ಮುಂಗಾರು ಆಗಮನ: ರೈತರ ಮೊಗದಲ್ಲಿ ಮಂದಹಾಸ


Team Udayavani, Jun 10, 2023, 5:39 AM IST

rain

ಗುರುವಾರದಂದು ನೈಋತ್ಯ ಮಾರುತಗಳು ಕೇರಳ ಪ್ರವೇಶಿಸುವು ದರೊಂದಿಗೆ ದೇಶದಲ್ಲಿ ಮುಂಗಾರು ಋತು ಆರಂಭಗೊಂಡಿದೆ. ನೈಋತ್ಯ ಮಾರುತಗಳು ಈ ಬಾರಿ ಒಂದು ವಾರ ತಡವಾಗಿ ಕೇರಳವನ್ನು ಪ್ರವೇಶಿ ಸಿದ್ದು ಅಲ್ಲಿನ ಕರಾವಳಿ ಮತ್ತು ಒಳನಾಡಿನ ಕೆಲವೆಡೆ ಮಳೆಯಾಗುತ್ತಿದೆ. ಹವಾಮಾನ ಇಲಾಖೆ ಮಾತ್ರವಲ್ಲದೆ ಖಾಸಗಿ ಹವಾಮಾನ ಸಂಸ್ಥೆಗಳು ಕೂಡ ಪ್ರಸಕ್ತ ಸಾಲಿನಲ್ಲಿ ಮುಂಗಾರು ಕೊಂಚ ವಿಳಂಬವಾಗಲಿದೆ ಎಂದು ಮುನ್ಸೂಚನೆ ನೀಡಿದ್ದವು. ಆದರೆ ಅರಬಿ ಸಮುದ್ರದಲ್ಲಿ ನೈಋತ್ಯ ಮಾರುತಗಳ ಚಲನೆಗೆ ಪೂರಕ ವಾತಾವರಣ ನಿರ್ಮಾಣಗೊಳ್ಳದೇ ಮತ್ತಷ್ಟು ವಿಳಂಬವಾಗಿತ್ತು. ಅರಬಿ ಸಮುದ್ರದಲ್ಲಿ ಕಾಣಿಸಿಕೊಂಡಿರುವ ಬಿಪರ್‌ಜಾಯ್‌ ಚಂಡಮಾರುತದ ಪರಿಣಾಮ ನೈಋತ್ಯ ಮಾರುತಗಳು ತೀವ್ರತೆಯನ್ನು ಕಂಡುಕೊಂಡು ಗುರುವಾರ ಕೇರಳದ ಕರಾವಳಿಯನ್ನು ಪ್ರವೇಶಿಸಿದ್ದು ಕರಾವಳಿ ಜಿಲ್ಲೆಗಳು ಮತ್ತು ಒಳನಾಡಿನ ಕೆಲವೆಡೆ ಭಾರೀ ಮಳೆ ಸುರಿಯಲಾರಂಭಿಸಿದೆ.

ನೈಋತ್ಯ ಮಾರುತಗಳು ರಾಜ್ಯದ ಕರಾವಳಿಯನ್ನು ಪ್ರವೇಶಿಸುತ್ತಿದ್ದಂತೆ ಮುಂಗಾರು ಮಾರುತಗಳು ರಾಜ್ಯದೆಲ್ಲೆಡೆ ವ್ಯಾಪಿಸಿ ಮಳೆ ಸುರಿಸಲಿದೆ. ಅನಂತರದ ದಿನಗಳಲ್ಲಿ ಮುಂಗಾರು ಮಾರುತಗಳ ಚಲನೆಯ ತೀವ್ರತೆ ಯನ್ನು ಅವಲಂಬಿಸಿ ಹಂತಹಂತವಾಗಿ ರಾಜ್ಯ, ದೇಶದೆಲ್ಲೆಡೆ ವ್ಯಾಪಿಸಲಿದೆ.

