Andhra Pradesh: ಕೊನೆಗೂ 31 ತಿಂಗಳ ಬಳಿಕ ಸಿಎಂ “ಶಪಥ” ಪೂರೈಸಿದ ಚಂದ್ರಬಾಬು ನಾಯ್ದು!

2021ರಲ್ಲಿ ವೈಎಸ್‌ಆರ್‌ಪಿ ಸದಸ್ಯರ ನಿಂದನೆಯಿಂದ ಹೊರ ನಡೆದಿದ್ದ ಟಿಡಿಪಿ ಮುಖ್ಯಸ್ಥ

Team Udayavani, Jun 21, 2024, 4:04 PM IST

Naidu

ಅಮರಾವತಿ:  ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖ್ಯಸ್ಥ ಚಂದ್ರಬಾಬು ನಾಯ್ಡು ‘ತನ್ನ ಕುಟುಂಬಕ್ಕೆ ಅವಮಾನವಾಗಿದೆ’ಎಂದು ಸದನದಿಂದ ಹೊರಬಂದ 31 ತಿಂಗಳ ನಂತರ ಇಂದು (ಶುಕ್ರವಾರ) ಆಂಧ್ರ ಪ್ರದೇಶ ವಿಧಾನಸಭೆಗೆ ಮುಖ್ಯಮಂತ್ರಿಯಾಗಿ ಮರಳಿದ್ದಾರೆ. ನಾಯ್ಡು ನವೆಂಬರ್ 2021ರಲ್ಲಿ ಮುಖ್ಯಮಂತ್ರಿಯಾದ ನಂತರವೇ ವಿಧಾನಸಭೆಗೆ ಹಿಂತಿರುಗುವುದಾಗಿ ಶಪಥ ಮಾಡಿದ್ದರು, ಆಂಧ್ರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಅವರ ಪಕ್ಷವು ಪ್ರಚಂಡ ಗೆಲುವು ದಾಖಲಿಸಿ ಪ್ರತಿಜ್ಞೆಯನ್ನು ಪಾಲಿಸಿದ್ದಾರೆ.

ಆಂಧ್ರ ವಿಧಾನಸಭೆಯಲ್ಲಿ ಶುಕ್ರವಾರ ನೂತನ ಸದಸ್ಯರ ಪ್ರಮಾಣವಚನ ಕಾರ್ಯಕ್ರಮ ಏರ್ಪಡಿಸಲಾಗಿತ್ತು. 175 ಸದಸ್ಯ ಬಲದ ವಿಧಾನಸಭೆಯಲ್ಲಿ ಟಿಡಿಪಿ 135 ಸ್ಥಾನಗಳ ಗೆದ್ದರೆ, ಅವರ ಮಿತ್ರಪಕ್ಷಗಳಾದ ಜನಸೇನಾ ಮತ್ತು ಬಿಜೆಪಿ ಕ್ರಮವಾಗಿ 21 ಮತ್ತು 8 ಸ್ಥಾನಗಳ ಗೆದ್ದಿವೆ. ನಾಯ್ಡು ಅವರು ಶುಕ್ರವಾರ ಮುಖ್ಯಮಂತ್ರಿಯಾಗಿ ಕಾಲಿಡುತ್ತಿದ್ದಂತೆ ಅವರಿಗೆ ಆತ್ಮೀಯ ಸ್ವಾಗತ ನೀಡಲು ಇಡೀ ಸದನ ಎದ್ದು ನಿಂತಿದೆ. ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಇದು ನಾಲ್ಕನೇ ಅವಧಿಯಾಗಿದೆ.

ಆಂಧ್ರ ವಿಧಾನಸಭೆಯಲ್ಲಿ ಅಂದು ಏನಾಗಿತ್ತು?:  

ನವೆಂಬರ್ 19, 2021 ರಂದು, ಆಗಿನ ಆಡಳಿತದಲ್ಲಿದ್ದ ಯುವಜನ ಶ್ರಮಿಕ ರೈತ ಕಾಂಗ್ರೆಸ್ ಪಕ್ಷದ (ವೈಎಸ್‌ಆರ್‌ಸಿಪಿ) ಸದಸ್ಯರು ತಮ್ಮ ಪತ್ನಿಯ ಬಗ್ಗೆ ಮಾಡಿದ ನಿಂದನೀಯ ಹೇಳಿಕೆಗಳಿಂದ ನೊಂದು ನಾಯ್ಡು ಸದನ ತೊರೆದಿದ್ದರು. ಮಹಿಳಾ ಸಬಲೀಕರಣದ ಕುರಿತು ನಡೆದ ಚರ್ಚೆಯಲ್ಲಿ ಕೈ ಮುಗಿದು ಕಣ್ಣೀರು ಹಾಕಿ ನಾಯ್ಡು ಸದನದಿಂದ ಹೊರ ನಡೆದಿದ್ದರು. ಇನ್ನು ಮುಂದೆ ನಾನು ಈ ಸಭೆಗೆ ಹಾಜರಾಗಲ್ಲ. ನಾನು ಮುಖ್ಯಮಂತ್ರಿಯಾದ ನಂತರವೇ ಸದನಕ್ಕೆ ಮರಳುತ್ತೇನೆ ಎಂದು ಹೇಳಿದ ನಾಯ್ಡು, ಮಹಾಭಾರತದಲ್ಲಿ ದ್ರೌಪದಿಯನ್ನು ಅವಮಾನಿಸಿದ ಸಭಾಂಗಣವನ್ನು ಉಲ್ಲೇಖಿಸಿ ಈ ಸಭೆಯು ‘ಕೌರವ ಸಭೆ’ಯಾಗಿದೆ ಎಂದು ಹೇಳಿ ಜರಿದಿದ್ದರು.

