ಜಿಯೋ ಗ್ರಾಹಕರಿಗೆ ಇನ್ನೊಂದು ಸಿಹಿ ಸುದ್ದಿ

ಕರೆಯ ಗುಣಮಟ್ಟವನ್ನು ಇನ್ನಷ್ಟು ಹೆಚ್ಚಿದ ಜಿಯೋ

Team Udayavani, Oct 11, 2021, 6:05 PM IST

Untitled-12

ಬೆಂಗಳೂರು: ರಿಲಯನ್ಸ್ ಜಿಯೋ ಇನ್ಫೋಕಾಮ್ ಲಿ (ಆರ್‌ ಜೆ ಐ ಎಲ್) ತನ್ನ ಗ್ರಾಹಕರಿಗೆ ಕರೆಯ ಗುಣಮಟ್ಟವನ್ನು ಇನ್ನಷ್ಟು ಹೆಚ್ಚಿಸುವ ಸಲುವಾಗಿ 1800 ಬ್ಯಾಂಡ್‌ನಲ್ಲಿ ಹೆಚ್ಚುವರಿ 5MHz ತರಂಗಾಂತರವನ್ನು ಅಳವಡಿಸಿದೆ.

ಇದರೊಂದಿಗೆ ಈ ವರ್ಷದ ಮಾರ್ಚ್‌ ತಿಂಗಳಲ್ಲಿ ಡಿಒಟಿ ನಡೆಸಿದ ತರಂಗಾಂತರ (ಸ್ಪೆಕ್ಟ್ರಂ) ಹರಾಜಿನಲ್ಲಿ ಖರೀದಿಸಿದ ಹೆಚ್ಚುವರಿ 20MHz ತರಂಗಾಂತರದ ಅಳವಡಿಕೆಯನ್ನು ಪೂರ್ಣಗೊಳಿಸಿದಂತಾಗಿದೆ.

ಈ ತರಂಗಾಂತರ ವೃದ್ಧಿಯು ಕರ್ನಾಟಕದಲ್ಲಿನ ಗ್ರಾಹಕರಿಗೆ ನೆಟ್‌ವರ್ಕ್ ಅನುಭವವನ್ನು ಪರಿಣಾಮಕಾರಿಯಾಗಿ ಹೆಚ್ಚಿಸಿದೆ. 850MHZ, 1800MHZ ಮತ್ತು 2300MHZ ಬ್ಯಾಂಡ್‌ಗಳಲ್ಲಿ ಹೆಚ್ಚುವರಿಯಾಗಿ 60MHz ಅಳವಡಿಸಲಾಗಿದೆ. ಇದರಿಂದ ಕರ್ನಾಟಕದಾದ್ಯಂತ ನೆಟ್‌ವರ್ಕ್ ಗುಣಮಟ್ಟ ಸುಧಾರಿಸಿದ್ದು, ಚಂದಾದಾರರ ಅನುಭವ ಸುಧಾರಣೆಗೆ ನೆರವಾಗಿದೆ. ರಾಜ್ಯಾದ್ಯಂತ ಇರುವ ನಿಯೋಜಿತ ನೆಟ್‌ವರ್ಕ್‌ ಸೈಟ್‌ಗಳ ವಿಚಾರದಲ್ಲಿ ಮತ್ತು ತನ್ನ ಚಂದಾದಾರರಿಗೆ ಉತ್ತಮ ಗುಣಮಟ್ಟದ ನೆಟ್‌ವರ್ಕ್ ನೀಡುವ ಬದ್ದತೆಯನ್ನು ಮುಂದುವರೆಸಿದೆ.

