ಅಂಗನವಾಡಿ ಕಾರ್ಯಕರ್ತೆಯರಿಗೆ ಉದ್ಯೋಗ ಮುಕ್ತಿ ಭೀತಿ!

ಪೂರ್ವ ಪ್ರಾಥಮಿಕ ತರಗತಿ ಹೆಚ್ಚಳ ಪ್ರಸ್ತಾವದಿಂದ ಮತ್ತಷ್ಟು ಗೊಂದಲ

Team Udayavani, Jan 9, 2020, 6:30 AM IST

34

ಸಾಂದರ್ಭಿಕ ಚಿತ್ರ

ಬೆಂಗಳೂರು: ಒಂದೇ ಓರಗೆಯ ಮಕ್ಕಳ ದಾಖಲಾತಿ ಸಂಬಂಧ ಸರಕಾರಿ ಪೂರ್ವ ಪ್ರಾಥಮಿಕ ಶಾಲೆ ಹಾಗೂ ಅಂಗನವಾಡಿ ನಡುವೆ ಮುಸುಕಿನ ಗುದ್ದಾಟ ನಡೆಯುತ್ತಿರುವ ಮಧ್ಯೆಯೇ, ಇನ್ನಷ್ಟು ಪೂರ್ವ ಪ್ರಾಥಮಿಕ ಶಾಲೆಗಳ ಆರಂಭಕ್ಕೆ ಪ್ರಸ್ತಾವನೆ ಸಲ್ಲಿಕೆಯಾಗಿರುವ ವಿಚಾರ ಬಹಿರಂಗವಾಗಿದೆ. ಇದು ಮತ್ತಷ್ಟು ಗೊಂದಲಕ್ಕೆ ಕಾರಣವಾಗಿದ್ದು, ಅಂಗನವಾಡಿ ಕಾರ್ಯಕರ್ತೆಯರಿಗೆ ಉದ್ಯೋಗ ಕಳೆದು ಕೊಳ್ಳುವ ಭೀತಿ ಎದುರಾಗಿದೆ.

ಈ ಸಂಬಂಧ ರಾಜ್ಯದ ಮುಖ್ಯ ಕಾರ್ಯದರ್ಶಿಯವರು ಶಿಕ್ಷಣ ಇಲಾಖೆಯ ಅಧಿಕಾರಿಗಳು ಮತ್ತು ಅಂಗನವಾಡಿಗೆ ಸಂಬಂಧಿಸಿದ ಅಧಿಕಾರಿಗಳ ಜತೆ ಸಭೆ ನಡೆಸಿದ್ದಾರೆ. ಎರಡೂ ಕಡೆಯವರು ತಂತಮ್ಮ ವಾದವನ್ನು ಮುಖ್ಯ ಕಾರ್ಯದರ್ಶಿಗಳ ಮುಂದಿಟ್ಟಿದ್ದಾರೆ. ಈ ವಿಚಾರವು ಸಚಿವ ಸಂಪುಟ ಸಭೆಯಲ್ಲಿ ಚರ್ಚೆಗೆ ಬರಲಿದ್ದು ಅಲ್ಲಿ ಅಂತಿಮ ನಿರ್ಧಾರವಾಗಲಿದೆ ಎಂದು ಉನ್ನತ ಅಧಿಕಾರಿಯೊಬ್ಬರು ಉದಯವಾಣಿಗೆ ಮಾಹಿತಿ ನೀಡಿದರು.

ಪೂರ್ವ ಪ್ರಾಥಮಿಕ ಶಾಲೆಗೆ ಬೇಡಿಕೆ
ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಈಗಾಗಲೇ ಆರಂಭಿಸಿರುವ ಪೂರ್ವ ಪ್ರಾಥಮಿಕ ತರಗತಿಗಳಿಗೆ ಬೇಡಿಕೆ ಹೆಚ್ಚಿದೆ. ರಾಜ್ಯದಲ್ಲಿರುವ 200ಕ್ಕೂ ಅಧಿಕ ಕರ್ನಾಟಕ ಪಬ್ಲಿಕ್‌ ಶಾಲೆ ಸಹಿತವಾಗಿ ಕೆಲವೊಂದು ಪ್ರಾಥಮಿಕ ಶಾಲೆಗಳ ಆವರಣದಲ್ಲೇ ಪೂರ್ವ ಪ್ರಾಥಮಿಕ ಶಾಲೆಗಳನ್ನು ಕಳೆದ ಶೈಕ್ಷಣಿಕ ವರ್ಷದಿಂದ ಆರಂಭಿಸಲಾಗಿದೆ. ವಿದ್ಯಾರ್ಥಿಗಳ ದಾಖಲಾತಿಯೂ ಇದರಿಂದಾಗಿ ಕೆಲವು ಶಾಲೆಗಳಲ್ಲಿ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಕೆಲವೊಂದು ಜಿಲ್ಲೆಗಳ ಸರಕಾರಿ ಶಾಲೆಗಳು ಪೂರ್ವ ಪ್ರಾಥಮಿಕ ಶಾಲೆಗೆ ಅವಕಾಶ ಕೋರಿ ಇಲಾಖೆಗೆ ಕೇಳಿಕೊಂಡಿವೆ. ಅಲ್ಲದೆ, ಸರಕಾರಿ ಶಾಲಾ ಶಿಕ್ಷಕರ ಸಂಘವೂ ಇದಕ್ಕೆ ಬೇಡಿಕೆ ಇಟ್ಟಿದೆ. ಸರಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿ ತೆರೆಯುವ ಮೂಲಕ ಸರಕಾರಿ ಶಾಲೆಗೆ ಉತ್ತೇಜನ ನೀಡಬೇಕು ಎಂದು ಕೋರಿಕೊಂಡಿದೆ. ಆದರೆ ಸರಕಾರವು ಅಂತಿಮ ನಿರ್ಧಾರ ತೆಗೆದುಕೊಳ್ಳದೇ ಇಲಾಖೆಯು ಈ ವಿಚಾರವಾಗಿ ಯಾವುದೇ ತೀರ್ಮಾನ ಮಾಡುವಂತಿಲ್ಲ.