2019 ರ ರಾಜ್ಯ ಚುನಾವಣೆಯಲ್ಲಿ ವೈಎಸ್ ಜಗನ್ ಮೋಹನ್ ರೆಡ್ಡಿ ನೇತೃತ್ವದ ಪಕ್ಷ 175 ರಲ್ಲಿ 151 ಸ್ಥಾನಗಳ ಗೆದ್ದು ಅಧಿಕಾರ ಹಿಡಿದಿತ್ತು. ಈ ಮಧ್ಯೆ, ಟಿಡಿಪಿ ಕೇವಲ 23 ಸ್ಥಾನಗಳ ಗಳಿಸಿ ವಿಪಕ್ಷ ಸ್ಥಾನದಲ್ಲಿತ್ತು.

2024ರಲ್ಲಿ ನಾಯ್ಡು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ಮತ್ತೆ ಆಂಧ್ರಪ್ರದೇಶದ ಸಿಎಂ ಆಗಿ ಮರಳಿದರು.  ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗಳೆರಡರಲ್ಲೂ ಅವರು ದೊಡ್ಡ ಗೆಲುವು ಸಾಧಿಸಿದರು, ಮುಖ್ಯಮಂತ್ರಿ ಗದ್ದುಗೆಗೇರಿದ ಅವರು ಕೇಂದ್ರದಲ್ಲಿ ದಾಖಲೆಯ ಮೂರನೇ ಅವಧಿಯನ್ನು ಗೆದ್ದ ಎನ್‌ಡಿಎ ಮೈತ್ರಿಕೂಟದಲ್ಲಿ ಪ್ರಮುಖ ಮುಖವಾಗಿ ಹೊರಹೊಮ್ಮಿದ್ದಾರೆ.

ಟಾಪ್ ನ್ಯೂಸ್

Road Mishap: ಕೆಎಸ್‌ಆರ್‌ಟಿಸಿ ಬಸ್ -ದ್ವಿಚಕ್ರ ವಾಹನ ಢಿಕ್ಕಿ ; ಇಬ್ಬರ ಸಾವು

Road Mishap: ಕೆಎಸ್‌ಆರ್‌ಟಿಸಿ ಬಸ್ -ದ್ವಿಚಕ್ರ ವಾಹನ ಢಿಕ್ಕಿ; ಇಬ್ಬರ ಸಾವು

Plastic ತ್ಯಾಜ್ಯ ಮನುಕುಲಕ್ಕೆ ಮಾರಕ: ಫ್ರಾನ್ಸ್ ದೇಶದ ವಿದ್ಯಾರ್ಥಿ ಸೋರೇನ್‌

Plastic ತ್ಯಾಜ್ಯ ಮನುಕುಲಕ್ಕೆ ಮಾರಕ: ಫ್ರಾನ್ಸ್ ದೇಶದ ವಿದ್ಯಾರ್ಥಿ ಸೋರೇನ್‌

Siruguppa ಕಳ್ಳತನ ಪ್ರಕರಣ: 330 ಭತ್ತದ ಚೀಲ ವಶಪಡಿಸಿಕೊಂಡ ಪೊಲೀಸರು

Siruguppa ಕಳ್ಳತನ ಪ್ರಕರಣ: 330 ಭತ್ತದ ಚೀಲ ವಶಪಡಿಸಿಕೊಂಡ ಪೊಲೀಸರು

DK-Shivakumar

Chennapattana ನನ್ನ ನಾಯಕತ್ವದಲ್ಲೇ ಬೆಂಗಳೂರಿಗೆ ಸೇರಲಿದೆ: ಡಿಕೆಶಿ

Kumta ದೇವಸ್ಥಾನದ ಚಿನ್ನಾಭರಣ ಕಳ್ಳತನ ಪ್ರಕರಣ: ಆರೋಪಿಗಳ ಬಂಧನKumta ದೇವಸ್ಥಾನದ ಚಿನ್ನಾಭರಣ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ

Kumta ದೇವಸ್ಥಾನದ ಚಿನ್ನಾಭರಣ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ

Chintamani: ಒಂದು ವರ್ಷದ ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ಮಹಿಳೆ… ದೃಶ್ಯ ಸೆರೆ

Chintamani: ಒಂದು ವರ್ಷದ ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ಮಹಿಳೆ… ದೃಶ್ಯ ಸೆರೆ

