Bangladesh Unrest: ಬಂಗಾಳದ ಗಡಿ ಪ್ರವೇಶಿಸಲು ಬಾಂಗ್ಲಾದೇಶಿಯರ ಯತ್ನ
ಭಾರತದ ಗಡಿಯಲ್ಲಿ ಆವಾಮಿ ಲೀಗ್ ಪಕ್ಷದ ಸದಸ್ಯರು, ಹಿಂದೂಗಳೇ ಅಧಿಕ; ತಡೆಯೊಡ್ಡಿದ ಬಿಎಸ್ಎಫ್ ಪಡೆ
Team Udayavani, Aug 8, 2024, 9:03 PM IST
ಜಲ್ಪೈಗುರಿ (ಕೋಲ್ಕತ್ತ): ಬಾಂಗ್ಲಾದೇಶದಲ್ಲಿ ಉಂಟಾದ ಅಶಾಂತಿ, ಶೇಖ್ ಹಸೀನಾ ನೇತೃತ್ವದ ಸರಕಾರ ಪತನದ ಬಳಿಕ ಉಂಟಾದ ರಾಜಕೀಯ ಅಸ್ಥಿರತೆಯಿಂದ ನೂರಾರು ಬಾಂಗ್ಲಾದೇಶಿಯರು ಭಾರತದ ಗಡಿಯೊಳಗೆ ಪ್ರವೇಶಿಸಿ ಆಶ್ರಯ ಪಡೆಯಲು ಪ್ರಯತ್ನಿಸುತ್ತಿದ್ದು, ಆದರೆ, ಗಡಿ ಭದ್ರತಾ ಪಡೆಗಳು (BSF) ಒಳನುಸುಳುವಿಕೆ ಪ್ರಯತ್ನಗಳ ವಿಫಲಗೊಳಿಸಿದರು.
ಪಶ್ಚಿಮ ಬಂಗಾಳದ ಜಲ್ಪೈಗುರಿಯ ಮಾಣಿಕ್ಗಂಜ್ ಗಡಿಯಲ್ಲಿ ಗುರುವಾರ 500ಕ್ಕೂ ಹೆಚ್ಚು ಬಾಂಗ್ಲಾದೇಶಿ ಪ್ರಜೆಗಳು ನೆರೆದಿದ್ದರು. ವರದಿಗಳ ಪ್ರಕಾರ, ಜನರನ್ನು ನಿಯಂತ್ರಿಸಲು ಬಿಎಸ್ಎಫ್ ಸಿಬ್ಬಂದಿ ಕೂಡ ಗುಂಡು ಹಾರಿಸಿದರು ಎನ್ನಲಾಗಿದೆ. ಭಾರತದ ಗಡಿಗೆ ನುಸುಳುವವರ ಪೈಕಿ ಹಿಂದೂಗಳು ಹಾಗೂ ಶೇಖ್ ಹಸೀನಾ ಪಕ್ಷವಾದ ಆವಾಮಿ ಲೀಗ್ನ ಸದಸ್ಯರು ಬೇಲಿ ಹಾಕದೇ ಇರುವ ಪ್ರದೇಶದ ಗಡಿಯಲ್ಲಿ ಒಳ ನುಸುಳುತ್ತಿದ್ದು, ಹೀಗೆ ಗಡಿ ಉದ್ದಕ್ಕೂ ಹಲವೆಡೆ ಒಳ ನುಸುಳುವಿಕೆ ಪ್ರಯತ್ನಗಳು ನಡೆಯುತ್ತಿವೆ. ಮತ್ತೊಂದು ಗಡಿ ಪ್ರದೇಶದಲ್ಲಿ 6 ಮಂದಿ ಗಡಿ ಪ್ರವೇಶಿಸಲು ಯತ್ನಿಸಿದಾಗ ಬಿಎಸ್ಎಫ್ ಸಿಬ್ಬಂದಿ ತಡೆದಿದ್ದಾರೆ.
