Bangaladesh illegal immigrants: ಕಾರ್ಮಿಕರ ಮಾಹಿತಿ ಸಂಗ್ರಹ ಆರಂಭಿಸಿದ ಪೊಲೀಸರು
ಬಾಂಗ್ಲಾ ಅಕ್ರಮ ವಲಸೆ ಫಾಲೋ ಅಪ್: ಹೊರ ರಾಜ್ಯದ ಕಾರ್ಮಿಕರು ಎಷ್ಟಿದ್ದಾರೆ ಎಂಬ ನಿಖರ ಮಾಹಿತಿ ಕಾರ್ಮಿಕ ಇಲಾಖೆಯಲ್ಲಿ ಇಲ್ಲ
Team Udayavani, Oct 17, 2024, 7:58 AM IST
ಉಡುಪಿ: ಮಲ್ಪೆಯಲ್ಲಿ 7 ಮಂದಿ ಬಾಂಗ್ಲಾ ಅಕ್ರಮ ವಲಸಿಗರನ್ನು ಪೊಲೀಸರು ಬಂಧಿಸಿದ ಅನಂತರದಲ್ಲಿ ಜಿಲ್ಲಾ ಪೊಲೀಸ್ ಇಲಾಖೆ, ಕರಾವಳಿ ಕಾವಲು ಪಡೆ ಭದ್ರತೆಯ ವಿಷಯವಾಗಿ ಇನ್ನಷ್ಟು ಎಚ್ಚೆತ್ತುಕೊಂಡಿವೆ.
ಜಿಲ್ಲೆಯ ವಿವಿಧ ಬಂದರು, ಕಟ್ಟಡ ನಿರ್ಮಾಣ ವಲಯ, ಫಿಶ್ಮೀಲ್ ಸಹಿತ ಹೊರ ರಾಜ್ಯದ ಕಾರ್ಮಿಕರು ಹೆಚ್ಚೆಚ್ಚು ಕಾರ್ಯನಿರ್ವಹಿಸುವ ಕಡೆಗಳಲ್ಲಿ ತೀವ್ರ ವಿಚಾರಣೆ ಹಾಗೂ ಮಾಹಿತಿ ಸಂಗ್ರಹ ಆರಂಭಿಸಿದ್ದಾರೆ. ಆನ್ಲೈನ್(ಗೂಗಲ್ಫಾರ್ಮೆಟ್) ಮೂಲಕ ಇಂತಹ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರ ರಾಜ್ಯದ ಕಾರ್ಮಿಕರ ಮಾಹಿತಿಯನ್ನು ಪಡೆದುಕೊಳ್ಳಲಾಗುತ್ತಿದೆ.
ತಮ್ಮ ವ್ಯಾಪ್ತಿಯ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹೊರ ರಾಜ್ಯದ ಕಾರ್ಮಿಕರ ವಿವರಗಳನ್ನು ತತ್ಕ್ಷಣವೇ ಸಲ್ಲಿಸಬೇಕು. ಎಷ್ಟು ಸಮಯದಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಯಾವ ರಾಜ್ಯದಿಂದ ಬಂದಿದ್ದಾರೆ. ಕರೆದುಕೊಂಡು ಬಂದಿರುವ ಏಜೆನ್ಸಿ ಹೀಗೆ ಹಲವು ಮಾಹಿತಿ ಸೇರಿದ ಗೂಗಲ್ ಫಾರ್ಮೆಟ್ ಭರ್ತಿ ಮಾಡಿ ಕಳುಹಿಸುವಂತೆ ಎಲ್ಲ ಸಂಸ್ಥೆಗಳಿಗೆ ಕರಾವಳಿ ಕಾವಲು ಪಡೆಯಿಂದ ಸಂದೇಶ ರವಾನಿಸಾಗಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.
ಇಲಾಖೆಯಲ್ಲಿ ಮಾಹಿತಿಯೇ ಇಲ್ಲ
ಹೊರ ರಾಜ್ಯದ ಕಾರ್ಮಿಕರು ಎಷ್ಟಿದ್ದಾರೆ ಎಂಬ ನಿಖರ ಮಾಹಿತಿ ಕಾರ್ಮಿಕ ಇಲಾಖೆಯಲ್ಲಿ ಇಲ್ಲ. ಕಾರ್ಮಿಕ ಇಲಾಖೆ ಕೂಡ ಈ ಬಗ್ಗೆ ಹೆಚ್ಚು ಗಂಭೀರವಾದಂತಿಲ್ಲ. ಕರ್ನಾಟಕ ಹಾಗೂ ಜಿಲ್ಲೆಯ ಸಂಘಟಿತ, ಅಸಂಘಟಿತ ಕಾರ್ಮಿಕರ ಮಾತ್ರ ಮಾಹಿತಿ ಇಲಾಖೆ ಹೊಂದಿದೆ. ಆದರೆ ಹೊರ ರಾಜ್ಯದ ಎಷ್ಟು ಕಾರ್ಮಿಕರು ಜಿಲ್ಲೆಗೆ ಬರುತ್ತಿದ್ದಾರೆ. ಅದರಲ್ಲಿ ಎಷ್ಟು ಮಂದಿ ಮರಳಿದ್ದಾ, ಬಂದವರು ಎಲ್ಲಿದ್ದಾರೆ ಎಂಬ ಬಗ್ಗೆ ಪೂರ್ಣ ಮಾಹಿತಿ ಇಲಾಖೆಯಲ್ಲಿಲ್ಲ. ಸೇವಾ ಸಿಂಧು ಮೂಲಕ ಅಪ್ಲೋಡ್ ಮಾಡಲು ಸೂಚಿಸಿ ಸುಮ್ಮನಾಗಿದ್ದಾರೆ. ಆದರೆ ಅಪ್ಲೋಡ್ ಮಾಡಿದರ ಸಂಖ್ಯೆ ತೀರಾ ಕಡಿಮೆಯಿದೆ.