ಅರಬಿ ಸಮುದ್ರದಲ್ಲಿ ಕಾಣಿಸಿಕೊಂಡಿರುವ ಬಿಪರ್‌ಜಾಯ್‌ ಚಂಡ ಮಾರುತ ನೈಋತ್ಯ ಮಾರುತಗಳ ಚಲನೆಗೆ ತಡೆಯಾಗಲಿದೆ ಎಂಬ ಆತಂಕ ಆರಂಭದಲ್ಲಿ ವ್ಯಕ್ತವಾಗಿತ್ತಾದರೂ ಇದೀಗ ಮುಂಗಾರು ಮಾರುತಗಳು ಕೇರಳಕ್ಕೆ ಅಧಿಕೃತವಾಗಿ ಪ್ರವೇಶಿಸಿ ಮಳೆ ಸುರಿಸತೊಡಗಿರುವುದರಿಂದ ಜನರು ನಿಟ್ಟುಸಿರು ಬಿಡುವಂತಾಗಿದೆ. ಅಷ್ಟು ಮಾತ್ರವಲ್ಲದೆ ಇದರಿಂದಾಗಿ ಕರ್ನಾಟಕ ಸಹಿತ ದೇಶದೆಲ್ಲೆಡೆ ನೀರಿಗಾಗಿ ಎದ್ದಿದ್ದ ಹಾಹಾಕಾರ ಮುಂಬರುವ ದಿನಗಳಲ್ಲಿ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ. ಮಳೆಗಾಗಿ ಕಾತರದಿಂದ ಆಗಸದತ್ತ ದೃಷ್ಟಿ ನೆಟ್ಟಿದ್ದ ಜನರು ಅದರಲ್ಲೂ ಮುಖ್ಯವಾಗಿ ರೈತರ ಮೊಗದಲ್ಲಿ ಮಂದಹಾಸ ಮೂಡುವಂತೆ ಮಾಡಿದೆ.

ಮುಂಗಾರು ಆಗಮನದ ಬೆನ್ನಲ್ಲೇ ಕೃಷಿ ಚಟುವಟಿಕೆಗಳು ಬಿರುಸು ಪಡೆಯಲಿವೆ. ಕೃಷಿ, ತೋಟಗಾರಿಕೆ ಇಲಾಖೆಯೂ ರೈತರಿಗೆ ಅಗತ್ಯವಿರುವ ಗುಣಮಟ್ಟದ ಬಿತ್ತನೆ ಬೀಜ, ಕೃಷಿ ಸಾಧನ, ಸಲಕರಣೆಗಳು, ರಸಗೊಬ್ಬರ ಪೂರೈಕೆಗೆ ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಂಡಿವೆ. ದೇಶದಲ್ಲಿರುವ ಒಟ್ಟಾರೆ ಕೃಷಿ ಪ್ರದೇಶದಲ್ಲಿ ಶೇ. 52ರಷ್ಟು ಭಾಗವು ಮಳೆಯನ್ನೇ ಅವಲಂಬಿಸಿಕೊಂಡಿದೆ. ಅಷ್ಟು ಮಾತ್ರವಲ್ಲದೆ ದೇಶದ ಒಟ್ಟಾರೆ ಕೃಷಿ ಉತ್ಪಾದನೆಯಲ್ಲಿ ಸುಮಾರು ಶೇ. 40ರಷ್ಟನ್ನು ಮಳೆಯಾಶ್ರಿತ ಕೃಷಿಯಿಂದಲೇ ಉತ್ಪಾದಿಸಲಾಗುತ್ತಿದೆ. ಇಷ್ಟು ಮಾತ್ರವಲ್ಲದೆ ಜಲಮೂಲಗಳ ಮರುಪೂರಣ ಮತ್ತು ಜಲಾಶಯಗಳಲ್ಲಿ ನೀರಿನ ಸಂಗ್ರಹ ಹೆಚ್ಚಿಸಲು ಉತ್ತಮ ಮಳೆ ಸುರಿಯುವುದು ಅತ್ಯವಶ್ಯಕವಾಗಿದೆ.