BK-hariprasad

RSSನಿಂದ ತುರ್ತು ಪರಿಸ್ಥಿತಿಗೆ ಬೆಂಬಲ: ಎಂಎಲ್‌ಸಿ ಬಿ.ಕೆ.ಹರಿಪ್ರಸಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jarkhand-CM-Resign

Jharkand: ಮುಖ್ಯಮಂತ್ರಿ ಸ್ಥಾನಕ್ಕೆ ಚಂಪೈ ಸೊರೇನ್‌ ರಾಜೀನಾಮೆ

Jharkhand: ಚಂಪೈ ಸೊರೇನ್‌ ರಾಜೀನಾಮೆ…ಹೇಮಂತ್‌ ಸೊರೇನ್ ಮತ್ತೆ ಜಾರ್ಖಂಡ್‌ ಸಿಎಂ?

Jharkhand: ಚಂಪೈ ಸೊರೇನ್‌ ರಾಜೀನಾಮೆ…ಹೇಮಂತ್‌ ಸೊರೇನ್ ಮತ್ತೆ ಜಾರ್ಖಂಡ್‌ ಸಿಎಂ?

ಕಂಗನಾಗೆ ಕಪಾಳಮೋಕ್ಷ ಮಾಡಿದ್ದ CISF ಮಹಿಳಾ ಕಾನ್ಸ್‌ ಸ್ಟೇಬಲ್‌ ಬೆಂಗಳೂರಿಗೆ ವರ್ಗಾವಣೆ?

ಕಂಗನಾಗೆ ಕಪಾಳಮೋಕ್ಷ ಮಾಡಿದ್ದ CISF ಮಹಿಳಾ ಕಾನ್ಸ್‌ ಸ್ಟೇಬಲ್‌ ಬೆಂಗಳೂರಿಗೆ ವರ್ಗಾವಣೆ?

4-panaji

ಯುವಪೀಳಿಗೆ ಪತ್ರಿಕೆ ಓದುವ ಆಸಕ್ತಿ ಬೆಳೆಸುವ ರೀತಿ ಬರವಣಿಗೆ ಪತ್ರಕರ್ತರಲ್ಲಿರಬೇಕು : ಸಾವಂತ್

Bridges collapse: ಬಿಹಾರದಲ್ಲಿ ಮತ್ತೊಂದು ಸೇತುವೆ ಕುಸಿತ… 15 ದಿನದಲ್ಲಿ 7ನೇ ಪ್ರಕರಣ

Bridges Collapse: ಬಿಹಾರದಲ್ಲಿ ಮತ್ತೊಂದು ಸೇತುವೆ ಕುಸಿತ… 15 ದಿನದಲ್ಲಿ 7ನೇ ಪ್ರಕರಣ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Road Mishap: ಕೆಎಸ್‌ಆರ್‌ಟಿಸಿ ಬಸ್ -ದ್ವಿಚಕ್ರ ವಾಹನ ಢಿಕ್ಕಿ ; ಇಬ್ಬರ ಸಾವು

Road Mishap: ಕೆಎಸ್‌ಆರ್‌ಟಿಸಿ ಬಸ್ -ದ್ವಿಚಕ್ರ ವಾಹನ ಢಿಕ್ಕಿ; ಇಬ್ಬರ ಸಾವು

Plastic ತ್ಯಾಜ್ಯ ಮನುಕುಲಕ್ಕೆ ಮಾರಕ: ಫ್ರಾನ್ಸ್ ದೇಶದ ವಿದ್ಯಾರ್ಥಿ ಸೋರೇನ್‌

Plastic ತ್ಯಾಜ್ಯ ಮನುಕುಲಕ್ಕೆ ಮಾರಕ: ಫ್ರಾನ್ಸ್ ದೇಶದ ವಿದ್ಯಾರ್ಥಿ ಸೋರೇನ್‌

Siruguppa ಕಳ್ಳತನ ಪ್ರಕರಣ: 330 ಭತ್ತದ ಚೀಲ ವಶಪಡಿಸಿಕೊಂಡ ಪೊಲೀಸರು

Siruguppa ಕಳ್ಳತನ ಪ್ರಕರಣ: 330 ಭತ್ತದ ಚೀಲ ವಶಪಡಿಸಿಕೊಂಡ ಪೊಲೀಸರು

DK-Shivakumar

Chennapattana ನನ್ನ ನಾಯಕತ್ವದಲ್ಲೇ ಬೆಂಗಳೂರಿಗೆ ಸೇರಲಿದೆ: ಡಿಕೆಶಿ

Kumta ದೇವಸ್ಥಾನದ ಚಿನ್ನಾಭರಣ ಕಳ್ಳತನ ಪ್ರಕರಣ: ಆರೋಪಿಗಳ ಬಂಧನKumta ದೇವಸ್ಥಾನದ ಚಿನ್ನಾಭರಣ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ

Kumta ದೇವಸ್ಥಾನದ ಚಿನ್ನಾಭರಣ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.