ಇದನ್ನೂ ಓದಿ :60 ಸಾವಿರ ಗಡಿ ದಾಟಿದ ಬಾಂಬೆ ಷೇರುಪೇಟೆ ಸೆನ್ಸೆಕ್ಸ್, 18 ಸಾವಿರ ಸಮೀಪಕ್ಕೆ ನಿಫ್ಟಿ

ಈ ತರಂಗಾಂತರ ವೃದ್ಧಿಯು, ಮನೆಯಿಂದ ಕೆಲಸ ಮಾಡುವ ವೃತ್ತಿಪರರು, ಆನ್‌ಲೈನ್ ತರಗತಿಗಳಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು, ಮನೆಯಲ್ಲಿ ಸುರಕ್ಷಿತವಾಗಿದ್ದುಕೊಂಡು ಯಾವುದೇ ತಡೆರಹಿತವಾಗಿ ಉದ್ಯಮವನ್ನು ಮನೆಯಿಂದಲೇ ನಡೆಸಲು ಸಹಕಾರಿಯಾಗುತ್ತದೆ. ಹೆಚ್ಚಿಸಲಾದ ಸಂಪರ್ಕ ಜಾಲ ಮತ್ತು ಅನುಭವವು ಹೊರಭಾಗದಲ್ಲಿನ ಅಗತ್ಯ ಕೆಲಸಗಳಲ್ಲಿ ತೊಡಗಿರುವ ವೈದ್ಯಕೀಯ ಹಾಗೂ ಇತರೆ ಮುಂಚೂಣಿ ಕೆಲಸಗಾರರಿಗೆ ಖಂಡಿತವಾಗಿಯೂ ಬಹು ದೊಡ್ಡ ನೆರವು ನೀಡಲಿದೆ.

ಕರ್ನಾಟಕದಲ್ಲಿ ಜಿಯೋ 2.21 ಕೋಟಿಗೂ ಅಧಿಕ ಗ್ರಾಹಕರನ್ನು ಹೊಂದಿದೆ (ಜುಲೈ ಟ್ರಾಯ್ ವರದಿ ಪ್ರಕಾರ), ಮತ್ತು ಪ್ರತಿ ಜಿಲ್ಲೆಯಲ್ಲಿಯೂ ಮತ್ತಷ್ಟು ಚಂದಾದಾರರನ್ನು ಸೇರ್ಪಡೆಯನ್ನು ಮುಂದುವರಿಸಿದೆ. ಮತ್ತಷ್ಟು 4ಜಿ ಟವರ್‌ಗಳ ಬೇಡಿಕೆಯನ್ನು ಈಡೇರಿಸಲು, ಜಿಯೋ ಕರ್ನಾಟಕ 2021ರಲ್ಲಿ ತನ್ನ 4ಜಿ ನೆಟ್‌ವರ್ಕ್ ಅನ್ನು ಶೇ 28ರಷ್ಟು ವಿಸ್ತರಿಸುತ್ತಿದೆ. ಪ್ರಸ್ತುತ ಜಿಯೋ ರಾಜ್ಯದಲ್ಲಿ 22,300ಕ್ಕಿಂತ ಹೆಚ್ಚು 4ಜಿ ನೆಟ್‌ವರ್ಕ್ ಸೈಟ್‌ಗಳನ್ನು ಹೊಂದಿದ್ದು, ಇದು ಅತಿ ದೊಡ್ಡ 4ಜಿ ಹೆಜ್ಜೆ ಗುರುತಾಗಿದೆ.

ರಿಲಯನ್ಸ್ ಜಿಯೋ, ಕಳೆದ ತರಂಗಾಂತರ ಹರಾಜಿನಲ್ಲಿ 20 ವರ್ಷಗಳ ಅವಧಿಗೆ 57,123 ಕೋಟಿ ರೂಪಾಯಿ ವೆಚ್ಚದಲ್ಲಿ 22 ವಲಯಗಳಿಗೆ ಒಟ್ಟು 488.35 MHZ (850 MHZ, 1800 MHZ ಮತ್ತು 2300 MHZ ಒಳಗೊಂಡಂತೆ) ತರಂಗಾಂತರಗಳನ್ನು ಖರೀದಿಸಿದೆ. ಇದರೊಂದಿಗೆ ಜಿಯೋ ತನ್ನ ಹೆಜ್ಜೆಗುರುತನ್ನು ಶೇ 55ರಷ್ಟು ಏರಿಕೆಯೊಂದಿಗೆ ಒಟ್ಟು 1717 MHZಗೆ ಗಣನೀಯವಾಗಿ ಹೆಚ್ಚಿಸಿಕೊಂಡಿದೆ. ಜಿಯೋ ಪ್ರಸ್ತುತ 443 ಮಿಲಿಯನ್ ಗ್ರಾಹಕರನ್ನು ಹೊಂದಿದೆ. ಮುಂದೆ 300 ಮಿಲಿಯನ್ ಬಳಕೆದಾರರನ್ನು ಸೇರ್ಪಡೆಗೊಳಿಸುವ ಗುರಿ ಹೊಂದಿದೆ. ಇದು ಮುಂಬರುವ 5ಜಿ ಸೇವೆಗಳ ಪರಿವರ್ತನೆಗೆ ಸಾಗಲು ಕೂಡ ನೆರವಾಗಲಿದೆ ಎಂದು ಕಂಪೆನಿ ತಿಳಿಸಿದೆ.

