Fraud: ದೊಡ್ಡ ಮೊತ್ತದ‌ ಹಣದ ಆಮಿಷ-ಆನ್‌ ಲೈನ್‌ ಗೇಮಿಂಗ್‌ Appನಿಂದ 400 ಕೋಟಿ ರೂ. ವಂಚನೆ!

ಈ ಹಣವನ್ನು ವಿವಿಧ ಕ್ರಿಪ್ಟೋಕರೆನ್ಸಿಗೆ ವರ್ಗಾಯಿಸಿರುವುದಾಗಿ ವರದಿ ತಿಳಿಸಿದೆ.

Team Udayavani, Sep 26, 2024, 1:55 PM IST

Fraud: ದೊಡ್ಡ ಮೊತ್ತದ‌ ಹಣದ ಆಮಿಷ-ಆನ್‌ ಲೈನ್‌ ಗೇಮಿಂಗ್‌ Appನಿಂದ 400 ಕೋಟಿ ರೂ. ವಂಚನೆ!

ನವದೆಹಲಿ: ಆನ್‌ ಲೈನ್‌ ಗೇಮ್‌ (Online Gaming) App ವಿರುದ್ಧದ ಜಾರಿ ನಿರ್ದೇಶನಾಲಯದ ತನಿಖೆಯಲ್ಲಿ ಚೀನಾ ಪ್ರಜೆಗಳು 400 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ಶಾಮೀಲಾಗಿರುವುದು ಪತ್ತೆಯಾಗಿರುವುದಾಗಿ ವರದಿ ತಿಳಿಸಿದೆ.

ಆನ್‌ ಲೈನ್‌ ಗೇಮಿಂಗ್‌ App ಫೈವಿನ್‌ ಗೆ ಲಿಂಕ್‌ ಮಾಡಲಾದ ಕೆಲವು ಚೀನಾ ಪ್ರಜೆಗಳ ಖಾತೆಗಳನ್ನು ಜಾರಿ ನಿರ್ದೇಶನಾಲಯ ಈಗ ಸ್ಥಗಿತಗೊಳಿಸಿರುವುದಾಗಿ ವರದಿ ವಿವರಿಸಿದೆ. ಅಂದಾಜು 25 ಕೋಟಿ ರೂಪಾಯಿ ಹಣವನ್ನು ಇ.ಡಿ ಜಪ್ತಿ ಮಾಡಿದೆ.

ಈಗಾಗಲೇ App ವಂಚನೆ ಪ್ರಕರಣದಲ್ಲಿ ಚೀನಾ ಪ್ರಜೆಗಳನ್ನು ಬೆಂಬಲಿಸಿದ್ದ ನಾಲ್ವರು ಭಾರತೀಯರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಕೋಲ್ಕತಾದಲ್ಲಿ ಬಂಧಿಸಿದ್ದರು.

ಮಿನಿ ಗೇಮ್ಸ್‌ ಗಳನ್ನು ಆಡುವ ಮೂಲಕ ಸುಲಭವಾಗಿ ಹಣಗಳಿಸಬಹುದು ಎಂಬ ಆಮಿಷದೊಂದಿಗೆ ಫೈವಿನ್‌ App ಬಳಕೆದಾರರನ್ನು ಸೆಳೆದು ವಂಚಿಸುತ್ತಿತ್ತು ಎಂದು Binance ಪ್ರಕಟನೆ ತಿಳಿಸಿದೆ.

