Bagalakote: ಅಧಿಕಾರಿಗಳು ಜನರ ಕಷ್ಟಗಳಿಗೆ ಸ್ಪಂದಿಸಿ: ಸಚಿವ ಆರ್. ಬಿ. ತಿಮ್ಮಾಪೂರ

ನೆರೆ ಪೀಡಿತ ಗ್ರಾಮಗಳಲ್ಲಿ ಪ್ರತಿದಿನ ಫಾಗಿಂಗ್ ಮಾಡಿ, ಡೆಂಗ್ಯೂ ಬರದಂತೆ ಎಚ್ಚರ ವಹಿಸಿ

Team Udayavani, Aug 6, 2024, 9:43 PM IST

Thimmapura

ರಬಕವಿ-ಬನಹಟ್ಟಿ (ಬಾಗಲಕೋಟೆ ಜಿಲ್ಲೆ) : ರಾಜ್ಯದ ಕಾಂಗ್ರೆಸ್ ಸರಕಾರ ಕಟ್ಟಕಡೆಯ ವ್ಯಕ್ತಿಗಳ ಪರವಾಗಿದ್ದು, ಮಕ್ಕಳ ವಿಷಯದಲ್ಲಿ ಎಲ್ಲ ಅಧಿಕಾರಿಗಳು  ಜಾಗರೂಕತೆಯಿಂದ ಕಾಳಜಿ ವಹಿಸಿ ಕೆಲಸ ಮಾಡಿ ಎಂದು ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಹಾಗೂ ಅಬಕಾರಿ ಸಚಿವ ಆರ್. ಬಿ. ತಿಮ್ಮಾಪೂರ ಹೇಳಿದರು.

ಮಂಗಳವಾರ ಸಂಜೆ ರಬಕವಿ ಬನಹಟ್ಟಿ ನಗರಸಭೆ ಸಭಾ ಭವನದಲ್ಲಿ ರಬಕವಿ ಬನಹಟ್ಟಿ ಹಾಗ ತೇರದಾಳ ತಾಲೂಕಿನ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಅಧಿಕಾರಿಗಳು ಸಾರ್ವಜನಿಕರ ಕಷ್ಟಗಳಿಗೆ ಸರಿಯಾದ ರೀತಿಯಲ್ಲಿ ಸ್ಪಂದಿಸುವ ಕೆಲಸ ಮಾಡಿ. ಅಭಿವೃದ್ಧಿ ಕೆಲಸಕ್ಕೆ ನನ್ನ ಸದಾ ಬೆಂಬಲವಿರುತ್ತದೆ. ಜನರು ಬದುಕು ನೆಮ್ಮದಿಯಿಂದ ಇರಲು ತಾವೆಲ್ಲ ಪ್ರಾಮಾಣಿಕವಾಗಿ ಕೆಲಸ ಮಾಡಿ ಎಂದು ತಿಮ್ಮಾಪುರ ತಿಳಿಸಿದರು.

ಮಹಾಲಿಂಗಪುರ ಆಸ್ಪತ್ರೆಯಲ್ಲಿ ರಾಜಕೀಯ ನಡೆಯುತ್ತಿದೆ ವೈದ್ಯಾಧಿಕಾರಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದು ತೇರದಾಳ ಶಾಸಕ ಸಿದ್ದು ಸವದಿ ಹೇಳಿದರು. ಇದಕ್ಕೆ ಉತ್ತರಿಸಿದ ಮುಧೋಳ ತಾಲೂಕು ಆರೋಗ್ಯಾಧಿಕಾರಿ ಮಾಲಘಾಣ ಮಾತನಾಡಿ ಈಗಾಗಲೇ ಮಿಟಿಂಗ್ ತೆಗೆದುಕೊಂಡಿದ್ದೇನೆ. ಅಲ್ಲಿ ವೈದ್ಯಾಧಿಕಾರಿಗಳು ಪರಸ್ಪರ ಜಗಳವಾಡುತ್ತಾರೆ ಎಂದು ಹೇಳಿದಾಗ ಸಚಿವರಾದ ತಿಮ್ಮಾಪುರ ಮಾತನಾಡಿ, ಸರಿಯಾಗಿ ಕರ್ತವ್ಯ ನಿರ್ವಹಿಸದ ವೈದ್ಯರನ್ನು ಸೇವೆಯಿಂದ ಬಿಡುಗಡೆಗೊಳಿಸಿ, ಖಾಸಗಿ ಆಸ್ಪತ್ರೆಗೆ ಬರೆದು ಕೊಡುವ ವೈದ್ಯರ ಮೇಲೆ ಶೀಘ್ರವೇ ಕ್ರಮ ತೆಗೆದುಕೊಳ್ಳಿ ಎಂದು ಸಚಿವರು ಜಿ. ಪಂ. ಸಿಇಓ ಶಶಿಧರ ಕುರೇರರಿಗೆ ಸೂಚಿಸಿದರು.

