ಬನಹಟ್ಟಿಯಲ್ಲಿ 2 ಕೋಟಿ ರೂ. ವೆಚ್ಚದಲ್ಲಿ ವೃಕ್ಷೋದ್ಯಾನ ಕಾಮಗಾರಿ ಶರವೇಗದಲ್ಲಿ ಪ್ರಾರಂಭ


Team Udayavani, Jul 25, 2022, 9:27 PM IST

ಬನಹಟ್ಟಿಯಲ್ಲಿ 2 ಕೋಟಿ ರೂ. ವೆಚ್ಚದಲ್ಲಿ ವೃಕ್ಷೋದ್ಯಾನ ಕಾಮಗಾರಿ ಶರವೇಗದಲ್ಲಿ ಪ್ರಾರಂಭ

ರಬಕವಿ-ಬನಹಟ್ಟಿ: ಜಮಖಂಡಿಯ ಪ್ರಾದೇಶಿಕ ಅರಣ್ಯ ಇಲಾಖೆಯ ಆಶ್ರಯದಲ್ಲಿ ರಬಕವಿ ಬನಹಟ್ಟಿ ತಾಲೂಕಿನ ಆಸಂಗಿ ಗ್ರಾಮದ ಡೆಂಪೋ ಡೈರಿಯ ಮುಂಭಾಗದಲ್ಲಿರುವ ಅಂದಾಜು 42 ಎಕರೆ ಭೂ ಪ್ರದೇಶದಲ್ಲಿ ಸಾರ್ವಜನಿಕರ ಮತ್ತು ಮಕ್ಕಳ ಅನುಕೂಲಕ್ಕಾಗಿ ವೃಕ್ಷ ಉದ್ಯಾನ ವನವನ್ನು ಕಳೆದ ತಿಂಗಳು ಚಾಲನೆ ನೀಡಲಾಗಿತ್ತು. ಈ ಕಾಮಗಾರಿ ವೃಕ್ಷೋದ್ಯಾನಕ್ಕೆ 2 ಕೋಟಿ ಹಣ ಈಗಾಗಲೇ ಬಿಡುಗಡೆ ಆಗಿದ್ದು, ಈಗ ರೂ. 25 ಲಕ್ಷ ವೆಚ್ಚದ ಮೊದಲ ಹಂತದ ಕಾಮಗಾರಿ ಅತೀ ಶರವೇಗದಲ್ಲಿ ಪ್ರಾರಂಬಿಸಿದ್ದು ತಾಲೂಕಿನ ಜನರಲ್ಲಿ ಸಂತಸವನ್ನುಂಟು ಮಾಡಿದೆ.

ಈ ಮೊದಲು ಇಲ್ಲಿ ಬಿಸಿಲು ಬಿಸಿ ನೋಡಲಾಗುತ್ತಿರಲಿಲ್ಲ, ಈಗ ಇಲ್ಲಿ ಗಿಡಗಳನ್ನು ನೆಡುತ್ತಿರುವುದರಿಂದ ತಂಪು ಗಾಳಿ ಬಿಸುವ ಮತ್ತು ಅನುಭವಿಸುವ ಅವಕಾಶ ಇಲ್ಲಿನ ಜನರಿಗೆ ದೊರಕಲಿದೆ.

ಅದರಂತೆ ಕಳೆದ ಒಂದು ವಾರದಿಂದ ಅರಣ್ಯ ಇಲಾಖೆ ಜಾಗೆಯಲ್ಲಿ ಮೊದಲ ಹಂತದಲ್ಲಿ 2600 ಕ್ಕೂ ಅಧೀಕ ಗಿಡಗಳನ್ನು ನೆಡಲಾಗಿದೆ. ಇಲ್ಲಿ ಬೆಳಗ್ಗೆ ಮತ್ತು ಸಂಜೆ ವಾಯು ವಿಹಾರಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸಿಸಿ ರಸ್ತೆ ನಿರ್ಮಾಣ, ಮಕ್ಕಳು ಆಡುವ ಸಲಕರಣೆಗಳು, ಜೊತೆಗೆ ಇಲ್ಲಿ ಇರುವ ಬಾಂದಾರವನ್ನು ಅಭಿವೃದ್ಧಿಗೊಳಿಸಿ ಅಲ್ಲಿ ದೋಣಿ ವಿಹಾರಕ್ಕೂ ಅವಕಾಶವನ್ನು ನೀಡುವ ಯೋಜನೆ ಕೂಡಾ ಅತಿ ಶೀಘ್ರದಲ್ಲಿ ಪ್ರಾರಂಭಿಸಲಾಗುತ್ತಿದೆ. ಇಲ್ಲಿ ನೆಟ್ಟ ಗಿಡಗಳಿಗೆ ಹನಿ ನೀರಾವರಿಯ ಮೂಲಕ ನೀರು ನೀಡುವ ಸೌಕರ್ಯವನ್ನು ಕೂಡಾ ಮಾಡಲಾಗುವುದು. ಹಂತ ಹಂತವಾಗಿ ಈ ವೃಕ್ಷೋದ್ಯಾನವನ್ನು ಅಭಿವೃದ್ಧಿ ಪಡಿಸಲಾಗುವುದು. ಅದೇ ರೀತಿಯಾಗಿ ಬನಹಟ್ಟಿಯ ಕೆಎಚ್‌ಡಿಸಿ ರಸ್ತೆಯಲ್ಲಿರುವ ನಾಲ್ಕು ಅರಣ್ಯ ಪ್ರದೇಶದ ಭೂಮಿಯಲ್ಲಿಯೂ ಕೂಡಾ ಅರಣ್ಯೀಕರಣಗೊಳಿಸಿ ಅಲ್ಲಿಯೂ ಮಕ್ಕಳಿಗೆ ಅನುಕೂಲವಾಗುವು ನಿಟ್ಟಿನಲ್ಲಿ ಅಭಿವೃದ್ಧಿಗೊಳಿಸುವ ಯೋಜನೆ ಕೂಡಾ ಇದರಲ್ಲಿ ಅಳವಡಿಸಲಾಗಿದೆ ಎನ್ನುತ್ತಾರೆ ಅರಣ್ಯ ಇಲಾಖೆ ಅಧಿಕಾರಿಗಳು.

