![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 27, 2021, 1:03 PM IST
ಉಡುಪಿ: ಸಮಾಜ ಸೇವಕ ರವಿ ಕಟಪಾಡಿ ಅವರು ಶುಕ್ರವಾರ ಸಂಜೆ ಉದಯವಾಣಿ ಕಚೇರಿಗೆ ಭೇಟಿ ನೀಡಲಿದ್ದು, 4ಗಂಟೆಗೆ ಉದಯವಾಣಿ ಡಾಟ್ ಕಾಮ್ ನ ತೆರೆದಿದೆ ಮನೆ ಬಾ ಅತಿಥಿ ಫೇಸ್ ಬುಕ್ ಲೈವ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಇದನ್ನೂ ಓದಿ:ಔಷಧೀಯವಾಗಿಯೂ ಅತ್ಯಂತ ಉಪಯುಕ್ತ; ಕದಳಿ ಎಂಬ ಕಲ್ಪವೃಕ್ಷ
ಉದಯವಾಣಿಯ ತೆರೆದಿದೆ ಮನೆ ಬಾ ಅತಿಥಿ ಫೇಸ್ ಬುಕ್ ಲೈವ್ ನಲ್ಲಿ ಭಾಗವಹಿಸುವ ರವಿ ಕಟಪಾಡಿ ಈ ಬಾರಿ ಶ್ರೀಕೃಷ್ಣ ಜನ್ಮಾಷ್ಠಮಿಯಂದು ವೇಷ ಧರಿಸಲಿದ್ದಾರೆಯೇ? ಕೋವಿಡ್ ನಿಂದ ಎದುರಿಸಿದ ಸಂಕಷ್ಟಗಳೇನು? ದೇಣಿಗೆ ಸಂಗ್ರಹಕ್ಕೆ ಸಮಸ್ಯೆ ಎದುರಾಗಿದೆಯೇ ಹೀಗೆ ಹಲವಾರು ವಿಚಾರಗಳ ಬಗ್ಗೆ ತಮ್ಮ ಅಭಿಪ್ರಾಯವನ್ನು ಹಂಚಿಕೊಳ್ಳಲಿದ್ದಾರೆ.
ರವಿ ಕಟಪಾಡಿ ಅವರು ತಮ್ಮ ವಿಭಿನ್ನ ರೀತಿಯ ವೇಷದ ಮೂಲಕ ದಾನಿಗಳಿಂದ ಹಣವನ್ನು ಸಂಗ್ರಹಿಸಿ, ನಂತರ ಅದನ್ನು ಬಡಮಕ್ಕಳ ವಿದ್ಯಾಭ್ಯಾಸ ಸೇರಿದಂತೆ ವಿವಿಧ ಸಮಾಜಮುಖಿ ಕಾರ್ಯಗಳಿಗೆ ವಿನಿಯೋಗಿಸುತ್ತಾರೆ. ರವಿ ಕಟಪಾಡಿ ಈಗಾಗಲೇ ವಿಭಿನ್ನ ವೇಷ ಹಾಕುವ ಮೂಲಕ ಕಳೆದ ಆರೇಳು ವರ್ಷಗಳಿಂದ 54 ಲಕ್ಷ ರೂಪಾಯಿ ಸಂಗ್ರಹಿಸಿದ್ದು, ಅದನ್ನು ಅಶಕ್ತ, ಬಡ ಜನರಿಗೆ ನೆರವು ನೀಡಲು ವಿನಿಯೋಗಿಸಿದ್ದಾರೆ.
ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಬ್ ಬಚ್ಚನ್ ನಡೆಸಿಕೊಡುತ್ತಿರುವ ಕೌನ್ ಬನೇಗಾ ಕರೋಡ್ ಪತಿ ಕಾರ್ಯಕ್ರಮದ 12ನೇ ಸೀಸನ್ ಗೆ ರವಿ ಕಟಪಾಡಿ ಆಯ್ಕೆಯಾಗಿದ್ದ ವೇಳೆ ಗೆದ್ದ 12.5 ಲಕ್ಷ ರೂಪಾಯಿ ಹಣವನ್ನೂ ಕೂಡಾ ಬಡಮಕ್ಕಳ ಚಿಕಿತ್ಸಾ ವೆಚ್ಚಕ್ಕೆ ವ್ಯಯಿಸುವ ಮೂಲಕ ಹೆಚ್ಚು ಜನಾನುರಾಗಿಯಾಗಿದ್ದರು. ಇಂದು (ಆಗಸ್ಟ್ 27) ಗಂಟೆಗೆ ಉದಯವಾಣಿ ಡಾಟ್ ಕಾಮ್ ನಲ್ಲಿನ ರವಿ ಕಟಪಾಡಿ ಜತೆಗಿನ ಫೇಸ್ ಬುಕ್ ಲೈವ್ ವೀಕ್ಷಿಸಿ.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.