ಪ್ರವಾಹ ಸ್ವಲ್ಪ ಇಳಿಮುಖವಾಗುತ್ತಿದ್ದು, ನೆರೆ ಇಳಿದಾಗ ಇನ್ನೂ ಭಯಾನಕ ಪರಿಸ್ಥಿತಿ ನಿರ್ಮಾಣವಾಗುತ್ತದೆ ಆರೋಗ್ಯದ ದೃಷ್ಟಿ ಯಿಂದ ನೆರೆ ಪೀಡಿತ ಗ್ರಾಮಗಳಲ್ಲಿ ಪ್ರತಿದಿನ ಫಾಗಿಂಗ್ ಮಾಡಿ, ಡೆಂಗ್ಯೂ ಬರದಂತೆ ಎಚ್ಚರ ವಹಿಸಿ, ಎಚ್ಚರ ತಪ್ಪದ್ದಲ್ಲಿ ನೀವೆ ಹೊಣೆಗಾರರು ಎಂದು ಅಧಿಕಾರಿಗಳಿಗೆ ಸಚಿವರು ಎಚ್ಚರಿಸಿದರು. ಅಲ್ಲದೇ ಪ್ರತಿ ತಿಂಗಳು ಒಂದು ಆರೋಗ್ಯ ತಪಾಸಣೆ ಶಿಭಿರ ಏರ್ಪಡಿಸಿ ಎಂದರು.

ತಾ.ಪಂ. ಇಒಗೆ ಸಚಿವ ತರಾಟೆ:
ಕೆಡಿಪಿ ಸಭೆಯಲ್ಲಿ ಪ್ರವಾಹ ಪರಿಸ್ಥಿತಿ ವಿಷಯದ ಕುರಿತು ಮಾಹಿತಿ ಕೇಳುವ ಸಂದರ್ಭದಲ್ಲಿ ಜಮಖಂಡಿ ತಾ. ಪಂ. ಇಓ ಸಂಜಯ ಜಿನ್ನೂರ ಮೊಬೈಲ್ ನಲ್ಲಿ ಮಾತನಾಡುತ್ತಿದ್ದರಿಂದ ಸಚಿವ ತಿಮ್ಮಾಪೂರ ಅವರನ್ನು ತರಾಟೆಗೆ ತೆಗೆದುಕೊಂಡರು. ಸಭೆಯಲ್ಲಿ ಈ ತರಹ ನಿರ್ಲಕ್ಷ್ಯ ತೋರಿದರೆ ನಾನು ಸಹಿಸುವುದಿಲ್ಲ ಎಂದರು.

ಕೌಜಲಗಿ ನಿಂಗಮ್ಮ ಸಮುದಾಯ ಭವನ ಸರಿಯಾಗಿ ಉಪಯೋಗವಾಗುತ್ತಿಲ್ಲ. ಇದು ಕಲಾವಿದೆಯಾಗಿ ನನಗೆ ತುಂಬಾ ನೋವಾಗಿದೆ. ಅದು ಸರಿಯಾಗಿ ಬಳಕೆಯಾಗುತ್ತಿಲ್ಲ. ಸಾಂಸ್ಕೃತಿಕ ಚಟುವಟಿಕೆಗಳು ನಡೆಯಬೇಕು. ಕನ್ನಡ ಕೆಲಸಗಳು ನಡೆಯುವಂತಾಗಬೇಕು. ಅಲ್ಲದೇ ಬನಹಟ್ಟಿ ನೇಕಾರ ಭವನ ಮಾಡಿದ್ದು, ಅದು ಅನ್ಯರ ಪಾಲಾಗಿದ್ದು, ಹಾಗೂ ರಬಕವಿ ಕನ್ನಡ ಭವನದ ಕುರಿತು ಗಮನ ಹರಿಸಿ ಅಗತ್ಯ ಕ್ರಮ ಜರುಗಿಸಬೇಕು ಎಂದು ಎಂದು ವಿಧಾನಪರಿಷತ್ ಸದಸ್ಯರಾದ ಉಮಾಶ್ರೀ ಆಗ್ರಹಿಸಿದರು.

