CAA: ಪೌರತ್ವಕ್ಕಾಗಿ ಅರ್ಜಿ ; ಇಬ್ಬರಿಗೆ ಭಾರತದ ಪೌರತ್ವ ಅನುಮೋದನೆ


Team Udayavani, Oct 10, 2024, 1:26 AM IST

CAA: ಪೌರತ್ವಕ್ಕಾಗಿ ಅರ್ಜಿ ; ಇಬ್ಬರಿಗೆ ಭಾರತದ ಪೌರತ್ವ ಅನುಮೋದನೆ

ಮಂಗಳೂರು: ಸಿಎಎ ಪೌರತ್ವಕ್ಕಾಗಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿದ ದಕ್ಷಿಣ ಕನ್ನಡ ಜಿಲ್ಲೆಯ ಇಬ್ಬರ ಭಾರತದ ಪೌರತ್ವ ಅನುಮೋದನೆಗೊಂಡಿದೆ.

ಸಿಎಎ ಅರ್ಜಿ ಪರಿಶೀಲನೆಗೆ ಅಂಚೆ ಕಚೇರಿ ನೇತೃತ್ವದ ಜಿಲ್ಲಾ ಮಟ್ಟದ ಪರಿಶೀಲನಾ ಸಮಿತಿ ಕಾರ್ಯ ನಿರ್ವಹಿಸುತ್ತಿದೆ.

ಅಂಚೆ ಇಲಾಖೆಯ ಮಂಗಳೂರು ವಿಭಾಗದ ಹಿರಿಯ ಅಧೀಕ್ಷಕ ಎಂ. ಸುಧಾಕರ ಮಲ್ಯ ಅವರು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮಂಗಳೂರು ಪ್ರಸ್‌ಕ್ಲಬ್‌ನಲ್ಲಿ ಬುಧವಾರ ನಡೆದ ಸಂವಾದದಲ್ಲಿ ಮಾತನಾಡಿ, 2014 ರ ಮೊದಲು ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಿಂದ ವಲಸೆ ಬಂದವರಿಗೆ ಪೌರತ್ವ ನೀಡಲಾಗುತ್ತದೆ. ಅವರು ಮೊದಲು ಅಂಚೆ ಕಚೇರಿಗೆ ಅರ್ಜಿ ಸಲ್ಲಿಸಬೇಕು. ಸಮಿತಿಯು ಪರಿಶೀಲಿಸಿ ಆನ್‌ಲೈನ್‌ ಪೋರ್ಟಲ್‌ ಮೂಲಕ ರಾಜ್ಯ ಸಮಿತಿಗೆ ಕಳುಹಿಸಲಿದೆ. ಅದರಂತೆ ಜಿಲ್ಲೆಯ ಇಬ್ಬರು ಪ್ರಜೆಗಳ ಭಾರತೀಯ ಪೌರತ್ವ ರಾಜ್ಯ ಮಟ್ಟದಲ್ಲಿ ಅನುಮೋದನೆಗೊಂಡಿದೆ ಎಂದರು.

ಇಲಾಖೆ ವತಿಯಿಂದ ಅ.7 ರಿಂದ 11ರವರೆಗೆ “ನಮ್ಮ ನಿಮ್ಮೆಲ್ಲರ ಅಭ್ಯುದಯ’ ಎಂಬ ಧ್ಯೇಯ ವಾಕ್ಯದಡಿ ರಾಷ್ಟ್ರೀಯ ಅಂಚೆ ಸಪ್ತಾಹ ನಡೆಯುತ್ತಿದೆ. ಈಗಾಗಲೇ ಪಾರ್ಸೆಲ್‌ ದಿನ, ಅಂಚೆ ಚೀಟಿ ದಿನ, ಜಾಗತಿಕ ಆಂಚೆ ಒಕ್ಕೂಟದಿಂದ ರಾಷ್ಟ್ರೀಯ ಅಂಚೆ ದಿನಾಚರಣೆ ಆಚರಿಸಲಾಯಿತು.

ಅ.10 ರಂದು ಅಂತ್ಯೋದಯ ದಿವಸ ಆಚರಣೆ ನಡೆಯಲಿದ್ದು, ಆಧಾರ್‌, ಪಾನ್‌ ಕಾರ್ಡ್‌ ಸಹಿತ ಹಲವು ನಾಗರಿಕ ಸೇವೆಗೆ ಆದ್ಯತೆ ನೀಡಲಾಗುತ್ತದೆ. ಕೊನೆಯ ದಿನವಾದ ಅ.11 ರಂದು ವಿತ್ತೀಯ ಸಶಸ್ತ್ರೀಕರಣ ದಿನವನ್ನಾಗಿ ಆಚರಿಸಲಾಗುತ್ತಿದೆ ಎಂದರು.

