Bangladesh: ಬಾಂಗ್ಲಾದೇಶವೀಗ ರಣಾಂಗಣ, ಕಾವೇರುತ್ತಿದೆ ಚುನಾವಣ ಕಣ!


Team Udayavani, Dec 13, 2023, 3:10 PM IST

Bangladesh: ಬಾಂಗ್ಲಾದೇಶವೀಗ ರಣಾಂಗಣ, ಕಾವೇರುತ್ತಿದೆ ಚುನಾವಣ ಕಣ!

ಬಾಂಗ್ಲಾದೇಶದಲ್ಲಿ 2024ರ ಜನವರಿಯಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿದ್ದು, ದಿನಗಣನೆ ಆರಂಭವಾಗಿದೆ. ಇಂಥದ್ದೊಂದು ಮಹತ್ವದ ಸಂದರ್ಭ ಸಮೀಪಿಸುತ್ತಿರುವಾಗಲೇ ಆ ದೇಶ ಪ್ರತಿಭಟನೆಗಳು, ಹಿಂಸಾಚಾರ ಮತ್ತು ರಾಜಕೀಯ ಕ್ರಾಂತಿಗಳ ಜಾಲದಲ್ಲಿ ಸಿಲುಕಿಕೊಂಡಿದೆ. ಪ್ರಧಾನ ಮಂತ್ರಿ ಶೇಖ್ ಹಸೀನಾ ನಾಲ್ಕನೇ ಅವಧಿಗೆ ಮುಂದುವರಿಯುವ ಬಗ್ಗೆ ಬಿಎನ್​ಪಿ ಮತ್ತು ಜಮಾತ್-ಎ-ಇಸ್ಲಾಮಿಯಂತಹ ಪಕ್ಷಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಈ ಕಾರಣಕ್ಕೆ ಬಾಂಗ್ಲಾದೇಶದ ರಾಜಕೀಯ ಇತಿಹಾಸದಲ್ಲಿ ನಿರ್ಣಾಯಕ ಕ್ಷಣವೊಂದಕ್ಕೆ ವೇದಿಕೆ ಸಿದ್ಧವಾಗುತ್ತಿದೆ ಎನ್ನಬಹುದು.

ಪ್ರತಿಭಟನೆಗಳು ಮತ್ತು ಹೆಚ್ಚುತ್ತಿರುವ ಹಿಂಸಾಚಾರ

ಬಾಂಗ್ಲಾದೇಶದಾದ್ಯಂತ, ಅದರಲ್ಲೂ ವಿಶೇಷವಾಗಿ ಚಟ್ಟೋಗ್ರಾಮ್, ಢಾಕಾ, ಚಂದ್‌ಪುರ, ಗಾಜಿಪುರ, ಸಿಲ್ಹೆಟ್, ನೊವಾಖಾಲಿ ಮತ್ತು ಬೊಗುರಾ ಜಿಲ್ಲೆಗಳಲ್ಲಿ ಪ್ರತಿಭಟನೆ ತೀವ್ರಗೊಂಡಿದೆ. ಇದು ಸರ್ಕಾರದ ವಿರುದ್ಧ ಜನತೆ ಹೊಂದಿರುವ ತೀವ್ರತರದ ಅಸಮಾಧಾನವನ್ನು ಸೂಚಿಸುತ್ತದೆ. ವಿರೋಧ ಪಕ್ಷಗಳು, ವಿಶೇಷವಾಗಿ ಬಿಎನ್​ಪಿ ಮತ್ತು ಜಮಾತ್-ಎ-ಇಸ್ಲಾಮಿ ಪಕ್ಷಗಳು 48 ಗಂಟೆಗಳ ದಿಗ್ಬಂಧನ ಹೇರುವ ಮೂಲಕ ಪರಿಸ್ಥಿತಿಯನ್ನು ಉಲ್ಬಣಗೊಳಿಸಿವೆ. ತಂಗೈಲ್ ರೈಲು ನಿಲ್ದಾಣದಲ್ಲಿ ವಾಹನಗಳು ಮತ್ತು ಪ್ರಯಾಣಿಕ ರೈಲನ್ನು ನಾಶಗೊಳಿಸಲಾಗಿದೆ. ಘಟನೆಯಲ್ಲಿ ಹಲವಾರು ಪ್ರಯಾಣಿಕರು ಮತ್ತು ಚಾಲಕರು ಗಾಯಗೊಂಡಿದ್ದಾರೆ. ಇದರಿಂದಾಗಿ ಜನಜೀವನ ಅಸಸ್ತವ್ಯಸ್ತಗೊಳ್ಳುವಂತಾಗಿದೆ.