ಇದಕ್ಕೆ ಉತ್ತರಿಸಿದ ಸಚಿವ ತಿಮ್ಮಾಪುರ ಮಹಾಲಿಂಗಪುರದ ಕೌಜಲಗಿ ನಿಂಗಮ್ಮ, ಬನಹಟ್ಟಿಯ ನೇಕಾರಭವನ, ರಬಕವಿಯ ಕನ್ನಡ ಭವನದ ಕುರಿತು ಅಗತ್ಯ ಮಾಹಿತಿ ತರಿಸಿಕೊಂಡು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಸರಿಯಾದ ಮಾಹಿತಿ ತರದೇ ಬೇಜವಾಬ್ದಾರಿ ರೀತಿ ಸಭೆಗೆ ಬರುವುದು ಯಾಕಪ್ಪಾ. ಸರಿಯಾದ ಮಾಹಿತಿ ತೆಗೆದುಕೊಂಡು ಬರಬೇಕು ಎಂದು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗೆ ಸಚಿವರು ತಾಕೀತು ಮಾಡಿದರು. ಅಂಗನಾಡಿಗಳ ಮೇಲೆ ನಿಗಾ ಇಡಿ, ಸರಿಯಾಗಿ ಕೆಲಸ ಮಾಡದವರ ಮೇಲೆ ಕ್ರಮ ತೆಗೆದುಕೊಳ್ಳಿ ಎಂದರು.

ಶಾಸಕ ಸಿದ್ದು ಸವದಿ, ಸಚಿವ ಆರ್. ಬಿ. ತಿಮ್ಮಾಪುರ, ವಿಧಾನ ಪರಿಷತ್‌ ಸದಸ್ಯೆ ಉಮಾಶ್ರೀ, ಜಿಲ್ಲಾಧಿಕಾರಿ ಜಾನಕಿ ಕೆ. ಎಂ., ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಅಮರನಾಥ ರೆಡ್ಡಿ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ವೇದಿಕೆ ಮೇಲಿದ್ದರು.

ಉಪವಿಭಾಗಾಧಿಕಾರಿ ಶ್ವೇತಾ ಬೀಡಕರ, ರಬಕವಿ ಬನಹಟ್ಟಿ ತಹಶೀಲ್ದಾರ ಗಿರೀಶ ಸ್ವಾದಿ, ಜಮಖಂಡಿ ತಹಶೀಲ್ದಾರ ಸಂತೋಷ ಮಕ್ಕೋಜಿ, ತಾ. ಪಂ. ಕಾರ್ಯನಿರ್ವಾಹಕ ಅಧಿಕಾರಿ ಸಿದ್ದಪ್ಪ ಪಟ್ಟಿಹಾಳ, ಡಿವಾಯ್ ಎಸ್ಪಿ ಈ. ಶಾಂತವೀರ, ಜಮಖಂಡಿ ತಾಲೂಕು ವೈದ್ಯಾಧಿಕಾರಿ ಜಿ. ಎಸ್. ಗಲಗಲಿ, ಮುಧೋಳ ತಾಲೂಕು ವೈದ್ಯಾಧಿಕಾರಿ ಮಾಲಘಾಣ, ಪಶು ವೈದ್ಯಾಧಿಕಾರಿ ಬಸವರಾಜ ಗೌಡರ, ಮುಧೋಳ ತಾ. ಪಂ. ಇ. ಓ ಸಂಜಯ ಹಿಪ್ಪರಗಿ, ಜಮಖಂಡಿ ಶಿಕ್ಷಣಾಧಿಕಾರಿ ಎ ಕೆ ಬಸನ್ನವರ ಸೇರಿದಂತೆ ವಿವಿಧ ಇಲಾಖೆಯ ತಾಲೂಕು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