ಗಿಡ ಮರಗಳನ್ನು ರಕ್ಷಿಸುವುದರ ಜೊತೆಗೆ ಸುಂದರ ಪರಿಸರವನ್ನು ನಿರ್ಮಾಣ ಮಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಕಾರ್ಯಕ್ರಮಗಳು ಅಗತ್ಯವಾಗಿವೆ. ಮುಂದಿನ ಪಿಳಿಗೆಯ ಅರೋಗ್ಯದ ಹಿತದೃಷ್ಟಿಯಿಂದು ನಾವೆಲ್ಲರು ಗಿಡಮರಗಳನ್ನು ಬೆಳೆಸಿದರೆ ಅದೆ ಅವರಿಗೆ ಕೊಡುವ ಕೊಡುಗೆ.
– ಸಿದ್ದು ಸವದಿ. ಶಾಸಕರು ತೇರದಾಳ ಮತಕ್ಷೇತ್ರ.

ಈ ಪ್ರದೇಶದಲ್ಲಿ ಈಗಾಗಲೇ 10 ಸಾವಿರಕ್ಕೂ ಅಧೀಕ ಬೇವಿನ ಮರಗಳನ್ನು ನೆಟ್ಟಿದ್ದು, ಅವೆಲ್ಲ ಈಗ ಆಳೆತ್ತರಕ್ಕೆ ಬೆಳೆದು ನಿಂತಿವೆ. ಸಾರ್ವಜನಿಕರು ಈ ಜಾಗೆಯನ್ನು ಒತ್ತುವರಿಮಾಡಬಾರದು, ಮತ್ತು ಅರಣ್ಯದಲ್ಲಿರುವ ಗಿಡಮರಗಳಗೆ ಹಾನಿ ಮಾಡಬಾರದು.
– ವಾಸಿಂ ತೇನಗಿ. ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಜಮಖಂಡಿ.

ಈ ಪ್ರದೇಶವನ್ನು ಜಿಲ್ಲೆಯಲ್ಲಿಯೇ ಅತೀ ಸುಂದರವಾದ ವೃಕ್ಷೋಧ್ಯಾನವನವನ್ನಾಗಿಸಲಾಗುವುದು. ಮಕ್ಕಳು ವಯೋವರದ್ದರು ಇಲ್ಲಿ ಸುತ್ತಾಡಿದರೆ ಮನಸ್ಸಿಗೆ ಮದುನೀಡುವಂತಾಗಬೇಕು. ಹಾಗೆ ಈ ಪ್ರದೇಶದಲ್ಲಿ ಅಬಿವೃದ್ಧಿ ಪಡಿಸಲಾಗುತ್ತಿದೆ. ಎನ್ನುತ್ತಾರೆ ವಲಯ ಅರಣ್ಯಾಧಿಕಾರಿ ವಿಜಯಕುಮಾರ ಕಾಳಪ್ಪನವರ ಹಾಗೂ ತೇರದಾಳ ವಲಯ ಅರಣ್ಯ ಅಧಿಕಾರಿ ಮಲ್ಲು ನಾವಿ.

– ಕಿರಣ ಶ್ರೀಶೈಲ ಆಳಗಿ

ಟಾಪ್ ನ್ಯೂಸ್

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eeee

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ

rape

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

1-a-ct

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.