ಕುಡಿಯುವ ನೀರು, ಜಲ ವಿದ್ಯುದಾಗಾರಗಳಿಗೆ ಅವಶ್ಯವಿರುವ ನೀರಿಗೂ ಮಳೆಯೇ ಆಧಾರವಾಗಿದೆ. ದೇಶದಲ್ಲಿ ಆಹಾರ ಭದ್ರತೆ ಮತ್ತು ಆರ್ಥಿಕತೆಗೆ ಮಳೆ ನಿರ್ಣಾಯಕ ಕೊಡುಗೆಯನ್ನು ನೀಡುತ್ತದೆ. ಈ ಬಾರಿ ದೇಶದಲ್ಲಿ ವಾಡಿಕೆಯಷ್ಟು ಮಳೆ ಸುರಿಯಲಿದೆ ಎಂದು ಹವಾಮಾನ ತಜ್ಞರು ಅಂದಾಜಿಸಿದ್ದು ರೈತರು ಅತ್ಯುತ್ಸಾಹದಿಂದಲೇ ಕೃಷಿ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಲು ಸನ್ನದ್ಧರಾಗಿದ್ದಾರೆ. ಪ್ರಸಕ್ತ ವರ್ಷದ ಮುಂಗಾರು ಋತು, ಭೂಮಿ ಹಚ್ಚಹಸುರಿನಿಂದ ನಳನಳಿಸುವಂತೆ ಮಾಡಿ, ರೈತರ ಬದುಕನ್ನು ಹಸನಾಗಿಸಲಿ.

ಟಾಪ್ ನ್ಯೂಸ್

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರೈತರ ಹಿತರಕ್ಷಣೆ ನೆಪದಲ್ಲಿ ಗ್ರಾಹಕರಿಗೆ ಬರೆ ಸಲ್ಲದು

ರೈತರ ಹಿತರಕ್ಷಣೆ ನೆಪದಲ್ಲಿ ಗ್ರಾಹಕರಿಗೆ ಬರೆ ಸಲ್ಲದು

ಪರೀಕ್ಷಾ ಅಕ್ರಮಗಳ ತಡೆಗೆ ಎಸ್‌ಎಸ್‌ಸಿ ಕಠಿನ ನಿಲುವುಪರೀಕ್ಷಾ ಅಕ್ರಮಗಳ ತಡೆಗೆ ಎಸ್‌ಎಸ್‌ಸಿ ಕಠಿನ ನಿಲುವು

ಪರೀಕ್ಷಾ ಅಕ್ರಮಗಳ ತಡೆಗೆ ಎಸ್‌ಎಸ್‌ಸಿ ಕಠಿನ ನಿಲುವು

ಗ್ರಾಮೀಣ ಬಡಜನರ ಬೇಡಿಕೆಗೆ ಸ್ಪಂದಿಸಿದ ಕೇಂದ್ರ ಸರಕಾರ

ಗ್ರಾಮೀಣ ಬಡಜನರ ಬೇಡಿಕೆಗೆ ಸ್ಪಂದಿಸಿದ ಕೇಂದ್ರ ಸರಕಾರ

Jammu-Kashmir ಗಡಿಯಲ್ಲಿ ಉದ್ಧಟತನ: ಪಾಠ ಕಲಿಯದ ಪಾಕ್‌

Jammu-Kashmir ಗಡಿಯಲ್ಲಿ ಉದ್ಧಟತನ: ಪಾಠ ಕಲಿಯದ ಪಾಕ್‌

Train ಹಳಿ ತಪ್ಪಿಸುವ ಯತ್ನ: ಉಗ್ರರ ಷಡ್ಯಂತ್ರ ಮಟ್ಟ ಹಾಕಿ

Train ಹಳಿ ತಪ್ಪಿಸುವ ಯತ್ನ: ಉಗ್ರರ ಷಡ್ಯಂತ್ರ ಮಟ್ಟ ಹಾಕಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

cOurt

Udupi: ಪಾತಕಿ ಬನ್ನಂಜೆ ರಾಜ ಸಹಚರನಿಗೆ ಜಾಮೀನು

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.