ಸಂಯೋಜಿತ ಚಿಕಿತ್ಸೆ ಯಶಸ್ವಿ : 600 ಸೋಂಕುಪೀಡಿತರಿಗೆ ಆಯುರ್ವೇದ, ಅಲೋಪತಿ ಆರೈಕೆ


Team Udayavani, Jun 3, 2021, 7:05 AM IST

alopathy

ಸಾಂದರ್ಭಿಕ ಚಿತ್ರ

ಹೊಸದಿಲ್ಲಿ : ಆಯುರ್ವೇದ ಮತ್ತು ಅಲೋಪತಿ ವೈದ್ಯ ಪದ್ಧತಿಗಳನ್ನು ಸಂಯೋಜಿಸಿದ ಚಿಕಿತ್ಸಾ ವಿಧಾನದಲ್ಲಿ 600 ಮಂದಿ ಕೊರೊನಾ ಸೋಂಕುಪೀಡಿತರು ಗುಣಮುಖರಾಗಿದ್ದಾರೆ.

ಹೊಸದಿಲ್ಲಿಯ ಕೇಂದ್ರ ಸರಕಾರಿ ಸ್ವಾಮ್ಯದ ಅಖೀಲ ಭಾರತ ಆಯುರ್ವೇದ ಸಂಸ್ಥೆ (ಎಐಐಎ) ಈ ಸಾಹಸ ನಡೆಸಿದೆ. ಸಂಸ್ಥೆಯ ಪ್ರಾಧ್ಯಾಪಕ ಡಾ| ತನುಜಾ ನೆಸಾರಿ ಇದರ ವಿವರ ನೀಡಿದ್ದಾರೆ. ಚಿಕಿತ್ಸೆಯಲ್ಲಿ ಆಧುನಿಕ ತಂತ್ರಜ್ಞಾನದ ಬಳಕೆ, ಎರಡೂ ವೈದ್ಯ ಪದ್ಧತಿಗಳ ಸಂಯೋಜನೆಯಿಂದ ಈ ಯಶಸ್ಸನ್ನು ಸಾಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಈ ವಿಧಾನದಲ್ಲಿ ಶೇ. 94 ಮಂದಿ ಸೋಂಕು ಪೀಡಿತರಿಗೆ ಆಯುರ್ವೇದ ಔಷಧ ನೀಡಲಾಯಿತು. ಭಾರತೀಯ ವೈದ್ಯಕೀಯ ಸಂಶೋಧನ ಮಂಡಳಿಯ ಸೂಚನೆಯ ಪ್ರಕಾರ ಅಲೋಪತಿ ಔಷಧವನ್ನು ಅಗತ್ಯ ಪರಿಸ್ಥಿತಿಯಲ್ಲಿ ಮಾತ್ರ ನೀಡಲಾಯಿತು ಎಂದು ಡಾ| ನೆಸಾರಿ ಹೇಳಿದ್ದಾರೆ. ಸೋಂಕಿನ 2ನೇ ಅಲೆಯ ಸಂದರ್ಭದಲ್ಲಿ 200 ಮಂದಿಯ ಸಹಿತ ಒಟ್ಟು 600 ಮಂದಿಯನ್ನು ಆಯುರ್ವೇದ ಸಂಸ್ಥೆಯ ಆಸ್ಪತ್ರೆ ಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು ಎಂದಿದ್ದಾರೆ.

ನಮ್ಮ ದೇಶದಲ್ಲಿ ಆಯುರ್ವೇದ ಮತ್ತು ಅಲೋಪತಿ ವೈದ್ಯಪದ್ಧತಿ ಜತೆಯಾಗಿಯೇ ಇವೆ. ಲ್ಯಾಬ್‌ನಲ್ಲಿ ನಡೆಸಿದ ಪರೀಕ್ಷೆಯ ಫ‌ಲಿತಾಂಶದ ಆಧಾರದಲ್ಲಿ ಚಿಕಿತ್ಸೆ ನೀಡಲಾಗಿದೆ ಎಂದು ಆಯು ರ್ವೇದ ಫಾರ್ಮಕಾಲಜಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಡಾ| ತನುಜಾ ನೆಸಾರಿ ಹೇಳಿದ್ದಾರೆ.

ಜಂಟಿ ನಿರ್ಧಾರ
ಯಾವ ಸೋಂಕು ಪೀಡಿತರಿಗೆ ಯಾವ ಔಷಧ ನೀಡ ಬೇಕು ಎಂಬುದನ್ನು ಅಲೋಪತಿ ಮತ್ತು ಆಯುರ್ವೇದ ವೈದ್ಯರು ಸೇರಿಕೊಂಡು ನಿರ್ಧಾರ ಮಾಡುತ್ತಿದ್ದರು ಎಂದು ಡಾ| ತನುಜಾ ಹೇಳಿದ್ದಾರೆ. ಮಧ್ಯಮ ಸ್ವರೂಪದ ಸೋಂಕುಪೀಡಿತರಿಗೆ ಎರಡೂ ವೈದ್ಯ ಪದ್ಧತಿ ಮೂಲಕ ಚಿಕಿತ್ಸೆ ನೀಡಲಾಗಿದೆ. ಮೊದಲ ಹಂತದಲ್ಲಿ ಆಯುರ್ವೇದ ಮತ್ತು ಆಮ್ಲಜನಕ ಥೆರಪಿ ನೀಡಲಾಗುತ್ತಿತ್ತು. ಆರೋಗ್ಯ ಸುಧಾರಿಸದವರಿಗೆ ಅಲೋಪತಿ ಔಷಧ ನೀಡಲಾಗುತ್ತಿತ್ತು ಎಂದಿದ್ದಾರೆ.

ನಾವೂ ಸಿಟಿ ಸ್ಕ್ಯಾನ್ ಮಾಡುತ್ತೇವೆ
ಔಷಧವನ್ನು ನೀಡಬೇಕು ಎಂಬ ಕಾರಣಕ್ಕೆ ನೀಡುವುದಿಲ್ಲ ಎಂದು ಹೇಳಿರುವ ಡಾ| ತನುಜಾ, ಪ್ರತಿಯೊಬ್ಬ ಸೋಂಕು ಪೀಡಿತ ವ್ಯಕ್ತಿಯನ್ನು ಕೂಲಂಕಷವಾಗಿ ಗಮನಿಸುತ್ತಿದ್ದೆವು. ಅಲೋಪತಿ ಎನ್ನುವುದು ಆಧುನಿಕ ವೈದ್ಯ ಪದ್ಧತಿ. ನಮ್ಮ ಸಂಸ್ಥೆಯಲ್ಲಿ ರೋಗಲಕ್ಷಣ ಶಾಸ್ತ್ರ ಮತ್ತು ರೇಡಿಯಾಲಜಿ ವಿಭಾಗ ಹಾಗೂ ಲ್ಯಾಬ್‌ ಇವೆ. ಇಲ್ಲಿ ಸಿ.ಟಿ. ಸ್ಕ್ಯಾನ್, ಸಿಆರ್‌ಪಿ ಮತ್ತು ಇತರ ಪರೀಕ್ಷೆಗಳನ್ನು ನಿಯಮಿತವಾಗಿ ನಡೆಸುತ್ತೇವೆ ಎಂದಿದ್ದಾರೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.