ಸುಲಭವಾಗಿ ಹಣ ಗಳಿಸಬಹುದು ಎಂಬ ಆಮಿಷದಿಂದ ಹೊಸ ಬಳಕೆದಾರರು Appನಲ್ಲಿ ಖಾತೆ ತೆರೆದು ವಿವಿಧ ಪೇಮೆಂಟ್‌ ಮಾರ್ಗದ ಮೂಲಕ ಗೇಮ್‌ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುತ್ತಿದ್ದರು. ಬಳಕೆದಾರರು Appನಲ್ಲಿ ಗಣನೀಯ ಪ್ರಮಾಣದಲ್ಲಿ ಹಣವನ್ನು ತೊಡಗಿಸಿದ ನಂತರ ಹಣವನ್ನು ಹಿಂಪಡೆಯುವ ಅವಕಾಶವನ್ನು App ಬ್ಲಾಕ್‌ ಮಾಡುವ ಮೂಲಕ ಬಳಕೆದಾರರು ವಂಚನೆಗೊಳಗಾಗುತ್ತಿದ್ದರು ಎಂದು ಪ್ರಕಟನೆ ವಿವರಿಸಿದೆ.

ಗೇಮ್‌ ಚಟುವಟಿಕೆಯ ಆಮಿಷದ ಯೋಜನೆಯಲ್ಲಿ ಸುಮಾರು 400 ಕೋಟಿ ರೂಪಾಯಿ ವಂಚಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದು, ಈ ಹಣವನ್ನು ವಿವಿಧ ಕ್ರಿಪ್ಟೋಕರೆನ್ಸಿಗೆ ವರ್ಗಾಯಿಸಿರುವುದಾಗಿ ವರದಿ ತಿಳಿಸಿದೆ.

ಈ ಆನ್‌ ಲೈನ್‌ ಗೇಮಿಂಗ್‌ Appಗೆ ಹೆಚ್ಚು, ಹೆಚ್ಚು ಜನರು ವಂಚನೆಗೊಳಗಾಗುತ್ತಿರುವ ಬಗ್ಗೆ ಸ್ಥಳೀಯ ಪೊಲೀಸರು ದೂರುಗಳನ್ನು ಸ್ವೀಕರಿಸತೊಡಗಿದ್ದರು. ನಂತರ ದೂರುಗಳ ಸಂಖ್ಯೆ ಹೆಚ್ಚಾದ ಮೇಲೆ ಪ್ರಕರಣವನ್ನು ಜಾರಿ ನಿರ್ದೇಶನಾಲಯಕ್ಕೆ ವರ್ಗಾಯಿಸಲಾಗಿತ್ತು. ಆ ಬಳಿಕ ಕೆಲವು ಭಾರತೀಯರ ನೆರವಿನೊಂದಿಗೆ ಚೀನಾ ಪ್ರಜೆಗಳು ಈ ವಂಚನೆ ಎಸಗಿರುವುದು ತನಿಖೆಯಲ್ಲಿ ಪತ್ತೆಯಾಗಿತ್ತು.