ಅಂಚೆ ಇಲಾಖೆಯು “ಬರಹಗಾರಿಕೆಯಲ್ಲಿ ಖುಷಿ; ಡಿಜಿಟಲ್‌ ಯುಗದಲ್ಲಿ ಪತ್ರದ ಮಹತ್ವ’ ಕುರಿತು ರಾಷ್ಟ್ರ ಮಟ್ಟದ ಪತ್ರ ಬರಹದ ಸ್ಪರ್ಧೆ ಹಮ್ಮಿಕೊಂಡಿದೆ. 18 ವರ್ಷದೊಳಗಿನವರು ಮತ್ತು 18 ವರ್ಷ ಮೇಲ್ಪಟ್ಟವರು ಈ ಎರಡು ವಿಭಾಗಗಳಲ್ಲಿ ಸ್ಪರ್ದೆ ಇದ್ದು, ಆಸಕ್ತರು ತಮ್ಮ ಬರಹವನ್ನು 1,000 ಪದಗಳ ಒಳಗೆ ಬರೆದು ಮಂಗಳೂರು ವಿಭಾಗದ ಹಿರಿಯ ಅಧೀಕ್ಷಕರ ಕಚೇರಿಗೆ ಡಿ.14ರ ಒಳಗೆ ತಲುಪುವಂತೆ ಕಳುಹಿಸಬಹುದು ಎಂದರು.

ಮಂಗಳೂರಿನ 41 ಅಂಚೆ ಕಚೇರಿಯಲ್ಲಿ ಆಧಾರ್‌ ಸೇವಾ ಕೇಂದ್ರ, ಪಾಸ್‌ಪೋರ್ಟ್‌ ಅಪಾಯಿಂಟ್‌ಮೆಂಟ್‌ ತೆಗೆದುಕೊಳ್ಳುವ ಸೇವೆ ಲಭ್ಯವಿದೆ. ವಿದೇಶಿ ರಫ್ತಿಗೆ ಸಣ್ಣ ಮತ್ತು ಮಧ್ಯಮ ಉದ್ದಿಮೆದಾರರನ್ನು ಉತ್ತೇಜಿಸಲು ಮಂಗಳೂರಿನಲ್ಲೂ ತೆರೆದ “ಡಾಕ್‌ ನಿರ್ಯಾತ್‌ ಕೇಂದ್ರ’ ಗಳಿಗೆ ಹೆಚ್ಚಿನ ಸ್ಪಂದನೆ ವ್ಯಕ್ತವಾಗುತ್ತಿದೆ ಎಂದರು.

ಅಂಚೆ ಅಧಿಕಾರಿಗಳಾದ ದಿನೇಶ್‌ ಪಿ., ವಿಲ್ಸನ್‌ ಡಿಸೋಜ, ಯತಿನ್‌ ಕುಮಾರ್‌, ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್‌ ಇಂದಾಜೆ, ಪ್ರಸ್‌ಕ್ಲಬ್‌ ಅಧ್ಯಕ್ಷ ಪಿ.ಬಿ. ಹರೀಶ್‌ ರೈ ಮತ್ತಿತರರು ಉಪಸ್ಥಿತರಿದ್ದರು.

 

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-60: ಬಣ್ಣ-ಮನಸ್ಸು-ನಡೆ- ನಡಿಗೆ….

Udupi: ಗೀತಾರ್ಥ ಚಿಂತನೆ-60: ಬಣ್ಣ-ಮನಸ್ಸು-ನಡೆ- ನಡಿಗೆ….

High-Court

High Court Order: ಹಳೆ ಸಂಹಿತೆ ಸಿಆರ್‌ಪಿಸಿಯ ಮೊದಲ ಎಫ್ಐಆರ್‌ ರದ್ದು!

