Bajpe-Kateel State Highway: ಕಾರು ಢಿಕ್ಕಿ : 6 ವಿದ್ಯುತ್ ಕಂಬಗಳಿಗೆ ಹಾನಿ
ಅಪಾಯದ ಸ್ಥಿತಿಯಲ್ಲಿದ್ದ ಮೂವರು ಯುವಕರು ಪಾರು
Team Udayavani, Sep 13, 2024, 6:47 AM IST
ಬಜಪೆ: ಬಜಪೆ -ಕಟೀಲು ರಾಜ್ಯ ಹೆದ್ದಾರಿ 67ರ ಎಕ್ಕಾರು ಪೇಟೆಯಲ್ಲಿ ಬುಧವಾರ ರಾತ್ರಿ ಸುಮಾರು 10.30ರ ವೇಳೆಗೆ ಕಟೀಲು ಕಡೆಯಿಂದ ವೇಗವಾಗಿ ಬಂದ ಕಾರು ಎಕ್ಕಾರು ಬಂಟರ ಭವನದ ಬಳಿಯ ವಿದ್ಯುತ್ ಕಂಬಕ್ಕೆ ಢಿಕ್ಕಿಯಾದ ಪರಿಣಾಮ ವಿದ್ಯುತ್ ಕಂಬ ತುಂಡಾಗಿ ಬಿದ್ದಿದ್ದು, ಜತೆಗೆ ಇತರ ಕೆಲವು ವಿದ್ಯುತ್ ಕಂಬಗಳೂ ಎಳೆಯಲ್ಪಟ್ಟು ಒಟ್ಟು ಆರು ಕಂಬಗಳು ತುಂಡಾಗಿವೆ. ಮೆಸ್ಕಾಂಗೆ ಒಟ್ಟು 1.10 ಲಕ್ಷ ರೂಪಾಯಿ ನಷ್ಟವಾಗಿದೆ.
ಕಂಬಗಳು ತುಂಡಾದ ಕಾರಣ ವಿದ್ಯುತ್ ತಂತಿಗಳು ಹಾಗೂ ಎಚ್ಟಿ ಲೈನ್ಗಳು ಕೂಡ ರಸ್ತೆಗೆ ಜೋತು ಬಿದ್ದಿತ್ತು. ಕೂಡಲೇ ಮೆಸ್ಕಾಂನ ಲೈನ್ಮನ್ ಗುರು ಭಟ್ ಅವರು ವಿದ್ಯುತ್ ಅನ್ನು ಸ್ಥಗಿತಗೊಳಿಸಿದ ಕಾರಣ ಕಾರಿನಲ್ಲಿ ಅಪಾಯದ ಸ್ಥಿತಿಯಲ್ಲಿದ್ದ ಮೂವರು ಯುವಕರು ಪಾರಾದರು. ಗುರು ಭಟ್ ಸ್ಥಳಕ್ಕೆ ಆಗಮಿಸಿ ರಸ್ತೆಯಲ್ಲಿ ತುಂಡಾಗಿ ಬಿದ್ದಿದ್ದ ಹಾಗೂ ಜೋತು ಬಿದ್ದಿದ್ದ ತಂತಿಗಳನ್ನು ಬದಿಗೆ ಸರಿಸಿ ವಾಹನ ಸಂಚಾರಕ್ಕೆ ಅನುವು ಮಾಡಿ ಕೊಟ್ಟರು. ಆದರೆ ನಸುಕಿನ ಜಾವ ಮೂರು ಗಂಟೆಗೆ ಎಕ್ಕಾರು ಭಜನ ಮಂದಿರದ ಬಳಿ ಇನ್ನೊಂದು ವಿದ್ಯುತ್ ಕಂಬ ರಸ್ತೆ ಬಿದ್ದಿದ್ದು, ಕಂಬ ಹಾಗೂ ತಂತಿಗಳು ರಸ್ತೆಯಲ್ಲಿ ನೇತಾಡುತ್ತಿದ್ದ ಕಾರಣ ವಾಹನ ಸಂಚಾರಕ್ಕೆ ಅಪಾಯವಿತ್ತು. ಮಾಹಿತಿ ಅರಿತ ಗುರು ಭಟ್ ಮತ್ತೆ ಸ್ಥಳಕ್ಕೆ ಆಗಮಿಸಿದ್ದರು.
ಮುಂಜಾನೆವರೆಗೆ ಕಾದು ಕುಳಿತರು
ರಸ್ತೆಯಲ್ಲಿದ್ದ ವಿದ್ಯುತ್ ತಂತಿ ಹಾಗೂ ಕಂಬಗಳನ್ನು ಲೈನ್ಮನ್ ಗುರು ಭಟ್ ಹಾಗೂ ರಮೇಶ್ ಶೆಟ್ಟಿ ಅವರು ತೆರವುಗೊಳಿಸಲು ಮುಂದಾದರು. ಆಗ ಸ್ಥಳೀಯ ಯುವಕರಾದ ಲೇಖನ್ ಮತ್ತು ಚಿನ್ನು ಅವರು ಆ ಮಾರ್ಗದಲ್ಲಿ ಬರುತ್ತಿದ್ದ ವಾಹನಗಳಿಗೆ ಅಪಾಯದ ಬಗ್ಗೆ ತಿಳಿಸಿ ಎಚ್ಚರಿಸುವ ಕೆಲಸವನ್ನು ಮುಂಜಾನೆವರೆಗೆ ಮಾಡಿದರು. ರಾತ್ರಿಯಾಗಿದ್ದ ಕಾರಣ ವಾಹನ ಚಾಲಕರಿಗೆ ವಿದ್ಯುತ್ ತಂತಿ ಹಾಗೂ ಕಂಬಗಳು ಬೇಗನೆ ಗೋಚರವಾಗದೆ ಎರಡು ದ್ವಿಚಕ್ರ ವಾಹನ ಸವಾರರು ಬಿದ್ದ ಘಟನೆಯೂ ನಡೆಯಿತು. ಲೈನ್ಮನ್ಗಳು ಹಾಗೂ ಸ್ಥಳೀಯ ಯುವಕರ ಕಾರ್ಯಕ್ಕೆ ಶ್ಲಾಘನೆ ವ್ಯಕ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Instagram: ಹದಿಹರೆಯದವರಿಗೆಂದೇ ವಿಶೇಷ ಇನ್ಸ್ಟಾಗ್ರಾಂ ಖಾತೆ; ಮಕ್ಕಳ ಸುರಕ್ಷತೆಗಾಗಿ ಕ್ರಮ
Assembly Election: ಜಮ್ಮು-ಕಾಶ್ಮೀರದಲ್ಲಿ ಪ್ರಜಾಪ್ರಭುತ್ವದ ಹಬ್ಬ
Delhi CM; ಕೇಜ್ರಿವಾಲ್ರನ್ನು ಮತ್ತೆ ಸಿಎಂ ಮಾಡುವುದೇ ಗುರಿ: ಆತಿಷಿ
Drought; ನಮೀಬಿಯಾ ಆಯ್ತು, ಈಗ ಜಿಂಬಾಬ್ವೆಯಲ್ಲಿ 200 ಆನೆಗಳ ಹತ್ಯೆ?
Ranji Trophy: ಸಂಭಾವ್ಯ ತಂಡದಲ್ಲಿ ಸಮಿತ್ ದ್ರಾವಿಡ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.