Andhra Pradesh: ಡಿಸಿಎಂ ಪವನ್‌ ಕಲ್ಯಾಣ್‌ ವಾರಾಹಿ ದೀಕ್ಷೆ ಪಡೆದಿದ್ದೇಕೆ?

ಇಂದಿನಿಂದ 11 ದಿನಗಳ ಕಾಲ ಹಣ್ಣು, ದ್ರವ ಆಹಾರ ಮಾತ್ರ ಸೇವನೆ

Team Udayavani, Jun 26, 2024, 4:10 PM IST

Pawan-kalyan

ಅಮರಾವತಿ (ಆಂಧ್ರ ಪ್ರದೇಶ): ರಾಜ್ಯದಲ್ಲಿಈಗ ವಾರಾಹಿ ಮಾತೆಯ ಮಾತು ಕೇಳಿ ಬರುತ್ತಿದೆ. ಅದಕ್ಕೆ ಕಾರಣ ನೂತನ ಉಪ ಮುಖ್ಯಮಂತ್ರಿ, ನಟ ಪವನ್ ಕಲ್ಯಾಣ್ (Pawan Kalyan) ಕೈಗೊಳ್ಳುತ್ತಿರುವ ವಾರಾಹಿ ವಿಜಯ ದೀಕ್ಷೆ ಆಗಿದೆ. ಬುಧವಾರದಿಂದ (ಜೂ.26) 11 ದಿನಗಳ ಕಾಲ ಪವನ್ ವಾರಾಹಿ ಮಾತಾ ದೀಕ್ಷೆಯಲ್ಲಿ ಇರಲಿದ್ದಾರೆ ಎಂದು ಜನಸೇನಾ ಪಕ್ಷ ತಿಳಿಸಿದೆ.

ಈ ದೀಕ್ಷೆಯ ಭಾಗವಾಗಿ, ಪವನ್ ಕಲ್ಯಾಣ್ 11 ದಿನಗಳವರೆಗೆ ಕೇವಲ ಹಾಲು, ಹಣ್ಣುಗಳು ಮತ್ತು ಇತರ ದ್ರವ ಆಹಾರಗಳ ಮಾತ್ರವೇ ಸೇವಿಸುತ್ತಾರೆ. ಗಮನಾರ್ಹವೆಂದರೆ ಕಳೆದ ವರ್ಷ ಜೂನ್ ನಲ್ಲಿ ಪವನ್ ವಾರಾಹಿ ವಿಜಯ ಯಾತ್ರೆ ಕೈಗೊಂಡು ಅಮ್ಮನವರಿಗೆ ಪೂಜೆ ಸಲ್ಲಿಸಿದ್ದು ಸುದ್ದಿಯಾಗಿತ್ತು. ಈ ಬಾರಿ ಪವನ್ ಡಿಸಿಎಂ ಆಗಿ ದೀಕ್ಷೆ ಪಡೆಯುತ್ತಿರುವುದು ವಿಶೇಷವಾಗಿದೆ.

ನಟ ಪವನ್ ಈ ಹಿಂದೆಯೂ ಹಲವು ದೀಕ್ಷೆಗಳನ್ನು ತೆಗೆದುಕೊಂಡಿದ್ದಾರೆ. ಚಾತುರ್ಮಾಸ ಆಚರಣೆ ಕೈಗೊಂಡಿದ್ದರು. ಪವನ್ ಕಲ್ಯಾಣ್​​ ನಾಲ್ಕು ತಿಂಗಳ ಕಾಲ ಈ ದೀಕ್ಷೆ ಮುಂದುವರಿಸಿದ್ದರು. ಆ ದೀಕ್ಷೆ ವೇಳೆಯೂ ಸಾತ್ವಿಕ ಆಹಾರದ ನಿಯಮಗಳ ಕಟ್ಟುನಿಟ್ಟಾಗಿ ಪಾಲಿಸಿದ್ದರು.

ವಾರಾಹಿ ಮಾತೆಯ ದೀಕ್ಷೆ ಪಡೆದವರು ಮದ್ಯ, ಮಾಂಸಾಹಾರ ತ್ಯಜಿಸಿ ಬ್ರಹ್ಮಚರ್ಯ ಪಾಲಿಸಬೇಕಿದೆ. ಆಂಧ್ರದ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಈಗ ಇಂತಹ ಕಠಿಣ ದೀಕ್ಷೆ ಮಾಡುತ್ತಿದ್ದಾರೆ.

 


ಈಗ ದೀಕ್ಷೆ ಉದ್ದೇಶವೇನು?   