ಬಾಂಗ್ಲಾದೇಶಿಗಳು ಚಿಲ್ದಂಗಾ ಗ್ರಾಮದ ಝೀರೋ ಪಾಯಿಂಟ್ನಲ್ಲಿ ಪ್ರವೇಶಿಸಲು ಪ್ರಯತ್ನಿಸಿದರು ಎಂದು ವರದಿಗಳು ಹೇಳುತ್ತವೆ. ಗಡಿ ದಾಟುವ ಮೊದಲು ಬಿಎಸ್ಎಫ್ ಪಡೆ ಸುಮಾರು 600 ರಿಂದ 1000 ನುಸುಳುಕೋರರನ್ನು ತಡೆದಿದ್ದಾರೆ. ಒಳನುಸುಳುವಿಕೆಯನ್ನು ತಡೆಯಲು ಬಿಎಸ್ಎಫ್ ಸಿಬ್ಬಂದಿ ಹಳ್ಳಿಗಳಿಗೆ ತೆರಳಿ ಗ್ರಾಮಸ್ಥರಿಗೆ ಎಚ್ಚರಿಕೆ ನೀಡಿದರು.
ಬಿಎಸ್ಎಫ್ ಸಿಬ್ಬಂದಿಯಿಂದ ನಿಯಂತ್ರಣ:
ಬಿಎಸ್ಎಫ್ ಡಿಐಜಿ (ಉತ್ತರ ಬಂಗಾಳ ಗಡಿ ಪ್ರದೇಶ) ಅಮಿತ್ ಕುಮಾರ್ ತ್ಯಾಗಿ ಮಾತನಾಡಿ “ಬಾಂಗ್ಲಾದ ಗಡಿ ಜಿಲ್ಲೆಯಾದ ಠಾಕೂರ್ಗಾಂವ್ನ ಕಿಶನ್ಗಂಜ್ನ ಉತ್ತರ ದಿನಜ್ಪುರ್ ಗಡಿ ಪ್ರದೇಶದಲ್ಲಿ 200ಕ್ಕೂ ಹೆಚ್ಚು ಮಂದಿ ಆವಾಮಿ ಲೀಗ್ ಪಕ್ಷದ ಸದಸ್ಯರು ಹಾಗೂ ಹಿಂದೂಗಳು ಸೇರಿದ ಜನರ ಗುಂಪು ಸೇರಿತ್ತು. ಆ ಗುಂಪನ್ನು ಗಾಳಿಯಲ್ಲಿ ಗುಂಡು ಹಾರಿಸಿ ಚದುರಿಸಲಾಯಿತು. ಆ ಗ್ರಾಮಸ್ಥರೆಲ್ಲ ಈಗಲೂ 200ಮೀ. 500ಮೀ. ಅಂತರದಲ್ಲಿದ್ದಾರೆ. ಹಿರಿಯ ಬಿಎಸ್ಎಫ್ ಅಧಿಕಾರಿಗಳು ಹಾಗೂ ಬಿಜಿಬಿ (ಬಾಂಗ್ಲಾದೇಶ ಗಡಿ ದಳ) ತಂಡದೊಂದಿಗೆ ಸಮನ್ವಯ ಸಾಧಿಸುತ್ತಿದ್ದಾರೆ” ಎಂದು ತ್ಯಾಗಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರತೀ ಪೇಜರ್ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್ನ ಮೊಸಾದ್?
Mohana Singh: ತೇಜಸ್ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್ ಆಗಿ ಮೋಹನಾ ಸಿಂಗ್ ನೇಮಕ
Laddoo: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು… YSR ಕಾಂಗ್ರೆಸ್ ವಿರುದ್ಧ ನಾಯ್ಡು ಆರೋಪ
Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ
Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
ಪ್ರತೀ ಪೇಜರ್ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್ನ ಮೊಸಾದ್?
Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್!
Mohana Singh: ತೇಜಸ್ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್ ಆಗಿ ಮೋಹನಾ ಸಿಂಗ್ ನೇಮಕ
Laddoo: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು… YSR ಕಾಂಗ್ರೆಸ್ ವಿರುದ್ಧ ನಾಯ್ಡು ಆರೋಪ
Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.