1-CT

C.T.Ravi; ನನ್ನ ಬಂಧನ ನ್ಯಾಯಾಂಗ ತನಿಖೆಯಾಗಲಿ…ಈಗಲೂ ಜೀವ ಬೆದರಿಕೆ ಇದೆ

BBK11: ನಿಮ್ಮ ಉಸ್ತುವಾರಿ ನೋಡಿ ಹೇಸಿಗೆ ಆಯಿತು.. ಚೈತ್ರಾ ಬಾಯಿ ಮುಚ್ಚಿಸಿದ ಕಿಚ್ಚ

BBK11: ನಿಮ್ಮ ಉಸ್ತುವಾರಿ ನೋಡಿ ಹೇಸಿಗೆ ಆಯಿತು.. ಚೈತ್ರಾ ಬಾಯಿ ಮುಚ್ಚಿಸಿದ ಕಿಚ್ಚ

G.parameshwar

C.T.Ravi issue: ಕೋರ್ಟ್‌ನಲ್ಲಿರುವ ವಿಚಾರದ ಬಗ್ಗೆ ಚರ್ಚಿಸುವುದು ಸರಿಯಲ್ಲ: ಜಿ.ಪರಮೇಶ್ವರ್‌

Kundapura: ತ್ರಾಸಿ ಕಡಲ ಕಿನಾರೆಯಲ್ಲಿ ಮಗುಚಿದ ಜೆಟ್ ಸ್ಕೀ ಬೋಟ್; ರೈಡರ್ ನಾಪತ್ತೆ!

Kundapura: ತ್ರಾಸಿ ಕಡಲ ಕಿನಾರೆಯಲ್ಲಿ ಮಗುಚಿದ ಜೆಟ್ ಸ್ಕೀ ಬೋಟ್; ರೈಡರ್ ನಾಪತ್ತೆ!

Sathish-jarakhoili

Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್‌ ಜಾರಕಿಹೊಳಿ

1-allu

Allu Arjun; ತಪ್ಪು ಮಾಹಿತಿ, ಚಾರಿತ್ರ್ಯ ಹರಣಕ್ಕೆ ಯತ್ನ: ರೇವಂತ್ ರೆಡ್ಡಿಗೆ ತಿರುಗೇಟು

1-modi-bg

Hala Modi; ಮಿನಿ ಹಿಂದೂಸ್ಥಾನಕ್ಕೆ ಸಾಕ್ಷಿಯಾಗುತ್ತಿದ್ದೇನೆ: ಕುವೈಟ್ ನಲ್ಲಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Krantiveer Brigade launched by worshipping the feet of 1008 saints: KS Eshwarappa

Politicss; 1008 ಸಾಧುಸಂತರ ಪಾದಪೂಜೆ‌ ಮೂಲಕ‌ ಕ್ರಾಂತಿವೀರ ಬ್ರಿಗೇಡ್‌ ಗೆ ಚಾಲನೆ: ಈಶ್ವರಪ್ಪ

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

Rabkavi Banhatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-CT

C.T.Ravi; ನನ್ನ ಬಂಧನ ನ್ಯಾಯಾಂಗ ತನಿಖೆಯಾಗಲಿ…ಈಗಲೂ ಜೀವ ಬೆದರಿಕೆ ಇದೆ

Pro Kabaddi: ಪಾಟ್ನಾ-ಗುಜರಾತ್‌ ಟೈ

Pro Kabaddi: ಪಾಟ್ನಾ-ಗುಜರಾತ್‌ ಟೈ

BBK11: ನಿಮ್ಮ ಉಸ್ತುವಾರಿ ನೋಡಿ ಹೇಸಿಗೆ ಆಯಿತು.. ಚೈತ್ರಾ ಬಾಯಿ ಮುಚ್ಚಿಸಿದ ಕಿಚ್ಚ

BBK11: ನಿಮ್ಮ ಉಸ್ತುವಾರಿ ನೋಡಿ ಹೇಸಿಗೆ ಆಯಿತು.. ಚೈತ್ರಾ ಬಾಯಿ ಮುಚ್ಚಿಸಿದ ಕಿಚ್ಚ

G.parameshwar

C.T.Ravi issue: ಕೋರ್ಟ್‌ನಲ್ಲಿರುವ ವಿಚಾರದ ಬಗ್ಗೆ ಚರ್ಚಿಸುವುದು ಸರಿಯಲ್ಲ: ಜಿ.ಪರಮೇಶ್ವರ್‌

death

Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.