Annabhagya Yojana: ಪಡಿತರದಾರರಿಗೆ ಶೀಘ್ರ 10 ಕೆಜಿ ಅಕ್ಕಿ ವಿತರಣೆ ?

2.36 ಲಕ್ಷ ಟನ್‌ ಅಕ್ಕಿಗೆ ಬೇಡಿಕೆ ಇಂದಿನ ಸಂಪುಟ ಸಭೆಯಲ್ಲಿ ಅಂತಿಮ ನಿರ್ಧಾರ ?

Team Udayavani, Aug 22, 2024, 6:35 AM IST

Rice-dist

ಬೆಂಗಳೂರು: ಕರ್ನಾಟಕ ಸರಕಾರದಿಂದ 2.36 ಲಕ್ಷ ಟನ್‌ ಅಕ್ಕಿಗೆ ಬೇಡಿಕೆ ಬಂದಿದ್ದು ಭಾರತೀಯ ಆಹಾರ ನಿಗಮವು 2025ರ ಮಾರ್ಚ್‌ವರೆಗೆ ರಾಜ್ಯಕ್ಕೆ ಅಕ್ಕಿ ಪೂರೈಸಲು ಸಿದ್ಧವಿದೆ ಎಂದು ನಿಗಮದ ಬೆಂಗಳೂರು ಪ್ರಾದೇಶಿಕ ಕಚೇರಿಯ ಜನರಲ್‌ ಮ್ಯಾನೇಜರ್‌ ಮಹೇಶ್ವರಪ್ಪ ತಿಳಿಸಿದ್ದಾರೆ. ಈ ಮೂಲಕ ಪಡಿತರದಾರರಿಗೆ ಶೀಘ್ರದಲ್ಲೇ 10 ಕೆಜಿ ಅಕ್ಕಿ ಪ್ರತಿ ತಿಂಗಳು ವಿತರಣೆ ಮಾಡುವ ಸಾಧ್ಯತೆ ದಟ್ಟವಾಗಿದೆ.

ನಿಗಮದ ಕಚೇರಿಯಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಹೇಶ್ವರಪ್ಪ, ಮಾರ್ಚ್‌ 2025ರ ವರೆಗೆ ಕರ್ನಾಟಕ ಸರಕಾರಕ್ಕೆ ಅಕ್ಕಿ ಒದಗಿಸಲು ಸಿದ್ಧರಿದ್ದೇವೆ. ಕರ್ನಾಟಕ ಸರಕಾರದಿಂದ 2.36 ಲಕ್ಷ ಟನ್‌ ಅಕ್ಕಿಗೆ ಬೇಡಿಕೆ ಬಂದಿದೆ. 18 ಸಾವಿರ ಟನ್‌ ತತ್‌ಕ್ಷಣ ಖರೀದಿಸುವುದಾಗಿ ತಿಳಿಸಿದೆ. ಉಳಿದ ಅಕ್ಕಿ ಖರೀದಿ ಬಗ್ಗೆ ಗುರುವಾರ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುವ ಸಾಧ್ಯತೆಗಳಿವೆ ಎಂದು ತಿಳಿಸಿದ್ದಾರೆ.

ಸರಕಾರಕ್ಕೆ ಮಾಹಿತಿ ನೀಡಿರುವ ನಿಗಮ:
ಕಳೆದ ವರ್ಷದಂತೆ ಈ ವರ್ಷ ಅಕ್ಕಿಯ ಉತ್ಪಾದನೆಯಲ್ಲಿ ಕೊರತೆಯಿರಲಿಲ್ಲ. ಹೀಗಾಗಿ ಕರ್ನಾಟಕ ಸರಕಾರದ ಬೇಡಿಕೆಗೆ ಅನುಗುಣವಾಗಿ ಅಕ್ಕಿ ಪೂರೈಕೆ ಮಾಡುವಂತೆ ಕಳೆದ ಜುಲೈ 29ರಂದು ಭಾರತೀಯ ಆಹಾರ ನಿಗಮದ ಕೇಂದ್ರ ಕಚೇರಿಯಿಂದ ನಮಗೆ ಸೂಚನೆ ಬಂದಿತ್ತು. ಅದರಂತೆ ಜುಲೈ 30ರಂದು ಇಲಾಖೆಯ ಕಾರ್ಯದರ್ಶಿ ಹಾಗೂ ಆಯುಕ್ತರನ್ನು ಭೇಟಿಯಾಗಿ ಅನ್ನಭಾಗ್ಯ ಯೋಜನೆಯಡಿ ರಾಜ್ಯ ಸರಕಾರವು 5 ಕೆ.ಜಿ. ಹೆಚ್ಚುವರಿಯಾಗಿ ನೀಡಬೇಕೆಂದಿರುವ ಅಕ್ಕಿಯನ್ನು ಒದಗಿಸಲು ನಿಗಮ ಸಿದ್ಧವಿದೆ ಎಂದು ಹೇಳಿದ್ದೆವು. ಆ ವೇಳೆ ರಾಜ್ಯ ಸರಕಾರದ ಸಂಬಂಧಿಸಿದ ಅಧಿಕಾರಿಗಳು ಕರ್ನಾಟಕಕ್ಕೆ 2.36 ಲಕ್ಷ ಟನ್‌ ಹೆಚ್ಚುವರಿ ಅಕ್ಕಿಯ ಅಗತ್ಯವಿದೆ ಎಂದಿದ್ದರು ಎಂದು ಮಹೇಶ್ವರಪ್ಪ ತಿಳಿಸಿದ್ದಾರೆ.