ಅಂಗನವಾಡಿ ವಲಯ ವಾದ
– ಸರಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿ ತೆರೆಯುವುದರಿಂದ ಅಂಗನವಾಡಿ ಕೇಂದ್ರಗಳನ್ನು ಮುಚ್ಚಬೇಕಾಗುತ್ತದೆ. ಅಂಗನವಾಡಿ ಕಾರ್ಯಕರ್ತೆ ಯರು ಉದ್ಯೋಗ ಕಳೆದು ಕೊಳ್ಳುತ್ತಾರೆ. ಹೀಗಾಗಿ ಸರಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ಶಾಲೆ ತೆರೆಯಬಾರದು ಅಥವಾ ಪೂರ್ವ ಪ್ರಾ.ಶಾಲೆಯ ಸಂಪೂರ್ಣ ವ್ಯವಸ್ಥೆಯನ್ನು ಅಂಗನವಾಡಿಗೆ ವಹಿಸಿಬಿಡಬೇಕು.

ಶಿಕ್ಷಣ ಇಲಾಖೆ ವಾದ
– ಸರಕಾರಿ ಶಾಲೆಯಲ್ಲಿರುವ ಶಿಕ್ಷಕರನ್ನೇ ಬಳಸಿಕೊಂಡು ಪೂರ್ವ ಪ್ರಾಥಮಿಕ ಶಾಲೆ ನಡೆಸುತ್ತೇವೆ. ಹಲವು ಕಡೆಗಳಲ್ಲಿ ಉತ್ತಮ ಬೆಂಬಲ ವ್ಯಕ್ತವಾಗಿದೆ. ಅಲ್ಲದೆ, ಇನ್ನಷ್ಟು ಬೇಡಿಕೆ ಕೂಡ ಬರುತ್ತಿದೆ. ಹೀಗಾಗಿ ಅಂಗನವಾಡಿ ಕೇಂದ್ರಕ್ಕೂ ಸರಕಾರಿ ಪೂರ್ವ ಪ್ರಾಥಮಿಕ ಶಾಲೆಗಳಿಗೂ ಸಂಬಂಧ ಇಲ್ಲ.

– ಅಂಗನವಾಡಿ ಕೇಂದ್ರಗಳು ಮಕ್ಕಳ ಪೌಷ್ಟಿಕಾಂಶದ ವಿಚಾರವಾಗಿ ಹೆಚ್ಚಿನ ಗಮನಹರಿಸಲಿ. ಸರಕಾರಿ ಪೂರ್ವ ಪ್ರಾಥಮಿಕ ಶಾಲೆಗಳು ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಗಮನ ಹರಿಸಲಿವೆ. ಇದರಿಂದ ಅಂಗನವಾಡಿ ಕೇಂದ್ರ ಮತ್ತು ಸರಕಾರಿ ಪೂರ್ವ ಪ್ರಾಥಮಿಕ ತರಗತಿಗಳ ನಡುವೆ ಯಾವುದೇ ಗೊಂದಲ ಸೃಷ್ಟಿಯಾಗುವುದಿಲ್ಲ.

ಹೊಸದಾಗಿ ಪೂರ್ವ ಪ್ರಾಥಮಿಕ ಶಾಲೆ ತೆರೆಯಲು ಸರಕಾರದ ಅನುಮತಿ ಕೋರಿದ್ದೇವೆ. ಈ ಸಂಬಂಧವಾಗಿ ಈಗಾಗಲೇ ಸರಕಾರದ ಮುಖ್ಯ ಕಾರ್ಯದರ್ಶಿ ಸಭೆ ನಡೆಸಿದ್ದಾರೆ. ಇಲಾಖೆಯ ಅಗತ್ಯವನ್ನು ಹೇಳಿದ್ದೇವೆ. ಸರಕಾರವೇ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ.
– ಉಮಾಶಂಕರ್‌, ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ

- ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

Karnataka Govt.,: ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.