ಪ್ರತಿಪಕ್ಷಗಳ ಬೇಡಿಕೆಗಳು, ಚುನಾವಣೆ ಬಹಿಷ್ಕಾರದ ಬೆದರಿಕೆ

ಬಿಎನ್‌ಪಿ ನೇತೃತ್ವದ ಪ್ರತಿಪಕ್ಷಗಳು ಪ್ರಧಾನಿ ಹಸೀನಾ ರಾಜೀನಾಮೆಗೆ ತೀವ್ರವಾಗಿ ಒತ್ತಾಯಿಸುತ್ತಿವೆ. ಜಮಾತ್-ಎ-ಇಸ್ಲಾಮಿ ಪಕ್ಷವು ಜೂನ್​ನಲ್ಲಿ ಮುಂದಿಟ್ಟ ಬೇಡಿಕೆಯಂತೆ ತಟಸ್ಥ ಹಂಗಾಮಿ ಸರ್ಕಾರ ರಚನೆಯಾಗಬೇಕು ಎಂಬುದು ಪ್ರತಿಪಕ್ಷಗಳ ಆಗ್ರಹವಾಗಿದೆ. ಆದರೆ, ಚುನಾಯಿತವಲ್ಲದ ಹಂಗಾಮಿ ಸರ್ಕಾರಕ್ಕೆ ಅಧಿಕಾರ ಹಸ್ತಾಂತರಿಸುವ ಪ್ರಕ್ರಿಯೆಗೆ 2011ರ ಸುಪ್ರೀಂ ಕೋರ್ಟ್​ ತೀರ್ಪು ಅಡ್ಡಿಯಾಗುವುದರ ಜತೆಗೆ ಕಾನೂನು ತೊಡಕು ಕೂಡ ಕಾಣಿಸಿಕೊಳ್ಳಲಿದೆ. ಈ ಮಧ್ಯೆ, ಚುನಾವಣೆ ಬಹಿಷ್ಕಾರದ ಭೀತಿ ಎದುರಾಗಿದ್ದು, ರಾಜಕೀಯ ವಾತಾವರಣ ಕಾವೇರುತ್ತಿದೆ.

ನ್ಯಾಯಸಮ್ಮತ ಚುನಾವಣೆಗೆ ಸರ್ಕಾರದ ಕ್ರಮಗಳೇನು?

ಈ ಹಿಂದಿನ ಚುನಾವಣಾ ವಿವಾದಗಳನ್ನು ಗಮನದಲ್ಲಿಟ್ಟುಕೊಂಡು, ಅವಾಮಿ ಲೀಗ್ ಸರ್ಕಾರವು ನ್ಯಾಯಸಮ್ಮತ ಚುನಾವಣೆಗಾಗಿ ಅನೇಕ ಕಾನೂನು ಕ್ರಮಗಳನ್ನು ಜಾರಿಗೆ ತಂದಿದೆ. ಎಲೆಕ್ಟ್ರಾನಿಕ್ ವೋಟಿಂಗ್ ಮಷಿನ್ ರೂಲ್ಸ್ 2018, ಕ್ಷೇತ್ರಗಳ ಪುನರ್​​ವಿಂಗಡಣೆ ಕಾಯ್ದೆ 2021, ಮುಖ್ಯ ಚುನಾವಣಾ ಆಯುಕ್ತರು ಮತ್ತು ಚುನಾವಣಾ ಆಯುಕ್ತರ ನೇಮಕಾತಿ ಕಾಯ್ದೆ 2022 ಇವುಗಳನ್ನು ಜಾರಿಗೆ ತರಲಾಗಿದ್ದು ನಿಷ್ಪಕ್ಷಪಾತ ಮತ್ತು ಸಮರ್ಥ ಚುನಾವಣಾ ಆಯೋಗ ರಚನೆಗೆ ಪೂರಕವಾಗಿವೆ. ಇಷ್ಟೇ ಅಲ್ಲದೆ, ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳಿಗೆ ಸಂಬಂಧಿಸಿದ ನೀತಿ ನಿಯಮಗಳ ತಿದ್ದುಪಡಿಗಳು ಚುನಾವಣೆಗಳ ನ್ಯಾಯಸಮ್ಮತತೆ, ಒಳಗೊಳ್ಳುವಿಕೆ ಮತ್ತು ವಿಶ್ವಾಸಾರ್ಹತೆಯನ್ನು ಹೆಚ್ಚಿಸುವ ಸರ್ಕಾರದ ಬದ್ಧತೆಯನ್ನು ಸಾರಿ ಹೇಳುತ್ತಿವೆ.