ರಾಜ್ಯ ಸರಕಾರವು ನಿಗಮಕ್ಕೆ ಸಲ್ಲಿಸಿದ್ದ ಬೇಡಿಕೆಗೆ ಕೇಂದ್ರ ಸರಕಾರ ಹಾಗೂ ನಿಗಮದ ಮುಖ್ಯ ಕಚೇರಿಯಿಂದ ಒಪ್ಪಿಗೆ ಪಡೆದುಕೊಳ್ಳಲಾಗಿದೆ. 2.36 ಲಕ್ಷ ಟನ್‌ ಅಕ್ಕಿ ಕೊಡಲು ಸಿದ್ಧರಿದ್ದೇವೆ ಎಂದು ಆ.2ರಂದು ಕರ್ನಾಟಕ ಸರಕಾರಕ್ಕೂ ಮಾಹಿತಿ ನೀಡಿದ್ದೇವೆ. ಈ ಬೆಳವಣಿಗೆ ಬಳಿಕ ರಾಜ್ಯ ಸರಕಾರವು ನಮ್ಮನ್ನು ಸಂಪರ್ಕಿಸಿಲ್ಲ. ರಾಜ್ಯ ಸರಕಾರದಲ್ಲಿ ಅಕ್ಕಿ ಖರೀದಿಗೆ ಸಂಬಂಧಿಸಿದ ಪ್ರಕ್ರಿಯೆಗಳು ನಡೆಯುತ್ತಿರುವ ಸಾಧ್ಯತೆಗಳಿವೆ ಎಂದು ವಿವರಿಸಿದರು.

ಕಳೆದ ವರ್ಷ ಮಳೆಯ ಅಭಾವ ಸೇರಿದಂತೆ ವಿವಿಧ ಕಾರಣಗಳಿಂದ ಅಕ್ಕಿಯ ಉತ್ಪಾದನೆ ಕಡಿಮೆ ಯಾಗಿತ್ತು. ಪರಿಣಾಮ ತೆರೆದ ಮಾರುಕಟ್ಟೆಯಲ್ಲಿ ಅಕ್ಕಿ ಮಾರಾಟ ಮಾಡುವ ಪ್ರಕ್ರಿಯೆಯನ್ನೇ ಕೇಂದ್ರ ಸರಕಾರ ಹಿಂಪಡೆದಿತ್ತು. ಈ ಬಾರಿ ಅಕ್ಕಿ ಉತ್ಪಾದನೆಯಲ್ಲಿ ಕೊರತೆ ಉಂಟಾಗಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಶೀಘ್ರ ನಗದು ವಿತರಣೆ ಬಂದ್‌?
ಅನ್ನಭಾಗ್ಯ ಯೋಜನೆಯಡಿ 10 ಕೆ.ಜಿ. ಅಕ್ಕಿ ನೀಡುವುದಾಗಿ ಸರಕಾರ ಭರವಸೆ ನೀಡಿತ್ತು. ಆದರೆ, ಅಕ್ಕಿಯ ಕೊರತೆಯಿಂದಾಗಿ ಪ್ರಸ್ತುತ 5 ಕೆ.ಜಿ ಮಾತ್ರ ಉಚಿತ ಅಕ್ಕಿ ಒದಗಿಸಲಾಗುತ್ತಿದೆ. ಉಳಿದ 5 ಕೆ.ಜಿ. ಅಕ್ಕಿಯ ಬದಲು 170 ರೂ. ನಗದು ನೀಡಲಾಗುತ್ತಿದೆ. ಇದೀಗ ನಿಗಮದಿಂದ ರಾಜ್ಯ ಸರಕಾರವು 2.36 ಲಕ್ಷ ಟನ್‌ ಅಕ್ಕಿ ಖರೀದಿಗೆ ಮುಂದಾಗಿದೆ. ಈ ಬೆಳವಣಿಗೆ ಗಮನಿಸಿದಾಗ ಇದುವರೆಗೆ ಕೊಡುತ್ತಿದ್ದ 5 ಕೆ.ಜಿ. ಅಕ್ಕಿ ಜತೆಗೆ ಇನ್ನೂ 5 ಕೆ.ಜಿ. ಹೆಚ್ಚುವರಿಯಾಗಿ ಸೇರಿ ಒಟ್ಟು 10 ಕೆ.ಜಿ. ಅಕ್ಕಿ ಒದಗಿಸುವ ಸಾಧ್ಯತೆಗಳಿವೆ.

ಟಾಪ್ ನ್ಯೂಸ್

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

sidda

‘One Nation One Election’ ಪ್ರಸ್ತಾವ: ಒಕ್ಕೂಟ ವ್ಯವಸ್ಥೆಗೆ ವಿರುದ್ಧ: ಸಿಎಂ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.