ಕಾರ್ಕಳ: ಇಬ್ಬರು ಅಕ್ರಮ ವಲಸೆಗಾರರು ವಶಕ್ಕೆ
ಉಡುಪಿ: ಕಾರ್ಕಳದಲ್ಲಿ ನೆಲೆಸಿದ್ದ ಇನ್ನಿಬ್ಬರು ಅಕ್ರಮ ಬಾಂಗ್ಲಾ ವಲಸೆಗಾರರನ್ನು ಪೊಲೀಸರು ಬುಧವಾರ ವಶಕ್ಕೆ ತೆಗೆದುಕೊಂಡಿದ್ದಾರೆ. ಅವರನ್ನು ಕಾರ್ಕಳ ಪೊಲೀಸರು ತೀವ್ರ ವಿಚಾರಣೆ ನಡೆಯುತ್ತಿದ್ದು, ಗುರುವಾರ ಅಧಿಕೃತವಾಗಿ ಬಂಧಿಸುವ ಸಾಧ್ಯತೆ ಇದೆ. ಕಳೆದ ವಾರ ಮಲ್ಪೆ ಸಮೀಪದ ತೋನ್ಸೆ ಗ್ರಾಮದಲ್ಲಿ ಅಕ್ರಮವಾಗಿ ನೆಲೆಸಿದ್ದ 7 ಮಂದಿ ಬಾಂಗ್ಲೇಯರನ್ನು ಬಂಧಿಸಲಾಗಿತ್ತು.
ಓರ್ವನನ್ನು ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿತ್ತು. ಜಿಲ್ಲೆಯಲ್ಲಿ ಇನ್ನೂ ಸಾಕಷ್ಟು ಮಂದಿ ಅಕ್ರಮ ವಲಸೆಗಾರರಿರುವ ಮಾಹಿತಿ ಬಂಧಿತರಿಂದ ಸಿಕ್ಕಿದ್ದು, ಅದರಂತೆ ತೀವ್ರ ತಪಾಸಣೆ ನಡೆಯುತ್ತಿದೆ. ಕಾರ್ಕಳದಲ್ಲಿ ವಶಕ್ಕೆ ಪಡೆದವರನ್ನು ಗುರುವಾರ ಮಹಜರು ನಡೆಸಿ ಬಂಧಿಸಲಾಗುವುದು ಎಂದು ಎಸ್ಪಿ ಡಾ| ಅರುಣ್ ಕೆ.ತಿಳಿಸಿದ್ದಾರೆ.
ರಾಷ್ಟ್ರೀಯ ಭದ್ರತೆ ಆತಂಕ
ಕರ್ನಾಟಕದ ಕರಾವಳಿಯು ಒಂದರ್ಥದಲ್ಲಿ ದೇಶದ ಗಡಿಭಾಗವೂ ಹೌದು. ಹೀಗಾಗಿಯೇ ಕರಾವಳಿ ತೀರದಲ್ಲಿ ಕರಾವಳಿ ಕಾವಲು ಪಡೆ, ಅನಂತರ ಕೋಸ್ಟ್ಗಾರ್ಡ್(ರಕ್ಷಣ ಇಲಾಖೆ) ಭದ್ರತೆಯೂ ಇದೆ. ಆದರೆ ಮಲ್ಪೆ ಬಂದರಲಿನಲ್ಲಿ ಕನಿಷ್ಠ ಭದ್ರತೆಯೂ ಇಲ್ಲದೇ ಇರುವುದು ರಾಷ್ಟ್ರೀಯ ಭದ್ರತೆಯ ಬಗ್ಗೆಯೂ ಆತಂಕ ಸೃಷ್ಟಿಸಿದೆ. ಇಲ್ಲಿ ಯಾರು ಬೇಕಾದರೂ ಬರಬಹುದು ಹೋಗಬಹುದು.