ವಿರೋಧ ಪಕ್ಷಗಳ ನಿಲುವು, ಅಂತಾರಾಷ್ಟ್ರೀಯ ನಿಗಾ

ಬೇಡಿಕೆಗಳನ್ನು ಈಡೇರಿಸದ ಹೊರತು 2024 ರ ಜನವರಿಯ ಚುನಾವಣೆ ಪ್ರಕ್ರಿಯೆಯಲ್ಲಿ ಭಾಗವಹಿಸುವುದಿಲ್ಲ ಎಂಬ ವಿರೋಧ ಪಕ್ಷಗಳ ನಿಲುವು ಪ್ರಜಾಪ್ರಭುತ್ವ ಪ್ರಕ್ರಿಯೆಯ ಬಗ್ಗೆ ಕಳವಳವನ್ನು ಹುಟ್ಟುಹಾಕಿದೆ. ಈ ಪರಿಸ್ಥಿತಿಯು ವಿಶ್ವ ಸಮುದಾಯದ ಗಮನ ಸೆಳೆದಿದೆ. ಅದರಲ್ಲೂ ವಿಶೇಷವಾಗಿ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿ (UNHRC) ಕೂಡ ಸದ್ಯದ ಬೆಳವಣಿಗೆಗಳ ಮೇಲೆ ನಿಗಾ ಇರಿಸಿದೆ. ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆಗಳ ಸಂದರ್ಭದ ಹಿಂಸಾತ್ಮಕ ಘಟನೆಗಳ ಬಗ್ಗೆ ಅಕ್ಟೋಬರ್ 31 ರಂದು ಬಿಡುಗಡೆಯಾದ ಮಂಡಳಿಯ ವರದಿಯಲ್ಲಿ ತೀವ್ರ ಕಳವಳ ವ್ಯಕ್ತಪಡಿಸಲಾಗಿದೆ. ಹಿಂಸಾ ಪ್ರವೃತ್ತಿಯನ್ನು ಖಂಡಿಸುವಂತೆ ಕರೆ ನೀಡಲಾಗಿದೆ.

ಅಮೆರಿಕದ ನಿರ್ಬಂಧಗಳು, ಜಾಗತಿಕ ಆಯಾಮ

ಪ್ರಜಾಸತ್ತಾತ್ಮಕ ಚುನಾವಣೆಗಳ ಪರ ಸದಾ ಧ್ವನಿ ಎತ್ತುವ ಅಮೆರಿಕವು 2021 ರಲ್ಲಿ ಬಾಂಗ್ಲಾದೇಶದ ರಾಪಿಡ್ ಆಕ್ಷನ್ ಬೆಟಾಲಿಯನ್‌ನ ಏಳು ಉನ್ನತ ಮಟ್ಟದ ಅಧಿಕಾರಿಗಳ ಮೇಲೆ ನಿರ್ಬಂಧಗಳನ್ನು ವಿಧಿಸುವ ಮೂಲಕ ಮಹತ್ವದ ನಿರ್ಧಾರ ತೆಗೆದುಕೊಂಡಿತ್ತು. ಮಾನವ ಹಕ್ಕುಗಳ ಉಲ್ಲಂಘನೆ ಆರೋಪಗಳಿಗೆ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡುವುದಕ್ಕಾಗಿ ಈ ನಿರ್ಬಂಧಗಳನ್ನು ಹೇರಲಾಗಿತ್ತು. ಇದು ಬಾಂಗ್ಲಾದೇಶದ ರಾಜಕೀಯ ಪ್ರಕ್ಷುಬ್ಧತೆಯ ಜಾಗತಿಕ ಪರಿಣಾಮಗಳನ್ನು ಒತ್ತಿಹೇಳಿವೆ.