 

ಟಾಪ್ ನ್ಯೂಸ್

Karavali; ಕೋಣಗಳ ಮತ್ತೆ ಕುಳಿತ ಪ್ರಜ್ವಲ್; ಹೊಸ ಪೋಸ್ಟರ್ ಬಂತು

Karavali; ಕೋಣಗಳ ಮತ್ತೆ ಕುಳಿತ ಪ್ರಜ್ವಲ್; ಹೊಸ ಪೋಸ್ಟರ್ ಬಂತು

Kumata: ಭಾರಿ ಮಳೆಗೆ ನದಿಗಳಲ್ಲಿ ನೀರಿನ ಮಟ್ಟ ಏರಿಕೆ… ನೆರೆ ಭೀತಿ

Kumata: ಭಾರಿ ಮಳೆಗೆ ನದಿಗಳಲ್ಲಿ ನೀರಿನ ಮಟ್ಟ ಏರಿಕೆ… ನೆರೆ ಭೀತಿ

Stock Market: ಮುಂದುವರಿದ ಷೇರುಪೇಟೆ ನಾಗಾಲೋಟ-80,000 ಅಂಕ ದಾಟಿದ ಸೆನ್ಸೆಕ್ಸ್

Stock Market: BSE@80,130.53- ಮುಂದುವರಿದ ಷೇರುಪೇಟೆ ನಾಗಾಲೋಟ…

thief

Sorry… ತಿಂಗಳೊಳಗೆ ಕದ್ದ ವಸ್ತು ಹಿಂತಿರುಗಿಸುವೆ, ಪತ್ರ ಬರೆದು ಮನೆಗೆ ಕನ್ನ ಹಾಕಿದ ಕಳ್ಳ

10-honanvar

ಗುಡ್ಡ ಕುಸಿತ: ಹೊನ್ನಾವರದಿಂದ ಗೇರುಸೊಪ್ಪ, ಸಾಗರ, ಶಿವಮೊಗ್ಗ ಮಾರ್ಗದ ಸಂಚಾರ ಸ್ಥಗಿತ

9-Bantwala

Bantwala: ರಾಮಲಕಟ್ಟೆ: ಡಿವೈಡರ್ ಗೆ ಢಿಕ್ಕಿಯಾದ ಖಾಸಗಿ ಬಸ್

Sandalwood: Sandalwood: ʼಭೈರವನ ಕೊನೆ ಪಾಠʼ ಕೇಳೋಕೆ ರೆಡಿಯಾಗಿ ಎಂದ ಹೇಮಂತ್‌ – ಶಿವಣ್ಣ

Sandalwood: ʼಭೈರವನ ಕೊನೆ ಪಾಠʼ ಕೇಳೋಕೆ ರೆಡಿಯಾಗಿ ಎಂದ ಹೇಮಂತ್‌ – ಶಿವಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kumata: ಭಾರಿ ಮಳೆಗೆ ನದಿಗಳಲ್ಲಿ ನೀರಿನ ಮಟ್ಟ ಏರಿಕೆ… ನೆರೆ ಭೀತಿ

Kumata: ಭಾರಿ ಮಳೆಗೆ ನದಿಗಳಲ್ಲಿ ನೀರಿನ ಮಟ್ಟ ಏರಿಕೆ… ನೆರೆ ಭೀತಿ

Naxal chandru- Naxal Chandru arrested after 19 years; What is the case?

