಮಂಕಿಪಾಕ್ಸ್ ಕುರಿತು ಕೇಂದ್ರದಿಂದ ನಿಗದಿತ ಮಾರ್ಗಸೂಚಿ ಬಂದಿಲ್ಲ. ರಾಜ್ಯ ಆರೋಗ್ಯ ಇಲಾಖೆಯ ಸರ್ವೇಕ್ಷಣಾ ಘಟಕ ಸಜ್ಜುಗೊಳಿಸಲಾಗುತ್ತದೆ ಎಂದರು. ಸೋಂಕು ಎದುರಿಸಲು ಅಗತ್ಯವಿರುವ ಕ್ರಮ ಕೈಗೊಳ್ಳಲಾಗುತ್ತದೆ. ಜನರು ಭಯಪಡುವ ಅಗತ್ಯವಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Viral Disease: ಕೇರಳದಲ್ಲಿ ಎಂ ಫಾಕ್ಸ್ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್
Mangaluru: ಕದ್ರಿ ಪಾರ್ಕ್ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ
Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್ ಅಧಿಕಾರಿ: ಪುಷ್ಪಾ ಅಮರನಾಥ್
Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ
ISPRL Programme: ಪಾದೂರು ಜಲ್ಲಿ ಕ್ರಷರ್: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.