ಇದಕ್ಕೆ ವ್ಯತಿರಿಕ್ತವಾಗಿ, ಬಾಂಗ್ಲಾದೇಶದ ಪ್ರಮುಖ ವ್ಯಾಪಾರ ಪಾಲುದಾರರಾದ ಚೀನಾ ಮತ್ತು ಭಾರತವು ಹೆಚ್ಚು ಲೆಕ್ಕಾಚಾರದ ಹೆಜ್ಜೆಗಳನ್ನಿಟ್ಟಿವೆ. ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಳ ಆಶಯ ವ್ಯಕ್ತಪಡಿಸಿದ್ದರ ಜತೆಜತೆಗೇ ಬಾಹ್ಯ ಹಸ್ತಕ್ಷೇಪದ ವಿರುದ್ಧ ಬಾಂಗ್ಲಾದೇಶ ಸರ್ಕಾರಕ್ಕೆ ಚೀನಾ ಬೆಂಬಲವನ್ನು ನೀಡಿದೆ. ಸೂಕ್ಷ್ಮವಾದ ಪ್ರಾದೇಶಿಕ ಆಯಾಮದ ಬಗ್ಗೆ ಅರಿವಿರುವ ಭಾರತವು ಅತಿಯಾದ ಒತ್ತಡದ ವಿರುದ್ಧ ಎಚ್ಚರಿಕೆಯ ಹೆಜ್ಜೆ ಇಟ್ಟಿದೆ. ಇದು ಪ್ರಾದೇಶಿಕವಾಗಿ ಬಾಂಗ್ಲಾದೇಶವನ್ನು ಸ್ಥಿರಗೊಳಿಸುವ ಕಾರ್ಯತಂತ್ರದ ಪ್ರಾಮುಖ್ಯತೆಯನ್ನು ಒತ್ತಿಹೇಳಿದೆ.

ಆರ್ಥಿಕ ಪರಿಣಾಮಗಳು, ಪ್ರಾದೇಶಿಕ ಸ್ಥಿರತೆ

ರಾಜಕೀಯ ಪ್ರಕ್ಷುಬ್ಧತೆಯ ಆರ್ಥಿಕ ಪರಿಣಾಮಗಳು ಗಮನಾರ್ಹವಾಗಿವೆ. ಅಮೆರಿಕದ ನಿರ್ಬಂಧಗಳು ಬಾಂಗ್ಲಾದೇಶದ ಸಿದ್ಧ ಉಡುಪುಗಳ ಉದ್ಯಮದ ಮೇಲೆ ಪರಿಣಾಮ ಬೀರುತ್ತವೆ. ಬಾಂಗ್ಲಾದೇಶದ ಸಿದ್ಧ ಉಡುಪುಗಳ ಉದ್ಯಮ ದೇಶದ ಒಟ್ಟು ರಫ್ತಿನ ಶೇ 21.50 ರಷ್ಟನ್ನು ಹೊಂದಿದೆ. ಸಂಪೂರ್ಣ ಚುನಾವಣಾ ವೀಕ್ಷಕ ತಂಡವನ್ನು ಕಳುಹಿಸದಿರುವ ಯುರೋಪ್ ಒಕ್ಕೂಟದ ನಿರ್ಧಾರವು ದೇಶದ ಆರ್ಥಿಕ ಸ್ಥಿರತೆಯ ಸಂಭಾವ್ಯ ಕುಸಿತದ ಬಗ್ಗೆ ಕಳವಳವನ್ನು ಹೆಚ್ಚಿಸಿದೆ.