ಟಾಪ್ ನ್ಯೂಸ್

K. Lakshminarayanana: ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ. ಲಕ್ಷ್ಮೀ ನಾರಾಯಣ ನಿಧನ

K. Lakshminarayanana: ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ. ಲಕ್ಷ್ಮೀ ನಾರಾಯಣ ನಿಧನ

2-bng

Bengaluru: ಮದುವೆ ಮರೆಮಾಚಿದಕ್ಕೆ 59 ತುಂಡು ಮಾಡಿ ಹತ್ಯೆ

MCD ಸ್ಥಾಯಿ ಸಮಿತಿ ಸ್ಥಾನಕ್ಕೆ ಇಂದೇ ಚುನಾವಣೆ… ಮಧ್ಯಾಹ್ನ 1 ಗಂಟೆಗೆ ಮುಹೂರ್ತ ಫಿಕ್ಸ್

MCD ಸ್ಥಾಯಿ ಸಮಿತಿ ಸ್ಥಾನಕ್ಕೆ ಇಂದೇ ಚುನಾವಣೆ… ಮಧ್ಯಾಹ್ನ 1 ಗಂಟೆಗೆ ಮುಹೂರ್ತ ಫಿಕ್ಸ್

World Tourism Day: ಹಂಪಿ ಪಯಣದ ಹ್ಯಾಪಿ ಕಥನ

World Tourism Day: ಹಂಪಿ ಪಯಣದ ಹ್ಯಾಪಿ ಕಥನ

SEMI-Cond

World Digital Revolution: ಜಾಗತಿಕ ರಾಜಕಾರಣಕ್ಕೆ ಸೆಮಿಕಂಡಕ್ಟರ್‌

CM-Mysore1

MUDA Scam: ಇಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್‌ ಸಾಧ್ಯತೆ

Sky-dia

Tourism Spot: ರಾಜ್ಯದ ಎರಡನೇ “ಸ್ಕೈ ಡೈನಿಂಗ್‌’ ತಾಣವಾಗಲಿದೆ ಕುಂದಾಪುರದ ತ್ರಾಸಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MCD ಸ್ಥಾಯಿ ಸಮಿತಿ ಸ್ಥಾನಕ್ಕೆ ಇಂದೇ ಚುನಾವಣೆ… ಮಧ್ಯಾಹ್ನ 1 ಗಂಟೆಗೆ ಮುಹೂರ್ತ ಫಿಕ್ಸ್

MCD ಸ್ಥಾಯಿ ಸಮಿತಿ ಸ್ಥಾನಕ್ಕೆ ಇಂದೇ ಚುನಾವಣೆ… ಮಧ್ಯಾಹ್ನ 1 ಗಂಟೆಗೆ ಮುಹೂರ್ತ ಫಿಕ್ಸ್

MONEY (2)

Minimum wages; ಅಸಂಘಟಿತ ಕಾರ್ಮಿಕರ ಕನಿಷ್ಠ ವೇತನ ಹೆಚ್ಚಿಸಿದ ಕೇಂದ್ರ

online

400 crores ಆನ್‌ಲೈನ್‌ ಗೇಮಿಂಗ್‌ ಆ್ಯಪ್‌ ವಂಚನೆ ಪತ್ತೆ

robbers

Leopard cage; ಚಿರತೆ ಬೋನಿನಲ್ಲಿಟ್ಟಿದ್ದ ಮೇಕೆ ಕದ್ದೊಯ್ದ ಖದೀಮರು!

1-wqewewq

Dubai; ಪತ್ನಿ ಬಿಕಿನಿ ಧರಿಸಲು 418 ಕೋಟಿ ರೂ.ಗೆ ದ್ವೀಪ ಖರೀದಿ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

3-thirthahalli

Thirthahalli: ಹಣ ಇಟ್ಟು ಇಸ್ಪೀಟ್ ಆಡುತ್ತಿದ್ದವರ ಬಂಧನ!

K. Lakshminarayanana: ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ. ಲಕ್ಷ್ಮೀ ನಾರಾಯಣ ನಿಧನ

K. Lakshminarayanana: ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ. ಲಕ್ಷ್ಮೀ ನಾರಾಯಣ ನಿಧನ

2-bng

Bengaluru: ಮದುವೆ ಮರೆಮಾಚಿದಕ್ಕೆ 59 ತುಂಡು ಮಾಡಿ ಹತ್ಯೆ

MCD ಸ್ಥಾಯಿ ಸಮಿತಿ ಸ್ಥಾನಕ್ಕೆ ಇಂದೇ ಚುನಾವಣೆ… ಮಧ್ಯಾಹ್ನ 1 ಗಂಟೆಗೆ ಮುಹೂರ್ತ ಫಿಕ್ಸ್

MCD ಸ್ಥಾಯಿ ಸಮಿತಿ ಸ್ಥಾನಕ್ಕೆ ಇಂದೇ ಚುನಾವಣೆ… ಮಧ್ಯಾಹ್ನ 1 ಗಂಟೆಗೆ ಮುಹೂರ್ತ ಫಿಕ್ಸ್

World Tourism Day: ಹಂಪಿ ಪಯಣದ ಹ್ಯಾಪಿ ಕಥನ

World Tourism Day: ಹಂಪಿ ಪಯಣದ ಹ್ಯಾಪಿ ಕಥನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.