ಡಿಸಿಎಂ ಪವನ್‌ ಕಲ್ಯಾಣ್‌ ಈ ಬಾರಿ ದೀಕ್ಷೆಯ ಪಡೆದಿರುವುದು ವಾರಾಹಿ ಮಾತೆ ಆಶೀರ್ವಾದ ಹಾಗೂ ಆಂಧ್ರದ ಜನರ ಕಲ್ಯಾಣ, ಸಮೃದ್ಧಿ, ಅಭಿವೃದ್ಧಿಗಾಗಿ ಈ ದೀಕ್ಷೆ ಕೈಗೊಂಡಿದ್ದಾರೆ.

ವಾರಾಹಿ ಮಾತೆ ವಿಶೇಷತೆ ಏನು?

ವಾರಾಹಿ ಮಾತೆ ಸಪ್ತಮಾತೃಕೆಯರಲ್ಲಿ ಒಬ್ಬರು. ಈಕೆ ಲಲಿತಾ ಪರಮೇಶ್ವರಿ, ಸರ್ವ ಸೈನ್ಯಾಧಕ್ಷೆ. ಮಹಾಲಕ್ಷ್ಮಿ ಪ್ರತಿರೂಪ, ದೇವಿಯು ದುಷ್ಟ ಶಿಕ್ಷಣ ಮತ್ತು ಶಿಷ್ಟ ರಕ್ಷಣೆಗಾಗಿ ಮತ್ತು ಸದ್ಗುಣ ರಕ್ಷಣೆಗಾಗಿ ಸದಾ ಶಸ್ತ್ರಸಜ್ಜಿತಳಾಗಿರುತ್ತಾಳೆ. ದೇವಿಯು ಉಗ್ರವಾಗಿ ಕಂಡರೂ, ತುಂಬಾ ಕರುಣಾಮಯಿ. ವಾರಾಹಿ ಮಾತಾ ಭೂದೇವಿಯು ನೇಗಿಲು ಧರಿಸಿರುವ ಧಾನ್ಯ ದೇವತೆಯೂ ಹೌದು. ಉತ್ತಮ ಫಸಲು ಮತ್ತು ಉತ್ತಮ ಕೃಷಿಗಾಗಿ ಎಲ್ಲ ರೈತರು ವಾರಾಹಿ ಮಾತೆಯ ಪೂಜಿಸುತ್ತಾರೆ.

ಟಾಪ್ ನ್ಯೂಸ್

Swamijis should talk to High command about CM change: Chaluvarayaswamy

CM ಬದಲಾವಣೆ ಬಗ್ಗೆ ಸ್ವಾಮೀಜಿಗಳು ಬೇಕಾದರೆ ವರಿಷ್ಠರ ಜತೆ ಮಾತನಾಡಲಿ: ಚಲುವರಾಯಸ್ವಾಮಿ‌

10

ಸ್ತನ ಕ್ಯಾನ್ಸರ್‌ ಕಾಡಿದ ಚಿತ್ರರಂಗದ ಸುಂದರಿಯರಿವರು.. ಕಾಯಿಲೆಯನ್ನೇ ಗೆದ್ದ ದಿಟ್ಟೆಯರು..

11-uv-fusion

Rajeev Taranath: ಸರೋದ್‌ ಸ್ವರ ಮಾಂತ್ರಿಕನ ಸ್ವರ್ಗಾರೋಹಣ

Hubballi Dharwad Municipal corporation: ಮೇಯರ್ ಆಗಿ ಬಿಜೆಪಿಯ ರಾಮಪ್ಪ ಬಡಿಗೇರ ಆಯ್ಕೆ

Hubballi Dharwad Municipal corporation: ಮೇಯರ್ ಆಗಿ ಬಿಜೆಪಿಯ ರಾಮಪ್ಪ ಬಡಿಗೇರ ಆಯ್ಕೆ

Ayodhya: ರಾಮಪಥದ ಕಳಪೆ ಕಾಮಗಾರಿ-6 ಅಧಿಕಾರಿಗಳನ್ನು ಅಮಾನತುಗೊಳಿಸಿದ ಸಿಎಂ ಯೋಗಿ

Ayodhya: ರಾಮಪಥದ ಕಳಪೆ ಕಾಮಗಾರಿ-6 ಅಧಿಕಾರಿಗಳನ್ನು ಅಮಾನತುಗೊಳಿಸಿದ ಸಿಎಂ ಯೋಗಿ

Mandya; ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಸಾರಿಗೆ ಬಸ್; ಹಲವರಿಗೆ ಗಾಯ

Mandya; ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಸಾರಿಗೆ ಬಸ್; ಹಲವರಿಗೆ ಗಾಯ

Desi Swara: ಏನೂ ಇಲ್ಲದೆಯೂ ಸಂತೋಷವಾಗಿರಿ!