Naxal chandru-19 ವರ್ಷದ ಬಳಿಕ ನಕ್ಸಲ್‌ ಚಂದ್ರು ಸೆರೆ; ಏನಿದು ಪ್ರಕರಣ?

PavithraGowda ದರ್ಶನ್‌ 2ನೇ ಪತ್ನಿಯಲ್ಲ:ವಿಜಯಲಕ್ಷ್ಮೀ-ಕಮಿಷನರ್‌ ಗೆ ಬರೆದ ಪತ್ರದಲ್ಲೇನಿದೆ?

PavithraGowda ದರ್ಶನ್‌ 2ನೇ ಪತ್ನಿಯಲ್ಲ:ವಿಜಯಲಕ್ಷ್ಮೀ-ಕಮಿಷನರ್‌ ಗೆ ಬರೆದ ಪತ್ರದಲ್ಲೇನಿದೆ?

Vijayapura: ಕೃಷ್ಣಾ ನದಿ ತೆಪ್ಪ ದುರಂತ… ರಫೀಕ್ ಶವ ಪತ್ತೆ, ರಕ್ಷಣಾ ಕಾರ್ಯಾಚರಣೆ ಮುಕ್ತಾಯ

Vijayapura: ಕೃಷ್ಣಾ ನದಿ ತೆಪ್ಪ ದುರಂತ… ರಫೀಕ್ ಶವ ಪತ್ತೆ, ರಕ್ಷಣಾ ಕಾರ್ಯಾಚರಣೆ ಮುಕ್ತಾಯ

Dinesh-gundurao

Private Hospital: ಡೆಂಗ್ಯೂ ಪರೀಕ್ಷೆಗೆ ಏಕರೂಪ ದರ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Karavali; ಕೋಣಗಳ ಮತ್ತೆ ಕುಳಿತ ಪ್ರಜ್ವಲ್; ಹೊಸ ಪೋಸ್ಟರ್ ಬಂತು

Karavali; ಕೋಣಗಳ ಮತ್ತೆ ಕುಳಿತ ಪ್ರಜ್ವಲ್; ಹೊಸ ಪೋಸ್ಟರ್ ಬಂತು

Kumata: ಭಾರಿ ಮಳೆಗೆ ನದಿಗಳಲ್ಲಿ ನೀರಿನ ಮಟ್ಟ ಏರಿಕೆ… ನೆರೆ ಭೀತಿ

Kumata: ಭಾರಿ ಮಳೆಗೆ ನದಿಗಳಲ್ಲಿ ನೀರಿನ ಮಟ್ಟ ಏರಿಕೆ… ನೆರೆ ಭೀತಿ

Crime: ಕುಡಿದಿದ್ದಕ್ಕೆ ಕಾಲೇಜಿಗೆ ಬಿಡಲ್ಲ ಎಂದ ಸೆಕ್ಯುರಿಟಿಯನ್ನು ಕೊಂದ ವಿದ್ಯಾರ್ಥಿ!

Crime: ಕುಡಿದಿದ್ದಕ್ಕೆ ಕಾಲೇಜಿಗೆ ಬಿಡಲ್ಲ ಎಂದ ಸೆಕ್ಯುರಿಟಿಯನ್ನು ಕೊಂದ ವಿದ್ಯಾರ್ಥಿ!

Love Matter: ಕೈಗೆ ಹಗ್ಗ ಕಟ್ಟಿಕೊಂಡು ಕೆರೆಗೆ ಹಾರಿ ಪ್ರೇಮಿಗಳಿಬ್ಬರ ಆತ್ಮಹತ್ಯೆ

Love Matter: ಕೈಗೆ ಹಗ್ಗ ಕಟ್ಟಿಕೊಂಡು ಕೆರೆಗೆ ಹಾರಿ ಪ್ರೇಮಿಗಳಿಬ್ಬರ ಆತ್ಮಹತ್ಯೆ

Crime: ಪ್ರೀತಿಗೆ ಮನೆಯವರ ವಿರೋಧ: ಯುವತಿ ಆತ್ಮ ಹತ್ಯೆ?

Crime: ಪ್ರೀತಿಗೆ ಮನೆಯವರ ವಿರೋಧ: ಯುವತಿ ಆತ್ಮ ಹತ್ಯೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.