ಇದಲ್ಲದೆ, ಪ್ರಾದೇಶಿಕ ಸ್ಥಿರತೆಯು ರಾಜತಾಂತ್ರಿಕ ನೆಲೆಗಟ್ಟಿನ ಕೇಂದ್ರಬಿಂದುವಾಗುತ್ತದೆ. ಬಾಂಗ್ಲಾದೇಶದ ವೇಗದ ಆರ್ಥಿಕ ಬೆಳವಣಿಗೆ, ದಕ್ಷಿಣ ಮತ್ತು ಆಗ್ನೇಯ ಏಷ್ಯಾವನ್ನು ಸಂಪರ್ಕಿಸುವ ವ್ಯೂಹಾತ್ಮಕ ಸ್ಥಳ ಮತ್ತು ಬಂಗಾಳ ಕೊಲ್ಲಿಯಲ್ಲಿ ಪ್ರಮುಖ ಹಡಗು ಮಾರ್ಗಗಳ ಮೇಲ್ವಿಚಾರಣೆ ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಪ್ರಮುಖ ಸ್ಥಾನ ಪಡೆದಿದೆ. ಬಾಂಗ್ಲಾದೇಶದೊಳಗಿನ ಆಂತರಿಕ ಘರ್ಷಣೆಗಳು ದೇಶಕ್ಕೆ ಮಾತ್ರವಲ್ಲದೆ ಪ್ರಾದೇಶಿಕವಾಗಿಯೂ ಪ್ರತಿಕೂಲ ಪರಿಣಾಮಗಳ ಸಂಭಾವ್ಯತೆಯನ್ನು ಹೊಂದಿವೆ.

ಚುನಾವಣಾ ತಯಾರಿ, ವಿಶ್ವಾಸಾರ್ಹತೆಯ ಕಾಳಜಿ

ಪ್ರಕ್ಷುಬ್ಧ ರಾಜಕೀಯ ಚಿತ್ರಣದ ಮಧ್ಯೆ, ಕಾನೂನು ಕ್ರಮಗಳಲ್ಲಿ ಮತ್ತು ಪ್ರಮುಖ ವಿರೋಧ ಪಕ್ಷದ ಅನುಪಸ್ಥಿತಿಯಲ್ಲಿ ಆಶಾವಾದವನ್ನು ಹೊಂದಿರುವಂತೆ ಬಿಂಬಿಸಲು ಅವಾಮಿ ಲೀಗ್ ಯತ್ನಿಸುತ್ತಿದೆ. ಚುನಾವಣಾ ಆಯೋಗವು ವಿವರವಾದ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. 66 ಚುನಾವಣಾಧಿಕಾರಿಗಳನ್ನು ಮತ್ತು 592 ಸಹಾಯಕ ಚುನಾವಣಾಧಿಕಾರಿಗಳನ್ನು ನೇಮಿಸಿದೆ. ಎಲ್ಲಾ 42,000 ಮತಗಟ್ಟೆಗಳು ಮತ್ತು 2,62,000 ಬೂತ್‌ಗಳಲ್ಲಿ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗೆ ಅನುಕೂಲಕರ ವಾತಾವರಣವನ್ನು ಸೃಷ್ಟಿಸುವುದಾಗಿ ಮುಖ್ಯ ಚುನಾವಣಾ ಆಯುಕ್ತ ಕಾಜಿ ಹಬೀಬುಲ್ ಅವಲ್ ಭರವಸೆ ನೀಡಿದ್ದಾರೆ.

ಆದಾಗ್ಯೂ, ಸದ್ಯದ ಬಾಂಗ್ಲಾದೇಶದ ಪರಿಸ್ಥಿತಿಯನ್ನು ಗಮನಿಸಿದಾಗ ಈ ಕ್ರಮಗಳ ಪ್ರಾಯೋಗಿಕ ಅನುಷ್ಠಾನದ ಬಗ್ಗೆ ಅನುಮಾನಗಳು ಇದ್ದೇ ಇವೆ. ನಾಮಪತ್ರ ಸಲ್ಲಿಸುವ ಗಡುವು ಮುಗಿದಿದ್ದು, ಡಿಸೆಂಬರ್ 1 ರಿಂದ 4 ರ ನಡುವೆ ಅಭ್ಯರ್ಥಿಗಳ ಆಯ್ಕೆ ನಡೆದಿದೆ. ಅಭ್ಯರ್ಥಿಗಳ ವಾಪಸಾತಿಗೆ ಡಿಸೆಂಬರ್ 17 ರವರೆಗೆ ಅವಕಾಶವಿದ್ದು, ಚಿಹ್ನೆಗಳ ಹಂಚಿಕೆ ಡಿಸೆಂಬರ್ 18 ರಂದು ನಡೆಯಲಿದೆ. ಪ್ರಚಾರ ಅಭಿಯಾನದ ಅವಧಿಯು ಜನವರಿ 2024 ರ 5ರಂದು ಬೆಳಿಗ್ಗೆ 8 ಗಂಟೆಯವರೆಗೆ ಇರಲಿದೆ. 2024 ರ ಚುನಾವಣೆಯು ಒಂದು ಪ್ರಮುಖ ಕ್ಷಣವಾಗಿದೆ. ಚುನಾವಣೆಯಲ್ಲಿ ಬಾಂಗ್ಲಾದೇಶದ ಪ್ರಜಾಸತ್ತಾತ್ಮಕ ಸ್ಥಿತಿಸ್ಥಾಪಕತ್ವವನ್ನು ಜಾಗತಿಕ ಭೌಗೋಳಿಕ ರಾಜಕೀಯ ಆಯಾಮದ ಹಿನ್ನೆಲೆಯಲ್ಲಿ ಪರೀಕ್ಷಿಸಲಾಗುತ್ತದೆ.‌