Desi Swara: ಏನೂ ಇಲ್ಲದೆಯೂ ಸಂತೋಷವಾಗಿರಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ayodhya: ರಾಮಪಥದ ಕಳಪೆ ಕಾಮಗಾರಿ-6 ಅಧಿಕಾರಿಗಳನ್ನು ಅಮಾನತುಗೊಳಿಸಿದ ಸಿಎಂ ಯೋಗಿ

Ayodhya: ರಾಮಪಥದ ಕಳಪೆ ಕಾಮಗಾರಿ-6 ಅಧಿಕಾರಿಗಳನ್ನು ಅಮಾನತುಗೊಳಿಸಿದ ಸಿಎಂ ಯೋಗಿ

tamilnadu

Tamil Nadu: ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ… ನಾಲ್ವರು ಮೃತ್ಯು, ನೆರವು ಘೋಷಿಸಿದ ಸಿಎಂ

Flash Floods: ಸೇನಾ ತರಬೇತಿ ವೇಳೆ ಹಠಾತ್ ಪ್ರವಾಹ.. ಓರ್ವ ಯೋಧ ಹುತಾತ್ಮ, ನಾಲ್ವರು ನಾಪತ್ತೆ

Flash Floods: ಸೇನಾ ಸಮರಾಭ್ಯಾಸದ ವೇಳೆ ಹಠಾತ್ ಪ್ರವಾಹ… ಐವರು ಯೋಧರು ಹುತಾತ್ಮ

Dharmapuri Srinivas: ಹೃದಯಾಘಾತದಿಂದ ಕಾಂಗ್ರೆಸ್ ಹಿರಿಯ ನಾಯಕ ಧರ್ಮಪುರಿ ಶ್ರೀನಿವಾಸ್ ನಿಧನ

Dharmapuri Srinivas: ಹೃದಯಾಘಾತದಿಂದ ಕಾಂಗ್ರೆಸ್ ಹಿರಿಯ ನಾಯಕ ಧರ್ಮಪುರಿ ಶ್ರೀನಿವಾಸ್ ನಿಧನ

NEET Paper Leak case: ಸಿಬಿಐನಿಂದ ಜಾರ್ಖಂಡ್‌ ಕಾಲೇಜಿನ ಪ್ರಾಂಶುಪಾಲರ ಬಂಧನ

NEET Paper Leak case: ಸಿಬಿಐನಿಂದ ಜಾರ್ಖಂಡ್‌ ಕಾಲೇಜಿನ ಪ್ರಾಂಶುಪಾಲರ ಬಂಧನ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

No problem anyone comes in front of Martin…: Producer Uday Mehta

Martin ಮುಂದೆ ಯಾರೇ ಬರಲಿ ನೋ ಪ್ರಾಬ್ಲಂ…: ನಿರ್ಮಾಪಕ ಉದಯ್‌ ಮೆಹ್ತಾ

Swamijis should talk to High command about CM change: Chaluvarayaswamy

CM ಬದಲಾವಣೆ ಬಗ್ಗೆ ಸ್ವಾಮೀಜಿಗಳು ಬೇಕಾದರೆ ವರಿಷ್ಠರ ಜತೆ ಮಾತನಾಡಲಿ: ಚಲುವರಾಯಸ್ವಾಮಿ‌

10

ಸ್ತನ ಕ್ಯಾನ್ಸರ್‌ ಕಾಡಿದ ಚಿತ್ರರಂಗದ ಸುಂದರಿಯರಿವರು.. ಕಾಯಿಲೆಯನ್ನೇ ಗೆದ್ದ ದಿಟ್ಟೆಯರು..

12-thekkatte

ಯಡಾಡಿ ಮತ್ಯಾಡಿ(ಗುಡ್ಡೆಅಂಗಡಿ)ಸರಕಾರಿ ಹಿ.ಪ್ರಾ.ಶಾಲೆ:ನೂತನ ಶಾಲಾ ವಾಹನ ಹಸ್ತಾಂತರ ಕಾರ್ಯಕ್ರಮ

BJP Protest; ರೈತರಿಗೆ ಬರೆ ಹಾಕುವ ಸರಕಾರದ ನೀತಿ ನಿರ್ಧಾರ ಬದಲಿಸಲಿ: ಎನ್.ರವಿಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.