![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Feb 27, 2020, 4:00 PM IST
ಬೆಂಗಳೂರು: ಗೃಹ ಸಚಿವ ಅಮಿತ್ ಶಾ ಹೇಳುವುದೆಲ್ಲಾ ಸುಳ್ಳು. ಮೋದಿ ಪ್ರಧಾನಿಯಾಗಿ ಸುಳ್ಳು ಹೇಳ್ತಿದ್ದಾರೆ. ಅತ್ಯಂತ ಕೆಟ್ಟವರ ಕೈಯಲ್ಲಿ ಅಧಿಕಾರ ಸಿಕ್ಕಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.
ಸಿಎಎ ವಿರುದ್ಧದ ಮಹಿಳಾ ಕಾಂಗ್ರೆಸ್ ಕಾರ್ಯಾಗಾರದಲ್ಲಿ ಸಿದ್ದರಾಮಯ್ಯ ಮಾತನಾಡಿದರು. ಮನುಷ್ಯತ್ವ ಇಲ್ಲದವರ ಕೈಯಲ್ಲಿ ಅಧಿಕಾರವಿದೆ. ದೆಹಲಿಯಲ್ಲಿ 35 ಮಂದಿ ಸತ್ತಿದ್ದಾರೆ. ಪ್ರಚೋದನಕಾರಿ ಭಾಷಣ ಮಾಡಿದವರ ಮೇಲೆ ಕೇಸ್ ಹಾಕಿದ್ರಾ ಎಂದು ಕೇಳಿದ ಜಡ್ಜ್ ರನ್ನು ವರ್ಗಾವಣೆ ಮಾಡಿದ್ದಾರೆ. ದೆಹಲಿ ವಿವಿಗೆ ಬಿಜೆಪಿ ಅವರೇ ಒಳ ಹೋಗಿ ನುಗ್ಗಿ ಹೊಡೆದರು. ಅವರ ಮೇಲೆ ಕೇಸ್ ದಾಖಲಾಗಿಲ್ಲ. ಇವರು ಅತ್ಯಂತ ಕ್ರೂರಿಗಳು, ಸಂವಿಧಾನ ವಿರೋಧಿಗಳು ಎಂದು ಆರೋಪಿಸಿದ್ದಾರೆ.
ನನ್ನ ಜನ್ಮ ದಿನಾಂಕ ಇಲ್ಲ. ಶಾಲೆಯ ಮಾಸ್ತರ್ ಬರೆದುಕೊಂಡಿದ್ದೇ ಜನ್ಮ ದಿನಾಂಕ. ಇವರ ಪ್ರಕಾರ ನಾನು ಡೌಟ್ ಫುಲ್ ಪ್ರಜೆ. ನನ್ನನ್ನ ಜೈಲಿಗೆ ಹಾಕ್ತರಾ. ನನ್ನ ವೋಟು ಕಿತ್ತುಕೊಳ್ತಾರಾ ಎಂದು ಪ್ರಶ್ನಿಸಿದರು.
ಇದು ಸಂವಿಧಾನ ಮತ್ತು ಮನುಸ್ಮೃತಿ ನಡುವೆ ನಡೆಯುತ್ತಿರುವ ಯುದ್ಧ. ಪ್ರಜಾಪ್ರಭುತ್ವ ಉಳಿಸುವುದು ನಮ್ಮ ಜವಾಬ್ದಾರಿ. ಸಂವಿಧಾನ ವಿರೋಧಿ ಮತ್ತು ಕಾನೂನು ವಿರುದ್ಧ ಇದ್ದರೆ ಪ್ರಶ್ನೆ ಮಾಡಲು ಅವಕಾಶ ಬಿಡಬೇಕು. ಆದರೆ ಅಘೋಷಿತ ತುರ್ತು ಪರಿಸ್ಥಿತಿ ಜಾರಿಯಲ್ಲಿದೆ ಎಂದ ಸಿದ್ದರಾಮಯ್ಯ ಮೋದಿ ಮತ್ತು ಅಮಿತ್ ಶಾ ವಿನಾಶಕಾರಿಗಳು. ವಿನಾಶಕಾರಿ ವಿಪರೀತ ಬುದ್ಧಿ ಅನ್ನೋ ಗಾದೆ ಇವರಿಗೆ ಅನ್ವಯಿಸುತ್ತೆ ಎಂದು ಕಿಡಿಕಾರಿದ್ದಾರೆ.
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
You seem to have an Ad Blocker on.
To continue reading, please turn it off or whitelist Udayavani.