ಗಿರೀಶ್ ಲಿಂಗಣ್ಣ (ಲೇಖಕರು ಬಾಹ್ಯಾಕಾಶ ಮತ್ತು ರಕ್ಷಣಾ ವಿಶ್ಲೇಷಕ)

ಟಾಪ್ ನ್ಯೂಸ್

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

ಕಾಳಿಂಗ ನಾವಡ ಪ್ರಶಸ್ತಿಗೆ ಕೋಟ ಶಿವಾನಂದ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

smi irani

Smriti Irani ದೆಹಲಿ ಬಿಜೆಪಿಯಲ್ಲಿ ಸಕ್ರಿಯ: ”ಸಿಎಂ ಫೇಸ್” ಆಗಿ ಕೇಳಿ ಬರುತ್ತಿರುವ ಹೆಸರು!

International Day of Democracy: “ವಿಶ್ವ ಪ್ರಜಾಪ್ರಭುತ್ವ” ಆತ್ಮಾವಲೇೂಕನ ದಿನ

International Day of Democracy: “ವಿಶ್ವ ಪ್ರಜಾಪ್ರಭುತ್ವ” ಆತ್ಮಾವಲೇೂಕನ ದಿನ

Tan removalಗೆ ಟೊಮೆಟೊ ಫೇಸ್‌ ಪ್ಯಾಕ್‌; ನೈಸರ್ಗಿಕ ತ್ವಚೆ ಕಾಳಜಿ

Beauty Tips: ಮುಖದ ಕಾಂತಿ ಹೆಚ್ಚಿಸಲು ಟೊಮ್ಯಾಟೋ ಫೇಸ್‌ ಪ್ಯಾಕ್‌; ಇದರ ಲಾಭವೇನು ಗೊತ್ತಾ?

1

South Indian actors: ನಾಗಾರ್ಜುನ್‌ ಟು ವಿಜಯ್; ದಕ್ಷಿಣ ಭಾರತದ ಶ್ರೀಮಂತ‌ ನಟರು ಯಾರ‍್ಯಾರು

Special Food ಮನೆಯಲ್ಲೊಮ್ಮೆ ಈ ರೆಸಿಪಿ ಟ್ರೈ ಮಾಡಿ ನೋಡಿ… ಟೇಸ್ಟ್ ಹೇಗಿದೆ ಹೇಳಿ

Special Food ಮನೆಯಲ್ಲೊಮ್ಮೆ ಈ ರೆಸಿಪಿ ಟ್ರೈ ಮಾಡಿ ನೋಡಿ… ಟೇಸ್ಟ್ ಹೇಗಿದೆ ಹೇಳಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

1-32

Cat; ವಿಶ್ವದ ಹಿರಿಯ ಬೆಕ್ಕು, 33 ವರ್ಷದ ರೋಸಿ ಇನ್ನಿಲ್ಲ

yogi-3

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

kangana-2

Emergency; ಭಿಂದ್ರನ್‌ವಾಲೆ ಸಾಧುವಲ್ಲ, ಭಯೋತ್ಪಾದಕ: ಸಂಸದೆ ಕಂಗನಾ

Suside-Boy

Health Problem: ಮಲಗಿದ್ದ ವೇಳೆ ಮೃತಪಟ್ಟ ವ್ಯಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.