High-Court

Renukaswamy Case: ಕೈದಿಗಳ ಸ್ಥಳಾಂತರ ವೇಳೆ ಕೋರ್ಟ್‌ ವಿವೇಚನೆ ಬಳಸಬೇಕು

Mangaluru: ಉಳಿಯ ದ್ವೀಪ ಮರಳುಗಾರಿಕೆ ನಿಷೇಧ

Mangaluru: ಉಳಿಯ ದ್ವೀಪ ಮರಳುಗಾರಿಕೆ ನಿಷೇಧ

Kundapura: ರೈಲು ಢಿಕ್ಕಿ ಹೊಡೆದು ಚಿರತೆ ಸಾ*ವು

Kundapura: ರೈಲು ಢಿಕ್ಕಿ ಹೊಡೆದು ಚಿರತೆ ಸಾ*ವು

Rain: ಇಂದು “ಎಲ್ಲೋ ಅಲರ್ಟ್‌’; ಕರಾವಳಿಯಲ್ಲಿ ತುಸು ಬಿಡುವು ನೀಡಿದ ಮಳೆ

Rain: ಇಂದು “ಎಲ್ಲೋ ಅಲರ್ಟ್‌’; ಕರಾವಳಿಯಲ್ಲಿ ತುಸು ಬಿಡುವು ನೀಡಿದ ಮಳೆ

Legislative Council: ಉಪಚುನಾವಣೆ ಹಿನ್ನೆಲೆಯಲ್ಲಿ ಅ. 19 ರಿಂದ ನಿಷೇಧಾಜ್ಞೆ ಜಾರಿ

Legislative Council: ಉಪಚುನಾವಣೆ ಹಿನ್ನೆಲೆಯಲ್ಲಿ ಅ. 19 ರಿಂದ ನಿಷೇಧಾಜ್ಞೆ ಜಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಉಳಿಯ ದ್ವೀಪ ಮರಳುಗಾರಿಕೆ ನಿಷೇಧ

Mangaluru: ಉಳಿಯ ದ್ವೀಪ ಮರಳುಗಾರಿಕೆ ನಿಷೇಧ

Rain: ಇಂದು “ಎಲ್ಲೋ ಅಲರ್ಟ್‌’; ಕರಾವಳಿಯಲ್ಲಿ ತುಸು ಬಿಡುವು ನೀಡಿದ ಮಳೆ

Rain: ಇಂದು “ಎಲ್ಲೋ ಅಲರ್ಟ್‌’; ಕರಾವಳಿಯಲ್ಲಿ ತುಸು ಬಿಡುವು ನೀಡಿದ ಮಳೆ

Legislative Council: ಉಪಚುನಾವಣೆ ಹಿನ್ನೆಲೆಯಲ್ಲಿ ಅ. 19 ರಿಂದ ನಿಷೇಧಾಜ್ಞೆ ಜಾರಿ

Legislative Council: ಉಪಚುನಾವಣೆ ಹಿನ್ನೆಲೆಯಲ್ಲಿ ಅ. 19 ರಿಂದ ನಿಷೇಧಾಜ್ಞೆ ಜಾರಿ

Mangaluru: ಶ್ರೀ ಶಾರದಾ ಮಹೋತ್ಸವ ಸಮಿತಿ: ಮಂಗಳೂರು ಶಾರದೋತ್ಸವ ಆರಂಭ

Mangaluru: ಶ್ರೀ ಶಾರದಾ ಮಹೋತ್ಸವ ಸಮಿತಿ: ಮಂಗಳೂರು ಶಾರದೋತ್ಸವ ಆರಂಭ

ಕಾಂಗ್ರೆಸ್‌ಗೆ ಸ್ಥಳೀಯ ಸಂಸ್ಥೆಗಳ ಸದಸ್ಯರ ಬೆಂಬಲ ಖಚಿತ

Mangaluru: ಕಾಂಗ್ರೆಸ್‌ಗೆ ಸ್ಥಳೀಯ ಸಂಸ್ಥೆಗಳ ಸದಸ್ಯರ ಬೆಂಬಲ ಖಚಿತ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-60: ಬಣ್ಣ-ಮನಸ್ಸು-ನಡೆ- ನಡಿಗೆ….

Udupi: ಗೀತಾರ್ಥ ಚಿಂತನೆ-60: ಬಣ್ಣ-ಮನಸ್ಸು-ನಡೆ- ನಡಿಗೆ….

High-Court

High Court Order: ಹಳೆ ಸಂಹಿತೆ ಸಿಆರ್‌ಪಿಸಿಯ ಮೊದಲ ಎಫ್ಐಆರ್‌ ರದ್ದು!

High-Court

Renukaswamy Case: ಕೈದಿಗಳ ಸ್ಥಳಾಂತರ ವೇಳೆ ಕೋರ್ಟ್‌ ವಿವೇಚನೆ ಬಳಸಬೇಕು

Mangaluru: ಉಳಿಯ ದ್ವೀಪ ಮರಳುಗಾರಿಕೆ ನಿಷೇಧ

Mangaluru: ಉಳಿಯ ದ್ವೀಪ ಮರಳುಗಾರಿಕೆ ನಿಷೇಧ

Kundapura: ರೈಲು ಢಿಕ್ಕಿ ಹೊಡೆದು ಚಿರತೆ ಸಾ*ವು

Kundapura: ರೈಲು ಢಿಕ್ಕಿ ಹೊಡೆದು ಚಿರತೆ ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.