ಯಾವ ರಾಜ್ಯದ ಬೋಟ್ ಪ್ರವೇಶಿಸಿದರೂ ಪೂರ್ಣ ಪ್ರಮಾಣದಲ್ಲಿ ವಿಚಾರಣೆಯೇ ಇರುವುದಿಲ್ಲ. ಹೀಗಾಗಿ ರಾಷ್ಟ್ರೀಯ ಭದ್ರತೆಯ ದೃಷ್ಟಿಯಿಂದಲೂ ಬಂದರಿನ ಭದ್ರತೆ ಮುಖ್ಯವಾಗಿದೆ ಎಂಬ ಮಾತು ಕೇಳಿ ಬರುತ್ತಿದೆ. ಬಾಂಗ್ಲಾದ ಅಕ್ರಮ ವಲಸಿಗರು ಕಳೆದ 4-5 ವರ್ಷದಿಂದ ಜಿಲ್ಲೆಯಲ್ಲಿ ವಾಸವಿದ್ದು, ಇಲ್ಲಿನ ವಿಳಾಸದ ಪಾಸ್ಪೋರ್ಟ್ ಪಡೆದಿದ್ದಾರೆ ಎಂದಾದರೆ ಇದು ಗುಪ್ತಚಾರ ಇಲಾಖೆಯ ವೈಫಲ್ಯವೇ ಆಗಿರಬೇಕು ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ.
ಹೊರ ರಾಜ್ಯದ ಕಾರ್ಮಿಕರ ಮಾಹಿತಿಯನ್ನು ಗೂಗಲ್ ಫಾರ್ಮೆಟ್ ಮೂಲಕ ಕಳುಹಿಸುವಂತೆ ಈಗಾಗಲೇ ಎಲ್ಲ ಸಂಸ್ಥೆಗಳಿಗೆ ಸೂಚನೆ ನೀಡಿದ್ದೇವೆ. ಬಹುತೇಕ ಕಡೆಗಳಲ್ಲಿ 2-3 ತಿಂಗಳಿಗೆ ಕಾರ್ಮಿಕರು ಬದಲಾಗುತ್ತಿರುತ್ತಾರೆ. ಹೀಗಾಗಿ ನಿಖರ ಮಾಹಿತಿ ಕಲೆ ಹಾಕುವುದು ನಮಗೂ ಸವಾಲಾಗಿದೆ.
-ಮಿಥುನ್, ಎಸ್ಪಿ, ಕರಾವಳಿ ಕಾವಲು ಪಡೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಅಪ್ರಾಪ್ತೆಯ ಅತ್ಯಾಚಾರ; ಆರೋಪಿ ಖುಲಾಸೆ
Koni: ಬ್ಯಾಂಕ್ನಲ್ಲಿ ಕಳ್ಳತನಕ್ಕೆ ಯತ್ನ- ಹೈದರಾಬಾದ್ನಿಂದ ಎಚ್ಚರಿಸಿದ ಸೆಕ್ಯುರಿಟಿ ಸಂಸ್ಥೆ
Udupi: ಇಂದು ಶ್ರೀ ಕೃಷ್ಣ ಮಠದಲ್ಲಿ 100 ನೃತ್ಯಗಾರರಿಂದ 14 ಗಂಟೆ ನೃತ್ಯ ಪ್ರದರ್ಶನ
Kundapura: ಲಾರಿಯಲ್ಲಿ ಮಲಗಿದ ಸ್ಥಿತಿಯಲ್ಲಿ ಮರಣ ಹೊಂದಿದ ಚಾಲಕ
Udupi: ತಿರುಚಿದ ಛಾಯಾಚಿತ್ರ ಪ್ರಸಾರದ ವಿರುದ್ಧ ಕ್ರಮ: ಪ್ರಸಾದ್ರಾಜ್ ಕಾಂಚನ್
MUST WATCH
ಹೊಸ ಸೇರ್ಪಡೆ
Oxford University: ಆಕ್ಸ್ಫರ್ಡ್ ವಿವಿ ಕುಲಪತಿ ಹುದ್ದೆ… ಭಾರತ ಮೂಲದವರು ರೇಸ್ನಲ್ಲಿ
India- Canada: ಭಾರತದ ಮೇಲೆ ನಿರ್ಬಂಧ ವಿಧಿಸಿದರೆ ಕೆನಡಾಕ್ಕೆ ನಷ್ಟ!
Raids: ಜೂನಿಯರ್ ಆಡಿಟರ್ ಮನೆಯಲ್ಲಿ ಕೆಜಿಗಟ್ಟಲೆ ಚಿನ್ನ, ಬೆಳ್ಳಿ ಕಂಡು ಅಧಿಕಾರಿಗಳೇ ದಂಗು
Haryana: 2ನೇ ಬಾರಿಗೆ ಸಿಎಂ ಆಗಿ ಸೈನಿ ಇಂದು ಪ್ರಮಾಣ ವಚನ, ಪ್ರಧಾನಿ, ಬಿಜೆಪಿ ಗಣ್ಯರು ಭಾಗಿ
Supreme Court: ಸುಪ್ರೀಂನಲ್ಲಿ ಕಣ್ಣಿಗೆ ಕಪ್ಪು ಪಟ್ಟಿ ಇರದ ನ್ಯಾಯದೇವತೆ ಪ್ರತಿಮೆ ಅನಾವರಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.