ಫಿಂಚ್, ವಾರ್ನರ್ ಅರ್ಧ ಶತಕ: ಆಸೀಸ್ ಗೆ ಗೆಲುವಿನ ಪುಳಕ

ಆಸೀಸ್ ಗೆ ಸುಲಭ ತುತ್ತಾದ ಅಫ್ಘಾನ್

Team Udayavani, Jun 2, 2019, 9:49 AM IST

warner

ಲಂಡನ್: ಏಕದಿನ ವಿಶ್ವ ಕಪ್ ಕೂಟದ ನಾಲ್ಕನೇ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ ತಂಡ ಅಫ್ಘಾನಿಸ್ಥಾನ ತಂಡವನ್ನು ಏಳು ವಿಕೆಟ್ ಗಳಿಂದ ಸೋಲಿಸಿ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ.

ಅಚ್ಚರಿ ಫಲಿತಾಂಶದ ನಿರೀಕ್ಷೆಯಲ್ಲಿದ್ದ ಕ್ರಿಕೆಟ್ ಪ್ರೇಮಿಗಳಿಗೆ ಅಫ್ಘಾನ್ ತಂಡ ನಿರಾಸೆ ಮಾಡಿತು. ಸಾಧಾರಣ ಬ್ಯಾಟಿಂಗ್ ಮತ್ತು ಬೌಲಿಂಗ್ ಪ್ರದರ್ಶನ ನೀಡಿದ ನೈಬ್ ಹುಡುಗರು ಹಾಲಿ ಚಾಂಪಿಯನ್ ಎದುರು ಸೋತು ಮಕಾಡೆ ಮಲಗಿದರು.

ಬ್ರಿಸ್ಟಲ್ ನ ಕೌಂಟಿ ಗ್ರೌಂಡ್ ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಅಫ್ಘಾನ್ ತಂಡ ಮೊದಲು ಬ್ಯಾಟಿಂಗ್ ಮಾಡುವ ನಿರ್ಧಾರ ಕೈಗೊಂಡಿತು. ಆದರೆ ತಂಡದ ರನ್ ಖಾತೆ ಆರಂಭಕ್ಕೂ ಮೊದಲು ಮೊಹಮ್ಮದ್ ಶೆಹಜಾದ್ ವಿಕೆಟ್ ಕಳೆದುಕೊಂಡಿತು. ರೆಹಮತ್ ಶಾ (43) ಮತ್ತು ನಜೀಬುಲ್ಲಾ ಜದ್ರಾನ್ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಜದ್ರಾನ್ ತಂಡದ ಪರ ಏಕೈಕ ಅರ್ದಶತಕ ಬಾರಿಸಿ ಸಂಭ್ರಮಿಸಿದರು.

ನಾಯಕ ಗುಲ್ಬದಿನ್ ನೈಬ್ (31 ರನ್) ಮತ್ತು ಕೊನೆಯಲ್ಲಿ ರಶೀದ್ ಖಾನ್ 27 ರನ್ ಗಳಿಸಿ ತಂಡದ ಮೊತ್ತವನ್ನು ಇನ್ನೂರರ ಗಡಿ ದಾಟಲು ಸಹಕರಿಸಿದರು. ಒಟ್ಟಾರೆ 38.2 ಓವರ್ ಗಳಲ್ಲಿ 207 ರನ್ ಗಳಿಗೆ ಅಫ್ಘಾನ್ ಆಲ್ ಔಟ್ ಆಯಿತು.

ಆಸೀಸ್ ಪರ ಕಮಿನ್ಸ್ ಮತ್ತು ಆಡಂ ಜಂಪಾ ತಲಾ ಮೂರು ವಿಕೆಟ್ ಪಡೆದರೆ, ಮಾರ್ಕಸ್ ಸ್ಟೊನಿಸ್ ಎರಡು ಮತ್ತು ಸ್ಟಾರ್ಕ್ ಒಂದು ವಿಕೆಟ್ ಪಡೆದು ಮಿಂಚಿದರು.

ವಾರ್ನರ್, ಫಿಂಚ್ ಅರ್ಧಶತಕ


ಅಫ್ಘಾನ್ ನೀಡಿದ 208 ರನ್ ಗಳ ಸುಲಭ ಗುರಿ ಬೆನ್ನತ್ತಿದ್ದ ಆಸೀಸ್ ಗೆ ಆರಂಭಿಕರ ಅತ್ಯುತ್ತಮ ಅಡಿಪಾಯ ದೊರಕಿತು. ನಾಯಕ ಆರೋನ್ ಫಿಂಚ್ ಮತ್ತು ಡೇವಿಡ್ ವಾರ್ನರ್ ಅರ್ಧ ಶತಕ ಸಿಡಿಸಿ ಆಸೀಸ್ ಗೆಲುವಿನ ಹಾದಿ ಸುಗಮಗೊಳಿಸಿದರು. ನಾಯಕ ಫಿಂಚ್ ಕೇವಲ 49 ಎಸೆತಗಳಿಂದ 66 ರನ್ ಗಳಿಸಿ ಔಟಾದರು. ಕಡೆಯವರೆಗೂ ಔಟಾಗದೆ ಉಳಿದ ವಾರ್ನರ್ ಅಜೇಯ 89 ರನ್ ಗಳಿಸಿದರು. ಅರ್ಹವಾಗಿ ಪಂದ್ಯಶ್ರೇಷ್ಠ ಪ್ರಶಸ್ತಿ ಡೇವಿಡ್ ವಾರ್ನರ್ ಗೆ ಒಲಿದು ಬಂತು. ಮೂರು ವಿಕೆಟ್ ಕಳೆದುಕೊಂಡ ಆಸೀಸ್ 34.5 ಓವರ್ ಗಳಲ್ಲಿ 209 ರನ್ ಗಳಿಸಿ ಕೂಟದ ಮೊದಲ ಪಂದ್ಯದ ಸಿಹಿ ಉಂಡರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.